Homeಮುಖಪುಟತೆಲುಗು ಸಮುದಾಯದ ಅವಹೇಳನ : ನಟಿ ಕಸ್ತೂರಿ ಶಂಕರ್‌ಗೆ ನ್ಯಾಯಾಂಗ ಬಂಧನ

ತೆಲುಗು ಸಮುದಾಯದ ಅವಹೇಳನ : ನಟಿ ಕಸ್ತೂರಿ ಶಂಕರ್‌ಗೆ ನ್ಯಾಯಾಂಗ ಬಂಧನ

- Advertisement -
- Advertisement -

ತಮಿಳುನಾಡಿನ ತೆಲುಗು ಸಮುದಾಯವನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಹುಭಾಷಾ ನಟಿ ಕಸ್ತೂರಿ ಶಂಕರ್ ಅವರಿಗೆ ಮದ್ರಾಸ್ ಹೈಕೋರ್ಟ್ ನವೆಂಬರ್ 29 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಕಸ್ತೂರಿ ಶಂಕರ್ ಅವರನ್ನು ಕಳೆದ ಶನಿವಾರ (ನ.16) ರಾತ್ರಿ ತಮಿಳುನಾಡು ಪೊಲೀಸರ ವಿಶೇಷ ತಂಡ ಹೈದರಾಬಾದ್‌ನಿಂದ ಬಂಧಿಸಿತ್ತು. ಬಳಿಕ ಚೆನ್ನೈಗೆ ಕರೆತಂದು ನಗರದ ಎಗ್ಮೋರ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಿತ್ತು. ಮ್ಯಾಜಿಸ್ಟ್ರೇಟ್ ರಘುಪತಿ ರಾಜಾ ಅವರು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದರು. ಈ ಹಿನ್ನೆಲೆ ಕಸ್ತೂರಿ ಅವರು ಪುಝಲ್ ಜೈಲು ಸೇರಿದ್ದರು.

ಪೊಲೀಸ್ ಮೂಲಗಳ ಪ್ರಕಾರ, ಬಂಧನಕ್ಕೂ ಮುನ್ನ ಕಸ್ತೂರಿ ಅವರು ತೆಲುಗು ಚಲನಚಿತ್ರ ನಿರ್ಮಾಪಕ ಹರಿ ಕೃಷ್ಣನ್ ಅವರ ಹೈದರಾಬಾದ್ ನಿವಾಸದಲ್ಲಿ ತಂಗಿದ್ದರು. ಆಕೆಯ ಕುಟುಂಬ ಮತ್ತು ಕಾನೂನು ಸಲಹೆಗಾರರೊಂದಿಗೆ ಸಂವಹನ ನಡೆಸಲು ಹರಿ ಕೃಷ್ಣನ್ ಅವರ ಮೊಬೈಲ್ ಬಳಸುತ್ತಿದ್ದರು.

ಕಸ್ತೂರಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 192 (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು), 196(1)(ಎ) (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ, ಜಾತಿ, ಅಥವಾ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 353(1)(ಬಿ) (ಅಪರಾಧ ಬೆದರಿಕೆ) ಮತ್ತು 353(2) (ಕ್ರಿಮಿನಲ್ ಬೆದರಿಕೆ) ಪ್ರಕರಣ ದಾಖಲಿಸಲಾಗಿದೆ.

ನವೆಂಬರ್ 3ರಂದು ಚೆನ್ನೈನಲ್ಲಿ ಬ್ರಾಹ್ಮಣರ ರಕ್ಷಣೆಗಾಗಿ ವಿಶೇಷ ಕಾನೂನಿಗೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಸ್ತೂರಿ ಅವರು, “ತಮಿಳುನಾಡಿನ ರಾಜರಿಗೆ ‘ದಾಸಿಗಳಾಗಿ’ ಬಂದ ತೆಲುಗು ಭಾಷಿಕ ಮಹಿಳೆಯರು, ತಮಿಳರು ಎಂದು ಹೇಳಿಕೊಂಡು ಬ್ರಾಹ್ಮಣರ ಮೇಲೆ ‘ದಬ್ಬಾಳಿಕೆ’ ಮಾಡುತ್ತಿದ್ದಾರೆ” ಎಂದು ಕಸ್ತೂರಿ ಹೇಳಿದ್ದರು.

ಕಸ್ತೂರಿ ಅವರ ಈ ಹೇಳಿಕೆ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಸಂಬಂಧ ತಮಿಳುನಾಡಿನ ನಾಯ್ಡು ಮಹಾಜನ ಸಂಗಮ್ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರೊಬ್ಬರು ದೂರು ನೀಡಿದ್ದರು.

ತನ್ನ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಕ್ಷಮೆಯಾಚಿಸಿ ಪ್ರತಿಕ್ರಿಯೆ ನೀಡಿದ್ದ ಕಸ್ತೂರಿ ಅವರು, “ತಮಿಳುನಾಡಿನ ಹಿಂದೂ ವಿರೋಧಿ ಡಿಎಂಕೆ ನೆಟ್‌ವರ್ಕ್” ನನ್ನ ವಿರುದ್ದ ಸುಳ್ಳು ಸುದ್ದಿ ಹರಡುತ್ತಿದೆ” ಎಂದಿದ್ದರು.

