Homeಮುಖಪುಟತೆಲುಗು ಸಮುದಾಯದ ಅವಹೇಳನ : ನಟಿ ಕಸ್ತೂರಿ ಶಂಕರ್‌ಗೆ ನ್ಯಾಯಾಂಗ ಬಂಧನ

ತೆಲುಗು ಸಮುದಾಯದ ಅವಹೇಳನ : ನಟಿ ಕಸ್ತೂರಿ ಶಂಕರ್‌ಗೆ ನ್ಯಾಯಾಂಗ ಬಂಧನ

- Advertisement -
- Advertisement -

ತಮಿಳುನಾಡಿನ ತೆಲುಗು ಸಮುದಾಯವನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಹುಭಾಷಾ ನಟಿ ಕಸ್ತೂರಿ ಶಂಕರ್ ಅವರಿಗೆ ಮದ್ರಾಸ್ ಹೈಕೋರ್ಟ್ ನವೆಂಬರ್ 29 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಕಸ್ತೂರಿ ಶಂಕರ್ ಅವರನ್ನು ಕಳೆದ ಶನಿವಾರ (ನ.16) ರಾತ್ರಿ ತಮಿಳುನಾಡು ಪೊಲೀಸರ ವಿಶೇಷ ತಂಡ ಹೈದರಾಬಾದ್‌ನಿಂದ ಬಂಧಿಸಿತ್ತು. ಬಳಿಕ ಚೆನ್ನೈಗೆ ಕರೆತಂದು ನಗರದ ಎಗ್ಮೋರ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಿತ್ತು. ಮ್ಯಾಜಿಸ್ಟ್ರೇಟ್ ರಘುಪತಿ ರಾಜಾ ಅವರು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದರು. ಈ ಹಿನ್ನೆಲೆ ಕಸ್ತೂರಿ ಅವರು ಪುಝಲ್ ಜೈಲು ಸೇರಿದ್ದರು.

ಪೊಲೀಸ್ ಮೂಲಗಳ ಪ್ರಕಾರ, ಬಂಧನಕ್ಕೂ ಮುನ್ನ ಕಸ್ತೂರಿ ಅವರು ತೆಲುಗು ಚಲನಚಿತ್ರ ನಿರ್ಮಾಪಕ ಹರಿ ಕೃಷ್ಣನ್ ಅವರ ಹೈದರಾಬಾದ್ ನಿವಾಸದಲ್ಲಿ ತಂಗಿದ್ದರು. ಆಕೆಯ ಕುಟುಂಬ ಮತ್ತು ಕಾನೂನು ಸಲಹೆಗಾರರೊಂದಿಗೆ ಸಂವಹನ ನಡೆಸಲು ಹರಿ ಕೃಷ್ಣನ್ ಅವರ ಮೊಬೈಲ್ ಬಳಸುತ್ತಿದ್ದರು.

ಕಸ್ತೂರಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 192 (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು), 196(1)(ಎ) (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ, ಜಾತಿ, ಅಥವಾ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 353(1)(ಬಿ) (ಅಪರಾಧ ಬೆದರಿಕೆ) ಮತ್ತು 353(2) (ಕ್ರಿಮಿನಲ್ ಬೆದರಿಕೆ) ಪ್ರಕರಣ ದಾಖಲಿಸಲಾಗಿದೆ.

ನವೆಂಬರ್ 3ರಂದು ಚೆನ್ನೈನಲ್ಲಿ ಬ್ರಾಹ್ಮಣರ ರಕ್ಷಣೆಗಾಗಿ ವಿಶೇಷ ಕಾನೂನಿಗೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಸ್ತೂರಿ ಅವರು, “ತಮಿಳುನಾಡಿನ ರಾಜರಿಗೆ ‘ದಾಸಿಗಳಾಗಿ’ ಬಂದ ತೆಲುಗು ಭಾಷಿಕ ಮಹಿಳೆಯರು, ತಮಿಳರು ಎಂದು ಹೇಳಿಕೊಂಡು ಬ್ರಾಹ್ಮಣರ ಮೇಲೆ ‘ದಬ್ಬಾಳಿಕೆ’ ಮಾಡುತ್ತಿದ್ದಾರೆ” ಎಂದು ಕಸ್ತೂರಿ ಹೇಳಿದ್ದರು.

ಕಸ್ತೂರಿ ಅವರ ಈ ಹೇಳಿಕೆ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಸಂಬಂಧ ತಮಿಳುನಾಡಿನ ನಾಯ್ಡು ಮಹಾಜನ ಸಂಗಮ್ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರೊಬ್ಬರು ದೂರು ನೀಡಿದ್ದರು.

ತನ್ನ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಕ್ಷಮೆಯಾಚಿಸಿ ಪ್ರತಿಕ್ರಿಯೆ ನೀಡಿದ್ದ ಕಸ್ತೂರಿ ಅವರು, “ತಮಿಳುನಾಡಿನ ಹಿಂದೂ ವಿರೋಧಿ ಡಿಎಂಕೆ ನೆಟ್‌ವರ್ಕ್” ನನ್ನ ವಿರುದ್ದ ಸುಳ್ಳು ಸುದ್ದಿ ಹರಡುತ್ತಿದೆ” ಎಂದಿದ್ದರು.

