Homeಮುಖಪುಟವೇದಾಂತ ಸ್ಟೆರ್‌‌ಲೈಟ್ ವಿರೋಧಿ ಹಿಂಸಾಚಾರ: ರಜನಿಕಾಂತ್‌ಗೆ ಸಮನ್ಸ್

ವೇದಾಂತ ಸ್ಟೆರ್‌‌ಲೈಟ್ ವಿರೋಧಿ ಹಿಂಸಾಚಾರ: ರಜನಿಕಾಂತ್‌ಗೆ ಸಮನ್ಸ್

ಈ ಹಿಂದೆ ನಿವೃತ್ತ ನ್ಯಾಯಾಧೀಶ ಅರುಣಾ ಜಗದೀಸನ್ ಅವರು ರಜನಿಕಾಂತ್‌ಗೆ ಸಮನ್ಸ್ ನೀಡಿದ್ದರಾದರೂ ಅವರು ಸಮಸ್ಸ್‌‌ನಿಂದ ವಿನಾಯತಿ ಪಡೆದಿದ್ದರು.

- Advertisement -
- Advertisement -

ತಮಿಳುನಾಡಿನ ತೂತುಕುಡಿಯಲ್ಲಿರುವ ದೈತ್ಯ ಗಣಿಗಾರಿಕಾ ಕಂಪೆನಿಯಾದ ವೇದಾಂತ ಗ್ರೂಪ್‌ನ ಸ್ಟೆರ್‌ಲೈಟ್‌ ತಾಮ್ರ ಕರಗಿಸುವ ಘಟಕದಿಂದಾಗಿ ಪರಿಸರ ಹಾನಿಯಾಗುತ್ತಿದೆ. ಜನ ಹಲವಾರು ಖಾಯಿಲೆಗೆ ತುತ್ತಾಗುತ್ತಿದ್ದಾರೆ. ಹೀಗಾಗಿ ಈ ಘಟಕವನ್ನು ಶಾಶ್ವತವಾಗಿ ಮುಚ್ಚಬೇಕು ಎಂದು ಆಗ್ರಹಿಸಿ ಕಳೆದ ಹಲವು ವರ್ಷಗಳಿಂದ ಅಲ್ಲಿನ ಸ್ಥಳೀಯರು ಆಗ್ರಹಿಸುತ್ತಿದ್ದಾರೆ. 2018ರಲ್ಲಿ ಪ್ರತಿಭಟನೆ ವೇಳೆ ಪೊಲೀಸ್​ ಗುಂಡು ಹಾರಿಸಿ 13 ಜನ ಮೃತಪಟ್ಟಿದ್ದರು. ಇದೀಗ ಈ ಹಿಂಸಾಚಾರಕ್ಕೆ ಸಂಬಂಧ ಪಟ್ಟಂತೆ ತನಿಖೆಗೆ ಸಹಕರಿಸುವಂತೆ ಸೂಚಿಸಿ ಚಿತ್ರ ನಟ ರಜನಿಕಾಂತ್‌ ಅವರಿಗೆ ವಿಚಾರಣಾ ನ್ಯಾಯಾಲಯ ಸಮಸ್ಸ್ ಜಾರಿ ಮಾಡಿದೆ.

2018 ರಲ್ಲಿ ಕಾರ್ಖಾನೆಯನ್ನು ಶಾಶ್ವತವಾಗಿ ಮುಚ್ಚಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿ ಸಂಘಟನೆಗಳೂ ಸಹ ಪ್ರತಿಭಟನೆಗೆ ಮುಂದಾಗಿದ್ದವು. ಆದರೆ, ಶಾಂತಿಯುತವಾಗಿ ನಡೆಯುತ್ತಿದ್ದ ಈ ಪ್ರತಿಭಟನೆ ಪೊಲೀಸ್​ ದಾಳಿಯಿಂದಾಗಿ ಹಿಂಸಾಚಾರಕ್ಕೆ ತಿರುಗಿತ್ತು. ಕೊನೆಗೆ ಜನಸಮೂಹವನ್ನು ಹತ್ತಿಕ್ಕಲು ಪೊಲೀಸರು ಗುಂಡು ಹಾರಿಸಿದ ಪರಿಣಾಮ 13 ಜನರು ಮೃತಪಟ್ಟಿದ್ದರು.ಈ ಘಟನೆ ರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಮಟ್ಟದ ಸದ್ದು ಮಾಡಿತ್ತು.

ಇದನ್ನೂ ಓದಿ: ನಟ ರಜನಿಕಾಂತ್ ಅವರ ಬಹುನಿರೀಕ್ಷಿತ ಹೊಸ ಪಕ್ಷ ಜನವರಿಯಲ್ಲಿ ಆರಂಭ

ಘಟನೆಯ ನಂತರ ಗಾಯಾಳುಗಳನ್ನು ಭೇಟಿಯಾಗಿದ್ದ ರಜನಿಕಾಂತ್‌, ಪ್ರತಿಭಟನೆಯಲ್ಲಿ ಸಾಮಾಜ ವಿರೋಧಿಗಳು ನುಸುಳಿದ್ದರಿಂದ ಹಿಂಸಾಚಾರ ಸಂಭವಿಸಿದೆ ಎಂದು ಆರೋಪಿಸಿದ್ದರು. ಈ ಹಿನ್ನಲೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ಏಕ ಮಹಿಳಾ ನ್ಯಾಯಾಂಗ ಪೀಠವು ಅವರಿಗೆ ಸಮನ್ಸ್ ನೀಡಿದೆ. ಈ ಹಿಂದೆ ನಿವೃತ್ತ ನ್ಯಾಯಾಧೀಶ ಅರುಣಾ ಜಗದೀಸನ್ ಅವರು ರಜನಿಕಾಂತ್ ಅವರಿಗೆ ಸಮನ್ಸ್ ನೀಡಿದ್ದರಾದರೂ ಅವರು ಸಮಸ್ಸ್‌‌ನಿಂದ ವಿನಾಯತಿ ಪಡೆದಿದ್ದರು.

ತಮಿಳುನಾಡಿನ ಆಡಳಿತಾರೂಢ ಎಐಎಡಿಎಂಕೆ ಸರ್ಕಾರದ ಆಡಳಿತದ ವಿರುದ್ದ ಕಿಡಿಕಾರಿದ್ದ ರಜನಿಕಾಂತ್, ಹಿಂಸಾಚಾರಕ್ಕೆ ಸಮಾಜ ವಿರೋಧಿಗಳು ಕಾರಣ, ಅವರ ವಿರುದ್ದ ಕಠಿಣ ಕ್ರಮತೆಗೆದುಕೊಳ್ಳಲು ಒತ್ತಾಯಿಸಿದ್ದರು. ರಜನಿಕಾಂತ್ ಅವರ ಹೇಳಿಕೆಯು ಪೊಲೀಸರು ಮಿತಿಮೀರಿದ ಬಲವನ್ನು ಬಳಸಿದ್ದಾರೆ ಎಂದು ಆರೋಪಿಸಿದ್ದ ಸ್ಥಳೀಯರನ್ನು ತೀವ್ರವಾಗಿ ಅಸಮಾಧಾನಗೊಳಿಸಿತ್ತು.

ಇದನ್ನೂ ಓದಿ: ದೇಶದ ಶಾಂತಿಗಾಗಿ ಯಾವುದೇ ಪಾತ್ರ ವಹಿಸಲು ಸಿದ್ದ: ರಜನಿಕಾಂತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...