Homeಮುಖಪುಟಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

- Advertisement -
- Advertisement -

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ವೇಳೆ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲೋರಾ ಶಾಂತಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಎಸ್‌ಆರ್‌ಎಂನ ಆಂತರಿಕ ಸಮಿತಿಯ ವರದಿಯು ಲೋರಾ ‘ಗಂಭೀರ ತಪ್ಪು’ ಮಾಡಿದ್ದಾರೆ ಎಂದು ಹೇಳಿದೆ.

ವಿಶ್ವವಿದ್ಯಾನಿಲಯದ ವೃತ್ತಿ ಅಭಿವೃದ್ಧಿ ಕೇಂದ್ರದಲ್ಲಿ (ಸಿಡಿಸಿ) ಕೆಲಸ ಮಾಡುತ್ತಿದ್ದ ಲೋರಾ ಅವರು, ಕಳೆದ ಮೇ ತಿಂಗಳಲ್ಲಿ ಭಾರತೀಯ ಸೇನೆ ಅಪರೇಷನ್ ಸಿಂಧೂರ್ ಕೈಗೊಂಡಾಗ ಶಾಂತಿಗಾಗಿ ಕರೆ ನೀಡುವ ಸರಣಿ ವಾಟ್ಸಾಪ್ ಸ್ಟೇಟಸ್‌ಗಳನ್ನು ಪೋಸ್ಟ್ ಮಾಡಿದ್ದರು. ಆ ಬಳಿಕ ವಿದ್ಯಾರ್ಥಿಗಳು ಅವರನ್ನು ಅಪಹಾಸ್ಯ ಮಾಡಲು ಶುರು ಮಾಡಿದ್ದರು ಎಂದು ಆರೋಪಿಸಲಾಗಿದೆ.

“ನಮಗೆ ದೊರೆತ ಲೋರಾ ಅವರ ವಜಾ ಆದೇಶದಲ್ಲಿ, ಎಸ್‌ಆರ್‌ಎಂಐಎಸ್‌ಟಿಯ ಸಹಾಯಕ ಪ್ರಾಧ್ಯಾಪಕಿ ಎಂಬ ಹೆಸರಿನಲ್ಲಿ ಲೋರಾ ಸಶಸ್ತ್ರ ಪಡೆಗಳನ್ನು ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ್ದಾರೆ. ಆದ್ದರಿಂದ, ಅವರು ಸಂಸ್ಥೆಯಲ್ಲಿ ತಮ್ಮ ಕೆಲಸ ಮುಂದುವರಿಸಲು ಅನರ್ಹರಾಗಿದ್ದಾರೆ ಮತ್ತು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ ಎಂಬುವುದಾಗಿ ಹೇಳಲಾಗಿದೆ” ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಲೋರಾ ಅವರ ಪೋಸ್ಟ್ ಕುರಿತು ಆಂತರಿಕ ವಿಚಾರಣಾ ಸಮಿತಿಯನ್ನು ಎಸ್‌ಆರ್‌ಎಂಐಎಸ್‌ಟಿಯ ವಿದ್ಯಾರ್ಥಿ ವ್ಯವಹಾರಗಳ ನಿರ್ದೇಶಕಿ ಡಾ. ನಿಶಾ ಅಶೋಕನ್ ಅವರ ನೇತೃತ್ವದಲ್ಲಿ ರಚಿಸಲಾಗಿತ್ತು. ವಿದ್ಯಾರ್ಥಿ ವ್ಯವಹಾರಗಳ ಉಪನಿರ್ದೇಶಕ ಡಾ. ಪ್ರಿನ್ಸ್ ಕಲ್ಯಾಣಸುಂದರಂ ಸಮಿತಿಯ ನಿರೂಪಕ ಅಧಿಕಾರಿಯಾಗಿದ್ದರು.

ಜುಲೈ 15ರಿಂದ ಸೆಪ್ಟೆಂಬರ್ 26 ರವರೆಗೆ ಕಟ್ಟಂಕುಲತ್ತೂರ್ ಎಸ್‌ಆರ್‌ಎಂ ಕ್ಯಾಂಪಸ್‌ನಲ್ಲಿ ವಿಚಾರಣೆ ನಡೆದಿದೆ. ಸಮಿತಿಯು ಅಕ್ಟೋಬರ್ 30ರಂದು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ಗೆ ತನ್ನ ವರದಿಯನ್ನು ಸಲ್ಲಿಸಿದೆ.

