Homeಮುಖಪುಟಕೋವಿಡ್‌ ಸೋಂಕಿತರಿಗೆ ಆಂಟಿಬಡಿ ಕಾಕ್ಟೇಲ್ ಟ್ರೀಟ್‌ಮೆಂಟ್

ಕೋವಿಡ್‌ ಸೋಂಕಿತರಿಗೆ ಆಂಟಿಬಡಿ ಕಾಕ್ಟೇಲ್ ಟ್ರೀಟ್‌ಮೆಂಟ್

- Advertisement -
- Advertisement -

ಕೊರೋನಾ ಸೋಂಕಿಗೆ ಬೇರೆ ಬೇರೆ ಚಿಕಿತ್ಸಾ ವಿಧಾನಗಳನ್ನು ಜಗತ್ತಿನ ಬೇರೆ ಬೇರೆ ರಾಷ್ಟ್ರಗಳಲ್ಲಿನ ವೈದ್ಯರು ಕಂಡುಕೊಂಡಿದ್ದಾರೆ. ಅಂತಹ ಒಂದು ವಿಧಾನಗಳಲ್ಲಿ ಪ್ಲಾಸ್ಮಾ ಕೂಡ ಒಂದು. ಪ್ಲಾಸ್ಮಾ ಚಿಕಿತ್ಸೆ ಸಾಕಷ್ಟು ಯಶಸ್ವಿಯಾಗದ ನಂತರ ಮೇಲೆ ಈಗ ಮತ್ತೆ ಹೊಸ ಹೊಸ ಚಿಕಿತ್ಸಾ ವಿಧಾನಗಳು ಹುಟ್ಟಿಕೊಳ್ಳುತ್ತಿವೆ. ಅದರಲ್ಲಿ ಹೈದ್ರಾಬಾದಿನ ವೈದ್ಯರ ಆಂಟಿಬಡಿ ಕಾಕ್ಟೇಲ್ ಟ್ರೀಟ್‌ಮೆಂಟ್‌ ಕೂಡ ಒಂದು..

ಹೈದ್ರಾಬಾದಿನ ಏಷಿಯನ್‌ ಇನ್ಸ್‌ಟಿಟ್ಯೂಟ್‌ ಆಫ್‌ ಗ್ಯಾಸ್ಟ್ರೋಂಟರಲಜಿಯ ವಿಜ್ಞಾನಿಗಳು ಈ ಚಿಕಿತ್ಸಾ ವಿಧಾನವನ್ನು ಕಂಡು ಹಿಡಿದಿದ್ದಾರೆ. ಈ ಚಿಕಿತ್ಸಾ ವಿಧಾನವು ಭಾರತದ ಡೆಲ್ಟಾ ರೂಪಾತಂರಿ ವೈರಸ್‌ ಸೋಂಕಿಗೆ ಅತ್ಯಂತ ಪರಿಣಾಮಕಾರಿ ಚಿಕಿತ್ಸೆಯಾಗಲಿದೆ ಎನ್ನಲಾಗಿದೆ. ಸುಮಾರು 40 ಜನ ಕೊರೋನಾ ಸೋಂಕಿತರಿಗೆ ಒಂದು ಡೋಸ್‌ ನಷ್ಟು ಆಂಟಿಬಡಿಗಳನ್ನೊಳಗೊಂಡ ಕಾಕ್ಟೇಲ್ ಔಷಧಿಯನ್ನು ನೀಡಿದ್ದಾರೆ. ಈ ಕಾಕ್ಟೇಲ್ ಸಮಿಶ್ರಣಗಳ ಪರಿಣಾಮವಾಗಿ ಸೋಂಕಿತರಲ್ಲಿ ಕೋವಿಡ್‌ ಲಕ್ಷಣಗಳು ವಾಸಿಯಾಗಿವೆ.  ಔಷಧಿಯನ್ನು ನೀಡಿದ 24 ಗಂಟೆಗಳಲ್ಲಿ ಸೋಂಕಿತರಲ್ಲಿನ ಜ್ವರ, ಮತ್ತು ಇತರ ಸಮಸ್ಯೆಗಳು ವಾಸಿಯಾಗಿವೆ ಎಂದು ಇನ್ಸ್ಟಿಟ್ಯೂಟ್‌ ಅಧ್ಯಕ್ಷ ಡಾ. ನಾಗೇಶ್ವರ ರೆಡ್ಡಿ ತಿಳಿಸಿದ್ದಾರೆ.

