Homeಮುಖಪುಟಭಯೋತ್ಪಾದನಾ ತಡೆ ಕಾನೂನುಗಳ ದುರ್ಬಳಕೆ ಸಲ್ಲದು: ಜಸ್ಟಿಸ್‌ ಡಿ.ವೈ ಚಂದ್ರಚೂಡ್‌

ಭಯೋತ್ಪಾದನಾ ತಡೆ ಕಾನೂನುಗಳ ದುರ್ಬಳಕೆ ಸಲ್ಲದು: ಜಸ್ಟಿಸ್‌ ಡಿ.ವೈ ಚಂದ್ರಚೂಡ್‌

ಭಯೋತ್ಪಾದನಾ ತಡೆ ಕಾಯ್ದೆ ಭಿನ್ನಮತ ದಮನಕ್ಕಲ್ಲ- ಜಸ್ಟಿಸ್‌ ಚಂದ್ರಚೂಡ್‌

- Advertisement -
- Advertisement -

ಭಯೋತ್ಪಾದನಾ ವಿರೋಧಿ ಕಾನೂನುಗಳ ದುರ್ಬಳಕೆ ಸರಿಯಲ್ಲ ಎಂದು ಸುಪ್ರೀಂ ಕೋರ್ಟ್‌ ನ್ಯಾಯಾಮೂರ್ತಿ ಜಸ್ಟಿಸ್‌ ಡಿ.ವೈ. ಚಂದ್ರಚೂಡ್‌ ಅಭಿಪ್ರಾಯ ಪಟ್ಟಿದ್ದಾರೆ. ಜುಲೈ 12ರಂದು ಇಂಡೋ-ಅಮೇರಿಕನ್‌ ನ್ಯಾಯಾಧೀಶರ ವರ್ಚುವಲ್‌ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, UAPA ಸೇರಿದಂತೆ ಭಯೋತ್ಪಾದನಾ ತಡೆ ಕಾನೂನುಗಳನ್ನು ಭಿನ್ನಮತಗಳ ದಮನಕ್ಕೆ ಮತ್ತು ಪ್ರಜೆಗಳ ಮೇಲಿನ ದೌರ್ಜನ್ಯಕ್ಕೆ ಪ್ರಯೋಗಿಸುವ ಟ್ರೆಂಡ್‌ ಇತ್ತೀಚೆಗೆ ಬೆಳೆಯುತ್ತಿರುವುದರ ಕುರಿತು ವಿಷಾದ ವ್ಯಕ್ತಪಡಿಸಿದರು.

‘ಸವಾಲಿನ ಕಾಲಘಟ್ಟದಲ್ಲಿ ಮೂಲಭೂತ ಹಕ್ಕುಗಳ ರಕ್ಷಣೆಯಲ್ಲಿ ಸುಪ್ರೀಂ ಕೋರ್ಟ್‌ ಪಾತ್ರ’ ಎಂಬ ವಿಷಯದ ಕುರಿತು ಮಾತನಾಡುತ್ತ ಯುಎಪಿಎ, ಎನ್‌ಎಸ್‌ಎ ಕುರಿತಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಮೆರಿಕನ್‌ ಬಾರ್‌ ಅಸೋಸಿಯೇಷನ್‌ ಮತ್ತು ಇಂಡಿಯನ್‌ ಲಾ ಫರ್ಮ್ಸ್‌ಗಳು ಜಂಟಿಯಾಗಿ ಆಯೋಜಿಸಿದ್ದ ಸಮ್ಮೇಳನದಲ್ಲಿ ಅವರು ಮಾತನಾಡುತ್ತಿದ್ದರು.

ಇದನ್ನೂ ಓದಿ: ಕರಾಳ UAPA, NIA ರದ್ದಾಗಬೇಕು: ಫಾದರ್‌‌ ಸ್ಟಾನ್ ಸ್ವಾಮಿ ಶ್ರದ್ಧಾಂಜಲಿ ಸಭೆಯಲ್ಲಿ ಒತ್ತಾಯ

