Homeಮುಖಪುಟಕೋವಿಡ್‌ ಸೋಂಕಿತರಿಗೆ ಆಂಟಿಬಡಿ ಕಾಕ್ಟೇಲ್ ಟ್ರೀಟ್‌ಮೆಂಟ್

ಕೋವಿಡ್‌ ಸೋಂಕಿತರಿಗೆ ಆಂಟಿಬಡಿ ಕಾಕ್ಟೇಲ್ ಟ್ರೀಟ್‌ಮೆಂಟ್

- Advertisement -
- Advertisement -

ಕೊರೋನಾ ಸೋಂಕಿಗೆ ಬೇರೆ ಬೇರೆ ಚಿಕಿತ್ಸಾ ವಿಧಾನಗಳನ್ನು ಜಗತ್ತಿನ ಬೇರೆ ಬೇರೆ ರಾಷ್ಟ್ರಗಳಲ್ಲಿನ ವೈದ್ಯರು ಕಂಡುಕೊಂಡಿದ್ದಾರೆ. ಅಂತಹ ಒಂದು ವಿಧಾನಗಳಲ್ಲಿ ಪ್ಲಾಸ್ಮಾ ಕೂಡ ಒಂದು. ಪ್ಲಾಸ್ಮಾ ಚಿಕಿತ್ಸೆ ಸಾಕಷ್ಟು ಯಶಸ್ವಿಯಾಗದ ನಂತರ ಮೇಲೆ ಈಗ ಮತ್ತೆ ಹೊಸ ಹೊಸ ಚಿಕಿತ್ಸಾ ವಿಧಾನಗಳು ಹುಟ್ಟಿಕೊಳ್ಳುತ್ತಿವೆ. ಅದರಲ್ಲಿ ಹೈದ್ರಾಬಾದಿನ ವೈದ್ಯರ ಆಂಟಿಬಡಿ ಕಾಕ್ಟೇಲ್ ಟ್ರೀಟ್‌ಮೆಂಟ್‌ ಕೂಡ ಒಂದು..

ಹೈದ್ರಾಬಾದಿನ ಏಷಿಯನ್‌ ಇನ್ಸ್‌ಟಿಟ್ಯೂಟ್‌ ಆಫ್‌ ಗ್ಯಾಸ್ಟ್ರೋಂಟರಲಜಿಯ ವಿಜ್ಞಾನಿಗಳು ಈ ಚಿಕಿತ್ಸಾ ವಿಧಾನವನ್ನು ಕಂಡು ಹಿಡಿದಿದ್ದಾರೆ. ಈ ಚಿಕಿತ್ಸಾ ವಿಧಾನವು ಭಾರತದ ಡೆಲ್ಟಾ ರೂಪಾತಂರಿ ವೈರಸ್‌ ಸೋಂಕಿಗೆ ಅತ್ಯಂತ ಪರಿಣಾಮಕಾರಿ ಚಿಕಿತ್ಸೆಯಾಗಲಿದೆ ಎನ್ನಲಾಗಿದೆ. ಸುಮಾರು 40 ಜನ ಕೊರೋನಾ ಸೋಂಕಿತರಿಗೆ ಒಂದು ಡೋಸ್‌ ನಷ್ಟು ಆಂಟಿಬಡಿಗಳನ್ನೊಳಗೊಂಡ ಕಾಕ್ಟೇಲ್ ಔಷಧಿಯನ್ನು ನೀಡಿದ್ದಾರೆ. ಈ ಕಾಕ್ಟೇಲ್ ಸಮಿಶ್ರಣಗಳ ಪರಿಣಾಮವಾಗಿ ಸೋಂಕಿತರಲ್ಲಿ ಕೋವಿಡ್‌ ಲಕ್ಷಣಗಳು ವಾಸಿಯಾಗಿವೆ.  ಔಷಧಿಯನ್ನು ನೀಡಿದ 24 ಗಂಟೆಗಳಲ್ಲಿ ಸೋಂಕಿತರಲ್ಲಿನ ಜ್ವರ, ಮತ್ತು ಇತರ ಸಮಸ್ಯೆಗಳು ವಾಸಿಯಾಗಿವೆ ಎಂದು ಇನ್ಸ್ಟಿಟ್ಯೂಟ್‌ ಅಧ್ಯಕ್ಷ ಡಾ. ನಾಗೇಶ್ವರ ರೆಡ್ಡಿ ತಿಳಿಸಿದ್ದಾರೆ.

