Homeಮುಖಪುಟಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

- Advertisement -
- Advertisement -

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ವೇಳೆ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲೋರಾ ಶಾಂತಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಎಸ್‌ಆರ್‌ಎಂನ ಆಂತರಿಕ ಸಮಿತಿಯ ವರದಿಯು ಲೋರಾ ‘ಗಂಭೀರ ತಪ್ಪು’ ಮಾಡಿದ್ದಾರೆ ಎಂದು ಹೇಳಿದೆ.

ವಿಶ್ವವಿದ್ಯಾನಿಲಯದ ವೃತ್ತಿ ಅಭಿವೃದ್ಧಿ ಕೇಂದ್ರದಲ್ಲಿ (ಸಿಡಿಸಿ) ಕೆಲಸ ಮಾಡುತ್ತಿದ್ದ ಲೋರಾ ಅವರು, ಕಳೆದ ಮೇ ತಿಂಗಳಲ್ಲಿ ಭಾರತೀಯ ಸೇನೆ ಅಪರೇಷನ್ ಸಿಂಧೂರ್ ಕೈಗೊಂಡಾಗ ಶಾಂತಿಗಾಗಿ ಕರೆ ನೀಡುವ ಸರಣಿ ವಾಟ್ಸಾಪ್ ಸ್ಟೇಟಸ್‌ಗಳನ್ನು ಪೋಸ್ಟ್ ಮಾಡಿದ್ದರು. ಆ ಬಳಿಕ ವಿದ್ಯಾರ್ಥಿಗಳು ಅವರನ್ನು ಅಪಹಾಸ್ಯ ಮಾಡಲು ಶುರು ಮಾಡಿದ್ದರು ಎಂದು ಆರೋಪಿಸಲಾಗಿದೆ.

“ನಮಗೆ ದೊರೆತ ಲೋರಾ ಅವರ ವಜಾ ಆದೇಶದಲ್ಲಿ, ಎಸ್‌ಆರ್‌ಎಂಐಎಸ್‌ಟಿಯ ಸಹಾಯಕ ಪ್ರಾಧ್ಯಾಪಕಿ ಎಂಬ ಹೆಸರಿನಲ್ಲಿ ಲೋರಾ ಸಶಸ್ತ್ರ ಪಡೆಗಳನ್ನು ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ್ದಾರೆ. ಆದ್ದರಿಂದ, ಅವರು ಸಂಸ್ಥೆಯಲ್ಲಿ ತಮ್ಮ ಕೆಲಸ ಮುಂದುವರಿಸಲು ಅನರ್ಹರಾಗಿದ್ದಾರೆ ಮತ್ತು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ ಎಂಬುವುದಾಗಿ ಹೇಳಲಾಗಿದೆ” ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಲೋರಾ ಅವರ ಪೋಸ್ಟ್ ಕುರಿತು ಆಂತರಿಕ ವಿಚಾರಣಾ ಸಮಿತಿಯನ್ನು ಎಸ್‌ಆರ್‌ಎಂಐಎಸ್‌ಟಿಯ ವಿದ್ಯಾರ್ಥಿ ವ್ಯವಹಾರಗಳ ನಿರ್ದೇಶಕಿ ಡಾ. ನಿಶಾ ಅಶೋಕನ್ ಅವರ ನೇತೃತ್ವದಲ್ಲಿ ರಚಿಸಲಾಗಿತ್ತು. ವಿದ್ಯಾರ್ಥಿ ವ್ಯವಹಾರಗಳ ಉಪನಿರ್ದೇಶಕ ಡಾ. ಪ್ರಿನ್ಸ್ ಕಲ್ಯಾಣಸುಂದರಂ ಸಮಿತಿಯ ನಿರೂಪಕ ಅಧಿಕಾರಿಯಾಗಿದ್ದರು.

ಜುಲೈ 15ರಿಂದ ಸೆಪ್ಟೆಂಬರ್ 26 ರವರೆಗೆ ಕಟ್ಟಂಕುಲತ್ತೂರ್ ಎಸ್‌ಆರ್‌ಎಂ ಕ್ಯಾಂಪಸ್‌ನಲ್ಲಿ ವಿಚಾರಣೆ ನಡೆದಿದೆ. ಸಮಿತಿಯು ಅಕ್ಟೋಬರ್ 30ರಂದು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ಗೆ ತನ್ನ ವರದಿಯನ್ನು ಸಲ್ಲಿಸಿದೆ.