ದಲಿತ ಕ್ರಿಶ್ಚಿಯನ್ ಆಗಿರುವ ಲೋರಾ ಅವರ ವಾಟ್ಸಾಪ್ ಸ್ಟೇಟಸ್, ಫೋನ್ ನಂಬರ್ ಮತ್ತು ಫೋಟೋ ಬಲಪಂಥೀಯ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಿಗೆ ಸೋರಿಕೆಯಾದ ನಂತರ, ಅವರನ್ನು ಮೇ 8ರಂದು ಮೊದಲು ಅಮಾನತುಗೊಳಿಸಲಾಗಿತ್ತು.

ಲೋರಾ ಅವರಿಗೆ ಆನ್‌ಲೈನ್ ನಿಂದನೆ, ಬೆದರಿಕೆ ಫೋನ್ ಕರೆಗಳು ಮತ್ತು ಕೊಲೆ ಬೆದರಿಕೆಗಳು ಬಂದಿವೆ. ಅವರಿಗೆ ರಾಷ್ಟ್ರವಿರೋಧಿ ಎಂದು ಹಣೆಪಟ್ಟಿ ಕಟ್ಟಲಾಗಿದೆ ಮತ್ತು ಭಾರತೀಯ ಸೇನೆಯ ವಿರುದ್ಧ ಮಾತನಾಡಿದ ಆರೋಪ ಹೊರಿಸಲಾಗಿದೆ. ಇದಲ್ಲದೆ, ತನ್ನನ್ನು ತಾನು ರಕ್ಷಿಸಿಕೊಳ್ಳಲು ಚೆನ್ನೈನಲ್ಲಿರುವ ಮನೆಯನ್ನು ಖಾಲಿ ಮಾಡಿ ಸ್ವಂತ ಊರು ಕಲ್ಲಕುರಿಚಿಗೆ ಹಿಂತಿರುಗುವಂತೆ ಒತ್ತಾಯಿಸಲಾಗಿದೆ ಎಂದು ದಿ ನ್ಯೂಸ್‌ ಮಿನಿಟ್ ವರದಿ ವಿವರಿಸಿದೆ.

ಮೇ 7, 2025ರಂದು ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಇದ್ದಾಗ, ಲೋರಾ ಅವರು ಯುದ್ದೋನ್ಮಾದವನ್ನು ತೀವ್ರವಾಗಿ ವಿರೋಧಿಸಿ ವಾಟ್ಸಾಪ್ ಸ್ಟೇಟಸ್ ಹಾಕಿದ್ದರು. ಯುದ್ಧದಲ್ಲಿ ಮನುಷ್ಯರು ಸಾಯುತ್ತಾರೆ, ಕುಟುಂಬಗಳು ಒಡೆಯುತ್ತವೆ, ಆ ಮಾನವೀಯ ನಷ್ಟವನ್ನು ಮರೆಯಬೇಡಿ ಎಂದು ಜನರಿಗೆ ಮನವಿ ಮಾಡಿದ್ದರು. ಯುದ್ಧ ಪ್ರಚಾರ ಹೇಗೆ ಜನರನ್ನು ಮೋಸ ಮಾಡುತ್ತದೆ ಎಂಬುದನ್ನು ಹೇಳುವ ಜಾರ್ಜ್ ಆರ್ವೆಲ್ ಅವರ ಪ್ರಸಿದ್ಧ ಉಲ್ಲೇಖವನ್ನು ಅವರು ಹಂಚಿಕೊಂಡಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಭಾರತೀಯ ಸೇನಾಧಿಕಾರಿಗಳ ಹೆಸರಿನಲ್ಲಿ ಮಾಡಿದ ನಕಲಿ ಖಾತೆಗಳನ್ನು ಗುರುತಿಸಿ, ಇವು ನಕಲಿ ಖಾತೆಗಳು, ಇವುಗಳ ಪೋಸ್ಟ್‌ಗಳನ್ನು ಶೇರ್ ಮಾಡಬೇಡಿ, ಯುದ್ಧದ ಉನ್ಮಾದವನ್ನು ಹೆಚ್ಚಿಸಬೇಡಿ ಎಂದು ಎಲ್ಲರಿಗೂ ಎಚ್ಚರಿಕೆ ನೀಡಿದ್ದರು. ಸತ್ಯ-ಅಸತ್ಯವನ್ನು ಪರಿಶೀಲಿಸಿ (ಫ್ಯಾಕ್ಟ್-ಚೆಕ್) ಸರಿಯಾದ ಮಾಹಿತಿಯನ್ನು ಮಾತ್ರ ಹರಡಿ ಎಂದು ಎಂದು ಕೋರಿದ್ದರು ಎನ್ನಲಾಗಿದೆ.