ಅಮೇರಿಕಾದಲ್ಲಿ ನಡೆದ ಅಧ್ಯಯನಗಳು ಕಾಕ್ಟೇಲ್ ಚಿಕಿತ್ಸಾ ವಿಧಾನವು ಬ್ರಿಟನ್‌ ಮತ್ತು ದಕ್ಷಿಣ ಆಫ್ರಿಕಾ ಮೂಲದ ಕೊರೊನಾ ರೂಪಾಂತರ ತಳಿಯ ಚಿಕಿತ್ಸೆಗೂ ಪರಿಣಾಮ ಬೀರಿವೆ ಎಂಬುದನ್ನು ತೋರಿಸಿವೆ.

ಮೋನೋಕ್ಲೋನಲ್‌ ಆಂಟಿಬಡಿ ಚಿಕಿತ್ಸೆ ಪಡೆದ 40 ಜನ ಸೋಂಕಿತರನ್ನು ನಾವು 1 ವಾರ ಬಿಟ್ಟು ಮತ್ತೆ ಪರೀಕ್ಷೆ ಮಾಡಿದ್ದೇವೆ. ಆರ್‌ಟಿಪಿಸಿಆರ್‌ ವಿಧಾನದಲ್ಲೂ ಪರೀಕ್ಷೆ ಮಾಡಿದ್ದೇವೆ. ಯಾರಲ್ಲೂ ಮತ್ತೆ ಸೋಂಕು ಕಾಣಿಸಿಕೊಂಡಿಲ್ಲ. ಎಲ್ಲರೂ ವಾಸಿಯಾಗಿದ್ದಾರೆ ಎಂದು ಡಾ. ನಾಗೇಶ್ವರ್‌ ರೆಡ್ಡಿ ಹೇಳುತ್ತಾರೆ.

ಇದನ್ನೂ ಓದಿ : ಕೊರೊನಾ ನಿರ್ಬಂಧಗಳನ್ನು ಮತ್ತಷ್ಟು ಸಡಿಲಿಸಿದ ದೆಹಲಿ ಸರ್ಕಾರ

ಮೋನೋಕ್ಲೋನಲ್‌ ವಿಧಾನದಲ್ಲಿ ಕೊರೋನಾ ಚಿಕಿತ್ಸೆ ಪಡೆದಿದ್ದ ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌

ಈ ಹಿಂದೆ ಅಮೇರಿಕಾದ ಅಧ್ಯಕ್ಷರಾಗಿದ್ದ ಡೊನಾಲ್ಡ್‌ ಟ್ರಂಪ್‌ ಕೂಡ ಮೋನೋಕ್ಲೋನಲ್‌ ವಿಧಾನದಲ್ಲಿಯೇ ಚಿಕಿತ್ಸೆ ಪಡೆದಿದ್ದರು. ಆ ನಂತರ ಜಗತ್ತಿನ ಅನೇಕ ದೇಶಗಳಲ್ಲಿ ಈ ಆಂಟಿಬಡಿ ಕಾಕ್ಟೇಲ್ ಚಿಕಿತ್ಸಾ ವಿಧಾನವನ್ನು ಅನುಸರಿಸಲಾಗಿತ್ತು. ಭಾರತದ ಡೆಲ್ಟಾ ವೇರಿಯೆಂಟ್‌ಗೆ ಇದುವರೆಗೆ ಈ ಮಾದರಿಯ ಚಿಕಿತ್ಸಾ ವಿಧಾನವನ್ನು ಅನುಸರಿಸಿರಲಿಲ್ಲ. ಕಾಕ್ಟೇಲ್ ಚಿಕಿತ್ಸಾ ವಿಧಾನದಿಂದ ಮೈಲ್ಡ್‌ ಹಾಗೂ ಸಾಧಾರಣವಾದ ಸೋಂಕಿನ ಲಕ್ಷಣ ಹೊಂದಿರುವ ಕೊರೋನಾ ಸೋಂಕಿತರಿಗೆ  1 ರಿಂದ 2 ದಿನಗಳಲ್ಲಿ  ಕೊರೋನಾ ಸಂಬಂಧಿ ಸಮಸ್ಯೆಯನ್ನು ವಾಸಿ ಮಾಡಬಹುದು ಎಂದು ಸಂಸ್ಥೆಯ ವೈದ್ಯರು ತಿಳಿಸಿದ್ದಾರೆ.

