Homeಅಂತರಾಷ್ಟ್ರೀಯಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

- Advertisement -
- Advertisement -

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇರಾನ್ ವಿರುದ್ಧದ ಯುದ್ಧವನ್ನು ಕೂಡಲೇ ನಿಲ್ಲಿಸುವಂತೆ ಈ ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಫೆಬ್ರವರಿ 28ರಿಂದ ಇರಾನ್ ವಿರುದ್ಧ ಇಸ್ರೇಲ್ ಮತ್ತು ಅಮೆರಿಕ ಆರಂಭಿಸಿದ ಯುದ್ಧವನ್ನು ವಿರೋಧಿಸಿ ಟೆಲ್ ಅವಿವ್ ಮತ್ತು ಇತರ ಸ್ಥಳಗಳಲ್ಲಿ ಸಾಪ್ತಾಹಿಕ ಪ್ರತಿಭಟನೆಗಳು ನಡೆಯುತ್ತಿವೆ. ಆರಂಭದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನರು ಮಾತ್ರ ಪ್ರತಿಭಟನೆಗಳಲ್ಲಿ ಭಾಗವಹಿಸುತ್ತಿದ್ದರು. ಆದರೆ, ಈಗ ಸಾವಿರಾರು ಜನರು ಪಾಲ್ಗೊಳ್ಳುತ್ತಿದ್ದಾರೆ.

ಶನಿವಾರ (ಮಾ.28) ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ನಡೆದ ಬೃಹತ್ ಪ್ರತಿಭಟನೆಗಳ ವೇಳೆ ಪೊಲೀಸರು 21 ಜನರನ್ನು ಬಂಧಿಸಿದ್ದಾರೆ.

ಕಳೆದ ವರ್ಷ ಗಾಝಾ ಯುದ್ಧವನ್ನು ವಿರೋಧಿಸಿ ಹತ್ತಾರು ಸಾವಿರ ಜನರು ಬೀದಿಗಿಳಿದಿದ್ದ ಸಂಖ್ಯೆಗೆ ಹೋಲಿಸಿದರೆ ಈ ಬಾರಿ ಸಂಖ್ಯೆ ಕಡಿಮೆಯಿದ್ದರೂ, ಕ್ರಮೇಣ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ವರದಿಗಳು ಹೇಳಿವೆ.

ಶನಿವಾರದ ಪ್ರತಿಭಟನಾ ರ‍್ಯಾಲಿಗಳಲ್ಲಿ ಹಲವಾರು ಮಾಜಿ ಸಂಸದರು ಮತ್ತು ಪ್ರಮುಖ ಎಡಪಂಥೀಯ ಸಂಘಟನೆಗಳು ಭಾಗವಹಿಸಿದ್ದವು. ಇದರಲ್ಲಿ ಸ್ಟ್ಯಾಂಡಿಂಗ್ ಟುಗೆದರ್, ಪೀಸ್ ನೌ ಮತ್ತು ವುಮೆನ್ ವೇಜ್ ಪೀಸ್ ಸಂಘಟನೆಗಳು ಇದ್ದವು.

ಈ ಸಂಘಟನೆಗಳು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ನೀತಿಗಳನ್ನು ವಿರೋಧಿಸುತ್ತಿದ್ದು, ಪ್ರಜಾಪ್ರಭುತ್ವಕ್ಕೆ ಉಂಟಾಗುತ್ತಿರುವ ಹಾನಿ ಮತ್ತು ‘ಶಾಶ್ವತ ಯುದ್ಧ’ ನಿಲ್ಲಿಸುವಂತೆ ಒತ್ತಾಯಿಸುತ್ತಿವೆ.

‘ಸ್ಟ್ಯಾಂಡಿಂಗ್ ಟುಗೆದರ್’ ಒಂದು ಯಹೂದಿ-ಅರಬ್ ಹೋರಾಟಗಾರರ ಗುಂಪಾಗಿದ್ದು, ‘ಪೀಸ್ ನೌ’ ಮತ್ತು ‘ವುಮೆನ್ ವೇಜ್ ಪೀಸ್’ ದೀರ್ಘಕಾಲದಿಂದ ಶಾಂತಿಗಾಗಿ ಶ್ರಮಿಸುತ್ತಿರುವ ಪ್ರಮುಖ ಸಂಘಟನೆಗಳಾಗಿವೆ.