ಲೋರಾ ಅವರು ಒಟ್ಟು 12 ಸಂದೇಶಗಳನ್ನು ವಾಟ್ಸಾಪ್ ಸ್ಟೇಟಸ್‌ನಲ್ಲಿ ಹಾಕಿದ್ದರು. ಇವೆಲ್ಲವೂ ಯುದ್ಧದ ವಿರುದ್ಧ ಮತ್ತು ಶಾಂತಿಯ ಪರವಾಗಿದ್ದವು. ಆದರೆ, ಅವುಗಳಲ್ಲಿ ಕೇವಲ ಎರಡು ಸಂದೇಶಗಳು ಮಾತ್ರ ಸಾರ್ವಜನಿಕವಾಗಿ (ಸ್ಕ್ರೀನ್‌ಶಾಟ್ ಆಗಿ) ಹರಿದಾಡಿದ್ದವು. ಒಂದು ಸಂದೇಶದಲ್ಲಿ ಆರ್ಥಿಕ ಸ್ಥಗಿತದಿಂದ ಹಿಡಿದು ಜೀವಹಾನಿಯವರೆಗೆ ಯುದ್ಧದ ನಿಜ ಜೀವನದ ಪರಿಣಾಮಗಳನ್ನು ಪಟ್ಟಿ ಮಾಡಿದ್ದರು. ಮತ್ತು ಇನ್ನೊಂದು ಸಂದೇಶದಲ್ಲಿ ಯುದ್ದದಲ್ಲಿ ನಾಗರಿಕರ ಹತ್ಯೆಯನ್ನು ಟೀಕಿಸಿದ್ದರು. ಅದನ್ನು ಧೈರ್ಯಕ್ಕಿಂತ ಹೇಡಿತನ ಎಂದು ಕರೆದಿದ್ದರು.

ಆಂತರಿಕ ವಿಚಾರಣೆಯ ಸಮಯದಲ್ಲಿ ಲೋರಾ ವಿರುದ್ಧ 5 ಆರೋಪಗಳನ್ನು ಹೊರಿಸಲಾಗಿದೆ ಮತ್ತು ಜೂನ್ 16ರಂದು ಅವರ ವಿರುದ್ಧ ಚಾರ್ಜ್ ಮೆಮೊ ಹೊರಡಿಸಲಾಗಿತ್ತು. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಭಾರತದ ಸಶಸ್ತ್ರ ಪಡೆಗಳ ವಿರುದ್ಧ ಪೋಸ್ಟ್ ಹಾಕಿದ್ದಾರೆ ಎಂದು ಚಾರ್ಜ್ ಮೆಮೊದಲ್ಲಿ ಆರೋಪಿಸಲಾಗಿತ್ತು. ರಾಷ್ಟ್ರೀಯ ಹಿತಾಸಕ್ತಿಗಳಿಗೆ ವಿರುದ್ಧವಾಗಿ ವರ್ತಿಸಿದ್ದಾರೆ ಮತ್ತು ದೇಶಭಕ್ತಿಯ ಕೊರತೆಯನ್ನು ಹೊಂದಿದ್ದಾರೆ ಎಂಬ ಆರೋಪವನ್ನೂ ಅವರ ಮೇಲೆ ಹೊರಿಸಲಾಗಿತ್ತು.

