Homeಅಂತರಾಷ್ಟ್ರೀಯಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

- Advertisement -
- Advertisement -

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇರಾನ್ ವಿರುದ್ಧದ ಯುದ್ಧವನ್ನು ಕೂಡಲೇ ನಿಲ್ಲಿಸುವಂತೆ ಈ ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಫೆಬ್ರವರಿ 28ರಿಂದ ಇರಾನ್ ವಿರುದ್ಧ ಇಸ್ರೇಲ್ ಮತ್ತು ಅಮೆರಿಕ ಆರಂಭಿಸಿದ ಯುದ್ಧವನ್ನು ವಿರೋಧಿಸಿ ಟೆಲ್ ಅವಿವ್ ಮತ್ತು ಇತರ ಸ್ಥಳಗಳಲ್ಲಿ ಸಾಪ್ತಾಹಿಕ ಪ್ರತಿಭಟನೆಗಳು ನಡೆಯುತ್ತಿವೆ. ಆರಂಭದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನರು ಮಾತ್ರ ಪ್ರತಿಭಟನೆಗಳಲ್ಲಿ ಭಾಗವಹಿಸುತ್ತಿದ್ದರು. ಆದರೆ, ಈಗ ಸಾವಿರಾರು ಜನರು ಪಾಲ್ಗೊಳ್ಳುತ್ತಿದ್ದಾರೆ.

ಶನಿವಾರ (ಮಾ.28) ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ನಡೆದ ಬೃಹತ್ ಪ್ರತಿಭಟನೆಗಳ ವೇಳೆ ಪೊಲೀಸರು 21 ಜನರನ್ನು ಬಂಧಿಸಿದ್ದಾರೆ.

ಕಳೆದ ವರ್ಷ ಗಾಝಾ ಯುದ್ಧವನ್ನು ವಿರೋಧಿಸಿ ಹತ್ತಾರು ಸಾವಿರ ಜನರು ಬೀದಿಗಿಳಿದಿದ್ದ ಸಂಖ್ಯೆಗೆ ಹೋಲಿಸಿದರೆ ಈ ಬಾರಿ ಸಂಖ್ಯೆ ಕಡಿಮೆಯಿದ್ದರೂ, ಕ್ರಮೇಣ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ವರದಿಗಳು ಹೇಳಿವೆ.

ಶನಿವಾರದ ಪ್ರತಿಭಟನಾ ರ‍್ಯಾಲಿಗಳಲ್ಲಿ ಹಲವಾರು ಮಾಜಿ ಸಂಸದರು ಮತ್ತು ಪ್ರಮುಖ ಎಡಪಂಥೀಯ ಸಂಘಟನೆಗಳು ಭಾಗವಹಿಸಿದ್ದವು. ಇದರಲ್ಲಿ ಸ್ಟ್ಯಾಂಡಿಂಗ್ ಟುಗೆದರ್, ಪೀಸ್ ನೌ ಮತ್ತು ವುಮೆನ್ ವೇಜ್ ಪೀಸ್ ಸಂಘಟನೆಗಳು ಇದ್ದವು.

ಈ ಸಂಘಟನೆಗಳು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ನೀತಿಗಳನ್ನು ವಿರೋಧಿಸುತ್ತಿದ್ದು, ಪ್ರಜಾಪ್ರಭುತ್ವಕ್ಕೆ ಉಂಟಾಗುತ್ತಿರುವ ಹಾನಿ ಮತ್ತು ‘ಶಾಶ್ವತ ಯುದ್ಧ’ ನಿಲ್ಲಿಸುವಂತೆ ಒತ್ತಾಯಿಸುತ್ತಿವೆ.

‘ಸ್ಟ್ಯಾಂಡಿಂಗ್ ಟುಗೆದರ್’ ಒಂದು ಯಹೂದಿ-ಅರಬ್ ಹೋರಾಟಗಾರರ ಗುಂಪಾಗಿದ್ದು, ‘ಪೀಸ್ ನೌ’ ಮತ್ತು ‘ವುಮೆನ್ ವೇಜ್ ಪೀಸ್’ ದೀರ್ಘಕಾಲದಿಂದ ಶಾಂತಿಗಾಗಿ ಶ್ರಮಿಸುತ್ತಿರುವ ಪ್ರಮುಖ ಸಂಘಟನೆಗಳಾಗಿವೆ.

