Homeಚಳವಳಿಭಯೋತ್ಪಾದನಾ ವಿರೋಧಿ ರ‍್ಯಾಲಿಯಲ್ಲಿ ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ದಾಳಿ ಮಾಡಿದ ಹಿಂದುತ್ವ ಸಂಘಟನೆಗಳ...

ಭಯೋತ್ಪಾದನಾ ವಿರೋಧಿ ರ‍್ಯಾಲಿಯಲ್ಲಿ ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ದಾಳಿ ಮಾಡಿದ ಹಿಂದುತ್ವ ಸಂಘಟನೆಗಳ ದುಷ್ಕರ್ಮಿಗಳು

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯ ವಿರುದ್ಧ ನಡೆದ ಪ್ರತಿಭಟನಾ ರ‍್ಯಾಲಿಯಲ್ಲಿ ರೈತ ನಾಯಕ ರಾಕೇಶ್ ಟಿಕಾಯತ್‌ ಭಾಗವಹಿಸುವುದನ್ನು ವಿರೋಧಿಸಿ ಅವರನ್ನು ಸುತ್ತುವರೆದು ಅವರ ಮೇಲೆ ದಾಳಿ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಶನಿವಾರ ಮುಜಫರ್‌ನಗರದಲ್ಲಿ ತುರ್ತು ‘ಕಿಸಾನ್ ಪಂಚಾಯತ್’ಗೆ ಕರೆ ನೀಡಿದೆ. ಭಯೋತ್ಪಾದನಾ ವಿರೋಧಿ

ಘಟನೆಯ ಕುರಿತು ಚರ್ಚಿಸಲು ಮುಜಫರ್‌ನಗರದ ಜಿಐಸಿ ಮೈದಾನದಲ್ಲಿ ಪಂಚಾಯತ್ ನಡೆಸಲಾಗುವುದು ಎಂದು ಬಿಕೆಯು ರಾಷ್ಟ್ರೀಯ ಅಧ್ಯಕ್ಷ ನರೇಶ್ ಟಿಕಾಯತ್ ಘೋಷಿಸಿದ್ದಾರೆ. ‘ಆಕ್ರೋಶ್ ರ‍್ಯಾಲಿ’ಯಲ್ಲಿ ನಡೆದ ಘಟನೆಯು ರೈತರ ಚಳುವಳಿಯನ್ನು ದುರ್ಬಲಗೊಳಿಸಲು “ರಾಜಕೀಯ ಪಕ್ಷ” ಆಯೋಜಿಸಿದ ಪಿತೂರಿಯ ಭಾಗವಾಗಿ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.

ಶುಕ್ರವಾರ, ಪಹಲ್ಗಾಮ್ ದಾಳಿಯನ್ನು ಪ್ರತಿಭಟಿಸಲು ಬಲಪಂಥೀಯ ಗುಂಪುಗಳು ಆಯೋಜಿಸಿದ್ದ ರ‍್ಯಾಲಿಯಲ್ಲಿ ರಾಕೇಶ್ ಟಿಕಾಯತ್‌ ಅವರನ್ನು ಸುತ್ತುವರೆದು ಅವರ ಮೇಲೆ ದಾಳಿ ಮಾಡಲಾಗಿದೆ. ಜೊತೆಗೆ ಸಭೆಯಿಂದ ಹಿಂತಿರುಗುವಂತೆ ಅವರನ್ನು ಕೇಳಲಾಯಿತು ಎಂದು ಆರೋಪಿಸಲಾಗಿದೆ. ಈ ದಾಳಿಯ ವೇಳೆ ಅವರ ಪೇಟ ಕೂಡ ಕೆಳಗೆ ಬಿದ್ದಿದ್ದು, ಘಟನೆಯ ವೀಡಿಯೊಗಳು ವ್ಯಾಪಕ ವೈರಲಾಗಿದೆ.

