Homeಮುಖಪುಟಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

- Advertisement -
- Advertisement -

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ವೇಳೆ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲೋರಾ ಶಾಂತಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಎಸ್‌ಆರ್‌ಎಂನ ಆಂತರಿಕ ಸಮಿತಿಯ ವರದಿಯು ಲೋರಾ ‘ಗಂಭೀರ ತಪ್ಪು’ ಮಾಡಿದ್ದಾರೆ ಎಂದು ಹೇಳಿದೆ.

ವಿಶ್ವವಿದ್ಯಾನಿಲಯದ ವೃತ್ತಿ ಅಭಿವೃದ್ಧಿ ಕೇಂದ್ರದಲ್ಲಿ (ಸಿಡಿಸಿ) ಕೆಲಸ ಮಾಡುತ್ತಿದ್ದ ಲೋರಾ ಅವರು, ಕಳೆದ ಮೇ ತಿಂಗಳಲ್ಲಿ ಭಾರತೀಯ ಸೇನೆ ಅಪರೇಷನ್ ಸಿಂಧೂರ್ ಕೈಗೊಂಡಾಗ ಶಾಂತಿಗಾಗಿ ಕರೆ ನೀಡುವ ಸರಣಿ ವಾಟ್ಸಾಪ್ ಸ್ಟೇಟಸ್‌ಗಳನ್ನು ಪೋಸ್ಟ್ ಮಾಡಿದ್ದರು. ಆ ಬಳಿಕ ವಿದ್ಯಾರ್ಥಿಗಳು ಅವರನ್ನು ಅಪಹಾಸ್ಯ ಮಾಡಲು ಶುರು ಮಾಡಿದ್ದರು ಎಂದು ಆರೋಪಿಸಲಾಗಿದೆ.

“ನಮಗೆ ದೊರೆತ ಲೋರಾ ಅವರ ವಜಾ ಆದೇಶದಲ್ಲಿ, ಎಸ್‌ಆರ್‌ಎಂಐಎಸ್‌ಟಿಯ ಸಹಾಯಕ ಪ್ರಾಧ್ಯಾಪಕಿ ಎಂಬ ಹೆಸರಿನಲ್ಲಿ ಲೋರಾ ಸಶಸ್ತ್ರ ಪಡೆಗಳನ್ನು ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ್ದಾರೆ. ಆದ್ದರಿಂದ, ಅವರು ಸಂಸ್ಥೆಯಲ್ಲಿ ತಮ್ಮ ಕೆಲಸ ಮುಂದುವರಿಸಲು ಅನರ್ಹರಾಗಿದ್ದಾರೆ ಮತ್ತು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ ಎಂಬುವುದಾಗಿ ಹೇಳಲಾಗಿದೆ” ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಲೋರಾ ಅವರ ಪೋಸ್ಟ್ ಕುರಿತು ಆಂತರಿಕ ವಿಚಾರಣಾ ಸಮಿತಿಯನ್ನು ಎಸ್‌ಆರ್‌ಎಂಐಎಸ್‌ಟಿಯ ವಿದ್ಯಾರ್ಥಿ ವ್ಯವಹಾರಗಳ ನಿರ್ದೇಶಕಿ ಡಾ. ನಿಶಾ ಅಶೋಕನ್ ಅವರ ನೇತೃತ್ವದಲ್ಲಿ ರಚಿಸಲಾಗಿತ್ತು. ವಿದ್ಯಾರ್ಥಿ ವ್ಯವಹಾರಗಳ ಉಪನಿರ್ದೇಶಕ ಡಾ. ಪ್ರಿನ್ಸ್ ಕಲ್ಯಾಣಸುಂದರಂ ಸಮಿತಿಯ ನಿರೂಪಕ ಅಧಿಕಾರಿಯಾಗಿದ್ದರು.

ಜುಲೈ 15ರಿಂದ ಸೆಪ್ಟೆಂಬರ್ 26 ರವರೆಗೆ ಕಟ್ಟಂಕುಲತ್ತೂರ್ ಎಸ್‌ಆರ್‌ಎಂ ಕ್ಯಾಂಪಸ್‌ನಲ್ಲಿ ವಿಚಾರಣೆ ನಡೆದಿದೆ. ಸಮಿತಿಯು ಅಕ್ಟೋಬರ್ 30ರಂದು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ಗೆ ತನ್ನ ವರದಿಯನ್ನು ಸಲ್ಲಿಸಿದೆ.

