Homeಅಂತರಾಷ್ಟ್ರೀಯಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

- Advertisement -
- Advertisement -

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇರಾನ್ ವಿರುದ್ಧದ ಯುದ್ಧವನ್ನು ಕೂಡಲೇ ನಿಲ್ಲಿಸುವಂತೆ ಈ ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಫೆಬ್ರವರಿ 28ರಿಂದ ಇರಾನ್ ವಿರುದ್ಧ ಇಸ್ರೇಲ್ ಮತ್ತು ಅಮೆರಿಕ ಆರಂಭಿಸಿದ ಯುದ್ಧವನ್ನು ವಿರೋಧಿಸಿ ಟೆಲ್ ಅವಿವ್ ಮತ್ತು ಇತರ ಸ್ಥಳಗಳಲ್ಲಿ ಸಾಪ್ತಾಹಿಕ ಪ್ರತಿಭಟನೆಗಳು ನಡೆಯುತ್ತಿವೆ. ಆರಂಭದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನರು ಮಾತ್ರ ಪ್ರತಿಭಟನೆಗಳಲ್ಲಿ ಭಾಗವಹಿಸುತ್ತಿದ್ದರು. ಆದರೆ, ಈಗ ಸಾವಿರಾರು ಜನರು ಪಾಲ್ಗೊಳ್ಳುತ್ತಿದ್ದಾರೆ.

ಶನಿವಾರ (ಮಾ.28) ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ನಡೆದ ಬೃಹತ್ ಪ್ರತಿಭಟನೆಗಳ ವೇಳೆ ಪೊಲೀಸರು 21 ಜನರನ್ನು ಬಂಧಿಸಿದ್ದಾರೆ.

ಕಳೆದ ವರ್ಷ ಗಾಝಾ ಯುದ್ಧವನ್ನು ವಿರೋಧಿಸಿ ಹತ್ತಾರು ಸಾವಿರ ಜನರು ಬೀದಿಗಿಳಿದಿದ್ದ ಸಂಖ್ಯೆಗೆ ಹೋಲಿಸಿದರೆ ಈ ಬಾರಿ ಸಂಖ್ಯೆ ಕಡಿಮೆಯಿದ್ದರೂ, ಕ್ರಮೇಣ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ವರದಿಗಳು ಹೇಳಿವೆ.

ಶನಿವಾರದ ಪ್ರತಿಭಟನಾ ರ‍್ಯಾಲಿಗಳಲ್ಲಿ ಹಲವಾರು ಮಾಜಿ ಸಂಸದರು ಮತ್ತು ಪ್ರಮುಖ ಎಡಪಂಥೀಯ ಸಂಘಟನೆಗಳು ಭಾಗವಹಿಸಿದ್ದವು. ಇದರಲ್ಲಿ ಸ್ಟ್ಯಾಂಡಿಂಗ್ ಟುಗೆದರ್, ಪೀಸ್ ನೌ ಮತ್ತು ವುಮೆನ್ ವೇಜ್ ಪೀಸ್ ಸಂಘಟನೆಗಳು ಇದ್ದವು.

ಈ ಸಂಘಟನೆಗಳು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ನೀತಿಗಳನ್ನು ವಿರೋಧಿಸುತ್ತಿದ್ದು, ಪ್ರಜಾಪ್ರಭುತ್ವಕ್ಕೆ ಉಂಟಾಗುತ್ತಿರುವ ಹಾನಿ ಮತ್ತು ‘ಶಾಶ್ವತ ಯುದ್ಧ’ ನಿಲ್ಲಿಸುವಂತೆ ಒತ್ತಾಯಿಸುತ್ತಿವೆ.

‘ಸ್ಟ್ಯಾಂಡಿಂಗ್ ಟುಗೆದರ್’ ಒಂದು ಯಹೂದಿ-ಅರಬ್ ಹೋರಾಟಗಾರರ ಗುಂಪಾಗಿದ್ದು, ‘ಪೀಸ್ ನೌ’ ಮತ್ತು ‘ವುಮೆನ್ ವೇಜ್ ಪೀಸ್’ ದೀರ್ಘಕಾಲದಿಂದ ಶಾಂತಿಗಾಗಿ ಶ್ರಮಿಸುತ್ತಿರುವ ಪ್ರಮುಖ ಸಂಘಟನೆಗಳಾಗಿವೆ.

ಇಸ್ರೇಲ್‌ನಲ್ಲಿ ಪ್ರಸ್ತುತ ಯುದ್ಧಕಾಲದ ಭದ್ರತಾ ಮಾರ್ಗಸೂಚಿಗಳ ಅನ್ವಯ 50ಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಲಾಗಿದೆ, ಆದ್ದರಿಂದ ಈ ಪ್ರತಿಭಟನೆಗಳನ್ನು ಪೊಲೀಸರು ‘ಅನಧಿಕೃತ’ ಎಂದು ಪರಿಗಣಿಸಿ ಚದುರಿಸುತ್ತಿದ್ದಾರೆ.

