Homeಮುಖಪುಟತಮಿಳರ ವಿರೋಧಿ ಆರೋಪ: ರಾಜ್ಯಪಾಲರ ಕೈಯಿಂದ ಪದವಿ ಸ್ವೀಕರಿಸಲು ನಿರಾಕರಿಸಿದ ಪಿಎಚ್‌ಡಿ ವಿದ್ಯಾರ್ಥಿನಿ!

ತಮಿಳರ ವಿರೋಧಿ ಆರೋಪ: ರಾಜ್ಯಪಾಲರ ಕೈಯಿಂದ ಪದವಿ ಸ್ವೀಕರಿಸಲು ನಿರಾಕರಿಸಿದ ಪಿಎಚ್‌ಡಿ ವಿದ್ಯಾರ್ಥಿನಿ!

- Advertisement -
- Advertisement -

ತಮಿಳುನಾಡು ರಾಜ್ಯಪಾಲ ಆರ್‌.ಎನ್‌ ರವಿ ಅವರಿಂದ ಪಿಹೆಚ್‌ಡಿ ಪದವಿ ಸ್ವೀಕರಿಸಲು ಸಂಶೋಧನಾ ವಿದ್ಯಾರ್ಥಿನಿಯೊಬ್ಬರು ನಿರಾಕರಿಸಿದ ಘಟನೆ ಬುಧವಾರ (ಆ.13) ತಿರುನಲ್ವೇಲಿಯಲ್ಲಿ ನಡೆದಿದೆ.

ಇಲ್ಲಿನ ಮನೋನ್ಮಣಿಯಂ ಸುಂದರನಾರ್ ವಿಶ್ವವಿದ್ಯಾಲಯದ (ಎಂಎಸ್‌ಯು) 32ನೇ ಘಟಿಕೋತ್ಸವ ಸಮಾರಂಭದಲ್ಲಿ, ಜೀನ್ ಜೋಸೆಫ್ ಎಂಬ ಸಂಶೋಧನಾ ವಿದ್ಯಾರ್ಥಿನಿ ರಾಜ್ಯಪಾಲರಿಂದ ಪದವಿ ಸ್ವೀಕರಿಸಲು ನಿರಾಕರಿಸಿದ್ದು, ಬದಲಾಗಿ ವಿವಿಯ ಉಪಕುಲಪತಿ ಚಂದ್ರಶೇಖರ್ ಅವರಿಂದ ಪದವಿ ಪ್ರಮಾಣಪತ್ರ ಪಡೆದುಕೊಂಡಿದ್ದಾರೆ.

ಜೀನ್ ಜೋಸೆಫ್ ಅವರು ಡಿಎಂಕೆ ನಾಗರಕೋಯಿಲ್ ಘಟಕದ ಉಪ ಕಾರ್ಯದರ್ಶಿ ಎಂ ರಾಜನ್ ಅವರ ಪತ್ನಿ ಎಂದು ವರದಿಯಾಗಿದೆ. ಜೀನ್ ಜೋಸೆಫ್ ಅವರ ವಿಭಿನ್ನ ಪ್ರತಿಭಟನೆಗೆ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಜೀನ್ ಜೋಸೆಫ್, “ನನ್ನ ಪದವಿ ಯಾರಿಂದ ಪಡೆದುಕೊಳ್ಳಬೇಕು ಎನ್ನುವುದು ನನ್ನ ಆಯ್ಕೆ. ರಾಜ್ಯಪಾಲರು ತಮಿಳುನಾಡು ಮತ್ತು ತಮಿಳರ ವಿರೋಧಿಯಾಗಿರುವುದರಿಂದ ನಾನು ಅವರಿಂದ ಪದವಿ ಸ್ವೀಕರಿಸಲು ನಿರಾಕರಿಸಿದೆ. ನಾನು ದ್ರಾವಿಡ ಮಾದರಿ ಅನುಸರಿಸುತ್ತೇನೆ. ಇಲ್ಲಿ ಹಲವರಿಗೆ ನನ್ನಂತೆ ಅಭಿಪ್ರಾಯ ಇರಬಹುದು. ಇವರಿಂದ ಪದವಿ ಪಡೆಯುವುದು ಬೇಡ ಎಂದು ಹಲವರು ಅಂದುಕೊಂಡಿರಬಹುದು. ಆದರೆ, ಅವರಿಗೆ ಅವಕಾಶ ಸಿಕ್ಕಿರಲಿಕ್ಕಿಲ್ಲ ಎಂದಿದ್ದಾರೆ.

ಮುಂದುವರಿದು, ನಮ್ಮ ತಮಿಳುನಾಡಿನಲ್ಲಿ ಬೇರೆ ಯಾರಾದರು ಪದವಿ ಕೊಡಬಹುದಲ್ವಾ? ಅದಕ್ಕೆ ಅರ್ಹರಾದ ಅನೇಕ ಜನರಿದ್ದಾರೆ. ಮುಖ್ಯಮಂತ್ರಿ, ಶಿಕ್ಷಣ ಸಚಿವರು ಸೇರಿದಂತೆ ಹಲವರು ನಮ್ಮ ನಾಡಿನಲ್ಲಿ ಇದ್ದಾರೆ. ಅವರು ಕೊಡಬಹುದಲ್ವಾ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯಪಾಲರು ತಮಿಳು, ತಮಿಳುನಾಡಿಗೆ ಏನು ಮಾಡಿದ್ದಾರೆ. ಅವರು ತಮಿಳು ವಿರೋಧಿ. ಈ ಕಾರಣಕ್ಕೆ ಅವರಿಂದ ಪದವಿ ಪಡೆಯಬಾರದು ಎಂದು ನಿರ್ಧರಿಸಿದೆ ಎಂದಿದ್ದಾರೆ.

ಕೇಂದ್ರ ಸಚಿವ ಕೀರ್ತಿ ವರ್ಧನ್ ಸಿಂಗ್ ಸೇರಿ ಐವರ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...