Homeಮುಖಪುಟಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

- Advertisement -
- Advertisement -

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ವೇಳೆ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲೋರಾ ಶಾಂತಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಎಸ್‌ಆರ್‌ಎಂನ ಆಂತರಿಕ ಸಮಿತಿಯ ವರದಿಯು ಲೋರಾ ‘ಗಂಭೀರ ತಪ್ಪು’ ಮಾಡಿದ್ದಾರೆ ಎಂದು ಹೇಳಿದೆ.

ವಿಶ್ವವಿದ್ಯಾನಿಲಯದ ವೃತ್ತಿ ಅಭಿವೃದ್ಧಿ ಕೇಂದ್ರದಲ್ಲಿ (ಸಿಡಿಸಿ) ಕೆಲಸ ಮಾಡುತ್ತಿದ್ದ ಲೋರಾ ಅವರು, ಕಳೆದ ಮೇ ತಿಂಗಳಲ್ಲಿ ಭಾರತೀಯ ಸೇನೆ ಅಪರೇಷನ್ ಸಿಂಧೂರ್ ಕೈಗೊಂಡಾಗ ಶಾಂತಿಗಾಗಿ ಕರೆ ನೀಡುವ ಸರಣಿ ವಾಟ್ಸಾಪ್ ಸ್ಟೇಟಸ್‌ಗಳನ್ನು ಪೋಸ್ಟ್ ಮಾಡಿದ್ದರು. ಆ ಬಳಿಕ ವಿದ್ಯಾರ್ಥಿಗಳು ಅವರನ್ನು ಅಪಹಾಸ್ಯ ಮಾಡಲು ಶುರು ಮಾಡಿದ್ದರು ಎಂದು ಆರೋಪಿಸಲಾಗಿದೆ.

“ನಮಗೆ ದೊರೆತ ಲೋರಾ ಅವರ ವಜಾ ಆದೇಶದಲ್ಲಿ, ಎಸ್‌ಆರ್‌ಎಂಐಎಸ್‌ಟಿಯ ಸಹಾಯಕ ಪ್ರಾಧ್ಯಾಪಕಿ ಎಂಬ ಹೆಸರಿನಲ್ಲಿ ಲೋರಾ ಸಶಸ್ತ್ರ ಪಡೆಗಳನ್ನು ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ್ದಾರೆ. ಆದ್ದರಿಂದ, ಅವರು ಸಂಸ್ಥೆಯಲ್ಲಿ ತಮ್ಮ ಕೆಲಸ ಮುಂದುವರಿಸಲು ಅನರ್ಹರಾಗಿದ್ದಾರೆ ಮತ್ತು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ ಎಂಬುವುದಾಗಿ ಹೇಳಲಾಗಿದೆ” ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಲೋರಾ ಅವರ ಪೋಸ್ಟ್ ಕುರಿತು ಆಂತರಿಕ ವಿಚಾರಣಾ ಸಮಿತಿಯನ್ನು ಎಸ್‌ಆರ್‌ಎಂಐಎಸ್‌ಟಿಯ ವಿದ್ಯಾರ್ಥಿ ವ್ಯವಹಾರಗಳ ನಿರ್ದೇಶಕಿ ಡಾ. ನಿಶಾ ಅಶೋಕನ್ ಅವರ ನೇತೃತ್ವದಲ್ಲಿ ರಚಿಸಲಾಗಿತ್ತು. ವಿದ್ಯಾರ್ಥಿ ವ್ಯವಹಾರಗಳ ಉಪನಿರ್ದೇಶಕ ಡಾ. ಪ್ರಿನ್ಸ್ ಕಲ್ಯಾಣಸುಂದರಂ ಸಮಿತಿಯ ನಿರೂಪಕ ಅಧಿಕಾರಿಯಾಗಿದ್ದರು.

ಜುಲೈ 15ರಿಂದ ಸೆಪ್ಟೆಂಬರ್ 26 ರವರೆಗೆ ಕಟ್ಟಂಕುಲತ್ತೂರ್ ಎಸ್‌ಆರ್‌ಎಂ ಕ್ಯಾಂಪಸ್‌ನಲ್ಲಿ ವಿಚಾರಣೆ ನಡೆದಿದೆ. ಸಮಿತಿಯು ಅಕ್ಟೋಬರ್ 30ರಂದು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ಗೆ ತನ್ನ ವರದಿಯನ್ನು ಸಲ್ಲಿಸಿದೆ.