ದಲಿತ ಕ್ರಿಶ್ಚಿಯನ್ ಆಗಿರುವ ಲೋರಾ ಅವರ ವಾಟ್ಸಾಪ್ ಸ್ಟೇಟಸ್, ಫೋನ್ ನಂಬರ್ ಮತ್ತು ಫೋಟೋ ಬಲಪಂಥೀಯ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಿಗೆ ಸೋರಿಕೆಯಾದ ನಂತರ, ಅವರನ್ನು ಮೇ 8ರಂದು ಮೊದಲು ಅಮಾನತುಗೊಳಿಸಲಾಗಿತ್ತು.

ಲೋರಾ ಅವರಿಗೆ ಆನ್‌ಲೈನ್ ನಿಂದನೆ, ಬೆದರಿಕೆ ಫೋನ್ ಕರೆಗಳು ಮತ್ತು ಕೊಲೆ ಬೆದರಿಕೆಗಳು ಬಂದಿವೆ. ಅವರಿಗೆ ರಾಷ್ಟ್ರವಿರೋಧಿ ಎಂದು ಹಣೆಪಟ್ಟಿ ಕಟ್ಟಲಾಗಿದೆ ಮತ್ತು ಭಾರತೀಯ ಸೇನೆಯ ವಿರುದ್ಧ ಮಾತನಾಡಿದ ಆರೋಪ ಹೊರಿಸಲಾಗಿದೆ. ಇದಲ್ಲದೆ, ತನ್ನನ್ನು ತಾನು ರಕ್ಷಿಸಿಕೊಳ್ಳಲು ಚೆನ್ನೈನಲ್ಲಿರುವ ಮನೆಯನ್ನು ಖಾಲಿ ಮಾಡಿ ಸ್ವಂತ ಊರು ಕಲ್ಲಕುರಿಚಿಗೆ ಹಿಂತಿರುಗುವಂತೆ ಒತ್ತಾಯಿಸಲಾಗಿದೆ ಎಂದು ದಿ ನ್ಯೂಸ್‌ ಮಿನಿಟ್ ವರದಿ ವಿವರಿಸಿದೆ.

ಮೇ 7, 2025ರಂದು ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಇದ್ದಾಗ, ಲೋರಾ ಅವರು ಯುದ್ದೋನ್ಮಾದವನ್ನು ತೀವ್ರವಾಗಿ ವಿರೋಧಿಸಿ ವಾಟ್ಸಾಪ್ ಸ್ಟೇಟಸ್ ಹಾಕಿದ್ದರು. ಯುದ್ಧದಲ್ಲಿ ಮನುಷ್ಯರು ಸಾಯುತ್ತಾರೆ, ಕುಟುಂಬಗಳು ಒಡೆಯುತ್ತವೆ, ಆ ಮಾನವೀಯ ನಷ್ಟವನ್ನು ಮರೆಯಬೇಡಿ ಎಂದು ಜನರಿಗೆ ಮನವಿ ಮಾಡಿದ್ದರು. ಯುದ್ಧ ಪ್ರಚಾರ ಹೇಗೆ ಜನರನ್ನು ಮೋಸ ಮಾಡುತ್ತದೆ ಎಂಬುದನ್ನು ಹೇಳುವ ಜಾರ್ಜ್ ಆರ್ವೆಲ್ ಅವರ ಪ್ರಸಿದ್ಧ ಉಲ್ಲೇಖವನ್ನು ಅವರು ಹಂಚಿಕೊಂಡಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಭಾರತೀಯ ಸೇನಾಧಿಕಾರಿಗಳ ಹೆಸರಿನಲ್ಲಿ ಮಾಡಿದ ನಕಲಿ ಖಾತೆಗಳನ್ನು ಗುರುತಿಸಿ, ಇವು ನಕಲಿ ಖಾತೆಗಳು, ಇವುಗಳ ಪೋಸ್ಟ್‌ಗಳನ್ನು ಶೇರ್ ಮಾಡಬೇಡಿ, ಯುದ್ಧದ ಉನ್ಮಾದವನ್ನು ಹೆಚ್ಚಿಸಬೇಡಿ ಎಂದು ಎಲ್ಲರಿಗೂ ಎಚ್ಚರಿಕೆ ನೀಡಿದ್ದರು. ಸತ್ಯ-ಅಸತ್ಯವನ್ನು ಪರಿಶೀಲಿಸಿ (ಫ್ಯಾಕ್ಟ್-ಚೆಕ್) ಸರಿಯಾದ ಮಾಹಿತಿಯನ್ನು ಮಾತ್ರ ಹರಡಿ ಎಂದು ಎಂದು ಕೋರಿದ್ದರು ಎನ್ನಲಾಗಿದೆ.