“ಈ ಘಟನೆ ಸ್ವಯಂಪ್ರೇರಿತವಾಗಿರಲಿಲ್ಲ. ಇದು ಪೂರ್ವ ಯೋಜಿತ ಮತ್ತು ರಾಜಕೀಯ ಉದ್ದೇಶಗಳಿಂದ ನಡೆಸಲ್ಪಟ್ಟಿದೆ” ಎಂದು ನರೇಶ್ ಟಿಕಾಯತ್ ಹೇಳಿದ್ದಾರೆ. ಮಧ್ಯಾಹ್ನ ಪ್ರಾರಂಭವಾಗಲಿರುವ ಪಂಚಾಯತ್‌ಗೆ ಮುಂಚಿತವಾಗಿ ಪ್ರದೇಶದಾದ್ಯಂತ ರೈತರು ಸಿಸೌಲಿ ಮತ್ತು ಮುಜಫರ್‌ನಗರದಲ್ಲಿ ಸೇರಲು ಪ್ರಾರಂಭಿಸಿದ್ದಾರೆ ಎಂದು ಹೇಳಿದ್ದಾರೆ.

ಶುಕ್ರವಾರದ “ಗದ್ದಲ” ವನ್ನು ರಾಕೇಶ್ ಟಿಕಾಯತಗ್ ಖಂಡಿಸಿದ್ದು, ಇದು ರಾಜಕೀಯ ವಿಧ್ವಂಸಕ ಕೃತ್ಯ ಎಂದು ತಾನು ಭಾವಿಸಿದ್ದಾಗಿ ಪುನರುಚ್ಚರಿಸಿದ್ದಾರೆ. ತಮ್ಮ ವಿರುದ್ಧ ಘೋಷಣೆಗಳನ್ನು ಕೂಗಿದವರು ಮದ್ಯದ ಅಮಲಿನ ಪ್ರಭಾವದಲ್ಲಿರುವಂತೆ ತೋರುತ್ತಿತ್ತು ಎಂದು ಅವರು ಹೇಳಿಕೊಂಡಿದ್ದಾರೆ.

“ಇದು ರೈತರ ಧ್ವನಿಯನ್ನು ನಿಗ್ರಹಿಸಲು ಒಂದು ನಿರ್ದಿಷ್ಟ ರಾಜಕೀಯ ಪಕ್ಷದಿಂದ ನಡೆಸಲ್ಪಟ್ಟ ಪಿತೂರಿಯಾಗಿದೆ. ಕೆಲವು ಯುವಕರನ್ನು ಉದ್ದೇಶಪೂರ್ವಕವಾಗಿ ರ‍್ಯಾಲಿಯನ್ನು ಅಡ್ಡಿಪಡಿಸಲು ಕಳುಹಿಸಲಾಗಿದೆ” ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದ್ದರು.

ಪಹಲ್ಗಾಮ್‌ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಬಿಕೆಯು ಟ್ರ್ಯಾಕ್ಟರ್ ಮೆರವಣಿಗೆಯನ್ನು ಆಯೋಜಿಸುವುದಾಗಿ ಟಿಕಾಯತ್ ಘೋಷಿಸಿದ್ದಾರೆ. ಮೆರವಣಿಗೆಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು. ಸಾರ್ವಜನಿಕರ ಆಕ್ರೋಶವನ್ನು ಶಾಂತಗೊಳಿಸಲು ಭಯೋತ್ಪಾದಕ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಭಯೋತ್ಪಾದನಾ ವಿರೋಧಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಂಟ್ವಾಳ | ಮುಸ್ಲಿಮರು ಪ್ರಯಾಣಿಸುತ್ತಿದ್ದ ರಿಕ್ಷಾದ ಮೇಲೆ ಮುಗಿಬಿದ್ದ ಸಂಘಪರಿವಾರದ ಕಾರ್ಯಕರ್ತರು!: ವೀಡಿಯೊ

ಬಂಟ್ವಾಳ | ಮುಸ್ಲಿಮರು ಪ್ರಯಾಣಿಸುತ್ತಿದ್ದ ರಿಕ್ಷಾದ ಮೇಲೆ ಮುಗಿಬಿದ್ದ ಸಂಘಪರಿವಾರದ ಕಾರ್ಯಕರ್ತರು!: ವೀಡಿಯೊ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...