Homeಮುಖಪುಟಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

- Advertisement -
- Advertisement -

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ವೇಳೆ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲೋರಾ ಶಾಂತಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಎಸ್‌ಆರ್‌ಎಂನ ಆಂತರಿಕ ಸಮಿತಿಯ ವರದಿಯು ಲೋರಾ ‘ಗಂಭೀರ ತಪ್ಪು’ ಮಾಡಿದ್ದಾರೆ ಎಂದು ಹೇಳಿದೆ.

ವಿಶ್ವವಿದ್ಯಾನಿಲಯದ ವೃತ್ತಿ ಅಭಿವೃದ್ಧಿ ಕೇಂದ್ರದಲ್ಲಿ (ಸಿಡಿಸಿ) ಕೆಲಸ ಮಾಡುತ್ತಿದ್ದ ಲೋರಾ ಅವರು, ಕಳೆದ ಮೇ ತಿಂಗಳಲ್ಲಿ ಭಾರತೀಯ ಸೇನೆ ಅಪರೇಷನ್ ಸಿಂಧೂರ್ ಕೈಗೊಂಡಾಗ ಶಾಂತಿಗಾಗಿ ಕರೆ ನೀಡುವ ಸರಣಿ ವಾಟ್ಸಾಪ್ ಸ್ಟೇಟಸ್‌ಗಳನ್ನು ಪೋಸ್ಟ್ ಮಾಡಿದ್ದರು. ಆ ಬಳಿಕ ವಿದ್ಯಾರ್ಥಿಗಳು ಅವರನ್ನು ಅಪಹಾಸ್ಯ ಮಾಡಲು ಶುರು ಮಾಡಿದ್ದರು ಎಂದು ಆರೋಪಿಸಲಾಗಿದೆ.

“ನಮಗೆ ದೊರೆತ ಲೋರಾ ಅವರ ವಜಾ ಆದೇಶದಲ್ಲಿ, ಎಸ್‌ಆರ್‌ಎಂಐಎಸ್‌ಟಿಯ ಸಹಾಯಕ ಪ್ರಾಧ್ಯಾಪಕಿ ಎಂಬ ಹೆಸರಿನಲ್ಲಿ ಲೋರಾ ಸಶಸ್ತ್ರ ಪಡೆಗಳನ್ನು ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ್ದಾರೆ. ಆದ್ದರಿಂದ, ಅವರು ಸಂಸ್ಥೆಯಲ್ಲಿ ತಮ್ಮ ಕೆಲಸ ಮುಂದುವರಿಸಲು ಅನರ್ಹರಾಗಿದ್ದಾರೆ ಮತ್ತು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ ಎಂಬುವುದಾಗಿ ಹೇಳಲಾಗಿದೆ” ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಲೋರಾ ಅವರ ಪೋಸ್ಟ್ ಕುರಿತು ಆಂತರಿಕ ವಿಚಾರಣಾ ಸಮಿತಿಯನ್ನು ಎಸ್‌ಆರ್‌ಎಂಐಎಸ್‌ಟಿಯ ವಿದ್ಯಾರ್ಥಿ ವ್ಯವಹಾರಗಳ ನಿರ್ದೇಶಕಿ ಡಾ. ನಿಶಾ ಅಶೋಕನ್ ಅವರ ನೇತೃತ್ವದಲ್ಲಿ ರಚಿಸಲಾಗಿತ್ತು. ವಿದ್ಯಾರ್ಥಿ ವ್ಯವಹಾರಗಳ ಉಪನಿರ್ದೇಶಕ ಡಾ. ಪ್ರಿನ್ಸ್ ಕಲ್ಯಾಣಸುಂದರಂ ಸಮಿತಿಯ ನಿರೂಪಕ ಅಧಿಕಾರಿಯಾಗಿದ್ದರು.

ಜುಲೈ 15ರಿಂದ ಸೆಪ್ಟೆಂಬರ್ 26 ರವರೆಗೆ ಕಟ್ಟಂಕುಲತ್ತೂರ್ ಎಸ್‌ಆರ್‌ಎಂ ಕ್ಯಾಂಪಸ್‌ನಲ್ಲಿ ವಿಚಾರಣೆ ನಡೆದಿದೆ. ಸಮಿತಿಯು ಅಕ್ಟೋಬರ್ 30ರಂದು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ಗೆ ತನ್ನ ವರದಿಯನ್ನು ಸಲ್ಲಿಸಿದೆ.