ದಲಿತ ಕ್ರಿಶ್ಚಿಯನ್ ಆಗಿರುವ ಲೋರಾ ಅವರ ವಾಟ್ಸಾಪ್ ಸ್ಟೇಟಸ್, ಫೋನ್ ನಂಬರ್ ಮತ್ತು ಫೋಟೋ ಬಲಪಂಥೀಯ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಿಗೆ ಸೋರಿಕೆಯಾದ ನಂತರ, ಅವರನ್ನು ಮೇ 8ರಂದು ಮೊದಲು ಅಮಾನತುಗೊಳಿಸಲಾಗಿತ್ತು.

ಲೋರಾ ಅವರಿಗೆ ಆನ್‌ಲೈನ್ ನಿಂದನೆ, ಬೆದರಿಕೆ ಫೋನ್ ಕರೆಗಳು ಮತ್ತು ಕೊಲೆ ಬೆದರಿಕೆಗಳು ಬಂದಿವೆ. ಅವರಿಗೆ ರಾಷ್ಟ್ರವಿರೋಧಿ ಎಂದು ಹಣೆಪಟ್ಟಿ ಕಟ್ಟಲಾಗಿದೆ ಮತ್ತು ಭಾರತೀಯ ಸೇನೆಯ ವಿರುದ್ಧ ಮಾತನಾಡಿದ ಆರೋಪ ಹೊರಿಸಲಾಗಿದೆ. ಇದಲ್ಲದೆ, ತನ್ನನ್ನು ತಾನು ರಕ್ಷಿಸಿಕೊಳ್ಳಲು ಚೆನ್ನೈನಲ್ಲಿರುವ ಮನೆಯನ್ನು ಖಾಲಿ ಮಾಡಿ ಸ್ವಂತ ಊರು ಕಲ್ಲಕುರಿಚಿಗೆ ಹಿಂತಿರುಗುವಂತೆ ಒತ್ತಾಯಿಸಲಾಗಿದೆ ಎಂದು ದಿ ನ್ಯೂಸ್‌ ಮಿನಿಟ್ ವರದಿ ವಿವರಿಸಿದೆ.

ಮೇ 7, 2025ರಂದು ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಇದ್ದಾಗ, ಲೋರಾ ಅವರು ಯುದ್ದೋನ್ಮಾದವನ್ನು ತೀವ್ರವಾಗಿ ವಿರೋಧಿಸಿ ವಾಟ್ಸಾಪ್ ಸ್ಟೇಟಸ್ ಹಾಕಿದ್ದರು. ಯುದ್ಧದಲ್ಲಿ ಮನುಷ್ಯರು ಸಾಯುತ್ತಾರೆ, ಕುಟುಂಬಗಳು ಒಡೆಯುತ್ತವೆ, ಆ ಮಾನವೀಯ ನಷ್ಟವನ್ನು ಮರೆಯಬೇಡಿ ಎಂದು ಜನರಿಗೆ ಮನವಿ ಮಾಡಿದ್ದರು. ಯುದ್ಧ ಪ್ರಚಾರ ಹೇಗೆ ಜನರನ್ನು ಮೋಸ ಮಾಡುತ್ತದೆ ಎಂಬುದನ್ನು ಹೇಳುವ ಜಾರ್ಜ್ ಆರ್ವೆಲ್ ಅವರ ಪ್ರಸಿದ್ಧ ಉಲ್ಲೇಖವನ್ನು ಅವರು ಹಂಚಿಕೊಂಡಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಭಾರತೀಯ ಸೇನಾಧಿಕಾರಿಗಳ ಹೆಸರಿನಲ್ಲಿ ಮಾಡಿದ ನಕಲಿ ಖಾತೆಗಳನ್ನು ಗುರುತಿಸಿ, ಇವು ನಕಲಿ ಖಾತೆಗಳು, ಇವುಗಳ ಪೋಸ್ಟ್‌ಗಳನ್ನು ಶೇರ್ ಮಾಡಬೇಡಿ, ಯುದ್ಧದ ಉನ್ಮಾದವನ್ನು ಹೆಚ್ಚಿಸಬೇಡಿ ಎಂದು ಎಲ್ಲರಿಗೂ ಎಚ್ಚರಿಕೆ ನೀಡಿದ್ದರು. ಸತ್ಯ-ಅಸತ್ಯವನ್ನು ಪರಿಶೀಲಿಸಿ (ಫ್ಯಾಕ್ಟ್-ಚೆಕ್) ಸರಿಯಾದ ಮಾಹಿತಿಯನ್ನು ಮಾತ್ರ ಹರಡಿ ಎಂದು ಎಂದು ಕೋರಿದ್ದರು ಎನ್ನಲಾಗಿದೆ.

