Homeಮುಖಪುಟಭಯೋತ್ಪಾದನಾ ತಡೆ ಕಾನೂನುಗಳ ದುರ್ಬಳಕೆ ಸಲ್ಲದು: ಜಸ್ಟಿಸ್‌ ಡಿ.ವೈ ಚಂದ್ರಚೂಡ್‌

ಭಯೋತ್ಪಾದನಾ ತಡೆ ಕಾನೂನುಗಳ ದುರ್ಬಳಕೆ ಸಲ್ಲದು: ಜಸ್ಟಿಸ್‌ ಡಿ.ವೈ ಚಂದ್ರಚೂಡ್‌

ಭಯೋತ್ಪಾದನಾ ತಡೆ ಕಾಯ್ದೆ ಭಿನ್ನಮತ ದಮನಕ್ಕಲ್ಲ- ಜಸ್ಟಿಸ್‌ ಚಂದ್ರಚೂಡ್‌

- Advertisement -
- Advertisement -

ಭಯೋತ್ಪಾದನಾ ವಿರೋಧಿ ಕಾನೂನುಗಳ ದುರ್ಬಳಕೆ ಸರಿಯಲ್ಲ ಎಂದು ಸುಪ್ರೀಂ ಕೋರ್ಟ್‌ ನ್ಯಾಯಾಮೂರ್ತಿ ಜಸ್ಟಿಸ್‌ ಡಿ.ವೈ. ಚಂದ್ರಚೂಡ್‌ ಅಭಿಪ್ರಾಯ ಪಟ್ಟಿದ್ದಾರೆ. ಜುಲೈ 12ರಂದು ಇಂಡೋ-ಅಮೇರಿಕನ್‌ ನ್ಯಾಯಾಧೀಶರ ವರ್ಚುವಲ್‌ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, UAPA ಸೇರಿದಂತೆ ಭಯೋತ್ಪಾದನಾ ತಡೆ ಕಾನೂನುಗಳನ್ನು ಭಿನ್ನಮತಗಳ ದಮನಕ್ಕೆ ಮತ್ತು ಪ್ರಜೆಗಳ ಮೇಲಿನ ದೌರ್ಜನ್ಯಕ್ಕೆ ಪ್ರಯೋಗಿಸುವ ಟ್ರೆಂಡ್‌ ಇತ್ತೀಚೆಗೆ ಬೆಳೆಯುತ್ತಿರುವುದರ ಕುರಿತು ವಿಷಾದ ವ್ಯಕ್ತಪಡಿಸಿದರು.

‘ಸವಾಲಿನ ಕಾಲಘಟ್ಟದಲ್ಲಿ ಮೂಲಭೂತ ಹಕ್ಕುಗಳ ರಕ್ಷಣೆಯಲ್ಲಿ ಸುಪ್ರೀಂ ಕೋರ್ಟ್‌ ಪಾತ್ರ’ ಎಂಬ ವಿಷಯದ ಕುರಿತು ಮಾತನಾಡುತ್ತ ಯುಎಪಿಎ, ಎನ್‌ಎಸ್‌ಎ ಕುರಿತಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಮೆರಿಕನ್‌ ಬಾರ್‌ ಅಸೋಸಿಯೇಷನ್‌ ಮತ್ತು ಇಂಡಿಯನ್‌ ಲಾ ಫರ್ಮ್ಸ್‌ಗಳು ಜಂಟಿಯಾಗಿ ಆಯೋಜಿಸಿದ್ದ ಸಮ್ಮೇಳನದಲ್ಲಿ ಅವರು ಮಾತನಾಡುತ್ತಿದ್ದರು.

ಇದನ್ನೂ ಓದಿ: ಕರಾಳ UAPA, NIA ರದ್ದಾಗಬೇಕು: ಫಾದರ್‌‌ ಸ್ಟಾನ್ ಸ್ವಾಮಿ ಶ್ರದ್ಧಾಂಜಲಿ ಸಭೆಯಲ್ಲಿ ಒತ್ತಾಯ