ಇಸ್ರೇಲ್‌ನಲ್ಲಿ ಪ್ರಸ್ತುತ ಯುದ್ಧಕಾಲದ ಭದ್ರತಾ ಮಾರ್ಗಸೂಚಿಗಳ ಅನ್ವಯ 50ಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಲಾಗಿದೆ, ಆದ್ದರಿಂದ ಈ ಪ್ರತಿಭಟನೆಗಳನ್ನು ಪೊಲೀಸರು ‘ಅನಧಿಕೃತ’ ಎಂದು ಪರಿಗಣಿಸಿ ಚದುರಿಸುತ್ತಿದ್ದಾರೆ.

ಟೆಲ್ ಅವಿವ್‌ನಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ತೆರವುಗೊಳಿಸುತ್ತಿರುವ ದೃಶ್ಯಗಳು ಎಎಫ್‌ಪಿ ವಿಡಿಯೋ ತುಣುಕುಗಳಲ್ಲಿ ಕಂಡುಬಂದಿವೆ. ಇಂತಹದೇ ದೃಶ್ಯಗಳನ್ನು ಉತ್ತರ ಭಾಗದ ನಗರವಾದ ಹೈಫಾದಲ್ಲಿಯೂ ಹೋರಾಟಗಾರರು ಚಿತ್ರೀಕರಿಸಿದ್ದಾರೆ.

ಪ್ರತಿಭಟನೆಗಳಿಗೆ ಅನುಮತಿ ನೀಡಿರಲಿಲ್ಲ ಎಂದು ಸಂಘಟನಾ ಗುಂಪುಗಳಲ್ಲೊಂದರ ವಕ್ತಾರರು ಎಎಫ್‌ಪಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಟೆಲ್ ಅವಿವ್‌ನಲ್ಲಿ ಭದ್ರತಾ ಪಡೆಗಳು ಕೆಲವು ಪ್ರತಿಭಟನಾಕಾರರನ್ನು ಬಲವಂತವಾಗಿ ತೆರವುಗೊಳಿಸಿದ್ದಾರೆ. ಈ ವೇಳೆ ಹಲವರು ನೆಲಕ್ಕೆ ಬಿದ್ದಿದ್ದಾರೆ ಮತ್ತು ಕನಿಷ್ಠ ಒಬ್ಬ ಪ್ರತಿಭಟನಾಕಾರನ ಕತ್ತನ್ನು ಬಲವಾಗಿ ಹಿಸುಕಿ ಹಿಡಿದಿಡಲಾಗಿತ್ತು ಎಂದು ಎಎಫ್‌ಪಿ ಪತ್ರಕರ್ತರು ವರದಿ ಮಾಡಿದ್ದಾರೆ.

ತುರ್ತು ಪರಿಸ್ಥಿತಿಯ ನಿಯಮಗಳ ಅಡಿಯಲ್ಲಿ ಪ್ರತಿಭಟನಾ ಸಭೆಗಳನ್ನು ನಿಷೇಧಿಸಲಾಗಿದೆ ಎಂದು ‘ಹೋಮ್ ಫ್ರಂಟ್ ಕಮಾಂಡ್’ ಪ್ರತಿನಿಧಿಯು ಸ್ಪಷ್ಟಪಡಿಸಿದ ನಂತರ, ‘ಅನಧಿಕೃತ ಪ್ರತಿಭಟನೆಗಳನ್ನು ಚದುರಿಸಲಾಗಿದೆ ಎಂದು ಇಸ್ರೇಲ್ ಪೊಲೀಸರು ತಿಳಿಸಿದ್ದಾರೆ.

ಟೆಲ್‌ ಅವಿವ್‌ನಲ್ಲಿ 13 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೈಫಾದಲ್ಲಿ ಮತ್ತೂ ಐದು ಜನರನ್ನು ವಶಕ್ಕೆ ಪಡೆಯಲಾಗಿದ್ದು, ಅಲ್ಲಿ ‘ಪ್ರತಿಭಟನಾಕಾರರು ರಸ್ತೆ ತಡೆ ನಡೆಸತೊಡಗಿದರು ಮತ್ತು ಅಧಿಕಾರಿಗಳ ಸೂಚನೆಗಳನ್ನು ಪಾಲಿಸಲಿಲ್ಲ’ ಎಂದು ಹೇಳಿದ್ದಾರೆ.