ಲೋರಾ ಅವರು ಒಟ್ಟು 12 ಸಂದೇಶಗಳನ್ನು ವಾಟ್ಸಾಪ್ ಸ್ಟೇಟಸ್‌ನಲ್ಲಿ ಹಾಕಿದ್ದರು. ಇವೆಲ್ಲವೂ ಯುದ್ಧದ ವಿರುದ್ಧ ಮತ್ತು ಶಾಂತಿಯ ಪರವಾಗಿದ್ದವು. ಆದರೆ, ಅವುಗಳಲ್ಲಿ ಕೇವಲ ಎರಡು ಸಂದೇಶಗಳು ಮಾತ್ರ ಸಾರ್ವಜನಿಕವಾಗಿ (ಸ್ಕ್ರೀನ್‌ಶಾಟ್ ಆಗಿ) ಹರಿದಾಡಿದ್ದವು. ಒಂದು ಸಂದೇಶದಲ್ಲಿ ಆರ್ಥಿಕ ಸ್ಥಗಿತದಿಂದ ಹಿಡಿದು ಜೀವಹಾನಿಯವರೆಗೆ ಯುದ್ಧದ ನಿಜ ಜೀವನದ ಪರಿಣಾಮಗಳನ್ನು ಪಟ್ಟಿ ಮಾಡಿದ್ದರು. ಮತ್ತು ಇನ್ನೊಂದು ಸಂದೇಶದಲ್ಲಿ ಯುದ್ದದಲ್ಲಿ ನಾಗರಿಕರ ಹತ್ಯೆಯನ್ನು ಟೀಕಿಸಿದ್ದರು. ಅದನ್ನು ಧೈರ್ಯಕ್ಕಿಂತ ಹೇಡಿತನ ಎಂದು ಕರೆದಿದ್ದರು.

ಆಂತರಿಕ ವಿಚಾರಣೆಯ ಸಮಯದಲ್ಲಿ ಲೋರಾ ವಿರುದ್ಧ 5 ಆರೋಪಗಳನ್ನು ಹೊರಿಸಲಾಗಿದೆ ಮತ್ತು ಜೂನ್ 16ರಂದು ಅವರ ವಿರುದ್ಧ ಚಾರ್ಜ್ ಮೆಮೊ ಹೊರಡಿಸಲಾಗಿತ್ತು. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಭಾರತದ ಸಶಸ್ತ್ರ ಪಡೆಗಳ ವಿರುದ್ಧ ಪೋಸ್ಟ್ ಹಾಕಿದ್ದಾರೆ ಎಂದು ಚಾರ್ಜ್ ಮೆಮೊದಲ್ಲಿ ಆರೋಪಿಸಲಾಗಿತ್ತು. ರಾಷ್ಟ್ರೀಯ ಹಿತಾಸಕ್ತಿಗಳಿಗೆ ವಿರುದ್ಧವಾಗಿ ವರ್ತಿಸಿದ್ದಾರೆ ಮತ್ತು ದೇಶಭಕ್ತಿಯ ಕೊರತೆಯನ್ನು ಹೊಂದಿದ್ದಾರೆ ಎಂಬ ಆರೋಪವನ್ನೂ ಅವರ ಮೇಲೆ ಹೊರಿಸಲಾಗಿತ್ತು.