ಲೋರಾ ಅವರ ಕೃತ್ಯವು ರಾಷ್ಟ್ರದ ಹಿತಾಸಕ್ತಿಗಳಿಗೆ ವಿರುದ್ಧವಾದ ಕ್ರಮವಾಗಿದೆ ಮತ್ತು ಸಂಸ್ಥೆಯ ಸೌಹಾರ್ದಯುತ ವಾತಾವರಣ ಮತ್ತು ಸುಗಮ ಕಾರ್ಯನಿರ್ವಹಣೆಗೆ ಅಡ್ಡಿಪಡಿಸುತ್ತದೆ. ಅಲ್ಲದೆ, ಸಂಸ್ಥೆಯ ಖ್ಯಾತಿಗೆ ಹಾನಿಕಾರಕ ಕಾನೂನು ಪರಿಣಾಮಗಳನ್ನು ಆಹ್ವಾನಿಸುತ್ತದೆ ಮತ್ತು ಇದು ದೊಡ್ಡ ದುಷ್ಕೃತ್ಯವಾಗಿದೆ. ಇದಲ್ಲದೆ, ಅವರು ‘ಕ್ರಿಮಿನಲ್’ ಆಗಿರುವ ಸಮಾಜವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆಂದು ಆರೋಪ ಹೊರಿಸಲಾಗಿದೆ. ಇದನ್ನು ಸಮಿತಿಯು ‘ಪ್ರಮುಖ ದುಷ್ಕೃತ್ಯ’ ಎಂದು ಪರಿಗಣಿಸಿದೆ.

ಲೋರಾ ಅವರು ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ. ನಾನು ರಾಷ್ಟ್ರ ವಿರೋಧಿ ಸ್ಟೇಟಸ್ ಹಾಕಿಲ್ಲ, ಅವುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ವಿಶ್ವವಿದ್ಯಾನಿಲಯಕ್ಕೆ ತಾನು ಅಪಖ್ಯಾತಿ ತಂದಿದ್ದೇನೆ ಎಂಬ ಆರೋಪವನ್ನು ತಳ್ಳಿ ಹಾಕಿದ್ದು, ನನ್ನ ಪೋಸ್ಟ್‌ಗಳಲ್ಲಿ ನಾನು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕಿ ಎಂದು ಗುರುತಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಾನು ಸ್ಟೇಟಸ್ ಪೋಸ್ಟ್ ಮಾಡಿದ ವಾಟ್ಸಾಪ್ ಸಂಖ್ಯೆ ವೈಯಕ್ತಿಕವಾಗಿದ್ದು, ವಿಶ್ವವಿದ್ಯಾನಿಲಯಕ್ಕೆ ಯಾವುದೇ ರೀತಿಯಲ್ಲಿ ಸಂಬಂಧಿಸಿಲ್ಲ ಎಂದು ಹೇಳಿದ್ದಾರೆ. ನನ್ನ ಹೇಳಿಕೆಗಳನ್ನು ಅಥವಾ ಸ್ಟೇಟಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿಲ್ಲ, ಬದಲಿಗೆ ತಾತ್ಕಾಲಿಕ ಸ್ವರೂಪದ ವೈಯಕ್ತಿಕ ವಾಟ್ಸಾಪ್ ಸ್ಟೇಟಸ್ ಪೋಸ್ಟ್ ಮಾಡಿದ್ದೆ ಎಂದು ತಿಳಿಸಿದ್ದಾರೆ.

ಲೋರಾ ಅವರ ವಿರುದ್ಧ ಹೊರಿಸಲಾಗಿದ್ದ ಒಟ್ಟು 5 ಆರೋಪಗಳೂ ಸಾಬೀತಾಗಿವೆ. ಎಲ್ಲಾ ಆರೋಪಗಳಿಗೂ ಒಂದೇ ರೀತಿಯ ತೀರ್ಪು ನೀಡಲಾಗಿದೆ ಎಂದು ಆಂತರಿಕ ತನಿಖಾ ಸಮಿತಿ ಹೇಳಿದೆ.

ಈ ಪ್ರಕರಣದಲ್ಲಿ ಮೇಲ್ಮನವಿ ಪ್ರಾಧಿಕಾರವಾಗಿರುವ ಉಪಕುಲಪತಿಗಳಿಗೆ ಮೇಲ್ಮನವಿ ಸಲ್ಲಿಸಲು ಎಸ್‌ಆರ್‌ಎಂ ವಿಶ್ವವಿದ್ಯಾಲಯವು ಲೋರಾ ಅವರಿಗೆ 30 ದಿನಗಳ ಕಾಲಾವಕಾಶ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...