Homeಮುಖಪುಟತೆಲುಗು ಸಮುದಾಯದ ಅವಹೇಳನ : ನಟಿ ಕಸ್ತೂರಿ ಶಂಕರ್‌ಗೆ ನ್ಯಾಯಾಂಗ ಬಂಧನ

ತೆಲುಗು ಸಮುದಾಯದ ಅವಹೇಳನ : ನಟಿ ಕಸ್ತೂರಿ ಶಂಕರ್‌ಗೆ ನ್ಯಾಯಾಂಗ ಬಂಧನ

- Advertisement -
- Advertisement -

ತಮಿಳುನಾಡಿನ ತೆಲುಗು ಸಮುದಾಯವನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಹುಭಾಷಾ ನಟಿ ಕಸ್ತೂರಿ ಶಂಕರ್ ಅವರಿಗೆ ಮದ್ರಾಸ್ ಹೈಕೋರ್ಟ್ ನವೆಂಬರ್ 29 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಕಸ್ತೂರಿ ಶಂಕರ್ ಅವರನ್ನು ಕಳೆದ ಶನಿವಾರ (ನ.16) ರಾತ್ರಿ ತಮಿಳುನಾಡು ಪೊಲೀಸರ ವಿಶೇಷ ತಂಡ ಹೈದರಾಬಾದ್‌ನಿಂದ ಬಂಧಿಸಿತ್ತು. ಬಳಿಕ ಚೆನ್ನೈಗೆ ಕರೆತಂದು ನಗರದ ಎಗ್ಮೋರ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಿತ್ತು. ಮ್ಯಾಜಿಸ್ಟ್ರೇಟ್ ರಘುಪತಿ ರಾಜಾ ಅವರು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದರು. ಈ ಹಿನ್ನೆಲೆ ಕಸ್ತೂರಿ ಅವರು ಪುಝಲ್ ಜೈಲು ಸೇರಿದ್ದರು.

ಪೊಲೀಸ್ ಮೂಲಗಳ ಪ್ರಕಾರ, ಬಂಧನಕ್ಕೂ ಮುನ್ನ ಕಸ್ತೂರಿ ಅವರು ತೆಲುಗು ಚಲನಚಿತ್ರ ನಿರ್ಮಾಪಕ ಹರಿ ಕೃಷ್ಣನ್ ಅವರ ಹೈದರಾಬಾದ್ ನಿವಾಸದಲ್ಲಿ ತಂಗಿದ್ದರು. ಆಕೆಯ ಕುಟುಂಬ ಮತ್ತು ಕಾನೂನು ಸಲಹೆಗಾರರೊಂದಿಗೆ ಸಂವಹನ ನಡೆಸಲು ಹರಿ ಕೃಷ್ಣನ್ ಅವರ ಮೊಬೈಲ್ ಬಳಸುತ್ತಿದ್ದರು.

ಕಸ್ತೂರಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 192 (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು), 196(1)(ಎ) (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ, ಜಾತಿ, ಅಥವಾ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 353(1)(ಬಿ) (ಅಪರಾಧ ಬೆದರಿಕೆ) ಮತ್ತು 353(2) (ಕ್ರಿಮಿನಲ್ ಬೆದರಿಕೆ) ಪ್ರಕರಣ ದಾಖಲಿಸಲಾಗಿದೆ.

ನವೆಂಬರ್ 3ರಂದು ಚೆನ್ನೈನಲ್ಲಿ ಬ್ರಾಹ್ಮಣರ ರಕ್ಷಣೆಗಾಗಿ ವಿಶೇಷ ಕಾನೂನಿಗೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಸ್ತೂರಿ ಅವರು, “ತಮಿಳುನಾಡಿನ ರಾಜರಿಗೆ ‘ದಾಸಿಗಳಾಗಿ’ ಬಂದ ತೆಲುಗು ಭಾಷಿಕ ಮಹಿಳೆಯರು, ತಮಿಳರು ಎಂದು ಹೇಳಿಕೊಂಡು ಬ್ರಾಹ್ಮಣರ ಮೇಲೆ ‘ದಬ್ಬಾಳಿಕೆ’ ಮಾಡುತ್ತಿದ್ದಾರೆ” ಎಂದು ಕಸ್ತೂರಿ ಹೇಳಿದ್ದರು.

ಕಸ್ತೂರಿ ಅವರ ಈ ಹೇಳಿಕೆ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಸಂಬಂಧ ತಮಿಳುನಾಡಿನ ನಾಯ್ಡು ಮಹಾಜನ ಸಂಗಮ್ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರೊಬ್ಬರು ದೂರು ನೀಡಿದ್ದರು.

ತನ್ನ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಕ್ಷಮೆಯಾಚಿಸಿ ಪ್ರತಿಕ್ರಿಯೆ ನೀಡಿದ್ದ ಕಸ್ತೂರಿ ಅವರು, “ತಮಿಳುನಾಡಿನ ಹಿಂದೂ ವಿರೋಧಿ ಡಿಎಂಕೆ ನೆಟ್‌ವರ್ಕ್” ನನ್ನ ವಿರುದ್ದ ಸುಳ್ಳು ಸುದ್ದಿ ಹರಡುತ್ತಿದೆ” ಎಂದಿದ್ದರು.