ಲೋರಾ ಅವರ ಕೃತ್ಯವು ರಾಷ್ಟ್ರದ ಹಿತಾಸಕ್ತಿಗಳಿಗೆ ವಿರುದ್ಧವಾದ ಕ್ರಮವಾಗಿದೆ ಮತ್ತು ಸಂಸ್ಥೆಯ ಸೌಹಾರ್ದಯುತ ವಾತಾವರಣ ಮತ್ತು ಸುಗಮ ಕಾರ್ಯನಿರ್ವಹಣೆಗೆ ಅಡ್ಡಿಪಡಿಸುತ್ತದೆ. ಅಲ್ಲದೆ, ಸಂಸ್ಥೆಯ ಖ್ಯಾತಿಗೆ ಹಾನಿಕಾರಕ ಕಾನೂನು ಪರಿಣಾಮಗಳನ್ನು ಆಹ್ವಾನಿಸುತ್ತದೆ ಮತ್ತು ಇದು ದೊಡ್ಡ ದುಷ್ಕೃತ್ಯವಾಗಿದೆ. ಇದಲ್ಲದೆ, ಅವರು ‘ಕ್ರಿಮಿನಲ್’ ಆಗಿರುವ ಸಮಾಜವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆಂದು ಆರೋಪ ಹೊರಿಸಲಾಗಿದೆ. ಇದನ್ನು ಸಮಿತಿಯು ‘ಪ್ರಮುಖ ದುಷ್ಕೃತ್ಯ’ ಎಂದು ಪರಿಗಣಿಸಿದೆ.

ಲೋರಾ ಅವರು ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ. ನಾನು ರಾಷ್ಟ್ರ ವಿರೋಧಿ ಸ್ಟೇಟಸ್ ಹಾಕಿಲ್ಲ, ಅವುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ವಿಶ್ವವಿದ್ಯಾನಿಲಯಕ್ಕೆ ತಾನು ಅಪಖ್ಯಾತಿ ತಂದಿದ್ದೇನೆ ಎಂಬ ಆರೋಪವನ್ನು ತಳ್ಳಿ ಹಾಕಿದ್ದು, ನನ್ನ ಪೋಸ್ಟ್‌ಗಳಲ್ಲಿ ನಾನು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕಿ ಎಂದು ಗುರುತಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಾನು ಸ್ಟೇಟಸ್ ಪೋಸ್ಟ್ ಮಾಡಿದ ವಾಟ್ಸಾಪ್ ಸಂಖ್ಯೆ ವೈಯಕ್ತಿಕವಾಗಿದ್ದು, ವಿಶ್ವವಿದ್ಯಾನಿಲಯಕ್ಕೆ ಯಾವುದೇ ರೀತಿಯಲ್ಲಿ ಸಂಬಂಧಿಸಿಲ್ಲ ಎಂದು ಹೇಳಿದ್ದಾರೆ. ನನ್ನ ಹೇಳಿಕೆಗಳನ್ನು ಅಥವಾ ಸ್ಟೇಟಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿಲ್ಲ, ಬದಲಿಗೆ ತಾತ್ಕಾಲಿಕ ಸ್ವರೂಪದ ವೈಯಕ್ತಿಕ ವಾಟ್ಸಾಪ್ ಸ್ಟೇಟಸ್ ಪೋಸ್ಟ್ ಮಾಡಿದ್ದೆ ಎಂದು ತಿಳಿಸಿದ್ದಾರೆ.

ಲೋರಾ ಅವರ ವಿರುದ್ಧ ಹೊರಿಸಲಾಗಿದ್ದ ಒಟ್ಟು 5 ಆರೋಪಗಳೂ ಸಾಬೀತಾಗಿವೆ. ಎಲ್ಲಾ ಆರೋಪಗಳಿಗೂ ಒಂದೇ ರೀತಿಯ ತೀರ್ಪು ನೀಡಲಾಗಿದೆ ಎಂದು ಆಂತರಿಕ ತನಿಖಾ ಸಮಿತಿ ಹೇಳಿದೆ.

ಈ ಪ್ರಕರಣದಲ್ಲಿ ಮೇಲ್ಮನವಿ ಪ್ರಾಧಿಕಾರವಾಗಿರುವ ಉಪಕುಲಪತಿಗಳಿಗೆ ಮೇಲ್ಮನವಿ ಸಲ್ಲಿಸಲು ಎಸ್‌ಆರ್‌ಎಂ ವಿಶ್ವವಿದ್ಯಾಲಯವು ಲೋರಾ ಅವರಿಗೆ 30 ದಿನಗಳ ಕಾಲಾವಕಾಶ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಿಕ್ಷೆ ಮುಗಿದ 3 ವರ್ಷಗಳ ನಂತರ ಪಾಕಿಸ್ತಾನ ಜೈಲಿನಲ್ಲಿ ಗುಜರಾತ್ ಮೀನುಗಾರ ಸಾವು

2022 ರಲ್ಲಿ ಅಜಾಗರೂಕತೆಯಿಂದ ಅಂತರರಾಷ್ಟ್ರೀಯ ಗಡಿ ರೇಖೆಯನ್ನು ದಾಟಿದ ನಂತರ ಪಾಕಿಸ್ತಾನ ಏಜೆನ್ಸಿಗಳಿಂದ ಬಂಧಿಸಲ್ಪಟ್ಟ ಗುಜರಾತ್‌ನ ಮೀನುಗಾರನೊಬ್ಬ ಜನವರಿ 16 ರಂದು ಕರಾಚಿ ಜೈಲಿನಲ್ಲಿ ಸಾವನ್ನಪ್ಪಿದ್ದಾನೆ. ಮೂರು ವರ್ಷಗಳ ಹಿಂದೆ ಆತನ ಶಿಕ್ಷೆಯನ್ನು...

