Homeಮುಖಪುಟಕೋವಿಡ್‌ ಸೋಂಕಿತರಿಗೆ ಆಂಟಿಬಡಿ ಕಾಕ್ಟೇಲ್ ಟ್ರೀಟ್‌ಮೆಂಟ್

ಕೋವಿಡ್‌ ಸೋಂಕಿತರಿಗೆ ಆಂಟಿಬಡಿ ಕಾಕ್ಟೇಲ್ ಟ್ರೀಟ್‌ಮೆಂಟ್

- Advertisement -
- Advertisement -

ಕೊರೋನಾ ಸೋಂಕಿಗೆ ಬೇರೆ ಬೇರೆ ಚಿಕಿತ್ಸಾ ವಿಧಾನಗಳನ್ನು ಜಗತ್ತಿನ ಬೇರೆ ಬೇರೆ ರಾಷ್ಟ್ರಗಳಲ್ಲಿನ ವೈದ್ಯರು ಕಂಡುಕೊಂಡಿದ್ದಾರೆ. ಅಂತಹ ಒಂದು ವಿಧಾನಗಳಲ್ಲಿ ಪ್ಲಾಸ್ಮಾ ಕೂಡ ಒಂದು. ಪ್ಲಾಸ್ಮಾ ಚಿಕಿತ್ಸೆ ಸಾಕಷ್ಟು ಯಶಸ್ವಿಯಾಗದ ನಂತರ ಮೇಲೆ ಈಗ ಮತ್ತೆ ಹೊಸ ಹೊಸ ಚಿಕಿತ್ಸಾ ವಿಧಾನಗಳು ಹುಟ್ಟಿಕೊಳ್ಳುತ್ತಿವೆ. ಅದರಲ್ಲಿ ಹೈದ್ರಾಬಾದಿನ ವೈದ್ಯರ ಆಂಟಿಬಡಿ ಕಾಕ್ಟೇಲ್ ಟ್ರೀಟ್‌ಮೆಂಟ್‌ ಕೂಡ ಒಂದು..

ಹೈದ್ರಾಬಾದಿನ ಏಷಿಯನ್‌ ಇನ್ಸ್‌ಟಿಟ್ಯೂಟ್‌ ಆಫ್‌ ಗ್ಯಾಸ್ಟ್ರೋಂಟರಲಜಿಯ ವಿಜ್ಞಾನಿಗಳು ಈ ಚಿಕಿತ್ಸಾ ವಿಧಾನವನ್ನು ಕಂಡು ಹಿಡಿದಿದ್ದಾರೆ. ಈ ಚಿಕಿತ್ಸಾ ವಿಧಾನವು ಭಾರತದ ಡೆಲ್ಟಾ ರೂಪಾತಂರಿ ವೈರಸ್‌ ಸೋಂಕಿಗೆ ಅತ್ಯಂತ ಪರಿಣಾಮಕಾರಿ ಚಿಕಿತ್ಸೆಯಾಗಲಿದೆ ಎನ್ನಲಾಗಿದೆ. ಸುಮಾರು 40 ಜನ ಕೊರೋನಾ ಸೋಂಕಿತರಿಗೆ ಒಂದು ಡೋಸ್‌ ನಷ್ಟು ಆಂಟಿಬಡಿಗಳನ್ನೊಳಗೊಂಡ ಕಾಕ್ಟೇಲ್ ಔಷಧಿಯನ್ನು ನೀಡಿದ್ದಾರೆ. ಈ ಕಾಕ್ಟೇಲ್ ಸಮಿಶ್ರಣಗಳ ಪರಿಣಾಮವಾಗಿ ಸೋಂಕಿತರಲ್ಲಿ ಕೋವಿಡ್‌ ಲಕ್ಷಣಗಳು ವಾಸಿಯಾಗಿವೆ.  ಔಷಧಿಯನ್ನು ನೀಡಿದ 24 ಗಂಟೆಗಳಲ್ಲಿ ಸೋಂಕಿತರಲ್ಲಿನ ಜ್ವರ, ಮತ್ತು ಇತರ ಸಮಸ್ಯೆಗಳು ವಾಸಿಯಾಗಿವೆ ಎಂದು ಇನ್ಸ್ಟಿಟ್ಯೂಟ್‌ ಅಧ್ಯಕ್ಷ ಡಾ. ನಾಗೇಶ್ವರ ರೆಡ್ಡಿ ತಿಳಿಸಿದ್ದಾರೆ.