ದಲಿತ ಕ್ರಿಶ್ಚಿಯನ್ ಆಗಿರುವ ಲೋರಾ ಅವರ ವಾಟ್ಸಾಪ್ ಸ್ಟೇಟಸ್, ಫೋನ್ ನಂಬರ್ ಮತ್ತು ಫೋಟೋ ಬಲಪಂಥೀಯ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಿಗೆ ಸೋರಿಕೆಯಾದ ನಂತರ, ಅವರನ್ನು ಮೇ 8ರಂದು ಮೊದಲು ಅಮಾನತುಗೊಳಿಸಲಾಗಿತ್ತು.

ಲೋರಾ ಅವರಿಗೆ ಆನ್‌ಲೈನ್ ನಿಂದನೆ, ಬೆದರಿಕೆ ಫೋನ್ ಕರೆಗಳು ಮತ್ತು ಕೊಲೆ ಬೆದರಿಕೆಗಳು ಬಂದಿವೆ. ಅವರಿಗೆ ರಾಷ್ಟ್ರವಿರೋಧಿ ಎಂದು ಹಣೆಪಟ್ಟಿ ಕಟ್ಟಲಾಗಿದೆ ಮತ್ತು ಭಾರತೀಯ ಸೇನೆಯ ವಿರುದ್ಧ ಮಾತನಾಡಿದ ಆರೋಪ ಹೊರಿಸಲಾಗಿದೆ. ಇದಲ್ಲದೆ, ತನ್ನನ್ನು ತಾನು ರಕ್ಷಿಸಿಕೊಳ್ಳಲು ಚೆನ್ನೈನಲ್ಲಿರುವ ಮನೆಯನ್ನು ಖಾಲಿ ಮಾಡಿ ಸ್ವಂತ ಊರು ಕಲ್ಲಕುರಿಚಿಗೆ ಹಿಂತಿರುಗುವಂತೆ ಒತ್ತಾಯಿಸಲಾಗಿದೆ ಎಂದು ದಿ ನ್ಯೂಸ್‌ ಮಿನಿಟ್ ವರದಿ ವಿವರಿಸಿದೆ.

ಮೇ 7, 2025ರಂದು ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಇದ್ದಾಗ, ಲೋರಾ ಅವರು ಯುದ್ದೋನ್ಮಾದವನ್ನು ತೀವ್ರವಾಗಿ ವಿರೋಧಿಸಿ ವಾಟ್ಸಾಪ್ ಸ್ಟೇಟಸ್ ಹಾಕಿದ್ದರು. ಯುದ್ಧದಲ್ಲಿ ಮನುಷ್ಯರು ಸಾಯುತ್ತಾರೆ, ಕುಟುಂಬಗಳು ಒಡೆಯುತ್ತವೆ, ಆ ಮಾನವೀಯ ನಷ್ಟವನ್ನು ಮರೆಯಬೇಡಿ ಎಂದು ಜನರಿಗೆ ಮನವಿ ಮಾಡಿದ್ದರು. ಯುದ್ಧ ಪ್ರಚಾರ ಹೇಗೆ ಜನರನ್ನು ಮೋಸ ಮಾಡುತ್ತದೆ ಎಂಬುದನ್ನು ಹೇಳುವ ಜಾರ್ಜ್ ಆರ್ವೆಲ್ ಅವರ ಪ್ರಸಿದ್ಧ ಉಲ್ಲೇಖವನ್ನು ಅವರು ಹಂಚಿಕೊಂಡಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಭಾರತೀಯ ಸೇನಾಧಿಕಾರಿಗಳ ಹೆಸರಿನಲ್ಲಿ ಮಾಡಿದ ನಕಲಿ ಖಾತೆಗಳನ್ನು ಗುರುತಿಸಿ, ಇವು ನಕಲಿ ಖಾತೆಗಳು, ಇವುಗಳ ಪೋಸ್ಟ್‌ಗಳನ್ನು ಶೇರ್ ಮಾಡಬೇಡಿ, ಯುದ್ಧದ ಉನ್ಮಾದವನ್ನು ಹೆಚ್ಚಿಸಬೇಡಿ ಎಂದು ಎಲ್ಲರಿಗೂ ಎಚ್ಚರಿಕೆ ನೀಡಿದ್ದರು. ಸತ್ಯ-ಅಸತ್ಯವನ್ನು ಪರಿಶೀಲಿಸಿ (ಫ್ಯಾಕ್ಟ್-ಚೆಕ್) ಸರಿಯಾದ ಮಾಹಿತಿಯನ್ನು ಮಾತ್ರ ಹರಡಿ ಎಂದು ಎಂದು ಕೋರಿದ್ದರು ಎನ್ನಲಾಗಿದೆ.

