Homeಮುಖಪುಟತೆಲುಗು ಸಮುದಾಯದ ಅವಹೇಳನ : ನಟಿ ಕಸ್ತೂರಿ ಶಂಕರ್‌ಗೆ ನ್ಯಾಯಾಂಗ ಬಂಧನ

ತೆಲುಗು ಸಮುದಾಯದ ಅವಹೇಳನ : ನಟಿ ಕಸ್ತೂರಿ ಶಂಕರ್‌ಗೆ ನ್ಯಾಯಾಂಗ ಬಂಧನ

- Advertisement -
- Advertisement -

ತಮಿಳುನಾಡಿನ ತೆಲುಗು ಸಮುದಾಯವನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಹುಭಾಷಾ ನಟಿ ಕಸ್ತೂರಿ ಶಂಕರ್ ಅವರಿಗೆ ಮದ್ರಾಸ್ ಹೈಕೋರ್ಟ್ ನವೆಂಬರ್ 29 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಕಸ್ತೂರಿ ಶಂಕರ್ ಅವರನ್ನು ಕಳೆದ ಶನಿವಾರ (ನ.16) ರಾತ್ರಿ ತಮಿಳುನಾಡು ಪೊಲೀಸರ ವಿಶೇಷ ತಂಡ ಹೈದರಾಬಾದ್‌ನಿಂದ ಬಂಧಿಸಿತ್ತು. ಬಳಿಕ ಚೆನ್ನೈಗೆ ಕರೆತಂದು ನಗರದ ಎಗ್ಮೋರ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಿತ್ತು. ಮ್ಯಾಜಿಸ್ಟ್ರೇಟ್ ರಘುಪತಿ ರಾಜಾ ಅವರು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದರು. ಈ ಹಿನ್ನೆಲೆ ಕಸ್ತೂರಿ ಅವರು ಪುಝಲ್ ಜೈಲು ಸೇರಿದ್ದರು.

ಪೊಲೀಸ್ ಮೂಲಗಳ ಪ್ರಕಾರ, ಬಂಧನಕ್ಕೂ ಮುನ್ನ ಕಸ್ತೂರಿ ಅವರು ತೆಲುಗು ಚಲನಚಿತ್ರ ನಿರ್ಮಾಪಕ ಹರಿ ಕೃಷ್ಣನ್ ಅವರ ಹೈದರಾಬಾದ್ ನಿವಾಸದಲ್ಲಿ ತಂಗಿದ್ದರು. ಆಕೆಯ ಕುಟುಂಬ ಮತ್ತು ಕಾನೂನು ಸಲಹೆಗಾರರೊಂದಿಗೆ ಸಂವಹನ ನಡೆಸಲು ಹರಿ ಕೃಷ್ಣನ್ ಅವರ ಮೊಬೈಲ್ ಬಳಸುತ್ತಿದ್ದರು.

ಕಸ್ತೂರಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 192 (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು), 196(1)(ಎ) (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ, ಜಾತಿ, ಅಥವಾ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 353(1)(ಬಿ) (ಅಪರಾಧ ಬೆದರಿಕೆ) ಮತ್ತು 353(2) (ಕ್ರಿಮಿನಲ್ ಬೆದರಿಕೆ) ಪ್ರಕರಣ ದಾಖಲಿಸಲಾಗಿದೆ.

ನವೆಂಬರ್ 3ರಂದು ಚೆನ್ನೈನಲ್ಲಿ ಬ್ರಾಹ್ಮಣರ ರಕ್ಷಣೆಗಾಗಿ ವಿಶೇಷ ಕಾನೂನಿಗೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಸ್ತೂರಿ ಅವರು, “ತಮಿಳುನಾಡಿನ ರಾಜರಿಗೆ ‘ದಾಸಿಗಳಾಗಿ’ ಬಂದ ತೆಲುಗು ಭಾಷಿಕ ಮಹಿಳೆಯರು, ತಮಿಳರು ಎಂದು ಹೇಳಿಕೊಂಡು ಬ್ರಾಹ್ಮಣರ ಮೇಲೆ ‘ದಬ್ಬಾಳಿಕೆ’ ಮಾಡುತ್ತಿದ್ದಾರೆ” ಎಂದು ಕಸ್ತೂರಿ ಹೇಳಿದ್ದರು.

ಕಸ್ತೂರಿ ಅವರ ಈ ಹೇಳಿಕೆ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಸಂಬಂಧ ತಮಿಳುನಾಡಿನ ನಾಯ್ಡು ಮಹಾಜನ ಸಂಗಮ್ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರೊಬ್ಬರು ದೂರು ನೀಡಿದ್ದರು.

ತನ್ನ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಕ್ಷಮೆಯಾಚಿಸಿ ಪ್ರತಿಕ್ರಿಯೆ ನೀಡಿದ್ದ ಕಸ್ತೂರಿ ಅವರು, “ತಮಿಳುನಾಡಿನ ಹಿಂದೂ ವಿರೋಧಿ ಡಿಎಂಕೆ ನೆಟ್‌ವರ್ಕ್” ನನ್ನ ವಿರುದ್ದ ಸುಳ್ಳು ಸುದ್ದಿ ಹರಡುತ್ತಿದೆ” ಎಂದಿದ್ದರು.