ಲೋರಾ ಅವರು ಒಟ್ಟು 12 ಸಂದೇಶಗಳನ್ನು ವಾಟ್ಸಾಪ್ ಸ್ಟೇಟಸ್‌ನಲ್ಲಿ ಹಾಕಿದ್ದರು. ಇವೆಲ್ಲವೂ ಯುದ್ಧದ ವಿರುದ್ಧ ಮತ್ತು ಶಾಂತಿಯ ಪರವಾಗಿದ್ದವು. ಆದರೆ, ಅವುಗಳಲ್ಲಿ ಕೇವಲ ಎರಡು ಸಂದೇಶಗಳು ಮಾತ್ರ ಸಾರ್ವಜನಿಕವಾಗಿ (ಸ್ಕ್ರೀನ್‌ಶಾಟ್ ಆಗಿ) ಹರಿದಾಡಿದ್ದವು. ಒಂದು ಸಂದೇಶದಲ್ಲಿ ಆರ್ಥಿಕ ಸ್ಥಗಿತದಿಂದ ಹಿಡಿದು ಜೀವಹಾನಿಯವರೆಗೆ ಯುದ್ಧದ ನಿಜ ಜೀವನದ ಪರಿಣಾಮಗಳನ್ನು ಪಟ್ಟಿ ಮಾಡಿದ್ದರು. ಮತ್ತು ಇನ್ನೊಂದು ಸಂದೇಶದಲ್ಲಿ ಯುದ್ದದಲ್ಲಿ ನಾಗರಿಕರ ಹತ್ಯೆಯನ್ನು ಟೀಕಿಸಿದ್ದರು. ಅದನ್ನು ಧೈರ್ಯಕ್ಕಿಂತ ಹೇಡಿತನ ಎಂದು ಕರೆದಿದ್ದರು.

ಆಂತರಿಕ ವಿಚಾರಣೆಯ ಸಮಯದಲ್ಲಿ ಲೋರಾ ವಿರುದ್ಧ 5 ಆರೋಪಗಳನ್ನು ಹೊರಿಸಲಾಗಿದೆ ಮತ್ತು ಜೂನ್ 16ರಂದು ಅವರ ವಿರುದ್ಧ ಚಾರ್ಜ್ ಮೆಮೊ ಹೊರಡಿಸಲಾಗಿತ್ತು. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಭಾರತದ ಸಶಸ್ತ್ರ ಪಡೆಗಳ ವಿರುದ್ಧ ಪೋಸ್ಟ್ ಹಾಕಿದ್ದಾರೆ ಎಂದು ಚಾರ್ಜ್ ಮೆಮೊದಲ್ಲಿ ಆರೋಪಿಸಲಾಗಿತ್ತು. ರಾಷ್ಟ್ರೀಯ ಹಿತಾಸಕ್ತಿಗಳಿಗೆ ವಿರುದ್ಧವಾಗಿ ವರ್ತಿಸಿದ್ದಾರೆ ಮತ್ತು ದೇಶಭಕ್ತಿಯ ಕೊರತೆಯನ್ನು ಹೊಂದಿದ್ದಾರೆ ಎಂಬ ಆರೋಪವನ್ನೂ ಅವರ ಮೇಲೆ ಹೊರಿಸಲಾಗಿತ್ತು.

ಲೋರಾ ಅವರ ಕೃತ್ಯವು ರಾಷ್ಟ್ರದ ಹಿತಾಸಕ್ತಿಗಳಿಗೆ ವಿರುದ್ಧವಾದ ಕ್ರಮವಾಗಿದೆ ಮತ್ತು ಸಂಸ್ಥೆಯ ಸೌಹಾರ್ದಯುತ ವಾತಾವರಣ ಮತ್ತು ಸುಗಮ ಕಾರ್ಯನಿರ್ವಹಣೆಗೆ ಅಡ್ಡಿಪಡಿಸುತ್ತದೆ. ಅಲ್ಲದೆ, ಸಂಸ್ಥೆಯ ಖ್ಯಾತಿಗೆ ಹಾನಿಕಾರಕ ಕಾನೂನು ಪರಿಣಾಮಗಳನ್ನು ಆಹ್ವಾನಿಸುತ್ತದೆ ಮತ್ತು ಇದು ದೊಡ್ಡ ದುಷ್ಕೃತ್ಯವಾಗಿದೆ. ಇದಲ್ಲದೆ, ಅವರು ‘ಕ್ರಿಮಿನಲ್’ ಆಗಿರುವ ಸಮಾಜವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆಂದು ಆರೋಪ ಹೊರಿಸಲಾಗಿದೆ. ಇದನ್ನು ಸಮಿತಿಯು ‘ಪ್ರಮುಖ ದುಷ್ಕೃತ್ಯ’ ಎಂದು ಪರಿಗಣಿಸಿದೆ.