ಭಾರತದ ಜೈಲುಗಳಲ್ಲಿ ಖೈದಿಗಳು ಕೋವಿಡ್‌ ಸಾಂಕ್ರಾಮಿಕಕ್ಕೆ ತುತ್ತಾಗುವ ಸಮಸ್ಯೆ ಉದ್ಭವವಾಗಿತ್ತು. ಅತ್ಯಂತ ಜನ ನಿಬಿಡವಾದ ಜೈಲಿನ ಸೆಲ್‌ಗಳು ವೈರಸ್‌ ಹಾಟ್‌ಸ್ಫಾಟ್‌ ಆಗುವ ಸಾಧ್ಯತೆಯಿತ್ತು. ಸುಪ್ರೀಂ ಕೋರ್ಟ್‌ ಮಧ್ಯ ಪ್ರವೇಶಿಸಿ ಜೈಲಿನಲ್ಲಿ ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಸಿದೆ. ಜೈಲುಗಳ ಜನ ದಟ್ಟಣೆಯನ್ನು ಕಡಿಮೆ ಮಾಡಿ ಕನಿಷ್ಠ ಅಂತರವನ್ನು ಕಾಪಾಡುವಲ್ಲಿ ದೇಶದ ಸರ್ವೋಚ್ಛ ನ್ಯಾಯಾಲಯದ ಪಾತ್ರ ದೊಡ್ಡದಿದೆ ಎಂದು ಅವರು ಹೇಳಿದ್ದಾರೆ.

ಮಾನವ ಹಕ್ಕುಗಳ ಹೋರಾಟಗಾರ 84 ವರ್ಷ ವಯಸ್ಸಿನ ಫಾದರ್ ಸ್ಟ್ಯಾನ್‌ ಸ್ವಾಮಿ ನಿಧನದ ನಂತರ ದೇಶದಲ್ಲಿ ಯುಎಪಿಎ ಕಾಯ್ದೆ ಕುರಿತು ತೀವ್ರ ಟೀಕೆಗಳು ಕೇಳಿಬರುತ್ತಿವೆ. ಈ ಸಂದರ್ಭದಲ್ಲಿ ಜಸ್ಟಿಸ್‌ ಚಂದ್ರಚೂಡ್‌ ಅವರ ಹೇಳಿಕೆ ಮಹತ್ವದ ಸ್ಥಾನ ಪಡೆದುಕೊಂಡಿದೆ.

2016-2019ರ ಅವಧಿಯಲ್ಲಿ ಸುಮಾರು 5922 ಜನರ ವಿರುದ್ಧ UAPA ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಅವರಲ್ಲಿ 138 ಜನರು ನಿರ್ದೋಶಿಗಳಾಗಿ ಜೈಲಿನಿಂದ ಹೊರ ಬಂದಿದ್ದಾರೆ ಎಂದು PTI ವರದಿ ಮಾಡಿದೆ.

ಇದನ್ನು ಓದಿ: ಪಾದ್ರಿ ಸ್ಟಾನ್ ಸ್ವಾಮಿ ಸಾವು: ಭಾರತದ ಮುಖ್ಯ ನ್ಯಾಯಾಧೀಶರಿಗೊಂದು ಬಹಿರಂಗ ಪತ್ರ

ಸಾಮಾಜಿಕವಾಗಿ ಹಿಂದುಳಿದ ವರ್ಗಗಳ ಹಕ್ಕನ್ನು ರಕ್ಷಿಸುವ ಮಹತ್ವದ ಹೊಣೆಗಾರಿಕೆ ದೇಶದ ಅತ್ಯುನ್ನತ ನ್ಯಾಯ ವ್ಯವಸ್ಥೆಯ ಮೇಲಿದ್ದು, ವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆಗೆ ಸುಪ್ರೀಂ ಕೋರ್ಟ್‌ ಯಾವತ್ತೂ ಬದ್ಧವಾಗಿದೆ ಎಂಬುದನ್ನು ಅವರು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು. ಅರ್ನಬ್‌ ಗೋಸ್ವಾಮಿ vs ಮಹಾರಾಷ್ಟ್ರ ರಾಜ್ಯ ಪ್ರಕರಣವನ್ನು ಉಲ್ಲೇಖಿಸಿ ಮಾತನಾಡಿದ ಅವರು ಒಂದೇ ಒಂದು ದಿನದ ಮಟ್ಟಿಗೆ ಪ್ರಜೆಗಳ ವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಉಲ್ಲಂಘನೆಯಾದರೂ ಅದು ದೊಡ್ಡ ಸಂಗತಿ ಆಗಿದೆ ಎಂದು ಅಭಿಪ್ರಾಯಪಟ್ಟರು.

ನ್ಯಾಯಾಧೀಶರು, ತಾವು ನೀಡುವ ತೀರ್ಪುಗಳು ಸಮಾಜದ ಮೇಲೆ ಗಾಢವಾದ ಪರಿಣಾಮಗಳನ್ನು ಬೀರುತ್ತವೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ನ್ಯಾಯಾಂಗದ ಪ್ರಕ್ರಿಯೆಗಳನ್ನು ನಡೆಸಬೇಕೆಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಸ್ಟಾನ್ ಸ್ವಾಮಿಯವರನ್ನು ಬಂಧಿಸಿದ್ದ UAPA ಕಾಯ್ದೆ ರದ್ದತಿಗೆ ಸಮಾನ ಮನಸ್ಕರ ವೇದಿಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...