Homeಮುಖಪುಟತೆಲುಗು ಸಮುದಾಯದ ಅವಹೇಳನ : ನಟಿ ಕಸ್ತೂರಿ ಶಂಕರ್‌ಗೆ ನ್ಯಾಯಾಂಗ ಬಂಧನ

ತೆಲುಗು ಸಮುದಾಯದ ಅವಹೇಳನ : ನಟಿ ಕಸ್ತೂರಿ ಶಂಕರ್‌ಗೆ ನ್ಯಾಯಾಂಗ ಬಂಧನ

- Advertisement -
- Advertisement -

ತಮಿಳುನಾಡಿನ ತೆಲುಗು ಸಮುದಾಯವನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಹುಭಾಷಾ ನಟಿ ಕಸ್ತೂರಿ ಶಂಕರ್ ಅವರಿಗೆ ಮದ್ರಾಸ್ ಹೈಕೋರ್ಟ್ ನವೆಂಬರ್ 29 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಕಸ್ತೂರಿ ಶಂಕರ್ ಅವರನ್ನು ಕಳೆದ ಶನಿವಾರ (ನ.16) ರಾತ್ರಿ ತಮಿಳುನಾಡು ಪೊಲೀಸರ ವಿಶೇಷ ತಂಡ ಹೈದರಾಬಾದ್‌ನಿಂದ ಬಂಧಿಸಿತ್ತು. ಬಳಿಕ ಚೆನ್ನೈಗೆ ಕರೆತಂದು ನಗರದ ಎಗ್ಮೋರ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಿತ್ತು. ಮ್ಯಾಜಿಸ್ಟ್ರೇಟ್ ರಘುಪತಿ ರಾಜಾ ಅವರು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದರು. ಈ ಹಿನ್ನೆಲೆ ಕಸ್ತೂರಿ ಅವರು ಪುಝಲ್ ಜೈಲು ಸೇರಿದ್ದರು.

ಪೊಲೀಸ್ ಮೂಲಗಳ ಪ್ರಕಾರ, ಬಂಧನಕ್ಕೂ ಮುನ್ನ ಕಸ್ತೂರಿ ಅವರು ತೆಲುಗು ಚಲನಚಿತ್ರ ನಿರ್ಮಾಪಕ ಹರಿ ಕೃಷ್ಣನ್ ಅವರ ಹೈದರಾಬಾದ್ ನಿವಾಸದಲ್ಲಿ ತಂಗಿದ್ದರು. ಆಕೆಯ ಕುಟುಂಬ ಮತ್ತು ಕಾನೂನು ಸಲಹೆಗಾರರೊಂದಿಗೆ ಸಂವಹನ ನಡೆಸಲು ಹರಿ ಕೃಷ್ಣನ್ ಅವರ ಮೊಬೈಲ್ ಬಳಸುತ್ತಿದ್ದರು.

ಕಸ್ತೂರಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 192 (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು), 196(1)(ಎ) (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ, ಜಾತಿ, ಅಥವಾ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 353(1)(ಬಿ) (ಅಪರಾಧ ಬೆದರಿಕೆ) ಮತ್ತು 353(2) (ಕ್ರಿಮಿನಲ್ ಬೆದರಿಕೆ) ಪ್ರಕರಣ ದಾಖಲಿಸಲಾಗಿದೆ.

ನವೆಂಬರ್ 3ರಂದು ಚೆನ್ನೈನಲ್ಲಿ ಬ್ರಾಹ್ಮಣರ ರಕ್ಷಣೆಗಾಗಿ ವಿಶೇಷ ಕಾನೂನಿಗೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಸ್ತೂರಿ ಅವರು, “ತಮಿಳುನಾಡಿನ ರಾಜರಿಗೆ ‘ದಾಸಿಗಳಾಗಿ’ ಬಂದ ತೆಲುಗು ಭಾಷಿಕ ಮಹಿಳೆಯರು, ತಮಿಳರು ಎಂದು ಹೇಳಿಕೊಂಡು ಬ್ರಾಹ್ಮಣರ ಮೇಲೆ ‘ದಬ್ಬಾಳಿಕೆ’ ಮಾಡುತ್ತಿದ್ದಾರೆ” ಎಂದು ಕಸ್ತೂರಿ ಹೇಳಿದ್ದರು.

ಕಸ್ತೂರಿ ಅವರ ಈ ಹೇಳಿಕೆ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಸಂಬಂಧ ತಮಿಳುನಾಡಿನ ನಾಯ್ಡು ಮಹಾಜನ ಸಂಗಮ್ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರೊಬ್ಬರು ದೂರು ನೀಡಿದ್ದರು.

ತನ್ನ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಕ್ಷಮೆಯಾಚಿಸಿ ಪ್ರತಿಕ್ರಿಯೆ ನೀಡಿದ್ದ ಕಸ್ತೂರಿ ಅವರು, “ತಮಿಳುನಾಡಿನ ಹಿಂದೂ ವಿರೋಧಿ ಡಿಎಂಕೆ ನೆಟ್‌ವರ್ಕ್” ನನ್ನ ವಿರುದ್ದ ಸುಳ್ಳು ಸುದ್ದಿ ಹರಡುತ್ತಿದೆ” ಎಂದಿದ್ದರು.