ದಲಿತ ಕ್ರಿಶ್ಚಿಯನ್ ಆಗಿರುವ ಲೋರಾ ಅವರ ವಾಟ್ಸಾಪ್ ಸ್ಟೇಟಸ್, ಫೋನ್ ನಂಬರ್ ಮತ್ತು ಫೋಟೋ ಬಲಪಂಥೀಯ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಿಗೆ ಸೋರಿಕೆಯಾದ ನಂತರ, ಅವರನ್ನು ಮೇ 8ರಂದು ಮೊದಲು ಅಮಾನತುಗೊಳಿಸಲಾಗಿತ್ತು.

ಲೋರಾ ಅವರಿಗೆ ಆನ್‌ಲೈನ್ ನಿಂದನೆ, ಬೆದರಿಕೆ ಫೋನ್ ಕರೆಗಳು ಮತ್ತು ಕೊಲೆ ಬೆದರಿಕೆಗಳು ಬಂದಿವೆ. ಅವರಿಗೆ ರಾಷ್ಟ್ರವಿರೋಧಿ ಎಂದು ಹಣೆಪಟ್ಟಿ ಕಟ್ಟಲಾಗಿದೆ ಮತ್ತು ಭಾರತೀಯ ಸೇನೆಯ ವಿರುದ್ಧ ಮಾತನಾಡಿದ ಆರೋಪ ಹೊರಿಸಲಾಗಿದೆ. ಇದಲ್ಲದೆ, ತನ್ನನ್ನು ತಾನು ರಕ್ಷಿಸಿಕೊಳ್ಳಲು ಚೆನ್ನೈನಲ್ಲಿರುವ ಮನೆಯನ್ನು ಖಾಲಿ ಮಾಡಿ ಸ್ವಂತ ಊರು ಕಲ್ಲಕುರಿಚಿಗೆ ಹಿಂತಿರುಗುವಂತೆ ಒತ್ತಾಯಿಸಲಾಗಿದೆ ಎಂದು ದಿ ನ್ಯೂಸ್‌ ಮಿನಿಟ್ ವರದಿ ವಿವರಿಸಿದೆ.

ಮೇ 7, 2025ರಂದು ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಇದ್ದಾಗ, ಲೋರಾ ಅವರು ಯುದ್ದೋನ್ಮಾದವನ್ನು ತೀವ್ರವಾಗಿ ವಿರೋಧಿಸಿ ವಾಟ್ಸಾಪ್ ಸ್ಟೇಟಸ್ ಹಾಕಿದ್ದರು. ಯುದ್ಧದಲ್ಲಿ ಮನುಷ್ಯರು ಸಾಯುತ್ತಾರೆ, ಕುಟುಂಬಗಳು ಒಡೆಯುತ್ತವೆ, ಆ ಮಾನವೀಯ ನಷ್ಟವನ್ನು ಮರೆಯಬೇಡಿ ಎಂದು ಜನರಿಗೆ ಮನವಿ ಮಾಡಿದ್ದರು. ಯುದ್ಧ ಪ್ರಚಾರ ಹೇಗೆ ಜನರನ್ನು ಮೋಸ ಮಾಡುತ್ತದೆ ಎಂಬುದನ್ನು ಹೇಳುವ ಜಾರ್ಜ್ ಆರ್ವೆಲ್ ಅವರ ಪ್ರಸಿದ್ಧ ಉಲ್ಲೇಖವನ್ನು ಅವರು ಹಂಚಿಕೊಂಡಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಭಾರತೀಯ ಸೇನಾಧಿಕಾರಿಗಳ ಹೆಸರಿನಲ್ಲಿ ಮಾಡಿದ ನಕಲಿ ಖಾತೆಗಳನ್ನು ಗುರುತಿಸಿ, ಇವು ನಕಲಿ ಖಾತೆಗಳು, ಇವುಗಳ ಪೋಸ್ಟ್‌ಗಳನ್ನು ಶೇರ್ ಮಾಡಬೇಡಿ, ಯುದ್ಧದ ಉನ್ಮಾದವನ್ನು ಹೆಚ್ಚಿಸಬೇಡಿ ಎಂದು ಎಲ್ಲರಿಗೂ ಎಚ್ಚರಿಕೆ ನೀಡಿದ್ದರು. ಸತ್ಯ-ಅಸತ್ಯವನ್ನು ಪರಿಶೀಲಿಸಿ (ಫ್ಯಾಕ್ಟ್-ಚೆಕ್) ಸರಿಯಾದ ಮಾಹಿತಿಯನ್ನು ಮಾತ್ರ ಹರಡಿ ಎಂದು ಎಂದು ಕೋರಿದ್ದರು ಎನ್ನಲಾಗಿದೆ.