ಅಮೇರಿಕಾದಲ್ಲಿ ನಡೆದ ಅಧ್ಯಯನಗಳು ಕಾಕ್ಟೇಲ್ ಚಿಕಿತ್ಸಾ ವಿಧಾನವು ಬ್ರಿಟನ್‌ ಮತ್ತು ದಕ್ಷಿಣ ಆಫ್ರಿಕಾ ಮೂಲದ ಕೊರೊನಾ ರೂಪಾಂತರ ತಳಿಯ ಚಿಕಿತ್ಸೆಗೂ ಪರಿಣಾಮ ಬೀರಿವೆ ಎಂಬುದನ್ನು ತೋರಿಸಿವೆ.

ಮೋನೋಕ್ಲೋನಲ್‌ ಆಂಟಿಬಡಿ ಚಿಕಿತ್ಸೆ ಪಡೆದ 40 ಜನ ಸೋಂಕಿತರನ್ನು ನಾವು 1 ವಾರ ಬಿಟ್ಟು ಮತ್ತೆ ಪರೀಕ್ಷೆ ಮಾಡಿದ್ದೇವೆ. ಆರ್‌ಟಿಪಿಸಿಆರ್‌ ವಿಧಾನದಲ್ಲೂ ಪರೀಕ್ಷೆ ಮಾಡಿದ್ದೇವೆ. ಯಾರಲ್ಲೂ ಮತ್ತೆ ಸೋಂಕು ಕಾಣಿಸಿಕೊಂಡಿಲ್ಲ. ಎಲ್ಲರೂ ವಾಸಿಯಾಗಿದ್ದಾರೆ ಎಂದು ಡಾ. ನಾಗೇಶ್ವರ್‌ ರೆಡ್ಡಿ ಹೇಳುತ್ತಾರೆ.

ಇದನ್ನೂ ಓದಿ : ಕೊರೊನಾ ನಿರ್ಬಂಧಗಳನ್ನು ಮತ್ತಷ್ಟು ಸಡಿಲಿಸಿದ ದೆಹಲಿ ಸರ್ಕಾರ

ಮೋನೋಕ್ಲೋನಲ್‌ ವಿಧಾನದಲ್ಲಿ ಕೊರೋನಾ ಚಿಕಿತ್ಸೆ ಪಡೆದಿದ್ದ ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌

ಈ ಹಿಂದೆ ಅಮೇರಿಕಾದ ಅಧ್ಯಕ್ಷರಾಗಿದ್ದ ಡೊನಾಲ್ಡ್‌ ಟ್ರಂಪ್‌ ಕೂಡ ಮೋನೋಕ್ಲೋನಲ್‌ ವಿಧಾನದಲ್ಲಿಯೇ ಚಿಕಿತ್ಸೆ ಪಡೆದಿದ್ದರು. ಆ ನಂತರ ಜಗತ್ತಿನ ಅನೇಕ ದೇಶಗಳಲ್ಲಿ ಈ ಆಂಟಿಬಡಿ ಕಾಕ್ಟೇಲ್ ಚಿಕಿತ್ಸಾ ವಿಧಾನವನ್ನು ಅನುಸರಿಸಲಾಗಿತ್ತು. ಭಾರತದ ಡೆಲ್ಟಾ ವೇರಿಯೆಂಟ್‌ಗೆ ಇದುವರೆಗೆ ಈ ಮಾದರಿಯ ಚಿಕಿತ್ಸಾ ವಿಧಾನವನ್ನು ಅನುಸರಿಸಿರಲಿಲ್ಲ. ಕಾಕ್ಟೇಲ್ ಚಿಕಿತ್ಸಾ ವಿಧಾನದಿಂದ ಮೈಲ್ಡ್‌ ಹಾಗೂ ಸಾಧಾರಣವಾದ ಸೋಂಕಿನ ಲಕ್ಷಣ ಹೊಂದಿರುವ ಕೊರೋನಾ ಸೋಂಕಿತರಿಗೆ  1 ರಿಂದ 2 ದಿನಗಳಲ್ಲಿ  ಕೊರೋನಾ ಸಂಬಂಧಿ ಸಮಸ್ಯೆಯನ್ನು ವಾಸಿ ಮಾಡಬಹುದು ಎಂದು ಸಂಸ್ಥೆಯ ವೈದ್ಯರು ತಿಳಿಸಿದ್ದಾರೆ.

