Homeಮುಖಪುಟಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

- Advertisement -
- Advertisement -

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ವೇಳೆ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲೋರಾ ಶಾಂತಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಎಸ್‌ಆರ್‌ಎಂನ ಆಂತರಿಕ ಸಮಿತಿಯ ವರದಿಯು ಲೋರಾ ‘ಗಂಭೀರ ತಪ್ಪು’ ಮಾಡಿದ್ದಾರೆ ಎಂದು ಹೇಳಿದೆ.

ವಿಶ್ವವಿದ್ಯಾನಿಲಯದ ವೃತ್ತಿ ಅಭಿವೃದ್ಧಿ ಕೇಂದ್ರದಲ್ಲಿ (ಸಿಡಿಸಿ) ಕೆಲಸ ಮಾಡುತ್ತಿದ್ದ ಲೋರಾ ಅವರು, ಕಳೆದ ಮೇ ತಿಂಗಳಲ್ಲಿ ಭಾರತೀಯ ಸೇನೆ ಅಪರೇಷನ್ ಸಿಂಧೂರ್ ಕೈಗೊಂಡಾಗ ಶಾಂತಿಗಾಗಿ ಕರೆ ನೀಡುವ ಸರಣಿ ವಾಟ್ಸಾಪ್ ಸ್ಟೇಟಸ್‌ಗಳನ್ನು ಪೋಸ್ಟ್ ಮಾಡಿದ್ದರು. ಆ ಬಳಿಕ ವಿದ್ಯಾರ್ಥಿಗಳು ಅವರನ್ನು ಅಪಹಾಸ್ಯ ಮಾಡಲು ಶುರು ಮಾಡಿದ್ದರು ಎಂದು ಆರೋಪಿಸಲಾಗಿದೆ.

“ನಮಗೆ ದೊರೆತ ಲೋರಾ ಅವರ ವಜಾ ಆದೇಶದಲ್ಲಿ, ಎಸ್‌ಆರ್‌ಎಂಐಎಸ್‌ಟಿಯ ಸಹಾಯಕ ಪ್ರಾಧ್ಯಾಪಕಿ ಎಂಬ ಹೆಸರಿನಲ್ಲಿ ಲೋರಾ ಸಶಸ್ತ್ರ ಪಡೆಗಳನ್ನು ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ್ದಾರೆ. ಆದ್ದರಿಂದ, ಅವರು ಸಂಸ್ಥೆಯಲ್ಲಿ ತಮ್ಮ ಕೆಲಸ ಮುಂದುವರಿಸಲು ಅನರ್ಹರಾಗಿದ್ದಾರೆ ಮತ್ತು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ ಎಂಬುವುದಾಗಿ ಹೇಳಲಾಗಿದೆ” ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಲೋರಾ ಅವರ ಪೋಸ್ಟ್ ಕುರಿತು ಆಂತರಿಕ ವಿಚಾರಣಾ ಸಮಿತಿಯನ್ನು ಎಸ್‌ಆರ್‌ಎಂಐಎಸ್‌ಟಿಯ ವಿದ್ಯಾರ್ಥಿ ವ್ಯವಹಾರಗಳ ನಿರ್ದೇಶಕಿ ಡಾ. ನಿಶಾ ಅಶೋಕನ್ ಅವರ ನೇತೃತ್ವದಲ್ಲಿ ರಚಿಸಲಾಗಿತ್ತು. ವಿದ್ಯಾರ್ಥಿ ವ್ಯವಹಾರಗಳ ಉಪನಿರ್ದೇಶಕ ಡಾ. ಪ್ರಿನ್ಸ್ ಕಲ್ಯಾಣಸುಂದರಂ ಸಮಿತಿಯ ನಿರೂಪಕ ಅಧಿಕಾರಿಯಾಗಿದ್ದರು.

ಜುಲೈ 15ರಿಂದ ಸೆಪ್ಟೆಂಬರ್ 26 ರವರೆಗೆ ಕಟ್ಟಂಕುಲತ್ತೂರ್ ಎಸ್‌ಆರ್‌ಎಂ ಕ್ಯಾಂಪಸ್‌ನಲ್ಲಿ ವಿಚಾರಣೆ ನಡೆದಿದೆ. ಸಮಿತಿಯು ಅಕ್ಟೋಬರ್ 30ರಂದು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ಗೆ ತನ್ನ ವರದಿಯನ್ನು ಸಲ್ಲಿಸಿದೆ.