ಇಸ್ರೇಲ್‌ನಲ್ಲಿ ಪ್ರಸ್ತುತ ಯುದ್ಧಕಾಲದ ಭದ್ರತಾ ಮಾರ್ಗಸೂಚಿಗಳ ಅನ್ವಯ 50ಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಲಾಗಿದೆ, ಆದ್ದರಿಂದ ಈ ಪ್ರತಿಭಟನೆಗಳನ್ನು ಪೊಲೀಸರು ‘ಅನಧಿಕೃತ’ ಎಂದು ಪರಿಗಣಿಸಿ ಚದುರಿಸುತ್ತಿದ್ದಾರೆ.

ಟೆಲ್ ಅವಿವ್‌ನಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ತೆರವುಗೊಳಿಸುತ್ತಿರುವ ದೃಶ್ಯಗಳು ಎಎಫ್‌ಪಿ ವಿಡಿಯೋ ತುಣುಕುಗಳಲ್ಲಿ ಕಂಡುಬಂದಿವೆ. ಇಂತಹದೇ ದೃಶ್ಯಗಳನ್ನು ಉತ್ತರ ಭಾಗದ ನಗರವಾದ ಹೈಫಾದಲ್ಲಿಯೂ ಹೋರಾಟಗಾರರು ಚಿತ್ರೀಕರಿಸಿದ್ದಾರೆ.

ಪ್ರತಿಭಟನೆಗಳಿಗೆ ಅನುಮತಿ ನೀಡಿರಲಿಲ್ಲ ಎಂದು ಸಂಘಟನಾ ಗುಂಪುಗಳಲ್ಲೊಂದರ ವಕ್ತಾರರು ಎಎಫ್‌ಪಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಟೆಲ್ ಅವಿವ್‌ನಲ್ಲಿ ಭದ್ರತಾ ಪಡೆಗಳು ಕೆಲವು ಪ್ರತಿಭಟನಾಕಾರರನ್ನು ಬಲವಂತವಾಗಿ ತೆರವುಗೊಳಿಸಿದ್ದಾರೆ. ಈ ವೇಳೆ ಹಲವರು ನೆಲಕ್ಕೆ ಬಿದ್ದಿದ್ದಾರೆ ಮತ್ತು ಕನಿಷ್ಠ ಒಬ್ಬ ಪ್ರತಿಭಟನಾಕಾರನ ಕತ್ತನ್ನು ಬಲವಾಗಿ ಹಿಸುಕಿ ಹಿಡಿದಿಡಲಾಗಿತ್ತು ಎಂದು ಎಎಫ್‌ಪಿ ಪತ್ರಕರ್ತರು ವರದಿ ಮಾಡಿದ್ದಾರೆ.

ತುರ್ತು ಪರಿಸ್ಥಿತಿಯ ನಿಯಮಗಳ ಅಡಿಯಲ್ಲಿ ಪ್ರತಿಭಟನಾ ಸಭೆಗಳನ್ನು ನಿಷೇಧಿಸಲಾಗಿದೆ ಎಂದು ‘ಹೋಮ್ ಫ್ರಂಟ್ ಕಮಾಂಡ್’ ಪ್ರತಿನಿಧಿಯು ಸ್ಪಷ್ಟಪಡಿಸಿದ ನಂತರ, ‘ಅನಧಿಕೃತ ಪ್ರತಿಭಟನೆಗಳನ್ನು ಚದುರಿಸಲಾಗಿದೆ ಎಂದು ಇಸ್ರೇಲ್ ಪೊಲೀಸರು ತಿಳಿಸಿದ್ದಾರೆ.

ಟೆಲ್‌ ಅವಿವ್‌ನಲ್ಲಿ 13 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೈಫಾದಲ್ಲಿ ಮತ್ತೂ ಐದು ಜನರನ್ನು ವಶಕ್ಕೆ ಪಡೆಯಲಾಗಿದ್ದು, ಅಲ್ಲಿ ‘ಪ್ರತಿಭಟನಾಕಾರರು ರಸ್ತೆ ತಡೆ ನಡೆಸತೊಡಗಿದರು ಮತ್ತು ಅಧಿಕಾರಿಗಳ ಸೂಚನೆಗಳನ್ನು ಪಾಲಿಸಲಿಲ್ಲ’ ಎಂದು ಹೇಳಿದ್ದಾರೆ.