ಟೆಲ್ ಅವಿವ್‌ನಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ತೆರವುಗೊಳಿಸುತ್ತಿರುವ ದೃಶ್ಯಗಳು ಎಎಫ್‌ಪಿ ವಿಡಿಯೋ ತುಣುಕುಗಳಲ್ಲಿ ಕಂಡುಬಂದಿವೆ. ಇಂತಹದೇ ದೃಶ್ಯಗಳನ್ನು ಉತ್ತರ ಭಾಗದ ನಗರವಾದ ಹೈಫಾದಲ್ಲಿಯೂ ಹೋರಾಟಗಾರರು ಚಿತ್ರೀಕರಿಸಿದ್ದಾರೆ.

ಪ್ರತಿಭಟನೆಗಳಿಗೆ ಅನುಮತಿ ನೀಡಿರಲಿಲ್ಲ ಎಂದು ಸಂಘಟನಾ ಗುಂಪುಗಳಲ್ಲೊಂದರ ವಕ್ತಾರರು ಎಎಫ್‌ಪಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಟೆಲ್ ಅವಿವ್‌ನಲ್ಲಿ ಭದ್ರತಾ ಪಡೆಗಳು ಕೆಲವು ಪ್ರತಿಭಟನಾಕಾರರನ್ನು ಬಲವಂತವಾಗಿ ತೆರವುಗೊಳಿಸಿದ್ದಾರೆ. ಈ ವೇಳೆ ಹಲವರು ನೆಲಕ್ಕೆ ಬಿದ್ದಿದ್ದಾರೆ ಮತ್ತು ಕನಿಷ್ಠ ಒಬ್ಬ ಪ್ರತಿಭಟನಾಕಾರನ ಕತ್ತನ್ನು ಬಲವಾಗಿ ಹಿಸುಕಿ ಹಿಡಿದಿಡಲಾಗಿತ್ತು ಎಂದು ಎಎಫ್‌ಪಿ ಪತ್ರಕರ್ತರು ವರದಿ ಮಾಡಿದ್ದಾರೆ.

ತುರ್ತು ಪರಿಸ್ಥಿತಿಯ ನಿಯಮಗಳ ಅಡಿಯಲ್ಲಿ ಪ್ರತಿಭಟನಾ ಸಭೆಗಳನ್ನು ನಿಷೇಧಿಸಲಾಗಿದೆ ಎಂದು ‘ಹೋಮ್ ಫ್ರಂಟ್ ಕಮಾಂಡ್’ ಪ್ರತಿನಿಧಿಯು ಸ್ಪಷ್ಟಪಡಿಸಿದ ನಂತರ, ‘ಅನಧಿಕೃತ ಪ್ರತಿಭಟನೆಗಳನ್ನು ಚದುರಿಸಲಾಗಿದೆ ಎಂದು ಇಸ್ರೇಲ್ ಪೊಲೀಸರು ತಿಳಿಸಿದ್ದಾರೆ.

ಟೆಲ್‌ ಅವಿವ್‌ನಲ್ಲಿ 13 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೈಫಾದಲ್ಲಿ ಮತ್ತೂ ಐದು ಜನರನ್ನು ವಶಕ್ಕೆ ಪಡೆಯಲಾಗಿದ್ದು, ಅಲ್ಲಿ ‘ಪ್ರತಿಭಟನಾಕಾರರು ರಸ್ತೆ ತಡೆ ನಡೆಸತೊಡಗಿದರು ಮತ್ತು ಅಧಿಕಾರಿಗಳ ಸೂಚನೆಗಳನ್ನು ಪಾಲಿಸಲಿಲ್ಲ’ ಎಂದು ಹೇಳಿದ್ದಾರೆ.

“ಪ್ರತಿಭಟನಾಕಾರರನ್ನು ಬಂಧಿಸಲು ನಡೆಸಲು ಮತ್ತು ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಪ್ರತಿಭಟನೆಗಳು ವ್ಯಾಪಕವಾಗಿ ಹರಡುತ್ತಿರುವುದನ್ನು ಕಂಡು ಸರ್ಕಾರ ಹೆದರುತ್ತಿದೆ” ಎಂದು ‘ಸ್ಟ್ಯಾಂಡಿಂಗ್ ಟುಗೆದರ್’ ಸಂಘಟನೆಯ ಸಂಘಟಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ನಾವು ಯುದ್ಧದ ನಾಲ್ಕನೇ ವಾರದಲ್ಲಿದ್ದೇವೆ, ಆದರೆ ಈ ಯುದ್ಧದ ನಿಜವಾದ ಗುರಿ ಏನೆಂದು ಯಾರಿಗೂ ತಿಳಿದಿಲ್ಲ” ಎಂದು ಟೆಲ್ ಅವಿವ್‌ನ 52 ವರ್ಷದ ಪ್ರವಾಸ ಮಾರ್ಗದರ್ಶಿ ಯೋರಾಮ್ ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