ದಲಿತ ಕ್ರಿಶ್ಚಿಯನ್ ಆಗಿರುವ ಲೋರಾ ಅವರ ವಾಟ್ಸಾಪ್ ಸ್ಟೇಟಸ್, ಫೋನ್ ನಂಬರ್ ಮತ್ತು ಫೋಟೋ ಬಲಪಂಥೀಯ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಿಗೆ ಸೋರಿಕೆಯಾದ ನಂತರ, ಅವರನ್ನು ಮೇ 8ರಂದು ಮೊದಲು ಅಮಾನತುಗೊಳಿಸಲಾಗಿತ್ತು.

ಲೋರಾ ಅವರಿಗೆ ಆನ್‌ಲೈನ್ ನಿಂದನೆ, ಬೆದರಿಕೆ ಫೋನ್ ಕರೆಗಳು ಮತ್ತು ಕೊಲೆ ಬೆದರಿಕೆಗಳು ಬಂದಿವೆ. ಅವರಿಗೆ ರಾಷ್ಟ್ರವಿರೋಧಿ ಎಂದು ಹಣೆಪಟ್ಟಿ ಕಟ್ಟಲಾಗಿದೆ ಮತ್ತು ಭಾರತೀಯ ಸೇನೆಯ ವಿರುದ್ಧ ಮಾತನಾಡಿದ ಆರೋಪ ಹೊರಿಸಲಾಗಿದೆ. ಇದಲ್ಲದೆ, ತನ್ನನ್ನು ತಾನು ರಕ್ಷಿಸಿಕೊಳ್ಳಲು ಚೆನ್ನೈನಲ್ಲಿರುವ ಮನೆಯನ್ನು ಖಾಲಿ ಮಾಡಿ ಸ್ವಂತ ಊರು ಕಲ್ಲಕುರಿಚಿಗೆ ಹಿಂತಿರುಗುವಂತೆ ಒತ್ತಾಯಿಸಲಾಗಿದೆ ಎಂದು ದಿ ನ್ಯೂಸ್‌ ಮಿನಿಟ್ ವರದಿ ವಿವರಿಸಿದೆ.

ಮೇ 7, 2025ರಂದು ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಇದ್ದಾಗ, ಲೋರಾ ಅವರು ಯುದ್ದೋನ್ಮಾದವನ್ನು ತೀವ್ರವಾಗಿ ವಿರೋಧಿಸಿ ವಾಟ್ಸಾಪ್ ಸ್ಟೇಟಸ್ ಹಾಕಿದ್ದರು. ಯುದ್ಧದಲ್ಲಿ ಮನುಷ್ಯರು ಸಾಯುತ್ತಾರೆ, ಕುಟುಂಬಗಳು ಒಡೆಯುತ್ತವೆ, ಆ ಮಾನವೀಯ ನಷ್ಟವನ್ನು ಮರೆಯಬೇಡಿ ಎಂದು ಜನರಿಗೆ ಮನವಿ ಮಾಡಿದ್ದರು. ಯುದ್ಧ ಪ್ರಚಾರ ಹೇಗೆ ಜನರನ್ನು ಮೋಸ ಮಾಡುತ್ತದೆ ಎಂಬುದನ್ನು ಹೇಳುವ ಜಾರ್ಜ್ ಆರ್ವೆಲ್ ಅವರ ಪ್ರಸಿದ್ಧ ಉಲ್ಲೇಖವನ್ನು ಅವರು ಹಂಚಿಕೊಂಡಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಭಾರತೀಯ ಸೇನಾಧಿಕಾರಿಗಳ ಹೆಸರಿನಲ್ಲಿ ಮಾಡಿದ ನಕಲಿ ಖಾತೆಗಳನ್ನು ಗುರುತಿಸಿ, ಇವು ನಕಲಿ ಖಾತೆಗಳು, ಇವುಗಳ ಪೋಸ್ಟ್‌ಗಳನ್ನು ಶೇರ್ ಮಾಡಬೇಡಿ, ಯುದ್ಧದ ಉನ್ಮಾದವನ್ನು ಹೆಚ್ಚಿಸಬೇಡಿ ಎಂದು ಎಲ್ಲರಿಗೂ ಎಚ್ಚರಿಕೆ ನೀಡಿದ್ದರು. ಸತ್ಯ-ಅಸತ್ಯವನ್ನು ಪರಿಶೀಲಿಸಿ (ಫ್ಯಾಕ್ಟ್-ಚೆಕ್) ಸರಿಯಾದ ಮಾಹಿತಿಯನ್ನು ಮಾತ್ರ ಹರಡಿ ಎಂದು ಎಂದು ಕೋರಿದ್ದರು ಎನ್ನಲಾಗಿದೆ.