“ಪ್ರತಿಭಟನಾಕಾರರನ್ನು ಬಂಧಿಸಲು ನಡೆಸಲು ಮತ್ತು ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಪ್ರತಿಭಟನೆಗಳು ವ್ಯಾಪಕವಾಗಿ ಹರಡುತ್ತಿರುವುದನ್ನು ಕಂಡು ಸರ್ಕಾರ ಹೆದರುತ್ತಿದೆ” ಎಂದು ‘ಸ್ಟ್ಯಾಂಡಿಂಗ್ ಟುಗೆದರ್’ ಸಂಘಟನೆಯ ಸಂಘಟಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ನಾವು ಯುದ್ಧದ ನಾಲ್ಕನೇ ವಾರದಲ್ಲಿದ್ದೇವೆ, ಆದರೆ ಈ ಯುದ್ಧದ ನಿಜವಾದ ಗುರಿ ಏನೆಂದು ಯಾರಿಗೂ ತಿಳಿದಿಲ್ಲ” ಎಂದು ಟೆಲ್ ಅವಿವ್‌ನ 52 ವರ್ಷದ ಪ್ರವಾಸ ಮಾರ್ಗದರ್ಶಿ ಯೋರಾಮ್ ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

“ಇದರಿಂದ (ಯುದ್ದದಿಂದ) ನಾವು ಹೇಗೆ ಹೊರಬರಲಿದ್ದೇವೆ ಎಂದು ಯಾರೂ ಯೋಚನೆ ಮಾಡುತ್ತಿಲ್ಲ. ಇದು ಕೊನೆಗೊಳ್ಳುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ” ಎಂದು 76 ವರ್ಷದ ಜೋನ್ ಲೆವಿನ್ ಹೇಳಿದ್ದಾರೆ. ಅಲ್ಲದೆ, ಅವರ ಪ್ರಕಾರ ಈ ಯುದ್ಧವು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ‘ರಾಜಕೀಯ ತಂತ್ರದ’ ಭಾಗವಾಗಿದೆ ಎಂದು ವರದಿಗಳು ವಿವರಿಸಿವೆ.

ಇಸ್ರೇಲ್‌ನಲ್ಲಿ ಇರಾನ್ ವಿರುದ್ಧದ ಯುದ್ಧಕ್ಕೆ ಸಾರ್ವಜನಿಕ ಬೆಂಬಲ ಇನ್ನೂ ಹೆಚ್ಚಾಗಿಯೇ ಇದೆ. ಇಸ್ರೇಲ್ ಡೆಮಾಕ್ರಸಿ ಇನ್‌ಸ್ಟಿಟ್ಯೂಟ್ ಶುಕ್ರವಾರ (ಮಾ. 27) ಪ್ರಕಟಿಸಿದ ಸಮೀಕ್ಷೆಯ ಪ್ರಕಾರ, ಶೇ. 78ರಷ್ಟು ಯಹೂದಿ ಇಸ್ರೇಲಿಗಳು ಯುದ್ಧವನ್ನು ಬೆಂಬಲಿಸುತ್ತಿದ್ದಾರೆ. ಆದರೆ, ಅರಬ್ ಇಸ್ರೇಲಿ ಅಲ್ಪಸಂಖ್ಯಾತರಲ್ಲಿ ಈ ಬೆಂಬಲ ಕೇವಲ ಶೇ. 19ರಷ್ಟು ಮಾತ್ರ ಇದೆ.

ಆದಾಗ್ಯೂ, ಯುದ್ಧವನ್ನು ವಿರೋಧಿಸುವವರ ಪಾಲು ಮಾರ್ಚ್ ಆರಂಭದಲ್ಲಿದ್ದ ಶೇ. 4 ರಿಂದ ಈಗ ಶೇ. 11.5ಕ್ಕೆ ಏರಿದೆ ಎಂದು ಸಂಸ್ಥೆಯ ಸಮೀಕ್ಷೆ ಪತ್ತೆಹಚ್ಚಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...