“ಇದರಿಂದ (ಯುದ್ದದಿಂದ) ನಾವು ಹೇಗೆ ಹೊರಬರಲಿದ್ದೇವೆ ಎಂದು ಯಾರೂ ಯೋಚನೆ ಮಾಡುತ್ತಿಲ್ಲ. ಇದು ಕೊನೆಗೊಳ್ಳುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ” ಎಂದು 76 ವರ್ಷದ ಜೋನ್ ಲೆವಿನ್ ಹೇಳಿದ್ದಾರೆ. ಅಲ್ಲದೆ, ಅವರ ಪ್ರಕಾರ ಈ ಯುದ್ಧವು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ‘ರಾಜಕೀಯ ತಂತ್ರದ’ ಭಾಗವಾಗಿದೆ ಎಂದು ವರದಿಗಳು ವಿವರಿಸಿವೆ.

ಇಸ್ರೇಲ್‌ನಲ್ಲಿ ಇರಾನ್ ವಿರುದ್ಧದ ಯುದ್ಧಕ್ಕೆ ಸಾರ್ವಜನಿಕ ಬೆಂಬಲ ಇನ್ನೂ ಹೆಚ್ಚಾಗಿಯೇ ಇದೆ. ಇಸ್ರೇಲ್ ಡೆಮಾಕ್ರಸಿ ಇನ್‌ಸ್ಟಿಟ್ಯೂಟ್ ಶುಕ್ರವಾರ (ಮಾ. 27) ಪ್ರಕಟಿಸಿದ ಸಮೀಕ್ಷೆಯ ಪ್ರಕಾರ, ಶೇ. 78ರಷ್ಟು ಯಹೂದಿ ಇಸ್ರೇಲಿಗಳು ಯುದ್ಧವನ್ನು ಬೆಂಬಲಿಸುತ್ತಿದ್ದಾರೆ. ಆದರೆ, ಅರಬ್ ಇಸ್ರೇಲಿ ಅಲ್ಪಸಂಖ್ಯಾತರಲ್ಲಿ ಈ ಬೆಂಬಲ ಕೇವಲ ಶೇ. 19ರಷ್ಟು ಮಾತ್ರ ಇದೆ.

ಆದಾಗ್ಯೂ, ಯುದ್ಧವನ್ನು ವಿರೋಧಿಸುವವರ ಪಾಲು ಮಾರ್ಚ್ ಆರಂಭದಲ್ಲಿದ್ದ ಶೇ. 4 ರಿಂದ ಈಗ ಶೇ. 11.5ಕ್ಕೆ ಏರಿದೆ ಎಂದು ಸಂಸ್ಥೆಯ ಸಮೀಕ್ಷೆ ಪತ್ತೆಹಚ್ಚಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಕಾಂಗ್ರೆಸ್ ಮುಸ್ಲಿಮರನ್ನು ದುರ್ಬಳಕೆ ಮಾಡಿಕೊಂಡಿದೆ: ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪ

ದಾವಣಗೆರೆ: ಕಾಂಗ್ರೆಸ್ ಪಕ್ಷವು ಇಷ್ಟು ವರ್ಷಗಳಿಂದ ಮುಸ್ಲಿಮರನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಮುಸ್ಲಿಮರು ತಮ್ಮೊಳಗೆ ಚರ್ಚಿಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ. ಆದ್ದರಿಂದ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ...

CNN ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರಿಂದ ದಾಳಿ : ಮಾಧ್ಯಮ ಒಕ್ಕೂಟದಿಂದ ತೀವ್ರ ಖಂಡನೆ

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ವರದಿ ಮಾಡುತ್ತಿದ್ದ ಸಿಎನ್‌ಎನ್‌ ಮಾಧ್ಯಮ ಸಂಸ್ಥೆಯ ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರು ನಡೆಸಿದ ದೌರ್ಜನ್ಯವನ್ನು ಮಾಧ್ಯಮ ಒಕ್ಕೂಟ ಫಾರಿನ್ ಪ್ರೆಸ್ ಅಸೋಸಿಯೇಷನ್ (ಎಫ್‌ಪಿಎ) ತೀವ್ರವಾಗಿ ಖಂಡಿಸಿದೆ. ಪ್ಯಾಲೆಸ್ತೀನ್‌ನ ತಯಾಸಿರ್...