ನವೆಂಬರ್ 14 ರಂದು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಕಸ್ತೂರಿಯವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಹೈಕೋರ್ಟ್ ನ್ಯಾಯಮೂರ್ತಿ ಆನಂದ್ ವೆಂಕಟೇಶ್ ಅವರು ಕಸ್ತೂರಿ ಹೇಳಿಕೆ ‘ಅನುಚಿತ’ ಎಂದಿದ್ದರು. “ತೆಲುಗು ಸಮುದಾಯದ ಮಹಿಳೆಯರ ವಿರುದ್ಧ ನೀಡಿರುವ ಆಕ್ಷೇಪಾರ್ಹ ಹೇಳಿಕೆಯನ್ನು ನೇರವಾಗಿ ಉಲ್ಲೇಖಿಸಿದ ಕಾರಣ ಅವರ ಕ್ಷಮೆಯೂ ಅಸಮರ್ಪಕವಾಗಿದೆ. ಕಸ್ತೂರಿ ಅವರು ತೆಲುಗು ಸಮುದಾಯದ ಮಹಿಳೆಯರ ವಿರುದ್ಧ ಮಾತನಾಡಬಾರದಿತ್ತು” ಎಂದು ನ್ಯಾಯಾಲಯ ಹೇಳಿತ್ತು.

ತನ್ನ ವಿರುದ್ದ ಎಫ್‌ಐಆರ್ ಅನ್ನು ರಾಜಕೀಯ ಪ್ರೇರಿತ ಎಂದಿದ್ದ ಕಸ್ತೂರಿ, “ಆಡಳಿತಾರೂಢ ಡಿಎಂಕೆ ಸರ್ಕಾರವು ತನ್ನ ವಿರುದ್ದ ದ್ವೇಷ ಸಾಧಿಸುತ್ತಿದೆ. ನನ್ನ ಹೇಳಿಕೆ ತೆಲುಗು ಸಮುದಾಯವನ್ನು ಪ್ರಚೋದಿಸುವುದಿಲ್ಲ” ಎಂದು ಸಮರ್ಥಿಸಿಕೊಂಡಿದ್ದರು.

“ನನ್ನ ಹೇಳಿಕೆ ಡಿಎಂಕೆಯ ರಾಜಕೀಯವನ್ನು ಬಯಲು ಮಾಡುವ ಉದ್ದೇಶವನ್ನು ಹೊಂದಿತ್ತು. ತಮಿಳುನಾಡಿಗೆ ಬಂದಿರುವ ಗುಂಪುಗಳ ಐತಿಹಾಸಿಕ ವಲಸೆಯನ್ನು ನಿರ್ಲಕ್ಷಿಸಿ, ಬ್ರಾಹ್ಮಣರನ್ನು ಗುರಿಯಾಗಿಸುವ ಡಿಎಂಕೆ ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಕಸ್ತೂರಿ ತಮಿಳುನಾಡು ಸರ್ಕಾರದ ವಿರುದ್ದ ಕಿಡಿಕಾರಿದ್ದರು. ಡಿಎಂಕೆ ನಾಯಕ ಕರುಣಾನಿಧಿಯವರು ಕುಶಲಕರ್ಮಿಗಳು ಮತ್ತು ಸಂಗೀತಗಾರರ ವಲಸೆಯನ್ನು ಒಪ್ಪಿಕೊಂಡಿರುವುದು ಸೇರಿದಂತೆ ಐತಿಹಾಸಿಕ ವಿಷಯಗಳನ್ನು ಉಲ್ಲೇಖಿಸಿ ಕಸ್ತೂರಿ ವಾಗ್ದಾಳಿ ನಡೆಸಿದ್ದರು.

“ಡಿಎಂಕೆ ಬ್ರಾಹ್ಮಣರನ್ನು ಶೋಷಣೆ ಮಾಡುತ್ತಿದೆ. ಸನಾತನ ವಿರೋಧ ಮತ್ತು ಹಿಂದೂ ದೇವರ ಅವಮಾನವನ್ನು ಪ್ರಚಾರ ಮಾಡುತ್ತಿದೆ. ಡಿಎಂಕೆಯ ನಿಲುವು ಹಿಂದೂ, ಬ್ರಾಹ್ಮಣ ಮತ್ತು ಸನಾತನ ವಿರೋಧಿ” ಎಂದಿದ್ದರು.

ಇದನ್ನೂ ಓದಿ : ತೆಲಂಗಾಣ | ತಡರಾತ್ರಿ ಬುಡಕಟ್ಟು ಜನರ ಮನೆಗಳಿಗೆ ನುಗ್ಗಿ ಪೊಲೀಸರಿಂದ ದೌರ್ಜನ್ಯ ಆರೋಪ : ಎಸ್‌ಸಿ, ಎಸ್‌ಟಿ ಆಯೋಗಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...