ಲೋರಾ ಅವರು ಒಟ್ಟು 12 ಸಂದೇಶಗಳನ್ನು ವಾಟ್ಸಾಪ್ ಸ್ಟೇಟಸ್‌ನಲ್ಲಿ ಹಾಕಿದ್ದರು. ಇವೆಲ್ಲವೂ ಯುದ್ಧದ ವಿರುದ್ಧ ಮತ್ತು ಶಾಂತಿಯ ಪರವಾಗಿದ್ದವು. ಆದರೆ, ಅವುಗಳಲ್ಲಿ ಕೇವಲ ಎರಡು ಸಂದೇಶಗಳು ಮಾತ್ರ ಸಾರ್ವಜನಿಕವಾಗಿ (ಸ್ಕ್ರೀನ್‌ಶಾಟ್ ಆಗಿ) ಹರಿದಾಡಿದ್ದವು. ಒಂದು ಸಂದೇಶದಲ್ಲಿ ಆರ್ಥಿಕ ಸ್ಥಗಿತದಿಂದ ಹಿಡಿದು ಜೀವಹಾನಿಯವರೆಗೆ ಯುದ್ಧದ ನಿಜ ಜೀವನದ ಪರಿಣಾಮಗಳನ್ನು ಪಟ್ಟಿ ಮಾಡಿದ್ದರು. ಮತ್ತು ಇನ್ನೊಂದು ಸಂದೇಶದಲ್ಲಿ ಯುದ್ದದಲ್ಲಿ ನಾಗರಿಕರ ಹತ್ಯೆಯನ್ನು ಟೀಕಿಸಿದ್ದರು. ಅದನ್ನು ಧೈರ್ಯಕ್ಕಿಂತ ಹೇಡಿತನ ಎಂದು ಕರೆದಿದ್ದರು.

ಆಂತರಿಕ ವಿಚಾರಣೆಯ ಸಮಯದಲ್ಲಿ ಲೋರಾ ವಿರುದ್ಧ 5 ಆರೋಪಗಳನ್ನು ಹೊರಿಸಲಾಗಿದೆ ಮತ್ತು ಜೂನ್ 16ರಂದು ಅವರ ವಿರುದ್ಧ ಚಾರ್ಜ್ ಮೆಮೊ ಹೊರಡಿಸಲಾಗಿತ್ತು. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಭಾರತದ ಸಶಸ್ತ್ರ ಪಡೆಗಳ ವಿರುದ್ಧ ಪೋಸ್ಟ್ ಹಾಕಿದ್ದಾರೆ ಎಂದು ಚಾರ್ಜ್ ಮೆಮೊದಲ್ಲಿ ಆರೋಪಿಸಲಾಗಿತ್ತು. ರಾಷ್ಟ್ರೀಯ ಹಿತಾಸಕ್ತಿಗಳಿಗೆ ವಿರುದ್ಧವಾಗಿ ವರ್ತಿಸಿದ್ದಾರೆ ಮತ್ತು ದೇಶಭಕ್ತಿಯ ಕೊರತೆಯನ್ನು ಹೊಂದಿದ್ದಾರೆ ಎಂಬ ಆರೋಪವನ್ನೂ ಅವರ ಮೇಲೆ ಹೊರಿಸಲಾಗಿತ್ತು.