ಲೋರಾ ಅವರು ಒಟ್ಟು 12 ಸಂದೇಶಗಳನ್ನು ವಾಟ್ಸಾಪ್ ಸ್ಟೇಟಸ್‌ನಲ್ಲಿ ಹಾಕಿದ್ದರು. ಇವೆಲ್ಲವೂ ಯುದ್ಧದ ವಿರುದ್ಧ ಮತ್ತು ಶಾಂತಿಯ ಪರವಾಗಿದ್ದವು. ಆದರೆ, ಅವುಗಳಲ್ಲಿ ಕೇವಲ ಎರಡು ಸಂದೇಶಗಳು ಮಾತ್ರ ಸಾರ್ವಜನಿಕವಾಗಿ (ಸ್ಕ್ರೀನ್‌ಶಾಟ್ ಆಗಿ) ಹರಿದಾಡಿದ್ದವು. ಒಂದು ಸಂದೇಶದಲ್ಲಿ ಆರ್ಥಿಕ ಸ್ಥಗಿತದಿಂದ ಹಿಡಿದು ಜೀವಹಾನಿಯವರೆಗೆ ಯುದ್ಧದ ನಿಜ ಜೀವನದ ಪರಿಣಾಮಗಳನ್ನು ಪಟ್ಟಿ ಮಾಡಿದ್ದರು. ಮತ್ತು ಇನ್ನೊಂದು ಸಂದೇಶದಲ್ಲಿ ಯುದ್ದದಲ್ಲಿ ನಾಗರಿಕರ ಹತ್ಯೆಯನ್ನು ಟೀಕಿಸಿದ್ದರು. ಅದನ್ನು ಧೈರ್ಯಕ್ಕಿಂತ ಹೇಡಿತನ ಎಂದು ಕರೆದಿದ್ದರು.

ಆಂತರಿಕ ವಿಚಾರಣೆಯ ಸಮಯದಲ್ಲಿ ಲೋರಾ ವಿರುದ್ಧ 5 ಆರೋಪಗಳನ್ನು ಹೊರಿಸಲಾಗಿದೆ ಮತ್ತು ಜೂನ್ 16ರಂದು ಅವರ ವಿರುದ್ಧ ಚಾರ್ಜ್ ಮೆಮೊ ಹೊರಡಿಸಲಾಗಿತ್ತು. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಭಾರತದ ಸಶಸ್ತ್ರ ಪಡೆಗಳ ವಿರುದ್ಧ ಪೋಸ್ಟ್ ಹಾಕಿದ್ದಾರೆ ಎಂದು ಚಾರ್ಜ್ ಮೆಮೊದಲ್ಲಿ ಆರೋಪಿಸಲಾಗಿತ್ತು. ರಾಷ್ಟ್ರೀಯ ಹಿತಾಸಕ್ತಿಗಳಿಗೆ ವಿರುದ್ಧವಾಗಿ ವರ್ತಿಸಿದ್ದಾರೆ ಮತ್ತು ದೇಶಭಕ್ತಿಯ ಕೊರತೆಯನ್ನು ಹೊಂದಿದ್ದಾರೆ ಎಂಬ ಆರೋಪವನ್ನೂ ಅವರ ಮೇಲೆ ಹೊರಿಸಲಾಗಿತ್ತು.