ಪಶ್ಚಿಮ ಏಷ್ಯಾ ಸಂಘರ್ಷ: ಮಧ್ಯಪ್ರಾಚ್ಯಕ್ಕೆ 3,500 ಅಮೆರಿಕ ಸೈನಿಕರ ನಿಯೋಜನೆ; ಇರಾನ್ ಮೇಲೆ ಭೂದಾಳಿ ನಡೆಸಲು ಪೆಂಟಗನ್ ಸಿದ್ಧತೆ

ಇರಾನ್ ಜೊತೆಗಿನ ಉದ್ವಿಗ್ನತೆ ಹೆಚ್ಚುತ್ತಿರುವಂತೆ, ಪೆಂಟಗನ್ ಸಂಭಾವ್ಯ ನೆಲದ ಕಾರ್ಯಾಚರಣೆಗಳಿಗೆ ಸಿದ್ಧತೆ ನಡೆಸುತ್ತಿದೆ ಎಂದು ವರದಿಗಳು ಸೂಚಿಸುತ್ತಿರುವಾಗಲೂ, ಅಮೆರಿಕವು ಮಧ್ಯಪ್ರಾಚ್ಯದಲ್ಲಿ ತನ್ನ ಮಿಲಿಟರಿ ಉಪಸ್ಥಿತಿಯನ್ನು ಗಮನಾರ್ಹವಾಗಿ ಹೆಚ್ಚಿಸಿದೆ, 3,500 ಕ್ಕೂ ಹೆಚ್ಚು ಸೈನಿಕರನ್ನು...

ಮುಂಬೈನಲ್ಲಿ ವಿತರಣಾ ಟೆಂಪೋದಿಂದ 27 ಎಲ್‌ಪಿಜಿ ಸಿಲಿಂಡರ್‌ಗಳು ಕಳವು; ತನಿಖೆ 

ಮುಂಬೈನಲ್ಲಿ ವಿತರಣಾ ವಾಹನದಿಂದ ಐದು ತುಂಬಿದ ಎಲ್‌ಪಿಜಿ ಸಿಲಿಂಡರ್‌ಗಳು ಸೇರಿದಂತೆ ಇಪ್ಪತ್ತೇಳು ಎಲ್‌ಪಿಜಿ ಸಿಲಿಂಡರ್‌ಗಳು ಕಳವಾಗಿದ್ದು, ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಅನಿಲ ಪೂರೈಕೆಯ...

No Kings : ಅಮೆರಿಕದಾದ್ಯಂತ ಟ್ರಂಪ್ ವಿರುದ್ಧ ಬೃಹತ್ ಪ್ರತಿಭಟನೆ; ಬೀದಿಗಿಳಿದ ಲಕ್ಷಾಂತರ ಜನರು

ಡೊನಾಲ್ಡ್ ಟ್ರಂಪ್ ಆಡಳಿತದ ವಿರುದ್ಧ ಅಮೆರಿಕದಾದ್ಯಂತ ಶನಿವಾರ (ಮಾ. 28) ದೊಡ್ಡ ಮಟ್ಟದ 'ನೋ ಕಿಂಗ್ಸ್' ಪ್ರತಿಭಟನೆಗಳು ನಡೆದಿವೆ. ಟ್ರಂಪ್ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿ, ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಜನರು ಲಕ್ಷಾಂತರ ಸಂಖ್ಯೆಯಲ್ಲಿ...

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಮಾ.28) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು...

ಇರಾನ್‌ನ ಸರ್ವೋಚ್ಚ ನಾಯಕನನ್ನು ‘ನಿರ್ಮೂಲನೆ’ ಮಾಡಲಾಗಿದೆ; ನಮ್ಮ ಮುಂದಿನ ಗುರಿ ಕ್ಯೂಬಾ: ಡೊನಾಲ್ಡ್‌ ಟ್ರಂಪ್

ಪಶ್ಚಿಮ ಏಷ್ಯಾದಾದ್ಯಂತ ಯುದ್ಧ ಮುಂದುವರೆದಿದ್ದರೂ ಮತ್ತು ರಾಜತಾಂತ್ರಿಕ ಪ್ರಯತ್ನಗಳು ಅನಿಶ್ಚಿತವಾಗಿದ್ದರೂ ಸಹ, ಇರಾನ್‌ನ ಉನ್ನತ ನಾಯಕರು ಮತ್ತು ಅದರ ಹೆಚ್ಚಿನ ಮಿಲಿಟರಿ ಸಾಮರ್ಥ್ಯ ನಾಶವಾಗಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಿಯಾಮಿಯಲ್ಲಿ ಸೌದಿ...