ಲೋರಾ ಅವರು ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ. ನಾನು ರಾಷ್ಟ್ರ ವಿರೋಧಿ ಸ್ಟೇಟಸ್ ಹಾಕಿಲ್ಲ, ಅವುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ವಿಶ್ವವಿದ್ಯಾನಿಲಯಕ್ಕೆ ತಾನು ಅಪಖ್ಯಾತಿ ತಂದಿದ್ದೇನೆ ಎಂಬ ಆರೋಪವನ್ನು ತಳ್ಳಿ ಹಾಕಿದ್ದು, ನನ್ನ ಪೋಸ್ಟ್‌ಗಳಲ್ಲಿ ನಾನು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕಿ ಎಂದು ಗುರುತಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಾನು ಸ್ಟೇಟಸ್ ಪೋಸ್ಟ್ ಮಾಡಿದ ವಾಟ್ಸಾಪ್ ಸಂಖ್ಯೆ ವೈಯಕ್ತಿಕವಾಗಿದ್ದು, ವಿಶ್ವವಿದ್ಯಾನಿಲಯಕ್ಕೆ ಯಾವುದೇ ರೀತಿಯಲ್ಲಿ ಸಂಬಂಧಿಸಿಲ್ಲ ಎಂದು ಹೇಳಿದ್ದಾರೆ. ನನ್ನ ಹೇಳಿಕೆಗಳನ್ನು ಅಥವಾ ಸ್ಟೇಟಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿಲ್ಲ, ಬದಲಿಗೆ ತಾತ್ಕಾಲಿಕ ಸ್ವರೂಪದ ವೈಯಕ್ತಿಕ ವಾಟ್ಸಾಪ್ ಸ್ಟೇಟಸ್ ಪೋಸ್ಟ್ ಮಾಡಿದ್ದೆ ಎಂದು ತಿಳಿಸಿದ್ದಾರೆ.

ಲೋರಾ ಅವರ ವಿರುದ್ಧ ಹೊರಿಸಲಾಗಿದ್ದ ಒಟ್ಟು 5 ಆರೋಪಗಳೂ ಸಾಬೀತಾಗಿವೆ. ಎಲ್ಲಾ ಆರೋಪಗಳಿಗೂ ಒಂದೇ ರೀತಿಯ ತೀರ್ಪು ನೀಡಲಾಗಿದೆ ಎಂದು ಆಂತರಿಕ ತನಿಖಾ ಸಮಿತಿ ಹೇಳಿದೆ.

ಈ ಪ್ರಕರಣದಲ್ಲಿ ಮೇಲ್ಮನವಿ ಪ್ರಾಧಿಕಾರವಾಗಿರುವ ಉಪಕುಲಪತಿಗಳಿಗೆ ಮೇಲ್ಮನವಿ ಸಲ್ಲಿಸಲು ಎಸ್‌ಆರ್‌ಎಂ ವಿಶ್ವವಿದ್ಯಾಲಯವು ಲೋರಾ ಅವರಿಗೆ 30 ದಿನಗಳ ಕಾಲಾವಕಾಶ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಸ್ಮಾನ್ ಹಾದಿ ಹತ್ಯೆ : ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಮೂಲಕ ಭಾರತಕ್ಕೆ ಪರಾರಿಯಾಗಿದ್ದಾರೆ ಎಂದ ಬಾಂಗ್ಲಾ ಪೊಲೀಸರು

ಬಾಂಗ್ಲಾದೇಶದ ರಾಜಕೀಯ ಕಾರ್ಯಕರ್ತ ಉಸ್ಮಾನ್ ಹಾದಿ ಹತ್ಯೆಯ ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಗಡಿಯ ಮೂಲಕ ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂದು ಢಾಕಾ ಮೆಟ್ರೋಪಾಲಿಟನ್ ಪೊಲೀಸರು (ಡಿಎಂಪಿ) ತಿಳಿಸಿದ್ದಾರೆ ಎಂದು ದಿ ಡೈಲಿ...