ನವೆಂಬರ್ 14 ರಂದು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಕಸ್ತೂರಿಯವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಹೈಕೋರ್ಟ್ ನ್ಯಾಯಮೂರ್ತಿ ಆನಂದ್ ವೆಂಕಟೇಶ್ ಅವರು ಕಸ್ತೂರಿ ಹೇಳಿಕೆ ‘ಅನುಚಿತ’ ಎಂದಿದ್ದರು. “ತೆಲುಗು ಸಮುದಾಯದ ಮಹಿಳೆಯರ ವಿರುದ್ಧ ನೀಡಿರುವ ಆಕ್ಷೇಪಾರ್ಹ ಹೇಳಿಕೆಯನ್ನು ನೇರವಾಗಿ ಉಲ್ಲೇಖಿಸಿದ ಕಾರಣ ಅವರ ಕ್ಷಮೆಯೂ ಅಸಮರ್ಪಕವಾಗಿದೆ. ಕಸ್ತೂರಿ ಅವರು ತೆಲುಗು ಸಮುದಾಯದ ಮಹಿಳೆಯರ ವಿರುದ್ಧ ಮಾತನಾಡಬಾರದಿತ್ತು” ಎಂದು ನ್ಯಾಯಾಲಯ ಹೇಳಿತ್ತು.

ತನ್ನ ವಿರುದ್ದ ಎಫ್‌ಐಆರ್ ಅನ್ನು ರಾಜಕೀಯ ಪ್ರೇರಿತ ಎಂದಿದ್ದ ಕಸ್ತೂರಿ, “ಆಡಳಿತಾರೂಢ ಡಿಎಂಕೆ ಸರ್ಕಾರವು ತನ್ನ ವಿರುದ್ದ ದ್ವೇಷ ಸಾಧಿಸುತ್ತಿದೆ. ನನ್ನ ಹೇಳಿಕೆ ತೆಲುಗು ಸಮುದಾಯವನ್ನು ಪ್ರಚೋದಿಸುವುದಿಲ್ಲ” ಎಂದು ಸಮರ್ಥಿಸಿಕೊಂಡಿದ್ದರು.

“ನನ್ನ ಹೇಳಿಕೆ ಡಿಎಂಕೆಯ ರಾಜಕೀಯವನ್ನು ಬಯಲು ಮಾಡುವ ಉದ್ದೇಶವನ್ನು ಹೊಂದಿತ್ತು. ತಮಿಳುನಾಡಿಗೆ ಬಂದಿರುವ ಗುಂಪುಗಳ ಐತಿಹಾಸಿಕ ವಲಸೆಯನ್ನು ನಿರ್ಲಕ್ಷಿಸಿ, ಬ್ರಾಹ್ಮಣರನ್ನು ಗುರಿಯಾಗಿಸುವ ಡಿಎಂಕೆ ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಕಸ್ತೂರಿ ತಮಿಳುನಾಡು ಸರ್ಕಾರದ ವಿರುದ್ದ ಕಿಡಿಕಾರಿದ್ದರು. ಡಿಎಂಕೆ ನಾಯಕ ಕರುಣಾನಿಧಿಯವರು ಕುಶಲಕರ್ಮಿಗಳು ಮತ್ತು ಸಂಗೀತಗಾರರ ವಲಸೆಯನ್ನು ಒಪ್ಪಿಕೊಂಡಿರುವುದು ಸೇರಿದಂತೆ ಐತಿಹಾಸಿಕ ವಿಷಯಗಳನ್ನು ಉಲ್ಲೇಖಿಸಿ ಕಸ್ತೂರಿ ವಾಗ್ದಾಳಿ ನಡೆಸಿದ್ದರು.

“ಡಿಎಂಕೆ ಬ್ರಾಹ್ಮಣರನ್ನು ಶೋಷಣೆ ಮಾಡುತ್ತಿದೆ. ಸನಾತನ ವಿರೋಧ ಮತ್ತು ಹಿಂದೂ ದೇವರ ಅವಮಾನವನ್ನು ಪ್ರಚಾರ ಮಾಡುತ್ತಿದೆ. ಡಿಎಂಕೆಯ ನಿಲುವು ಹಿಂದೂ, ಬ್ರಾಹ್ಮಣ ಮತ್ತು ಸನಾತನ ವಿರೋಧಿ” ಎಂದಿದ್ದರು.

ಇದನ್ನೂ ಓದಿ : ತೆಲಂಗಾಣ | ತಡರಾತ್ರಿ ಬುಡಕಟ್ಟು ಜನರ ಮನೆಗಳಿಗೆ ನುಗ್ಗಿ ಪೊಲೀಸರಿಂದ ದೌರ್ಜನ್ಯ ಆರೋಪ : ಎಸ್‌ಸಿ, ಎಸ್‌ಟಿ ಆಯೋಗಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...