Homeಅಂತರಾಷ್ಟ್ರೀಯಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

- Advertisement -
- Advertisement -

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇರಾನ್ ವಿರುದ್ಧದ ಯುದ್ಧವನ್ನು ಕೂಡಲೇ ನಿಲ್ಲಿಸುವಂತೆ ಈ ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಫೆಬ್ರವರಿ 28ರಿಂದ ಇರಾನ್ ವಿರುದ್ಧ ಇಸ್ರೇಲ್ ಮತ್ತು ಅಮೆರಿಕ ಆರಂಭಿಸಿದ ಯುದ್ಧವನ್ನು ವಿರೋಧಿಸಿ ಟೆಲ್ ಅವಿವ್ ಮತ್ತು ಇತರ ಸ್ಥಳಗಳಲ್ಲಿ ಸಾಪ್ತಾಹಿಕ ಪ್ರತಿಭಟನೆಗಳು ನಡೆಯುತ್ತಿವೆ. ಆರಂಭದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನರು ಮಾತ್ರ ಪ್ರತಿಭಟನೆಗಳಲ್ಲಿ ಭಾಗವಹಿಸುತ್ತಿದ್ದರು. ಆದರೆ, ಈಗ ಸಾವಿರಾರು ಜನರು ಪಾಲ್ಗೊಳ್ಳುತ್ತಿದ್ದಾರೆ.

ಶನಿವಾರ (ಮಾ.28) ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ನಡೆದ ಬೃಹತ್ ಪ್ರತಿಭಟನೆಗಳ ವೇಳೆ ಪೊಲೀಸರು 21 ಜನರನ್ನು ಬಂಧಿಸಿದ್ದಾರೆ.

ಕಳೆದ ವರ್ಷ ಗಾಝಾ ಯುದ್ಧವನ್ನು ವಿರೋಧಿಸಿ ಹತ್ತಾರು ಸಾವಿರ ಜನರು ಬೀದಿಗಿಳಿದಿದ್ದ ಸಂಖ್ಯೆಗೆ ಹೋಲಿಸಿದರೆ ಈ ಬಾರಿ ಸಂಖ್ಯೆ ಕಡಿಮೆಯಿದ್ದರೂ, ಕ್ರಮೇಣ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ವರದಿಗಳು ಹೇಳಿವೆ.

ಶನಿವಾರದ ಪ್ರತಿಭಟನಾ ರ‍್ಯಾಲಿಗಳಲ್ಲಿ ಹಲವಾರು ಮಾಜಿ ಸಂಸದರು ಮತ್ತು ಪ್ರಮುಖ ಎಡಪಂಥೀಯ ಸಂಘಟನೆಗಳು ಭಾಗವಹಿಸಿದ್ದವು. ಇದರಲ್ಲಿ ಸ್ಟ್ಯಾಂಡಿಂಗ್ ಟುಗೆದರ್, ಪೀಸ್ ನೌ ಮತ್ತು ವುಮೆನ್ ವೇಜ್ ಪೀಸ್ ಸಂಘಟನೆಗಳು ಇದ್ದವು.

ಈ ಸಂಘಟನೆಗಳು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ನೀತಿಗಳನ್ನು ವಿರೋಧಿಸುತ್ತಿದ್ದು, ಪ್ರಜಾಪ್ರಭುತ್ವಕ್ಕೆ ಉಂಟಾಗುತ್ತಿರುವ ಹಾನಿ ಮತ್ತು ‘ಶಾಶ್ವತ ಯುದ್ಧ’ ನಿಲ್ಲಿಸುವಂತೆ ಒತ್ತಾಯಿಸುತ್ತಿವೆ.

‘ಸ್ಟ್ಯಾಂಡಿಂಗ್ ಟುಗೆದರ್’ ಒಂದು ಯಹೂದಿ-ಅರಬ್ ಹೋರಾಟಗಾರರ ಗುಂಪಾಗಿದ್ದು, ‘ಪೀಸ್ ನೌ’ ಮತ್ತು ‘ವುಮೆನ್ ವೇಜ್ ಪೀಸ್’ ದೀರ್ಘಕಾಲದಿಂದ ಶಾಂತಿಗಾಗಿ ಶ್ರಮಿಸುತ್ತಿರುವ ಪ್ರಮುಖ ಸಂಘಟನೆಗಳಾಗಿವೆ.