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿಎಂ ಸಿದ್ದರಾಮಯ್ಯ

ನರೇಗಾ ಯೋಜನೆಗೆ ಮರುನಾಮಕರಣದ ಮೂಲಕ ರಾಷ್ಟ್ರಪಿತನ ಹೆಸರನ್ನೇ ಅಳಿಸಲು ಹೊರಟಿರುವ ಪ್ರಯತ್ನವನ್ನು ವಿಫಲಗೊಳಿಸಬೇಕು. ಗ್ರಾಮೀಣ ಆರ್ಥಿಕತೆಯನ್ನೇ ಹಾಳು ಮಾಡುವ ಹುನ್ನಾರ ಬಿಜೆಪಿಯದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿಯ ಭಾರತ್...

ವಿದ್ಯಾರ್ಥಿಗಳ ಪ್ರತಿಭಟನೆ: ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿ ಇರಿಸಿದ ಜಮ್ಮು-ಕಾಶ್ಮೀರ ಪೊಲೀಸರು

ಸರ್ಕಾರ ಮೀಸಲಾತಿ ನೀತಿಯನ್ನು ತರ್ಕಬದ್ಧಗೊಳಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಜೆ & ಕೆ ವಿದ್ಯಾರ್ಥಿಗಳು ಪ್ರತಿಭಟನೆ ಘೋಷಿಸುತ್ತಿದ್ದಂತೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶನಿವಾರ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಸಂಸದ ಮತ್ತು ಪೀಪಲ್ಸ್...

ಆರ್‌ಎಸ್‌ಎಸ್‌-ಬಿಜೆಪಿ ಸಂಘಟನಾ ಶಕ್ತಿ ಶ್ಲಾಘಿಸಿದ ದಿಗ್ವಿಜಯ ಸಿಂಗ್‌ಗೆ ಶಶಿ ತರೂರ್‌ ಬೆಂಬಲ : ಪವನ್‌ ಖೇರಾ ತಿರುಗೇಟು

ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಆರ್‌ಎಸ್‌ಎಸ್‌ನ ಸಂಘಟನಾ ಶಕ್ತಿಯನ್ನು ಶ್ಲಾಘಿಸಿ ಹೇಳಿಕೆ ನೀಡಿರುವುದು ಪಕ್ಷದೊಳಗೆ ಮುಜುಗರ, ಅಸಮಾಧಾನ ಮತ್ತು ಅಪಸ್ವರಕ್ಕೆ ಕಾರಣವಾಗಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ, ಸಿಂಗ್ ಹೇಳಿಕೆಯನ್ನು ಕಾಂಗ್ರೆಸ್‌...

ಕೋಗಿಲು ಬಳಿ ಒತ್ತುವರಿ ತೆರವು: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್ ಹೈಕಮಾಂಡ್: ಪರಿಹಾರ ಕ್ರಮ ಜಾರಿಗೆ ತರುವಂತೆ ಸಿಎಂ, ಡಿಸಿಎಂಗೆ ಒತ್ತಾಯ 

ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಪ್ರಕರಣ ಇದೀಗ ಕಾಂಗ್ರೆಸ್ ಪಕ್ಷದೊಳಗೆ ಬಿರುಕಿಗೂ ಕಾರಣವಾಗಿದೆ. ಮನೆಗಳ ತೆರವು ವಿಚಾರ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಆಡಳಿತ ಪಕ್ಷಕ್ಕೆ ಅಹಿತಕರವಾಗಿ ಪರಿಣಮಿಸುತ್ತಿದ್ದಂತೆಯೇ...

ಛತ್ತೀಸ್‌ಗಢ : ಹಿಂಸಾಚಾರಕ್ಕೆ ತಿರುಗಿದ ಕಲ್ಲಿದ್ದಲು ಗಣಿ ವಿರೋಧಿ ಹೋರಾಟ : ಹಲವು ಪೊಲೀಸರಿಗೆ ಗಾಯ, ವಾಹನಗಳಿಗೆ ಬೆಂಕಿ

ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ತಮ್ನಾರ್ ಪ್ರದೇಶದಲ್ಲಿ ಕಲ್ಲಿದ್ದಲು ಗಣಿಗಾರಿಕೆ ಯೋಜನೆಯನ್ನು ವಿರೋಧಿಸಿ ಶನಿವಾರ (ಡಿ.27) ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದ್ದು, ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ ಎಂಟು ಜನರು ಗಾಯಗೊಂಡಿದ್ದಾರೆ ಮತ್ತು...