ಸ್ಥಳದಲ್ಲೇ ದಂಡ ಪಾವತಿಸುವಂತೆ ಸಂಚಾರ ಪೊಲೀಸರು ಒತ್ತಾಯಿಸುವಂತಿಲ್ಲ: ತೆಲಂಗಾಣ ಹೈಕೋರ್ಟ್

ಸಂಚಾರ ನಿಯಮ ಉಲ್ಲಂಘಿಸುವವರ ಬ್ಯಾಂಕ್ ಖಾತೆಗಳಿಂದ ಸ್ವಯಂಚಾಲಿತವಾಗಿ ದಂಡ ಕಡಿತಗೊಳಿಸಬೇಕೆಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೂಚಿಸಿದ ಕೆಲವು ದಿನಗಳ ನಂತರ ಮಹತ್ವದ ತೀರ್ಪು ನೀಡಿರುವ ತೆಲಂಗಾಣ ಹೈಕೋರ್ಟ್, ಪೊಲೀಸರು ನಾಗರಿಕರನ್ನು ರಸ್ತೆಯಲ್ಲಿ ನಿಲ್ಲಿಸಿ...

ಎಸ್‌ಸಿ/ಎಸ್‌ಟಿ ಶಾಲೆಗಳ ನವೀಕರಣಕ್ಕೆ ಹಣ ಮಂಜೂರು ಮಾಡದಂತೆ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್ 

ಮಧುರೈ: ತಮಿಳುನಾಡಿನ ಸುಮಾರು 170 ಎಸ್‌ಸಿ/ಎಸ್‌ಟಿ ಶಾಲೆ ಮತ್ತು ಹಾಸ್ಟೆಲ್ ಕಟ್ಟಡಗಳ ದುರಸ್ತಿ ಮತ್ತು ನಿರ್ಮಾಣ ಕಾರ್ಯಗಳಿಗೆ ತಮಿಳುನಾಡು ಆದಿ ದ್ರಾವಿಡರ್ ವಸತಿ ಅಭಿವೃದ್ಧಿ ನಿಗಮ (ಟಿಎಎಚ್‌ಡಿಸಿಒ) 50 ಕೋಟಿ ರೂ.ಗಳನ್ನು ಖರ್ಚು...

ಕೇಂದ್ರ ಸರ್ಕಾರಿ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳನ್ನು ರಾಜ್ಯ ಸಂಸ್ಥೆ ತನಿಖೆ ಮಾಡಬಹುದು : ಸುಪ್ರೀಂ ಕೋರ್ಟ್

ಕೇಂದ್ರ ಸರ್ಕಾರಿ ನೌಕರರು ಮಾಡುವ ಭ್ರಷ್ಟಾಚಾರ ತಡೆ ಕಾಯ್ದೆಯಡಿಯ ಶಿಕ್ಷಾರ್ಹ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ರಾಜ್ಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಲು ಮತ್ತು ಆರೋಪಪಟ್ಟಿ ಸಲ್ಲಿಸಲು ಸಮರ್ಥರು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಗ್ಯಾಂಗ್‌ಸ್ಟರ್‌ಗಳ ವಿರುದ್ಧ ರಾಜ್ಯಾದ್ಯಂತ ಕಾರ್ಯಚರಣೆ ಆರಂಭಿಸಿದ ಪಂಜಾಬ್ ಸರ್ಕಾರ

ಮಾದಕ ವಸ್ತುಗಳ ವಿರುದ್ಧದ ತನ್ನ ಕಾರ್ಯಾಚರಣೆಯಿಂದ ಸ್ಫೂರ್ತಿ ಪಡೆದು, ಪಂಜಾಬ್ ಸರ್ಕಾರ ಮಂಗಳವಾರ ಗ್ಯಾಂಗ್‌ಸ್ಟರ್‌ಗಳ ವಿರುದ್ಧ ರಾಜ್ಯಾದ್ಯಂತ ಅಭಿಯಾನ ಆರಂಭಿಸಿದ್ದು, ಶಸ್ತ್ರಾಸ್ತ್ರ ಪೂರೈಕೆ ಸರಪಳಿಗಳು, ಲಾಜಿಸ್ಟಿಕ್ಸ್, ಅಡಗುತಾಣಗಳು ಮತ್ತು ಸಂವಹನ ಜಾಲಗಳು ಸೇರಿದಂತೆ...