ಅಮೇರಿಕಾದಲ್ಲಿ ನಡೆದ ಅಧ್ಯಯನಗಳು ಕಾಕ್ಟೇಲ್ ಚಿಕಿತ್ಸಾ ವಿಧಾನವು ಬ್ರಿಟನ್‌ ಮತ್ತು ದಕ್ಷಿಣ ಆಫ್ರಿಕಾ ಮೂಲದ ಕೊರೊನಾ ರೂಪಾಂತರ ತಳಿಯ ಚಿಕಿತ್ಸೆಗೂ ಪರಿಣಾಮ ಬೀರಿವೆ ಎಂಬುದನ್ನು ತೋರಿಸಿವೆ.

ಮೋನೋಕ್ಲೋನಲ್‌ ಆಂಟಿಬಡಿ ಚಿಕಿತ್ಸೆ ಪಡೆದ 40 ಜನ ಸೋಂಕಿತರನ್ನು ನಾವು 1 ವಾರ ಬಿಟ್ಟು ಮತ್ತೆ ಪರೀಕ್ಷೆ ಮಾಡಿದ್ದೇವೆ. ಆರ್‌ಟಿಪಿಸಿಆರ್‌ ವಿಧಾನದಲ್ಲೂ ಪರೀಕ್ಷೆ ಮಾಡಿದ್ದೇವೆ. ಯಾರಲ್ಲೂ ಮತ್ತೆ ಸೋಂಕು ಕಾಣಿಸಿಕೊಂಡಿಲ್ಲ. ಎಲ್ಲರೂ ವಾಸಿಯಾಗಿದ್ದಾರೆ ಎಂದು ಡಾ. ನಾಗೇಶ್ವರ್‌ ರೆಡ್ಡಿ ಹೇಳುತ್ತಾರೆ.

ಇದನ್ನೂ ಓದಿ : ಕೊರೊನಾ ನಿರ್ಬಂಧಗಳನ್ನು ಮತ್ತಷ್ಟು ಸಡಿಲಿಸಿದ ದೆಹಲಿ ಸರ್ಕಾರ

ಮೋನೋಕ್ಲೋನಲ್‌ ವಿಧಾನದಲ್ಲಿ ಕೊರೋನಾ ಚಿಕಿತ್ಸೆ ಪಡೆದಿದ್ದ ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌

ಈ ಹಿಂದೆ ಅಮೇರಿಕಾದ ಅಧ್ಯಕ್ಷರಾಗಿದ್ದ ಡೊನಾಲ್ಡ್‌ ಟ್ರಂಪ್‌ ಕೂಡ ಮೋನೋಕ್ಲೋನಲ್‌ ವಿಧಾನದಲ್ಲಿಯೇ ಚಿಕಿತ್ಸೆ ಪಡೆದಿದ್ದರು. ಆ ನಂತರ ಜಗತ್ತಿನ ಅನೇಕ ದೇಶಗಳಲ್ಲಿ ಈ ಆಂಟಿಬಡಿ ಕಾಕ್ಟೇಲ್ ಚಿಕಿತ್ಸಾ ವಿಧಾನವನ್ನು ಅನುಸರಿಸಲಾಗಿತ್ತು. ಭಾರತದ ಡೆಲ್ಟಾ ವೇರಿಯೆಂಟ್‌ಗೆ ಇದುವರೆಗೆ ಈ ಮಾದರಿಯ ಚಿಕಿತ್ಸಾ ವಿಧಾನವನ್ನು ಅನುಸರಿಸಿರಲಿಲ್ಲ. ಕಾಕ್ಟೇಲ್ ಚಿಕಿತ್ಸಾ ವಿಧಾನದಿಂದ ಮೈಲ್ಡ್‌ ಹಾಗೂ ಸಾಧಾರಣವಾದ ಸೋಂಕಿನ ಲಕ್ಷಣ ಹೊಂದಿರುವ ಕೊರೋನಾ ಸೋಂಕಿತರಿಗೆ  1 ರಿಂದ 2 ದಿನಗಳಲ್ಲಿ  ಕೊರೋನಾ ಸಂಬಂಧಿ ಸಮಸ್ಯೆಯನ್ನು ವಾಸಿ ಮಾಡಬಹುದು ಎಂದು ಸಂಸ್ಥೆಯ ವೈದ್ಯರು ತಿಳಿಸಿದ್ದಾರೆ.