“ಪ್ರತಿಭಟನಾಕಾರರನ್ನು ಬಂಧಿಸಲು ನಡೆಸಲು ಮತ್ತು ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಪ್ರತಿಭಟನೆಗಳು ವ್ಯಾಪಕವಾಗಿ ಹರಡುತ್ತಿರುವುದನ್ನು ಕಂಡು ಸರ್ಕಾರ ಹೆದರುತ್ತಿದೆ” ಎಂದು ‘ಸ್ಟ್ಯಾಂಡಿಂಗ್ ಟುಗೆದರ್’ ಸಂಘಟನೆಯ ಸಂಘಟಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ನಾವು ಯುದ್ಧದ ನಾಲ್ಕನೇ ವಾರದಲ್ಲಿದ್ದೇವೆ, ಆದರೆ ಈ ಯುದ್ಧದ ನಿಜವಾದ ಗುರಿ ಏನೆಂದು ಯಾರಿಗೂ ತಿಳಿದಿಲ್ಲ” ಎಂದು ಟೆಲ್ ಅವಿವ್‌ನ 52 ವರ್ಷದ ಪ್ರವಾಸ ಮಾರ್ಗದರ್ಶಿ ಯೋರಾಮ್ ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

“ಇದರಿಂದ (ಯುದ್ದದಿಂದ) ನಾವು ಹೇಗೆ ಹೊರಬರಲಿದ್ದೇವೆ ಎಂದು ಯಾರೂ ಯೋಚನೆ ಮಾಡುತ್ತಿಲ್ಲ. ಇದು ಕೊನೆಗೊಳ್ಳುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ” ಎಂದು 76 ವರ್ಷದ ಜೋನ್ ಲೆವಿನ್ ಹೇಳಿದ್ದಾರೆ. ಅಲ್ಲದೆ, ಅವರ ಪ್ರಕಾರ ಈ ಯುದ್ಧವು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ‘ರಾಜಕೀಯ ತಂತ್ರದ’ ಭಾಗವಾಗಿದೆ ಎಂದು ವರದಿಗಳು ವಿವರಿಸಿವೆ.

ಇಸ್ರೇಲ್‌ನಲ್ಲಿ ಇರಾನ್ ವಿರುದ್ಧದ ಯುದ್ಧಕ್ಕೆ ಸಾರ್ವಜನಿಕ ಬೆಂಬಲ ಇನ್ನೂ ಹೆಚ್ಚಾಗಿಯೇ ಇದೆ. ಇಸ್ರೇಲ್ ಡೆಮಾಕ್ರಸಿ ಇನ್‌ಸ್ಟಿಟ್ಯೂಟ್ ಶುಕ್ರವಾರ (ಮಾ. 27) ಪ್ರಕಟಿಸಿದ ಸಮೀಕ್ಷೆಯ ಪ್ರಕಾರ, ಶೇ. 78ರಷ್ಟು ಯಹೂದಿ ಇಸ್ರೇಲಿಗಳು ಯುದ್ಧವನ್ನು ಬೆಂಬಲಿಸುತ್ತಿದ್ದಾರೆ. ಆದರೆ, ಅರಬ್ ಇಸ್ರೇಲಿ ಅಲ್ಪಸಂಖ್ಯಾತರಲ್ಲಿ ಈ ಬೆಂಬಲ ಕೇವಲ ಶೇ. 19ರಷ್ಟು ಮಾತ್ರ ಇದೆ.

ಆದಾಗ್ಯೂ, ಯುದ್ಧವನ್ನು ವಿರೋಧಿಸುವವರ ಪಾಲು ಮಾರ್ಚ್ ಆರಂಭದಲ್ಲಿದ್ದ ಶೇ. 4 ರಿಂದ ಈಗ ಶೇ. 11.5ಕ್ಕೆ ಏರಿದೆ ಎಂದು ಸಂಸ್ಥೆಯ ಸಮೀಕ್ಷೆ ಪತ್ತೆಹಚ್ಚಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...