‘ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ‘ನನ್ನ ಹೆಸರೇ’ ಆಸರೆ’: ಪ್ರಿಯಾಂಕ್ ಖರ್ಗೆ ಆಕ್ರೋಶ 

ಬೆಂಗಳೂರು: ಮುಳುಗುವವನಿಗೆ ಹುಲ್ಲು ಕಡ್ಡಿಯ ಆಸರೆ ಎನ್ನುವಂತೆ, ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ "ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ರದ್ದುಗೊಳಿಸಲು ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯ : ತಮಿಳುನಾಡು ಸಿಎಂ ಸ್ಟಾಲಿನ್

ವಿಧಾನಸಭೆ ಅಧಿವೇಶನದಲ್ಲಿ ರಾಜ್ಯಪಾಲರು ವಾರ್ಷಿಕ ಭಾಷಣ ಮಾಡುವ ಸಂಪ್ರದಾಯವನ್ನು ರದ್ದುಗೊಳಿಸುವ ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯಿಸುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಘೋಷಿಸಿದ್ದಾರೆ. ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌ ರವಿ ನಡುವೆ ಜಟಾಪಟಿ ನಡೆದು,...

ಅಸ್ಸಾಂ| ದನ ಕಳ್ಳತನದ ಶಂಕೆಯಿಂದ ಗುಂಪು ದಾಳಿ; ಓರ್ವ ಸಾವು-ನಾಲ್ವರ ಸ್ಥಿತಿ ಗಂಭೀರ

ದನ ಕಳ್ಳತನದ ಶಂಕೆಯ ಮೇಲೆ ಗುಂಪೊಂದು ದಾಳಿ ಮಾಡಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ (ಜ.19) ಅಸ್ಸಾಂನ ಕೊಕ್ರಜಾರ್‌ನಲ್ಲಿ ನಡೆದಿದೆ. ಬಲಿಪಶುಗಳು, ರಸ್ತೆ ನಿರ್ಮಾಣ ಯೋಜನೆಯೊಮದರಲ್ಲಿ...

ಕರ್ನಾಟಕ: ಐದು ವರ್ಷಗಳಲ್ಲಿ ಎಸ್‌ಸಿ/ಎಸ್‌ಟಿಗಳ ಮೇಲಿನ ಅಪರಾಧಗಳು ಶೇ. 37.7 ರಷ್ಟು ಏರಿಕೆ; ಬೆಂಗಳೂರಿನದೇ ಅಗ್ರಸ್ಥಾನ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (SC/ST) ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಕಠಿಣ ಕಾನೂನುಗಳಿದ್ದರೂ, ಈ ಸಮುದಾಯಗಳ ಮೇಲಿನ ಅಪರಾಧಗಳು ಕಳೆದ ಐದು ವರ್ಷಗಳಲ್ಲಿ ಶೇ. 37.74 ರಷ್ಟು ಹೆಚ್ಚಾಗಿದ್ದು,...

‘ನಿತಿನ್ ನಬಿನ್ ನನ್ನ ಬಾಸ್, ನಾನು ಕೆಲಸಗಾರ..’; ಬಿಜೆಪಿ ನೂತನ ಮುಖ್ಯಸ್ಥರನ್ನು ಸ್ವಾಗತಿಸಿದ ಪ್ರಧಾನಿ ಮೋದಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಅತ್ಯಂತ ಕಿರಿಯ ವಯಸ್ಸಿನ ನಿತಿನ್ ನಬಿನ್ ಅವರನ್ನು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು. ಪಕ್ಷದ ಪರಂಪರೆಯನ್ನು ಮುಂದುವರಿಸುವ 'ಸಹಸ್ರಮಾನದ' ವ್ಯಕ್ತಿ ಎಂದು ಕರೆದರು. "ಪಕ್ಷದ...