ಲೋರಾ ಅವರ ಕೃತ್ಯವು ರಾಷ್ಟ್ರದ ಹಿತಾಸಕ್ತಿಗಳಿಗೆ ವಿರುದ್ಧವಾದ ಕ್ರಮವಾಗಿದೆ ಮತ್ತು ಸಂಸ್ಥೆಯ ಸೌಹಾರ್ದಯುತ ವಾತಾವರಣ ಮತ್ತು ಸುಗಮ ಕಾರ್ಯನಿರ್ವಹಣೆಗೆ ಅಡ್ಡಿಪಡಿಸುತ್ತದೆ. ಅಲ್ಲದೆ, ಸಂಸ್ಥೆಯ ಖ್ಯಾತಿಗೆ ಹಾನಿಕಾರಕ ಕಾನೂನು ಪರಿಣಾಮಗಳನ್ನು ಆಹ್ವಾನಿಸುತ್ತದೆ ಮತ್ತು ಇದು ದೊಡ್ಡ ದುಷ್ಕೃತ್ಯವಾಗಿದೆ. ಇದಲ್ಲದೆ, ಅವರು ‘ಕ್ರಿಮಿನಲ್’ ಆಗಿರುವ ಸಮಾಜವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆಂದು ಆರೋಪ ಹೊರಿಸಲಾಗಿದೆ. ಇದನ್ನು ಸಮಿತಿಯು ‘ಪ್ರಮುಖ ದುಷ್ಕೃತ್ಯ’ ಎಂದು ಪರಿಗಣಿಸಿದೆ.

ಲೋರಾ ಅವರು ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ. ನಾನು ರಾಷ್ಟ್ರ ವಿರೋಧಿ ಸ್ಟೇಟಸ್ ಹಾಕಿಲ್ಲ, ಅವುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ವಿಶ್ವವಿದ್ಯಾನಿಲಯಕ್ಕೆ ತಾನು ಅಪಖ್ಯಾತಿ ತಂದಿದ್ದೇನೆ ಎಂಬ ಆರೋಪವನ್ನು ತಳ್ಳಿ ಹಾಕಿದ್ದು, ನನ್ನ ಪೋಸ್ಟ್‌ಗಳಲ್ಲಿ ನಾನು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕಿ ಎಂದು ಗುರುತಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಾನು ಸ್ಟೇಟಸ್ ಪೋಸ್ಟ್ ಮಾಡಿದ ವಾಟ್ಸಾಪ್ ಸಂಖ್ಯೆ ವೈಯಕ್ತಿಕವಾಗಿದ್ದು, ವಿಶ್ವವಿದ್ಯಾನಿಲಯಕ್ಕೆ ಯಾವುದೇ ರೀತಿಯಲ್ಲಿ ಸಂಬಂಧಿಸಿಲ್ಲ ಎಂದು ಹೇಳಿದ್ದಾರೆ. ನನ್ನ ಹೇಳಿಕೆಗಳನ್ನು ಅಥವಾ ಸ್ಟೇಟಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿಲ್ಲ, ಬದಲಿಗೆ ತಾತ್ಕಾಲಿಕ ಸ್ವರೂಪದ ವೈಯಕ್ತಿಕ ವಾಟ್ಸಾಪ್ ಸ್ಟೇಟಸ್ ಪೋಸ್ಟ್ ಮಾಡಿದ್ದೆ ಎಂದು ತಿಳಿಸಿದ್ದಾರೆ.

ಲೋರಾ ಅವರ ವಿರುದ್ಧ ಹೊರಿಸಲಾಗಿದ್ದ ಒಟ್ಟು 5 ಆರೋಪಗಳೂ ಸಾಬೀತಾಗಿವೆ. ಎಲ್ಲಾ ಆರೋಪಗಳಿಗೂ ಒಂದೇ ರೀತಿಯ ತೀರ್ಪು ನೀಡಲಾಗಿದೆ ಎಂದು ಆಂತರಿಕ ತನಿಖಾ ಸಮಿತಿ ಹೇಳಿದೆ.

ಈ ಪ್ರಕರಣದಲ್ಲಿ ಮೇಲ್ಮನವಿ ಪ್ರಾಧಿಕಾರವಾಗಿರುವ ಉಪಕುಲಪತಿಗಳಿಗೆ ಮೇಲ್ಮನವಿ ಸಲ್ಲಿಸಲು ಎಸ್‌ಆರ್‌ಎಂ ವಿಶ್ವವಿದ್ಯಾಲಯವು ಲೋರಾ ಅವರಿಗೆ 30 ದಿನಗಳ ಕಾಲಾವಕಾಶ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...