ಆಂಟಿಬಡಿ ಕೊಕ್‌ಟೇಲ್‌ ವಿಧಾನದಲ್ಲಿ ಕ್ಯಾಸಿರಿವಿಮಾಬ್‌ ಮತ್ತು ಇಂಡಿವಿಮ್ಯಾಬ್‌ ಔಷಧಗಳನ್ನು ಸಮ್ಮಿಶ್ರಣ ಮಾಡಿ ಮೋನೋಕ್ಲೋನಲ್‌ ಎಂಟಿಬಡಿ ಥೆರಪಿ  ಚಿಕಿತ್ಸೆಯನ್ನು ನೀಡಲಾಗುತ್ತದೆ. ಈ ಚಿಕಿತ್ಸೆಯ ಔಷಧಿಗಳ ಬೆಲೆ ಸರಿ ಸುಮಾರು 70000 ರೂಪಾಯಿಗಳಷ್ಟಾಗುತ್ತದೆ. ಅಮೇರಿಕಾದಲ್ಲಿ ಆಂಟಿ ಬಡಿ ಚಿಕಿತ್ಸೆಯ  ಖರ್ಚು ಸುಮಾರು 20000 ಡಾಲರ್‌ಗಳಷ್ಟಾಗುತ್ತದೆ. ಚಿಕಿತ್ಸೆ ವೆಚ್ಚ ದುಬಾರಿಯಾಗಿದ್ದರೂ ಜಗತ್ತಿನ ಅನೇಕ ಕಡೆ ಈ ವಿಧಾನಕ್ಕೆ ಬೇಡಿಕೆಗಳು ಹೆಚ್ಚಿವೆ. ಆದರೆ ಇದನ್ನು ಎಲ್ಲರಿಗೂ ಕೊಡಲು ಸಾಧ್ಯವಿಲ್ಲ. ಚಿಕಿತ್ಸಾ ವಿಧಾನವನ್ನು ಅತಿಯಾಗಿ ಬಳಸುವುದರಿಂದ ಇನ್ನಷ್ಟು ಹೆಚ್ಚು ಪ್ರಭಾವಶಾಲಿ ಕೊರೋನಾ ರೂಪಾಂತರಿ ತಳಿಗಳು ಹುಟ್ಟಿಕೊಳ್ಳುವ ಸಾಧ್ಯತೆ ಕೂಡ ಇರುತ್ತದೆ ಎಂದು ಡಾ. ನಾಗೇಶ್ವರ್‌ ರೆಡ್ಡಿ ತಿಳಿಸಿದ್ದಾರೆ. ಆಂಟಿ ಬಡಿ ಕಾಕ್ಟೇಲ್ ವಿಧಾನದಲ್ಲಿ ಚಿಕಿತ್ಸೆ ಪಡೆದ ರೋಗಿಗಳಿಗೆ 3 ತಿಂಗಳ ವರೆಗೆ ಕೊರೋನಾ ವ್ಯಾಕ್ಸೀನ್‌ ಪಡೆಯದಂತೆ ಸೂಚಿಸಲಾಗಿದೆ ಎಂದು ಡಾ ರೆಡ್ಡಿ ಹೇಳುತ್ತಾರೆ.

ಇದನ್ನೂ ಓದಿ : ಕೊರೋನಾಗೆ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥವಾದ ರಾಜ್ಯದ 42 ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...