ತ್ರಿಪುರಾ: ಮಸೀದಿಗೆ ಮದ್ಯದ ಬಾಟಲಿಗಳನ್ನು ಇಟ್ಟು ಬೆಂಕಿ ಹಚ್ಚಲು ಯತ್ನ: ಬಜರಂಗದಳ ಧ್ವಜ ಕಟ್ಟಿದ ದುಷ್ಕರ್ಮಿಗಳು

ತ್ರಿಪುರಾದ ಧಲೈ ಜಿಲ್ಲೆಯ ಮಸೀದಿಯನ್ನು ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ, ಇದನ್ನು ಸ್ಥಳೀಯ ಮುಸ್ಲಿಂ ಸಮುದಾಯವನ್ನು ಬೆದರಿಸುವ ಮತ್ತು ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶಪೂರ್ವಕ ಪ್ರಯತ್ನ ಎಂದು ನಿವಾಸಿಗಳು ಮತ್ತು ಮಸೀದಿ ಅಧಿಕಾರಿಗಳು ಹೇಳಿದ್ದಾರೆ.  ಮನು-ಚೌಮಾನು ರಸ್ತೆಯಲ್ಲಿರುವ...

‘ಇಸ್ರೇಲ್ ಗಾಝಾಗೆ ಪಾಠ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಕಲಿಸಬೇಕು’ : ನರಮೇಧ, ಜನಾಂಗೀಯ ಹತ್ಯೆಗೆ ಹಪಹಪಿಸಿದ ಬಿಜೆಪಿ ನಾಯಕ

"ಇಸ್ರೇಲ್ ಗಾಝಾಗೆ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಪಾಠ ಕಲಿಸಬೇಕು" ಎಂದು ಬಿಜೆಪಿ ಹಾಗೂ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ನೀಡಿದ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಖಂಡನೆ ವ್ಯಕ್ತವಾಗಿದೆ. ಡಿಸೆಂಬರ್...

“ನನಗೆ ಏನೂ ಆಗುವುದಿಲ್ಲ”: ಅತ್ಯಾಚಾರ ಮಾಡಿ ಸಂತ್ರಸ್ತೆಗೆ ಧಮ್ಕಿ ಹಾಕಿದ ಬಿಜೆಪಿ ಕೌನ್ಸಿಲರ್ ಪತಿ 

ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಬಿಜೆಪಿ ಕೌನ್ಸಿಲರ್ ಒಬ್ಬರ ಪತಿ ಮಹಿಳೆಯೊಬ್ಬರ ಮೇಲೆ ಚಾಕು ತೋರಿಸಿ ಅತ್ಯಾಚಾರ ಎಸಗಿ, ಅದರ ವಿಡಿಯೋ ಮಾಡಿ, ನಂತರ ಅದನ್ನು ತೋರಿಸಿ ಪದೇ ಪದೇ ಲೈಂಗಿಕ ಸಂಬಂಧ ಹೊಂದುವಂತೆ...

ಅರಾವಳಿ ಬೆಟ್ಟಗಳ ಹೊಸ ವ್ಯಾಖ್ಯಾನಕ್ಕೆ ದೇಶದಾದ್ಯಂತ ತೀವ್ರ ವಿರೋಧ : ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

ಅರಾವಳಿ ಬೆಟ್ಟಗಳ ಹೊಸ ವ್ಯಾಖ್ಯಾನದಿಂದ ಪರಿಸರದ ಮೇಲಾಗುವ ಹಾನಿಯ ಕುರಿತು ದೇಶದ ಜನರು ತೀವ್ರ ಆತಂಕ ಮತ್ತು ಕಳವಳ ವ್ಯಕ್ತಪಡಿಸುತ್ತಿರುವ ಹಿನ್ನೆಲೆ, ಸುಪ್ರೀಂ ಕೋರ್ಟ್‌ ಈ ಕುರಿತು ಸ್ವಯಂ ಪ್ರೇರಿತ (Suo Motu...