Homeಮುಖಪುಟವೇದಾಂತ ಸ್ಟೆರ್‌‌ಲೈಟ್ ವಿರೋಧಿ ಹಿಂಸಾಚಾರ: ರಜನಿಕಾಂತ್‌ಗೆ ಸಮನ್ಸ್

ವೇದಾಂತ ಸ್ಟೆರ್‌‌ಲೈಟ್ ವಿರೋಧಿ ಹಿಂಸಾಚಾರ: ರಜನಿಕಾಂತ್‌ಗೆ ಸಮನ್ಸ್

ಈ ಹಿಂದೆ ನಿವೃತ್ತ ನ್ಯಾಯಾಧೀಶ ಅರುಣಾ ಜಗದೀಸನ್ ಅವರು ರಜನಿಕಾಂತ್‌ಗೆ ಸಮನ್ಸ್ ನೀಡಿದ್ದರಾದರೂ ಅವರು ಸಮಸ್ಸ್‌‌ನಿಂದ ವಿನಾಯತಿ ಪಡೆದಿದ್ದರು.

- Advertisement -
- Advertisement -

ತಮಿಳುನಾಡಿನ ತೂತುಕುಡಿಯಲ್ಲಿರುವ ದೈತ್ಯ ಗಣಿಗಾರಿಕಾ ಕಂಪೆನಿಯಾದ ವೇದಾಂತ ಗ್ರೂಪ್‌ನ ಸ್ಟೆರ್‌ಲೈಟ್‌ ತಾಮ್ರ ಕರಗಿಸುವ ಘಟಕದಿಂದಾಗಿ ಪರಿಸರ ಹಾನಿಯಾಗುತ್ತಿದೆ. ಜನ ಹಲವಾರು ಖಾಯಿಲೆಗೆ ತುತ್ತಾಗುತ್ತಿದ್ದಾರೆ. ಹೀಗಾಗಿ ಈ ಘಟಕವನ್ನು ಶಾಶ್ವತವಾಗಿ ಮುಚ್ಚಬೇಕು ಎಂದು ಆಗ್ರಹಿಸಿ ಕಳೆದ ಹಲವು ವರ್ಷಗಳಿಂದ ಅಲ್ಲಿನ ಸ್ಥಳೀಯರು ಆಗ್ರಹಿಸುತ್ತಿದ್ದಾರೆ. 2018ರಲ್ಲಿ ಪ್ರತಿಭಟನೆ ವೇಳೆ ಪೊಲೀಸ್​ ಗುಂಡು ಹಾರಿಸಿ 13 ಜನ ಮೃತಪಟ್ಟಿದ್ದರು. ಇದೀಗ ಈ ಹಿಂಸಾಚಾರಕ್ಕೆ ಸಂಬಂಧ ಪಟ್ಟಂತೆ ತನಿಖೆಗೆ ಸಹಕರಿಸುವಂತೆ ಸೂಚಿಸಿ ಚಿತ್ರ ನಟ ರಜನಿಕಾಂತ್‌ ಅವರಿಗೆ ವಿಚಾರಣಾ ನ್ಯಾಯಾಲಯ ಸಮಸ್ಸ್ ಜಾರಿ ಮಾಡಿದೆ.

2018 ರಲ್ಲಿ ಕಾರ್ಖಾನೆಯನ್ನು ಶಾಶ್ವತವಾಗಿ ಮುಚ್ಚಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿ ಸಂಘಟನೆಗಳೂ ಸಹ ಪ್ರತಿಭಟನೆಗೆ ಮುಂದಾಗಿದ್ದವು. ಆದರೆ, ಶಾಂತಿಯುತವಾಗಿ ನಡೆಯುತ್ತಿದ್ದ ಈ ಪ್ರತಿಭಟನೆ ಪೊಲೀಸ್​ ದಾಳಿಯಿಂದಾಗಿ ಹಿಂಸಾಚಾರಕ್ಕೆ ತಿರುಗಿತ್ತು. ಕೊನೆಗೆ ಜನಸಮೂಹವನ್ನು ಹತ್ತಿಕ್ಕಲು ಪೊಲೀಸರು ಗುಂಡು ಹಾರಿಸಿದ ಪರಿಣಾಮ 13 ಜನರು ಮೃತಪಟ್ಟಿದ್ದರು.ಈ ಘಟನೆ ರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಮಟ್ಟದ ಸದ್ದು ಮಾಡಿತ್ತು.

ಇದನ್ನೂ ಓದಿ: ನಟ ರಜನಿಕಾಂತ್ ಅವರ ಬಹುನಿರೀಕ್ಷಿತ ಹೊಸ ಪಕ್ಷ ಜನವರಿಯಲ್ಲಿ ಆರಂಭ

ಘಟನೆಯ ನಂತರ ಗಾಯಾಳುಗಳನ್ನು ಭೇಟಿಯಾಗಿದ್ದ ರಜನಿಕಾಂತ್‌, ಪ್ರತಿಭಟನೆಯಲ್ಲಿ ಸಾಮಾಜ ವಿರೋಧಿಗಳು ನುಸುಳಿದ್ದರಿಂದ ಹಿಂಸಾಚಾರ ಸಂಭವಿಸಿದೆ ಎಂದು ಆರೋಪಿಸಿದ್ದರು. ಈ ಹಿನ್ನಲೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ಏಕ ಮಹಿಳಾ ನ್ಯಾಯಾಂಗ ಪೀಠವು ಅವರಿಗೆ ಸಮನ್ಸ್ ನೀಡಿದೆ. ಈ ಹಿಂದೆ ನಿವೃತ್ತ ನ್ಯಾಯಾಧೀಶ ಅರುಣಾ ಜಗದೀಸನ್ ಅವರು ರಜನಿಕಾಂತ್ ಅವರಿಗೆ ಸಮನ್ಸ್ ನೀಡಿದ್ದರಾದರೂ ಅವರು ಸಮಸ್ಸ್‌‌ನಿಂದ ವಿನಾಯತಿ ಪಡೆದಿದ್ದರು.

ತಮಿಳುನಾಡಿನ ಆಡಳಿತಾರೂಢ ಎಐಎಡಿಎಂಕೆ ಸರ್ಕಾರದ ಆಡಳಿತದ ವಿರುದ್ದ ಕಿಡಿಕಾರಿದ್ದ ರಜನಿಕಾಂತ್, ಹಿಂಸಾಚಾರಕ್ಕೆ ಸಮಾಜ ವಿರೋಧಿಗಳು ಕಾರಣ, ಅವರ ವಿರುದ್ದ ಕಠಿಣ ಕ್ರಮತೆಗೆದುಕೊಳ್ಳಲು ಒತ್ತಾಯಿಸಿದ್ದರು. ರಜನಿಕಾಂತ್ ಅವರ ಹೇಳಿಕೆಯು ಪೊಲೀಸರು ಮಿತಿಮೀರಿದ ಬಲವನ್ನು ಬಳಸಿದ್ದಾರೆ ಎಂದು ಆರೋಪಿಸಿದ್ದ ಸ್ಥಳೀಯರನ್ನು ತೀವ್ರವಾಗಿ ಅಸಮಾಧಾನಗೊಳಿಸಿತ್ತು.

ಇದನ್ನೂ ಓದಿ: ದೇಶದ ಶಾಂತಿಗಾಗಿ ಯಾವುದೇ ಪಾತ್ರ ವಹಿಸಲು ಸಿದ್ದ: ರಜನಿಕಾಂತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...