ಲೋರಾ ಅವರು ಒಟ್ಟು 12 ಸಂದೇಶಗಳನ್ನು ವಾಟ್ಸಾಪ್ ಸ್ಟೇಟಸ್‌ನಲ್ಲಿ ಹಾಕಿದ್ದರು. ಇವೆಲ್ಲವೂ ಯುದ್ಧದ ವಿರುದ್ಧ ಮತ್ತು ಶಾಂತಿಯ ಪರವಾಗಿದ್ದವು. ಆದರೆ, ಅವುಗಳಲ್ಲಿ ಕೇವಲ ಎರಡು ಸಂದೇಶಗಳು ಮಾತ್ರ ಸಾರ್ವಜನಿಕವಾಗಿ (ಸ್ಕ್ರೀನ್‌ಶಾಟ್ ಆಗಿ) ಹರಿದಾಡಿದ್ದವು. ಒಂದು ಸಂದೇಶದಲ್ಲಿ ಆರ್ಥಿಕ ಸ್ಥಗಿತದಿಂದ ಹಿಡಿದು ಜೀವಹಾನಿಯವರೆಗೆ ಯುದ್ಧದ ನಿಜ ಜೀವನದ ಪರಿಣಾಮಗಳನ್ನು ಪಟ್ಟಿ ಮಾಡಿದ್ದರು. ಮತ್ತು ಇನ್ನೊಂದು ಸಂದೇಶದಲ್ಲಿ ಯುದ್ದದಲ್ಲಿ ನಾಗರಿಕರ ಹತ್ಯೆಯನ್ನು ಟೀಕಿಸಿದ್ದರು. ಅದನ್ನು ಧೈರ್ಯಕ್ಕಿಂತ ಹೇಡಿತನ ಎಂದು ಕರೆದಿದ್ದರು.

ಆಂತರಿಕ ವಿಚಾರಣೆಯ ಸಮಯದಲ್ಲಿ ಲೋರಾ ವಿರುದ್ಧ 5 ಆರೋಪಗಳನ್ನು ಹೊರಿಸಲಾಗಿದೆ ಮತ್ತು ಜೂನ್ 16ರಂದು ಅವರ ವಿರುದ್ಧ ಚಾರ್ಜ್ ಮೆಮೊ ಹೊರಡಿಸಲಾಗಿತ್ತು. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಭಾರತದ ಸಶಸ್ತ್ರ ಪಡೆಗಳ ವಿರುದ್ಧ ಪೋಸ್ಟ್ ಹಾಕಿದ್ದಾರೆ ಎಂದು ಚಾರ್ಜ್ ಮೆಮೊದಲ್ಲಿ ಆರೋಪಿಸಲಾಗಿತ್ತು. ರಾಷ್ಟ್ರೀಯ ಹಿತಾಸಕ್ತಿಗಳಿಗೆ ವಿರುದ್ಧವಾಗಿ ವರ್ತಿಸಿದ್ದಾರೆ ಮತ್ತು ದೇಶಭಕ್ತಿಯ ಕೊರತೆಯನ್ನು ಹೊಂದಿದ್ದಾರೆ ಎಂಬ ಆರೋಪವನ್ನೂ ಅವರ ಮೇಲೆ ಹೊರಿಸಲಾಗಿತ್ತು.