ಆಂಟಿಬಡಿ ಕೊಕ್‌ಟೇಲ್‌ ವಿಧಾನದಲ್ಲಿ ಕ್ಯಾಸಿರಿವಿಮಾಬ್‌ ಮತ್ತು ಇಂಡಿವಿಮ್ಯಾಬ್‌ ಔಷಧಗಳನ್ನು ಸಮ್ಮಿಶ್ರಣ ಮಾಡಿ ಮೋನೋಕ್ಲೋನಲ್‌ ಎಂಟಿಬಡಿ ಥೆರಪಿ  ಚಿಕಿತ್ಸೆಯನ್ನು ನೀಡಲಾಗುತ್ತದೆ. ಈ ಚಿಕಿತ್ಸೆಯ ಔಷಧಿಗಳ ಬೆಲೆ ಸರಿ ಸುಮಾರು 70000 ರೂಪಾಯಿಗಳಷ್ಟಾಗುತ್ತದೆ. ಅಮೇರಿಕಾದಲ್ಲಿ ಆಂಟಿ ಬಡಿ ಚಿಕಿತ್ಸೆಯ  ಖರ್ಚು ಸುಮಾರು 20000 ಡಾಲರ್‌ಗಳಷ್ಟಾಗುತ್ತದೆ. ಚಿಕಿತ್ಸೆ ವೆಚ್ಚ ದುಬಾರಿಯಾಗಿದ್ದರೂ ಜಗತ್ತಿನ ಅನೇಕ ಕಡೆ ಈ ವಿಧಾನಕ್ಕೆ ಬೇಡಿಕೆಗಳು ಹೆಚ್ಚಿವೆ. ಆದರೆ ಇದನ್ನು ಎಲ್ಲರಿಗೂ ಕೊಡಲು ಸಾಧ್ಯವಿಲ್ಲ. ಚಿಕಿತ್ಸಾ ವಿಧಾನವನ್ನು ಅತಿಯಾಗಿ ಬಳಸುವುದರಿಂದ ಇನ್ನಷ್ಟು ಹೆಚ್ಚು ಪ್ರಭಾವಶಾಲಿ ಕೊರೋನಾ ರೂಪಾಂತರಿ ತಳಿಗಳು ಹುಟ್ಟಿಕೊಳ್ಳುವ ಸಾಧ್ಯತೆ ಕೂಡ ಇರುತ್ತದೆ ಎಂದು ಡಾ. ನಾಗೇಶ್ವರ್‌ ರೆಡ್ಡಿ ತಿಳಿಸಿದ್ದಾರೆ. ಆಂಟಿ ಬಡಿ ಕಾಕ್ಟೇಲ್ ವಿಧಾನದಲ್ಲಿ ಚಿಕಿತ್ಸೆ ಪಡೆದ ರೋಗಿಗಳಿಗೆ 3 ತಿಂಗಳ ವರೆಗೆ ಕೊರೋನಾ ವ್ಯಾಕ್ಸೀನ್‌ ಪಡೆಯದಂತೆ ಸೂಚಿಸಲಾಗಿದೆ ಎಂದು ಡಾ ರೆಡ್ಡಿ ಹೇಳುತ್ತಾರೆ.

ಇದನ್ನೂ ಓದಿ : ಕೊರೋನಾಗೆ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥವಾದ ರಾಜ್ಯದ 42 ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...