ಲೋರಾ ಅವರ ಕೃತ್ಯವು ರಾಷ್ಟ್ರದ ಹಿತಾಸಕ್ತಿಗಳಿಗೆ ವಿರುದ್ಧವಾದ ಕ್ರಮವಾಗಿದೆ ಮತ್ತು ಸಂಸ್ಥೆಯ ಸೌಹಾರ್ದಯುತ ವಾತಾವರಣ ಮತ್ತು ಸುಗಮ ಕಾರ್ಯನಿರ್ವಹಣೆಗೆ ಅಡ್ಡಿಪಡಿಸುತ್ತದೆ. ಅಲ್ಲದೆ, ಸಂಸ್ಥೆಯ ಖ್ಯಾತಿಗೆ ಹಾನಿಕಾರಕ ಕಾನೂನು ಪರಿಣಾಮಗಳನ್ನು ಆಹ್ವಾನಿಸುತ್ತದೆ ಮತ್ತು ಇದು ದೊಡ್ಡ ದುಷ್ಕೃತ್ಯವಾಗಿದೆ. ಇದಲ್ಲದೆ, ಅವರು ‘ಕ್ರಿಮಿನಲ್’ ಆಗಿರುವ ಸಮಾಜವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆಂದು ಆರೋಪ ಹೊರಿಸಲಾಗಿದೆ. ಇದನ್ನು ಸಮಿತಿಯು ‘ಪ್ರಮುಖ ದುಷ್ಕೃತ್ಯ’ ಎಂದು ಪರಿಗಣಿಸಿದೆ.

ಲೋರಾ ಅವರು ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ. ನಾನು ರಾಷ್ಟ್ರ ವಿರೋಧಿ ಸ್ಟೇಟಸ್ ಹಾಕಿಲ್ಲ, ಅವುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ವಿಶ್ವವಿದ್ಯಾನಿಲಯಕ್ಕೆ ತಾನು ಅಪಖ್ಯಾತಿ ತಂದಿದ್ದೇನೆ ಎಂಬ ಆರೋಪವನ್ನು ತಳ್ಳಿ ಹಾಕಿದ್ದು, ನನ್ನ ಪೋಸ್ಟ್‌ಗಳಲ್ಲಿ ನಾನು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕಿ ಎಂದು ಗುರುತಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಾನು ಸ್ಟೇಟಸ್ ಪೋಸ್ಟ್ ಮಾಡಿದ ವಾಟ್ಸಾಪ್ ಸಂಖ್ಯೆ ವೈಯಕ್ತಿಕವಾಗಿದ್ದು, ವಿಶ್ವವಿದ್ಯಾನಿಲಯಕ್ಕೆ ಯಾವುದೇ ರೀತಿಯಲ್ಲಿ ಸಂಬಂಧಿಸಿಲ್ಲ ಎಂದು ಹೇಳಿದ್ದಾರೆ. ನನ್ನ ಹೇಳಿಕೆಗಳನ್ನು ಅಥವಾ ಸ್ಟೇಟಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿಲ್ಲ, ಬದಲಿಗೆ ತಾತ್ಕಾಲಿಕ ಸ್ವರೂಪದ ವೈಯಕ್ತಿಕ ವಾಟ್ಸಾಪ್ ಸ್ಟೇಟಸ್ ಪೋಸ್ಟ್ ಮಾಡಿದ್ದೆ ಎಂದು ತಿಳಿಸಿದ್ದಾರೆ.

ಲೋರಾ ಅವರ ವಿರುದ್ಧ ಹೊರಿಸಲಾಗಿದ್ದ ಒಟ್ಟು 5 ಆರೋಪಗಳೂ ಸಾಬೀತಾಗಿವೆ. ಎಲ್ಲಾ ಆರೋಪಗಳಿಗೂ ಒಂದೇ ರೀತಿಯ ತೀರ್ಪು ನೀಡಲಾಗಿದೆ ಎಂದು ಆಂತರಿಕ ತನಿಖಾ ಸಮಿತಿ ಹೇಳಿದೆ.

ಈ ಪ್ರಕರಣದಲ್ಲಿ ಮೇಲ್ಮನವಿ ಪ್ರಾಧಿಕಾರವಾಗಿರುವ ಉಪಕುಲಪತಿಗಳಿಗೆ ಮೇಲ್ಮನವಿ ಸಲ್ಲಿಸಲು ಎಸ್‌ಆರ್‌ಎಂ ವಿಶ್ವವಿದ್ಯಾಲಯವು ಲೋರಾ ಅವರಿಗೆ 30 ದಿನಗಳ ಕಾಲಾವಕಾಶ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...