ಲೋರಾ ಅವರ ಕೃತ್ಯವು ರಾಷ್ಟ್ರದ ಹಿತಾಸಕ್ತಿಗಳಿಗೆ ವಿರುದ್ಧವಾದ ಕ್ರಮವಾಗಿದೆ ಮತ್ತು ಸಂಸ್ಥೆಯ ಸೌಹಾರ್ದಯುತ ವಾತಾವರಣ ಮತ್ತು ಸುಗಮ ಕಾರ್ಯನಿರ್ವಹಣೆಗೆ ಅಡ್ಡಿಪಡಿಸುತ್ತದೆ. ಅಲ್ಲದೆ, ಸಂಸ್ಥೆಯ ಖ್ಯಾತಿಗೆ ಹಾನಿಕಾರಕ ಕಾನೂನು ಪರಿಣಾಮಗಳನ್ನು ಆಹ್ವಾನಿಸುತ್ತದೆ ಮತ್ತು ಇದು ದೊಡ್ಡ ದುಷ್ಕೃತ್ಯವಾಗಿದೆ. ಇದಲ್ಲದೆ, ಅವರು ‘ಕ್ರಿಮಿನಲ್’ ಆಗಿರುವ ಸಮಾಜವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆಂದು ಆರೋಪ ಹೊರಿಸಲಾಗಿದೆ. ಇದನ್ನು ಸಮಿತಿಯು ‘ಪ್ರಮುಖ ದುಷ್ಕೃತ್ಯ’ ಎಂದು ಪರಿಗಣಿಸಿದೆ.

ಲೋರಾ ಅವರು ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ. ನಾನು ರಾಷ್ಟ್ರ ವಿರೋಧಿ ಸ್ಟೇಟಸ್ ಹಾಕಿಲ್ಲ, ಅವುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ವಿಶ್ವವಿದ್ಯಾನಿಲಯಕ್ಕೆ ತಾನು ಅಪಖ್ಯಾತಿ ತಂದಿದ್ದೇನೆ ಎಂಬ ಆರೋಪವನ್ನು ತಳ್ಳಿ ಹಾಕಿದ್ದು, ನನ್ನ ಪೋಸ್ಟ್‌ಗಳಲ್ಲಿ ನಾನು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕಿ ಎಂದು ಗುರುತಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಾನು ಸ್ಟೇಟಸ್ ಪೋಸ್ಟ್ ಮಾಡಿದ ವಾಟ್ಸಾಪ್ ಸಂಖ್ಯೆ ವೈಯಕ್ತಿಕವಾಗಿದ್ದು, ವಿಶ್ವವಿದ್ಯಾನಿಲಯಕ್ಕೆ ಯಾವುದೇ ರೀತಿಯಲ್ಲಿ ಸಂಬಂಧಿಸಿಲ್ಲ ಎಂದು ಹೇಳಿದ್ದಾರೆ. ನನ್ನ ಹೇಳಿಕೆಗಳನ್ನು ಅಥವಾ ಸ್ಟೇಟಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿಲ್ಲ, ಬದಲಿಗೆ ತಾತ್ಕಾಲಿಕ ಸ್ವರೂಪದ ವೈಯಕ್ತಿಕ ವಾಟ್ಸಾಪ್ ಸ್ಟೇಟಸ್ ಪೋಸ್ಟ್ ಮಾಡಿದ್ದೆ ಎಂದು ತಿಳಿಸಿದ್ದಾರೆ.

ಲೋರಾ ಅವರ ವಿರುದ್ಧ ಹೊರಿಸಲಾಗಿದ್ದ ಒಟ್ಟು 5 ಆರೋಪಗಳೂ ಸಾಬೀತಾಗಿವೆ. ಎಲ್ಲಾ ಆರೋಪಗಳಿಗೂ ಒಂದೇ ರೀತಿಯ ತೀರ್ಪು ನೀಡಲಾಗಿದೆ ಎಂದು ಆಂತರಿಕ ತನಿಖಾ ಸಮಿತಿ ಹೇಳಿದೆ.

ಈ ಪ್ರಕರಣದಲ್ಲಿ ಮೇಲ್ಮನವಿ ಪ್ರಾಧಿಕಾರವಾಗಿರುವ ಉಪಕುಲಪತಿಗಳಿಗೆ ಮೇಲ್ಮನವಿ ಸಲ್ಲಿಸಲು ಎಸ್‌ಆರ್‌ಎಂ ವಿಶ್ವವಿದ್ಯಾಲಯವು ಲೋರಾ ಅವರಿಗೆ 30 ದಿನಗಳ ಕಾಲಾವಕಾಶ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...