ಇಸ್ರೇಲ್‌ನಲ್ಲಿ ಪ್ರಸ್ತುತ ಯುದ್ಧಕಾಲದ ಭದ್ರತಾ ಮಾರ್ಗಸೂಚಿಗಳ ಅನ್ವಯ 50ಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಲಾಗಿದೆ, ಆದ್ದರಿಂದ ಈ ಪ್ರತಿಭಟನೆಗಳನ್ನು ಪೊಲೀಸರು ‘ಅನಧಿಕೃತ’ ಎಂದು ಪರಿಗಣಿಸಿ ಚದುರಿಸುತ್ತಿದ್ದಾರೆ.

ಟೆಲ್ ಅವಿವ್‌ನಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ತೆರವುಗೊಳಿಸುತ್ತಿರುವ ದೃಶ್ಯಗಳು ಎಎಫ್‌ಪಿ ವಿಡಿಯೋ ತುಣುಕುಗಳಲ್ಲಿ ಕಂಡುಬಂದಿವೆ. ಇಂತಹದೇ ದೃಶ್ಯಗಳನ್ನು ಉತ್ತರ ಭಾಗದ ನಗರವಾದ ಹೈಫಾದಲ್ಲಿಯೂ ಹೋರಾಟಗಾರರು ಚಿತ್ರೀಕರಿಸಿದ್ದಾರೆ.

ಪ್ರತಿಭಟನೆಗಳಿಗೆ ಅನುಮತಿ ನೀಡಿರಲಿಲ್ಲ ಎಂದು ಸಂಘಟನಾ ಗುಂಪುಗಳಲ್ಲೊಂದರ ವಕ್ತಾರರು ಎಎಫ್‌ಪಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಟೆಲ್ ಅವಿವ್‌ನಲ್ಲಿ ಭದ್ರತಾ ಪಡೆಗಳು ಕೆಲವು ಪ್ರತಿಭಟನಾಕಾರರನ್ನು ಬಲವಂತವಾಗಿ ತೆರವುಗೊಳಿಸಿದ್ದಾರೆ. ಈ ವೇಳೆ ಹಲವರು ನೆಲಕ್ಕೆ ಬಿದ್ದಿದ್ದಾರೆ ಮತ್ತು ಕನಿಷ್ಠ ಒಬ್ಬ ಪ್ರತಿಭಟನಾಕಾರನ ಕತ್ತನ್ನು ಬಲವಾಗಿ ಹಿಸುಕಿ ಹಿಡಿದಿಡಲಾಗಿತ್ತು ಎಂದು ಎಎಫ್‌ಪಿ ಪತ್ರಕರ್ತರು ವರದಿ ಮಾಡಿದ್ದಾರೆ.

ತುರ್ತು ಪರಿಸ್ಥಿತಿಯ ನಿಯಮಗಳ ಅಡಿಯಲ್ಲಿ ಪ್ರತಿಭಟನಾ ಸಭೆಗಳನ್ನು ನಿಷೇಧಿಸಲಾಗಿದೆ ಎಂದು ‘ಹೋಮ್ ಫ್ರಂಟ್ ಕಮಾಂಡ್’ ಪ್ರತಿನಿಧಿಯು ಸ್ಪಷ್ಟಪಡಿಸಿದ ನಂತರ, ‘ಅನಧಿಕೃತ ಪ್ರತಿಭಟನೆಗಳನ್ನು ಚದುರಿಸಲಾಗಿದೆ ಎಂದು ಇಸ್ರೇಲ್ ಪೊಲೀಸರು ತಿಳಿಸಿದ್ದಾರೆ.

ಟೆಲ್‌ ಅವಿವ್‌ನಲ್ಲಿ 13 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೈಫಾದಲ್ಲಿ ಮತ್ತೂ ಐದು ಜನರನ್ನು ವಶಕ್ಕೆ ಪಡೆಯಲಾಗಿದ್ದು, ಅಲ್ಲಿ ‘ಪ್ರತಿಭಟನಾಕಾರರು ರಸ್ತೆ ತಡೆ ನಡೆಸತೊಡಗಿದರು ಮತ್ತು ಅಧಿಕಾರಿಗಳ ಸೂಚನೆಗಳನ್ನು ಪಾಲಿಸಲಿಲ್ಲ’ ಎಂದು ಹೇಳಿದ್ದಾರೆ.