ಭಾರತದ ಜೈಲುಗಳಲ್ಲಿ ಖೈದಿಗಳು ಕೋವಿಡ್‌ ಸಾಂಕ್ರಾಮಿಕಕ್ಕೆ ತುತ್ತಾಗುವ ಸಮಸ್ಯೆ ಉದ್ಭವವಾಗಿತ್ತು. ಅತ್ಯಂತ ಜನ ನಿಬಿಡವಾದ ಜೈಲಿನ ಸೆಲ್‌ಗಳು ವೈರಸ್‌ ಹಾಟ್‌ಸ್ಫಾಟ್‌ ಆಗುವ ಸಾಧ್ಯತೆಯಿತ್ತು. ಸುಪ್ರೀಂ ಕೋರ್ಟ್‌ ಮಧ್ಯ ಪ್ರವೇಶಿಸಿ ಜೈಲಿನಲ್ಲಿ ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಸಿದೆ. ಜೈಲುಗಳ ಜನ ದಟ್ಟಣೆಯನ್ನು ಕಡಿಮೆ ಮಾಡಿ ಕನಿಷ್ಠ ಅಂತರವನ್ನು ಕಾಪಾಡುವಲ್ಲಿ ದೇಶದ ಸರ್ವೋಚ್ಛ ನ್ಯಾಯಾಲಯದ ಪಾತ್ರ ದೊಡ್ಡದಿದೆ ಎಂದು ಅವರು ಹೇಳಿದ್ದಾರೆ.

ಮಾನವ ಹಕ್ಕುಗಳ ಹೋರಾಟಗಾರ 84 ವರ್ಷ ವಯಸ್ಸಿನ ಫಾದರ್ ಸ್ಟ್ಯಾನ್‌ ಸ್ವಾಮಿ ನಿಧನದ ನಂತರ ದೇಶದಲ್ಲಿ ಯುಎಪಿಎ ಕಾಯ್ದೆ ಕುರಿತು ತೀವ್ರ ಟೀಕೆಗಳು ಕೇಳಿಬರುತ್ತಿವೆ. ಈ ಸಂದರ್ಭದಲ್ಲಿ ಜಸ್ಟಿಸ್‌ ಚಂದ್ರಚೂಡ್‌ ಅವರ ಹೇಳಿಕೆ ಮಹತ್ವದ ಸ್ಥಾನ ಪಡೆದುಕೊಂಡಿದೆ.

2016-2019ರ ಅವಧಿಯಲ್ಲಿ ಸುಮಾರು 5922 ಜನರ ವಿರುದ್ಧ UAPA ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಅವರಲ್ಲಿ 138 ಜನರು ನಿರ್ದೋಶಿಗಳಾಗಿ ಜೈಲಿನಿಂದ ಹೊರ ಬಂದಿದ್ದಾರೆ ಎಂದು PTI ವರದಿ ಮಾಡಿದೆ.

ಇದನ್ನು ಓದಿ: ಪಾದ್ರಿ ಸ್ಟಾನ್ ಸ್ವಾಮಿ ಸಾವು: ಭಾರತದ ಮುಖ್ಯ ನ್ಯಾಯಾಧೀಶರಿಗೊಂದು ಬಹಿರಂಗ ಪತ್ರ

ಸಾಮಾಜಿಕವಾಗಿ ಹಿಂದುಳಿದ ವರ್ಗಗಳ ಹಕ್ಕನ್ನು ರಕ್ಷಿಸುವ ಮಹತ್ವದ ಹೊಣೆಗಾರಿಕೆ ದೇಶದ ಅತ್ಯುನ್ನತ ನ್ಯಾಯ ವ್ಯವಸ್ಥೆಯ ಮೇಲಿದ್ದು, ವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆಗೆ ಸುಪ್ರೀಂ ಕೋರ್ಟ್‌ ಯಾವತ್ತೂ ಬದ್ಧವಾಗಿದೆ ಎಂಬುದನ್ನು ಅವರು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು. ಅರ್ನಬ್‌ ಗೋಸ್ವಾಮಿ vs ಮಹಾರಾಷ್ಟ್ರ ರಾಜ್ಯ ಪ್ರಕರಣವನ್ನು ಉಲ್ಲೇಖಿಸಿ ಮಾತನಾಡಿದ ಅವರು ಒಂದೇ ಒಂದು ದಿನದ ಮಟ್ಟಿಗೆ ಪ್ರಜೆಗಳ ವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಉಲ್ಲಂಘನೆಯಾದರೂ ಅದು ದೊಡ್ಡ ಸಂಗತಿ ಆಗಿದೆ ಎಂದು ಅಭಿಪ್ರಾಯಪಟ್ಟರು.

ನ್ಯಾಯಾಧೀಶರು, ತಾವು ನೀಡುವ ತೀರ್ಪುಗಳು ಸಮಾಜದ ಮೇಲೆ ಗಾಢವಾದ ಪರಿಣಾಮಗಳನ್ನು ಬೀರುತ್ತವೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ನ್ಯಾಯಾಂಗದ ಪ್ರಕ್ರಿಯೆಗಳನ್ನು ನಡೆಸಬೇಕೆಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಸ್ಟಾನ್ ಸ್ವಾಮಿಯವರನ್ನು ಬಂಧಿಸಿದ್ದ UAPA ಕಾಯ್ದೆ ರದ್ದತಿಗೆ ಸಮಾನ ಮನಸ್ಕರ ವೇದಿಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...