ನವೆಂಬರ್ 14 ರಂದು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಕಸ್ತೂರಿಯವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಹೈಕೋರ್ಟ್ ನ್ಯಾಯಮೂರ್ತಿ ಆನಂದ್ ವೆಂಕಟೇಶ್ ಅವರು ಕಸ್ತೂರಿ ಹೇಳಿಕೆ ‘ಅನುಚಿತ’ ಎಂದಿದ್ದರು. “ತೆಲುಗು ಸಮುದಾಯದ ಮಹಿಳೆಯರ ವಿರುದ್ಧ ನೀಡಿರುವ ಆಕ್ಷೇಪಾರ್ಹ ಹೇಳಿಕೆಯನ್ನು ನೇರವಾಗಿ ಉಲ್ಲೇಖಿಸಿದ ಕಾರಣ ಅವರ ಕ್ಷಮೆಯೂ ಅಸಮರ್ಪಕವಾಗಿದೆ. ಕಸ್ತೂರಿ ಅವರು ತೆಲುಗು ಸಮುದಾಯದ ಮಹಿಳೆಯರ ವಿರುದ್ಧ ಮಾತನಾಡಬಾರದಿತ್ತು” ಎಂದು ನ್ಯಾಯಾಲಯ ಹೇಳಿತ್ತು.

ತನ್ನ ವಿರುದ್ದ ಎಫ್‌ಐಆರ್ ಅನ್ನು ರಾಜಕೀಯ ಪ್ರೇರಿತ ಎಂದಿದ್ದ ಕಸ್ತೂರಿ, “ಆಡಳಿತಾರೂಢ ಡಿಎಂಕೆ ಸರ್ಕಾರವು ತನ್ನ ವಿರುದ್ದ ದ್ವೇಷ ಸಾಧಿಸುತ್ತಿದೆ. ನನ್ನ ಹೇಳಿಕೆ ತೆಲುಗು ಸಮುದಾಯವನ್ನು ಪ್ರಚೋದಿಸುವುದಿಲ್ಲ” ಎಂದು ಸಮರ್ಥಿಸಿಕೊಂಡಿದ್ದರು.

“ನನ್ನ ಹೇಳಿಕೆ ಡಿಎಂಕೆಯ ರಾಜಕೀಯವನ್ನು ಬಯಲು ಮಾಡುವ ಉದ್ದೇಶವನ್ನು ಹೊಂದಿತ್ತು. ತಮಿಳುನಾಡಿಗೆ ಬಂದಿರುವ ಗುಂಪುಗಳ ಐತಿಹಾಸಿಕ ವಲಸೆಯನ್ನು ನಿರ್ಲಕ್ಷಿಸಿ, ಬ್ರಾಹ್ಮಣರನ್ನು ಗುರಿಯಾಗಿಸುವ ಡಿಎಂಕೆ ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಕಸ್ತೂರಿ ತಮಿಳುನಾಡು ಸರ್ಕಾರದ ವಿರುದ್ದ ಕಿಡಿಕಾರಿದ್ದರು. ಡಿಎಂಕೆ ನಾಯಕ ಕರುಣಾನಿಧಿಯವರು ಕುಶಲಕರ್ಮಿಗಳು ಮತ್ತು ಸಂಗೀತಗಾರರ ವಲಸೆಯನ್ನು ಒಪ್ಪಿಕೊಂಡಿರುವುದು ಸೇರಿದಂತೆ ಐತಿಹಾಸಿಕ ವಿಷಯಗಳನ್ನು ಉಲ್ಲೇಖಿಸಿ ಕಸ್ತೂರಿ ವಾಗ್ದಾಳಿ ನಡೆಸಿದ್ದರು.

“ಡಿಎಂಕೆ ಬ್ರಾಹ್ಮಣರನ್ನು ಶೋಷಣೆ ಮಾಡುತ್ತಿದೆ. ಸನಾತನ ವಿರೋಧ ಮತ್ತು ಹಿಂದೂ ದೇವರ ಅವಮಾನವನ್ನು ಪ್ರಚಾರ ಮಾಡುತ್ತಿದೆ. ಡಿಎಂಕೆಯ ನಿಲುವು ಹಿಂದೂ, ಬ್ರಾಹ್ಮಣ ಮತ್ತು ಸನಾತನ ವಿರೋಧಿ” ಎಂದಿದ್ದರು.

ಇದನ್ನೂ ಓದಿ : ತೆಲಂಗಾಣ | ತಡರಾತ್ರಿ ಬುಡಕಟ್ಟು ಜನರ ಮನೆಗಳಿಗೆ ನುಗ್ಗಿ ಪೊಲೀಸರಿಂದ ದೌರ್ಜನ್ಯ ಆರೋಪ : ಎಸ್‌ಸಿ, ಎಸ್‌ಟಿ ಆಯೋಗಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...