“ಪ್ರತಿಭಟನಾಕಾರರನ್ನು ಬಂಧಿಸಲು ನಡೆಸಲು ಮತ್ತು ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಪ್ರತಿಭಟನೆಗಳು ವ್ಯಾಪಕವಾಗಿ ಹರಡುತ್ತಿರುವುದನ್ನು ಕಂಡು ಸರ್ಕಾರ ಹೆದರುತ್ತಿದೆ” ಎಂದು ‘ಸ್ಟ್ಯಾಂಡಿಂಗ್ ಟುಗೆದರ್’ ಸಂಘಟನೆಯ ಸಂಘಟಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ನಾವು ಯುದ್ಧದ ನಾಲ್ಕನೇ ವಾರದಲ್ಲಿದ್ದೇವೆ, ಆದರೆ ಈ ಯುದ್ಧದ ನಿಜವಾದ ಗುರಿ ಏನೆಂದು ಯಾರಿಗೂ ತಿಳಿದಿಲ್ಲ” ಎಂದು ಟೆಲ್ ಅವಿವ್‌ನ 52 ವರ್ಷದ ಪ್ರವಾಸ ಮಾರ್ಗದರ್ಶಿ ಯೋರಾಮ್ ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

“ಇದರಿಂದ (ಯುದ್ದದಿಂದ) ನಾವು ಹೇಗೆ ಹೊರಬರಲಿದ್ದೇವೆ ಎಂದು ಯಾರೂ ಯೋಚನೆ ಮಾಡುತ್ತಿಲ್ಲ. ಇದು ಕೊನೆಗೊಳ್ಳುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ” ಎಂದು 76 ವರ್ಷದ ಜೋನ್ ಲೆವಿನ್ ಹೇಳಿದ್ದಾರೆ. ಅಲ್ಲದೆ, ಅವರ ಪ್ರಕಾರ ಈ ಯುದ್ಧವು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ‘ರಾಜಕೀಯ ತಂತ್ರದ’ ಭಾಗವಾಗಿದೆ ಎಂದು ವರದಿಗಳು ವಿವರಿಸಿವೆ.

ಇಸ್ರೇಲ್‌ನಲ್ಲಿ ಇರಾನ್ ವಿರುದ್ಧದ ಯುದ್ಧಕ್ಕೆ ಸಾರ್ವಜನಿಕ ಬೆಂಬಲ ಇನ್ನೂ ಹೆಚ್ಚಾಗಿಯೇ ಇದೆ. ಇಸ್ರೇಲ್ ಡೆಮಾಕ್ರಸಿ ಇನ್‌ಸ್ಟಿಟ್ಯೂಟ್ ಶುಕ್ರವಾರ (ಮಾ. 27) ಪ್ರಕಟಿಸಿದ ಸಮೀಕ್ಷೆಯ ಪ್ರಕಾರ, ಶೇ. 78ರಷ್ಟು ಯಹೂದಿ ಇಸ್ರೇಲಿಗಳು ಯುದ್ಧವನ್ನು ಬೆಂಬಲಿಸುತ್ತಿದ್ದಾರೆ. ಆದರೆ, ಅರಬ್ ಇಸ್ರೇಲಿ ಅಲ್ಪಸಂಖ್ಯಾತರಲ್ಲಿ ಈ ಬೆಂಬಲ ಕೇವಲ ಶೇ. 19ರಷ್ಟು ಮಾತ್ರ ಇದೆ.

ಆದಾಗ್ಯೂ, ಯುದ್ಧವನ್ನು ವಿರೋಧಿಸುವವರ ಪಾಲು ಮಾರ್ಚ್ ಆರಂಭದಲ್ಲಿದ್ದ ಶೇ. 4 ರಿಂದ ಈಗ ಶೇ. 11.5ಕ್ಕೆ ಏರಿದೆ ಎಂದು ಸಂಸ್ಥೆಯ ಸಮೀಕ್ಷೆ ಪತ್ತೆಹಚ್ಚಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...