Homeಮುಖಪುಟತೆಲುಗು ಸಮುದಾಯದ ಅವಹೇಳನ : ನಟಿ ಕಸ್ತೂರಿ ಶಂಕರ್‌ಗೆ ನ್ಯಾಯಾಂಗ ಬಂಧನ

ತೆಲುಗು ಸಮುದಾಯದ ಅವಹೇಳನ : ನಟಿ ಕಸ್ತೂರಿ ಶಂಕರ್‌ಗೆ ನ್ಯಾಯಾಂಗ ಬಂಧನ

- Advertisement -
- Advertisement -

ತಮಿಳುನಾಡಿನ ತೆಲುಗು ಸಮುದಾಯವನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಹುಭಾಷಾ ನಟಿ ಕಸ್ತೂರಿ ಶಂಕರ್ ಅವರಿಗೆ ಮದ್ರಾಸ್ ಹೈಕೋರ್ಟ್ ನವೆಂಬರ್ 29 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಕಸ್ತೂರಿ ಶಂಕರ್ ಅವರನ್ನು ಕಳೆದ ಶನಿವಾರ (ನ.16) ರಾತ್ರಿ ತಮಿಳುನಾಡು ಪೊಲೀಸರ ವಿಶೇಷ ತಂಡ ಹೈದರಾಬಾದ್‌ನಿಂದ ಬಂಧಿಸಿತ್ತು. ಬಳಿಕ ಚೆನ್ನೈಗೆ ಕರೆತಂದು ನಗರದ ಎಗ್ಮೋರ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಿತ್ತು. ಮ್ಯಾಜಿಸ್ಟ್ರೇಟ್ ರಘುಪತಿ ರಾಜಾ ಅವರು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದರು. ಈ ಹಿನ್ನೆಲೆ ಕಸ್ತೂರಿ ಅವರು ಪುಝಲ್ ಜೈಲು ಸೇರಿದ್ದರು.

ಪೊಲೀಸ್ ಮೂಲಗಳ ಪ್ರಕಾರ, ಬಂಧನಕ್ಕೂ ಮುನ್ನ ಕಸ್ತೂರಿ ಅವರು ತೆಲುಗು ಚಲನಚಿತ್ರ ನಿರ್ಮಾಪಕ ಹರಿ ಕೃಷ್ಣನ್ ಅವರ ಹೈದರಾಬಾದ್ ನಿವಾಸದಲ್ಲಿ ತಂಗಿದ್ದರು. ಆಕೆಯ ಕುಟುಂಬ ಮತ್ತು ಕಾನೂನು ಸಲಹೆಗಾರರೊಂದಿಗೆ ಸಂವಹನ ನಡೆಸಲು ಹರಿ ಕೃಷ್ಣನ್ ಅವರ ಮೊಬೈಲ್ ಬಳಸುತ್ತಿದ್ದರು.

ಕಸ್ತೂರಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 192 (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು), 196(1)(ಎ) (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ, ಜಾತಿ, ಅಥವಾ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 353(1)(ಬಿ) (ಅಪರಾಧ ಬೆದರಿಕೆ) ಮತ್ತು 353(2) (ಕ್ರಿಮಿನಲ್ ಬೆದರಿಕೆ) ಪ್ರಕರಣ ದಾಖಲಿಸಲಾಗಿದೆ.

ನವೆಂಬರ್ 3ರಂದು ಚೆನ್ನೈನಲ್ಲಿ ಬ್ರಾಹ್ಮಣರ ರಕ್ಷಣೆಗಾಗಿ ವಿಶೇಷ ಕಾನೂನಿಗೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಸ್ತೂರಿ ಅವರು, “ತಮಿಳುನಾಡಿನ ರಾಜರಿಗೆ ‘ದಾಸಿಗಳಾಗಿ’ ಬಂದ ತೆಲುಗು ಭಾಷಿಕ ಮಹಿಳೆಯರು, ತಮಿಳರು ಎಂದು ಹೇಳಿಕೊಂಡು ಬ್ರಾಹ್ಮಣರ ಮೇಲೆ ‘ದಬ್ಬಾಳಿಕೆ’ ಮಾಡುತ್ತಿದ್ದಾರೆ” ಎಂದು ಕಸ್ತೂರಿ ಹೇಳಿದ್ದರು.

ಕಸ್ತೂರಿ ಅವರ ಈ ಹೇಳಿಕೆ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಸಂಬಂಧ ತಮಿಳುನಾಡಿನ ನಾಯ್ಡು ಮಹಾಜನ ಸಂಗಮ್ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರೊಬ್ಬರು ದೂರು ನೀಡಿದ್ದರು.

ತನ್ನ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಕ್ಷಮೆಯಾಚಿಸಿ ಪ್ರತಿಕ್ರಿಯೆ ನೀಡಿದ್ದ ಕಸ್ತೂರಿ ಅವರು, “ತಮಿಳುನಾಡಿನ ಹಿಂದೂ ವಿರೋಧಿ ಡಿಎಂಕೆ ನೆಟ್‌ವರ್ಕ್” ನನ್ನ ವಿರುದ್ದ ಸುಳ್ಳು ಸುದ್ದಿ ಹರಡುತ್ತಿದೆ” ಎಂದಿದ್ದರು.