ನವೆಂಬರ್ 14 ರಂದು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಕಸ್ತೂರಿಯವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಹೈಕೋರ್ಟ್ ನ್ಯಾಯಮೂರ್ತಿ ಆನಂದ್ ವೆಂಕಟೇಶ್ ಅವರು ಕಸ್ತೂರಿ ಹೇಳಿಕೆ ‘ಅನುಚಿತ’ ಎಂದಿದ್ದರು. “ತೆಲುಗು ಸಮುದಾಯದ ಮಹಿಳೆಯರ ವಿರುದ್ಧ ನೀಡಿರುವ ಆಕ್ಷೇಪಾರ್ಹ ಹೇಳಿಕೆಯನ್ನು ನೇರವಾಗಿ ಉಲ್ಲೇಖಿಸಿದ ಕಾರಣ ಅವರ ಕ್ಷಮೆಯೂ ಅಸಮರ್ಪಕವಾಗಿದೆ. ಕಸ್ತೂರಿ ಅವರು ತೆಲುಗು ಸಮುದಾಯದ ಮಹಿಳೆಯರ ವಿರುದ್ಧ ಮಾತನಾಡಬಾರದಿತ್ತು” ಎಂದು ನ್ಯಾಯಾಲಯ ಹೇಳಿತ್ತು.

ತನ್ನ ವಿರುದ್ದ ಎಫ್‌ಐಆರ್ ಅನ್ನು ರಾಜಕೀಯ ಪ್ರೇರಿತ ಎಂದಿದ್ದ ಕಸ್ತೂರಿ, “ಆಡಳಿತಾರೂಢ ಡಿಎಂಕೆ ಸರ್ಕಾರವು ತನ್ನ ವಿರುದ್ದ ದ್ವೇಷ ಸಾಧಿಸುತ್ತಿದೆ. ನನ್ನ ಹೇಳಿಕೆ ತೆಲುಗು ಸಮುದಾಯವನ್ನು ಪ್ರಚೋದಿಸುವುದಿಲ್ಲ” ಎಂದು ಸಮರ್ಥಿಸಿಕೊಂಡಿದ್ದರು.

“ನನ್ನ ಹೇಳಿಕೆ ಡಿಎಂಕೆಯ ರಾಜಕೀಯವನ್ನು ಬಯಲು ಮಾಡುವ ಉದ್ದೇಶವನ್ನು ಹೊಂದಿತ್ತು. ತಮಿಳುನಾಡಿಗೆ ಬಂದಿರುವ ಗುಂಪುಗಳ ಐತಿಹಾಸಿಕ ವಲಸೆಯನ್ನು ನಿರ್ಲಕ್ಷಿಸಿ, ಬ್ರಾಹ್ಮಣರನ್ನು ಗುರಿಯಾಗಿಸುವ ಡಿಎಂಕೆ ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಕಸ್ತೂರಿ ತಮಿಳುನಾಡು ಸರ್ಕಾರದ ವಿರುದ್ದ ಕಿಡಿಕಾರಿದ್ದರು. ಡಿಎಂಕೆ ನಾಯಕ ಕರುಣಾನಿಧಿಯವರು ಕುಶಲಕರ್ಮಿಗಳು ಮತ್ತು ಸಂಗೀತಗಾರರ ವಲಸೆಯನ್ನು ಒಪ್ಪಿಕೊಂಡಿರುವುದು ಸೇರಿದಂತೆ ಐತಿಹಾಸಿಕ ವಿಷಯಗಳನ್ನು ಉಲ್ಲೇಖಿಸಿ ಕಸ್ತೂರಿ ವಾಗ್ದಾಳಿ ನಡೆಸಿದ್ದರು.

“ಡಿಎಂಕೆ ಬ್ರಾಹ್ಮಣರನ್ನು ಶೋಷಣೆ ಮಾಡುತ್ತಿದೆ. ಸನಾತನ ವಿರೋಧ ಮತ್ತು ಹಿಂದೂ ದೇವರ ಅವಮಾನವನ್ನು ಪ್ರಚಾರ ಮಾಡುತ್ತಿದೆ. ಡಿಎಂಕೆಯ ನಿಲುವು ಹಿಂದೂ, ಬ್ರಾಹ್ಮಣ ಮತ್ತು ಸನಾತನ ವಿರೋಧಿ” ಎಂದಿದ್ದರು.

ಇದನ್ನೂ ಓದಿ : ತೆಲಂಗಾಣ | ತಡರಾತ್ರಿ ಬುಡಕಟ್ಟು ಜನರ ಮನೆಗಳಿಗೆ ನುಗ್ಗಿ ಪೊಲೀಸರಿಂದ ದೌರ್ಜನ್ಯ ಆರೋಪ : ಎಸ್‌ಸಿ, ಎಸ್‌ಟಿ ಆಯೋಗಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...