ನವೆಂಬರ್ 14 ರಂದು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಕಸ್ತೂರಿಯವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಹೈಕೋರ್ಟ್ ನ್ಯಾಯಮೂರ್ತಿ ಆನಂದ್ ವೆಂಕಟೇಶ್ ಅವರು ಕಸ್ತೂರಿ ಹೇಳಿಕೆ ‘ಅನುಚಿತ’ ಎಂದಿದ್ದರು. “ತೆಲುಗು ಸಮುದಾಯದ ಮಹಿಳೆಯರ ವಿರುದ್ಧ ನೀಡಿರುವ ಆಕ್ಷೇಪಾರ್ಹ ಹೇಳಿಕೆಯನ್ನು ನೇರವಾಗಿ ಉಲ್ಲೇಖಿಸಿದ ಕಾರಣ ಅವರ ಕ್ಷಮೆಯೂ ಅಸಮರ್ಪಕವಾಗಿದೆ. ಕಸ್ತೂರಿ ಅವರು ತೆಲುಗು ಸಮುದಾಯದ ಮಹಿಳೆಯರ ವಿರುದ್ಧ ಮಾತನಾಡಬಾರದಿತ್ತು” ಎಂದು ನ್ಯಾಯಾಲಯ ಹೇಳಿತ್ತು.

ತನ್ನ ವಿರುದ್ದ ಎಫ್‌ಐಆರ್ ಅನ್ನು ರಾಜಕೀಯ ಪ್ರೇರಿತ ಎಂದಿದ್ದ ಕಸ್ತೂರಿ, “ಆಡಳಿತಾರೂಢ ಡಿಎಂಕೆ ಸರ್ಕಾರವು ತನ್ನ ವಿರುದ್ದ ದ್ವೇಷ ಸಾಧಿಸುತ್ತಿದೆ. ನನ್ನ ಹೇಳಿಕೆ ತೆಲುಗು ಸಮುದಾಯವನ್ನು ಪ್ರಚೋದಿಸುವುದಿಲ್ಲ” ಎಂದು ಸಮರ್ಥಿಸಿಕೊಂಡಿದ್ದರು.

“ನನ್ನ ಹೇಳಿಕೆ ಡಿಎಂಕೆಯ ರಾಜಕೀಯವನ್ನು ಬಯಲು ಮಾಡುವ ಉದ್ದೇಶವನ್ನು ಹೊಂದಿತ್ತು. ತಮಿಳುನಾಡಿಗೆ ಬಂದಿರುವ ಗುಂಪುಗಳ ಐತಿಹಾಸಿಕ ವಲಸೆಯನ್ನು ನಿರ್ಲಕ್ಷಿಸಿ, ಬ್ರಾಹ್ಮಣರನ್ನು ಗುರಿಯಾಗಿಸುವ ಡಿಎಂಕೆ ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಕಸ್ತೂರಿ ತಮಿಳುನಾಡು ಸರ್ಕಾರದ ವಿರುದ್ದ ಕಿಡಿಕಾರಿದ್ದರು. ಡಿಎಂಕೆ ನಾಯಕ ಕರುಣಾನಿಧಿಯವರು ಕುಶಲಕರ್ಮಿಗಳು ಮತ್ತು ಸಂಗೀತಗಾರರ ವಲಸೆಯನ್ನು ಒಪ್ಪಿಕೊಂಡಿರುವುದು ಸೇರಿದಂತೆ ಐತಿಹಾಸಿಕ ವಿಷಯಗಳನ್ನು ಉಲ್ಲೇಖಿಸಿ ಕಸ್ತೂರಿ ವಾಗ್ದಾಳಿ ನಡೆಸಿದ್ದರು.

“ಡಿಎಂಕೆ ಬ್ರಾಹ್ಮಣರನ್ನು ಶೋಷಣೆ ಮಾಡುತ್ತಿದೆ. ಸನಾತನ ವಿರೋಧ ಮತ್ತು ಹಿಂದೂ ದೇವರ ಅವಮಾನವನ್ನು ಪ್ರಚಾರ ಮಾಡುತ್ತಿದೆ. ಡಿಎಂಕೆಯ ನಿಲುವು ಹಿಂದೂ, ಬ್ರಾಹ್ಮಣ ಮತ್ತು ಸನಾತನ ವಿರೋಧಿ” ಎಂದಿದ್ದರು.

ಇದನ್ನೂ ಓದಿ : ತೆಲಂಗಾಣ | ತಡರಾತ್ರಿ ಬುಡಕಟ್ಟು ಜನರ ಮನೆಗಳಿಗೆ ನುಗ್ಗಿ ಪೊಲೀಸರಿಂದ ದೌರ್ಜನ್ಯ ಆರೋಪ : ಎಸ್‌ಸಿ, ಎಸ್‌ಟಿ ಆಯೋಗಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...