ನವೆಂಬರ್ 14 ರಂದು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಕಸ್ತೂರಿಯವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಹೈಕೋರ್ಟ್ ನ್ಯಾಯಮೂರ್ತಿ ಆನಂದ್ ವೆಂಕಟೇಶ್ ಅವರು ಕಸ್ತೂರಿ ಹೇಳಿಕೆ ‘ಅನುಚಿತ’ ಎಂದಿದ್ದರು. “ತೆಲುಗು ಸಮುದಾಯದ ಮಹಿಳೆಯರ ವಿರುದ್ಧ ನೀಡಿರುವ ಆಕ್ಷೇಪಾರ್ಹ ಹೇಳಿಕೆಯನ್ನು ನೇರವಾಗಿ ಉಲ್ಲೇಖಿಸಿದ ಕಾರಣ ಅವರ ಕ್ಷಮೆಯೂ ಅಸಮರ್ಪಕವಾಗಿದೆ. ಕಸ್ತೂರಿ ಅವರು ತೆಲುಗು ಸಮುದಾಯದ ಮಹಿಳೆಯರ ವಿರುದ್ಧ ಮಾತನಾಡಬಾರದಿತ್ತು” ಎಂದು ನ್ಯಾಯಾಲಯ ಹೇಳಿತ್ತು.

ತನ್ನ ವಿರುದ್ದ ಎಫ್‌ಐಆರ್ ಅನ್ನು ರಾಜಕೀಯ ಪ್ರೇರಿತ ಎಂದಿದ್ದ ಕಸ್ತೂರಿ, “ಆಡಳಿತಾರೂಢ ಡಿಎಂಕೆ ಸರ್ಕಾರವು ತನ್ನ ವಿರುದ್ದ ದ್ವೇಷ ಸಾಧಿಸುತ್ತಿದೆ. ನನ್ನ ಹೇಳಿಕೆ ತೆಲುಗು ಸಮುದಾಯವನ್ನು ಪ್ರಚೋದಿಸುವುದಿಲ್ಲ” ಎಂದು ಸಮರ್ಥಿಸಿಕೊಂಡಿದ್ದರು.

“ನನ್ನ ಹೇಳಿಕೆ ಡಿಎಂಕೆಯ ರಾಜಕೀಯವನ್ನು ಬಯಲು ಮಾಡುವ ಉದ್ದೇಶವನ್ನು ಹೊಂದಿತ್ತು. ತಮಿಳುನಾಡಿಗೆ ಬಂದಿರುವ ಗುಂಪುಗಳ ಐತಿಹಾಸಿಕ ವಲಸೆಯನ್ನು ನಿರ್ಲಕ್ಷಿಸಿ, ಬ್ರಾಹ್ಮಣರನ್ನು ಗುರಿಯಾಗಿಸುವ ಡಿಎಂಕೆ ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಕಸ್ತೂರಿ ತಮಿಳುನಾಡು ಸರ್ಕಾರದ ವಿರುದ್ದ ಕಿಡಿಕಾರಿದ್ದರು. ಡಿಎಂಕೆ ನಾಯಕ ಕರುಣಾನಿಧಿಯವರು ಕುಶಲಕರ್ಮಿಗಳು ಮತ್ತು ಸಂಗೀತಗಾರರ ವಲಸೆಯನ್ನು ಒಪ್ಪಿಕೊಂಡಿರುವುದು ಸೇರಿದಂತೆ ಐತಿಹಾಸಿಕ ವಿಷಯಗಳನ್ನು ಉಲ್ಲೇಖಿಸಿ ಕಸ್ತೂರಿ ವಾಗ್ದಾಳಿ ನಡೆಸಿದ್ದರು.

“ಡಿಎಂಕೆ ಬ್ರಾಹ್ಮಣರನ್ನು ಶೋಷಣೆ ಮಾಡುತ್ತಿದೆ. ಸನಾತನ ವಿರೋಧ ಮತ್ತು ಹಿಂದೂ ದೇವರ ಅವಮಾನವನ್ನು ಪ್ರಚಾರ ಮಾಡುತ್ತಿದೆ. ಡಿಎಂಕೆಯ ನಿಲುವು ಹಿಂದೂ, ಬ್ರಾಹ್ಮಣ ಮತ್ತು ಸನಾತನ ವಿರೋಧಿ” ಎಂದಿದ್ದರು.

ಇದನ್ನೂ ಓದಿ : ತೆಲಂಗಾಣ | ತಡರಾತ್ರಿ ಬುಡಕಟ್ಟು ಜನರ ಮನೆಗಳಿಗೆ ನುಗ್ಗಿ ಪೊಲೀಸರಿಂದ ದೌರ್ಜನ್ಯ ಆರೋಪ : ಎಸ್‌ಸಿ, ಎಸ್‌ಟಿ ಆಯೋಗಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...