Homeಅಂತರಾಷ್ಟ್ರೀಯಇಸ್ರೇಲ್‌ನಾದ್ಯಂತ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತ ವಿರುದ್ಧ ಬೀದಿಗಿಳಿದ ಜನ

ಇಸ್ರೇಲ್‌ನಾದ್ಯಂತ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತ ವಿರುದ್ಧ ಬೀದಿಗಿಳಿದ ಜನ

- Advertisement -
- Advertisement -

ಗಾಝಾದಲ್ಲಿ ಸುಮಾರು 80 ಸಾವಿರದಷ್ಟು ಜನರನ್ನು ಹತ್ಯೆಗೈದ ಬಳಿಕ, ಈಗ ಲೆಬನಾನ್ ಮತ್ತು ಇರಾನ್ ಮೇಲೆ ದಾಳಿ ನಡೆಸುತ್ತಿರುವ ಇಸ್ರೇಲ್‌ನ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ದ ಅಲ್ಲಿನ ನಾಗರಿಕರು ಬೀದಿಗಿಳಿದಿದ್ದಾರೆ.

ನೆತನ್ಯಾಹು ಆಡಳಿತದ ಯುದ್ದದಾಹ ಮತ್ತು ಜನ ವಿರೋಧಿಗಳ ನೀತಿಗಳ ವಿರುದ್ದ ದೇಶದ ವಿವಿಧ ಭಾಗಗಳಲ್ಲಿ ನಿರಂತರ ಪ್ರತಿಭಟನೆಗಳು ನಡೆಯುತ್ತಿವೆ. ಏಪ್ರಿಲ್ 11ರ ಮಾಧ್ಯಮ ವರದಿಗಳ ಪ್ರಕಾರ, ಪ್ರತಿಭಟನಾ ಚಳುವಳಿ ಆರನೇ ವಾರಕ್ಕೆ ಕಾಲಿಟ್ಟಿದೆ.

ಇಸ್ರೇಲ್‌ನ ಪ್ರಮುಖ ನಗರ ಟೆಲ್ ಅವೀವ್‌ನ ಹಬಿಮಾ ಸ್ಕ್ವೇರ್ ಪ್ರತಿಭಟನೆಯ ಕೇಂದ್ರಬಿಂದುವಾಗಿದ್ದು, ಇದರ ಜೊತೆಗೆ ಜೆರುಸಲೇಂ, ಹೈಫಾ ಮತ್ತು ಬೀರ್ ಶೆವಾ ನಗರಗಳಲ್ಲೂ ಪ್ರತಿಭಟನೆಗಳು ನಡೆಯುತ್ತಿವೆ.

ಇರಾನ್ ಮತ್ತು ಲೆಬನಾನ್ ವಿರುದ್ಧದ ಯುದ್ಧವನ್ನು ತಕ್ಷಣವೇ ನಿಲ್ಲಿಸಬೇಕು. ನೆತನ್ಯಾಹು ನೇತೃತ್ವದ ಬಲಪಂಥೀಯ ಸರ್ಕಾರವು ಅಧಿಕಾರದಿಂದ ಕೆಳಗಿಳಿಯಬೇಕು. ಮಿಲಿಟರಿ ಕಾರ್ಯಾಚರಣೆಯ ಬದಲಿಗೆ ಶಾಂತಿಯುತ ಮಾತುಕತೆಯ ಮೂಲಕ ಭದ್ರತೆಯನ್ನು ಕಂಡುಕೊಳ್ಳಬೇಕು ಎಂಬುವುದು ಪ್ರತಿಭಟನಾನಿರತರ ಪ್ರಮುಖ ಬೇಡಿಕೆಯಾಗಿದೆ.

ಸಾರ್ವಜನಿಕ ಸಭೆಗಳ ಮೇಲೆ ನಿಷೇಧವಿದ್ದರೂ ಸಾವಿರಾರು ಜನರು ಬೀದಿಗಿಳಿಯುತ್ತಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಬಲಪ್ರಯೋಗ ಮಾಡುತ್ತಿದ್ದು, ಅನೇಕರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

“ಲೆಬನಾನ್ ಆಕ್ರಮಣವು ವಿನಾಶಕ್ಕೆ ದಾರಿ” ಮತ್ತು “ಶಾಂತಿಯಿಂದ ಮಾತ್ರ ಭದ್ರತೆ ಸಾಧ್ಯ” ಎಂಬ ಘೋಷಣೆಗಳನ್ನು ಕೂಗುತ್ತಾ ಶಾಂತಿಗಾಗಿ ಜನರು ಆಗ್ರಹಿಸುತ್ತಿದ್ದಾರೆ. 

ಪ್ರತಿಭಟನೆಗಳು ತೀವ್ರವಾಗಿದ್ದರೂ, ಇತ್ತೀಚಿನ ಕೆಲವು ಸಮೀಕ್ಷೆಗಳ ಪ್ರಕಾರ ಇಸ್ರೇಲ್‌ನ ಬಹುಸಂಖ್ಯಾತರು ಇರಾನ್ ವಿರುದ್ಧದ ಯುದ್ಧವನ್ನು ಬೆಂಬಲಿಸುತ್ತಿದ್ದಾರೆ ಎಂದು ವರದಿಯಾಗಿದೆ, ಇದು ದೇಶದ ಒಳಗಿನ ವೈಚಾರಿಕ ಭಿನ್ನಾಭಿಪ್ರಾಯವನ್ನು ಎತ್ತಿ ತೋರಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...