ಆಂಟಿಬಡಿ ಕೊಕ್‌ಟೇಲ್‌ ವಿಧಾನದಲ್ಲಿ ಕ್ಯಾಸಿರಿವಿಮಾಬ್‌ ಮತ್ತು ಇಂಡಿವಿಮ್ಯಾಬ್‌ ಔಷಧಗಳನ್ನು ಸಮ್ಮಿಶ್ರಣ ಮಾಡಿ ಮೋನೋಕ್ಲೋನಲ್‌ ಎಂಟಿಬಡಿ ಥೆರಪಿ  ಚಿಕಿತ್ಸೆಯನ್ನು ನೀಡಲಾಗುತ್ತದೆ. ಈ ಚಿಕಿತ್ಸೆಯ ಔಷಧಿಗಳ ಬೆಲೆ ಸರಿ ಸುಮಾರು 70000 ರೂಪಾಯಿಗಳಷ್ಟಾಗುತ್ತದೆ. ಅಮೇರಿಕಾದಲ್ಲಿ ಆಂಟಿ ಬಡಿ ಚಿಕಿತ್ಸೆಯ  ಖರ್ಚು ಸುಮಾರು 20000 ಡಾಲರ್‌ಗಳಷ್ಟಾಗುತ್ತದೆ. ಚಿಕಿತ್ಸೆ ವೆಚ್ಚ ದುಬಾರಿಯಾಗಿದ್ದರೂ ಜಗತ್ತಿನ ಅನೇಕ ಕಡೆ ಈ ವಿಧಾನಕ್ಕೆ ಬೇಡಿಕೆಗಳು ಹೆಚ್ಚಿವೆ. ಆದರೆ ಇದನ್ನು ಎಲ್ಲರಿಗೂ ಕೊಡಲು ಸಾಧ್ಯವಿಲ್ಲ. ಚಿಕಿತ್ಸಾ ವಿಧಾನವನ್ನು ಅತಿಯಾಗಿ ಬಳಸುವುದರಿಂದ ಇನ್ನಷ್ಟು ಹೆಚ್ಚು ಪ್ರಭಾವಶಾಲಿ ಕೊರೋನಾ ರೂಪಾಂತರಿ ತಳಿಗಳು ಹುಟ್ಟಿಕೊಳ್ಳುವ ಸಾಧ್ಯತೆ ಕೂಡ ಇರುತ್ತದೆ ಎಂದು ಡಾ. ನಾಗೇಶ್ವರ್‌ ರೆಡ್ಡಿ ತಿಳಿಸಿದ್ದಾರೆ. ಆಂಟಿ ಬಡಿ ಕಾಕ್ಟೇಲ್ ವಿಧಾನದಲ್ಲಿ ಚಿಕಿತ್ಸೆ ಪಡೆದ ರೋಗಿಗಳಿಗೆ 3 ತಿಂಗಳ ವರೆಗೆ ಕೊರೋನಾ ವ್ಯಾಕ್ಸೀನ್‌ ಪಡೆಯದಂತೆ ಸೂಚಿಸಲಾಗಿದೆ ಎಂದು ಡಾ ರೆಡ್ಡಿ ಹೇಳುತ್ತಾರೆ.

ಇದನ್ನೂ ಓದಿ : ಕೊರೋನಾಗೆ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥವಾದ ರಾಜ್ಯದ 42 ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...