Homeಮುಖಪುಟಕೋವಿಡ್‌ ಸೋಂಕಿತರಿಗೆ ಆಂಟಿಬಡಿ ಕಾಕ್ಟೇಲ್ ಟ್ರೀಟ್‌ಮೆಂಟ್

ಕೋವಿಡ್‌ ಸೋಂಕಿತರಿಗೆ ಆಂಟಿಬಡಿ ಕಾಕ್ಟೇಲ್ ಟ್ರೀಟ್‌ಮೆಂಟ್

- Advertisement -
- Advertisement -

ಕೊರೋನಾ ಸೋಂಕಿಗೆ ಬೇರೆ ಬೇರೆ ಚಿಕಿತ್ಸಾ ವಿಧಾನಗಳನ್ನು ಜಗತ್ತಿನ ಬೇರೆ ಬೇರೆ ರಾಷ್ಟ್ರಗಳಲ್ಲಿನ ವೈದ್ಯರು ಕಂಡುಕೊಂಡಿದ್ದಾರೆ. ಅಂತಹ ಒಂದು ವಿಧಾನಗಳಲ್ಲಿ ಪ್ಲಾಸ್ಮಾ ಕೂಡ ಒಂದು. ಪ್ಲಾಸ್ಮಾ ಚಿಕಿತ್ಸೆ ಸಾಕಷ್ಟು ಯಶಸ್ವಿಯಾಗದ ನಂತರ ಮೇಲೆ ಈಗ ಮತ್ತೆ ಹೊಸ ಹೊಸ ಚಿಕಿತ್ಸಾ ವಿಧಾನಗಳು ಹುಟ್ಟಿಕೊಳ್ಳುತ್ತಿವೆ. ಅದರಲ್ಲಿ ಹೈದ್ರಾಬಾದಿನ ವೈದ್ಯರ ಆಂಟಿಬಡಿ ಕಾಕ್ಟೇಲ್ ಟ್ರೀಟ್‌ಮೆಂಟ್‌ ಕೂಡ ಒಂದು..

ಹೈದ್ರಾಬಾದಿನ ಏಷಿಯನ್‌ ಇನ್ಸ್‌ಟಿಟ್ಯೂಟ್‌ ಆಫ್‌ ಗ್ಯಾಸ್ಟ್ರೋಂಟರಲಜಿಯ ವಿಜ್ಞಾನಿಗಳು ಈ ಚಿಕಿತ್ಸಾ ವಿಧಾನವನ್ನು ಕಂಡು ಹಿಡಿದಿದ್ದಾರೆ. ಈ ಚಿಕಿತ್ಸಾ ವಿಧಾನವು ಭಾರತದ ಡೆಲ್ಟಾ ರೂಪಾತಂರಿ ವೈರಸ್‌ ಸೋಂಕಿಗೆ ಅತ್ಯಂತ ಪರಿಣಾಮಕಾರಿ ಚಿಕಿತ್ಸೆಯಾಗಲಿದೆ ಎನ್ನಲಾಗಿದೆ. ಸುಮಾರು 40 ಜನ ಕೊರೋನಾ ಸೋಂಕಿತರಿಗೆ ಒಂದು ಡೋಸ್‌ ನಷ್ಟು ಆಂಟಿಬಡಿಗಳನ್ನೊಳಗೊಂಡ ಕಾಕ್ಟೇಲ್ ಔಷಧಿಯನ್ನು ನೀಡಿದ್ದಾರೆ. ಈ ಕಾಕ್ಟೇಲ್ ಸಮಿಶ್ರಣಗಳ ಪರಿಣಾಮವಾಗಿ ಸೋಂಕಿತರಲ್ಲಿ ಕೋವಿಡ್‌ ಲಕ್ಷಣಗಳು ವಾಸಿಯಾಗಿವೆ.  ಔಷಧಿಯನ್ನು ನೀಡಿದ 24 ಗಂಟೆಗಳಲ್ಲಿ ಸೋಂಕಿತರಲ್ಲಿನ ಜ್ವರ, ಮತ್ತು ಇತರ ಸಮಸ್ಯೆಗಳು ವಾಸಿಯಾಗಿವೆ ಎಂದು ಇನ್ಸ್ಟಿಟ್ಯೂಟ್‌ ಅಧ್ಯಕ್ಷ ಡಾ. ನಾಗೇಶ್ವರ ರೆಡ್ಡಿ ತಿಳಿಸಿದ್ದಾರೆ.

ಅಮೇರಿಕಾದಲ್ಲಿ ನಡೆದ ಅಧ್ಯಯನಗಳು ಕಾಕ್ಟೇಲ್ ಚಿಕಿತ್ಸಾ ವಿಧಾನವು ಬ್ರಿಟನ್‌ ಮತ್ತು ದಕ್ಷಿಣ ಆಫ್ರಿಕಾ ಮೂಲದ ಕೊರೊನಾ ರೂಪಾಂತರ ತಳಿಯ ಚಿಕಿತ್ಸೆಗೂ ಪರಿಣಾಮ ಬೀರಿವೆ ಎಂಬುದನ್ನು ತೋರಿಸಿವೆ.

ಮೋನೋಕ್ಲೋನಲ್‌ ಆಂಟಿಬಡಿ ಚಿಕಿತ್ಸೆ ಪಡೆದ 40 ಜನ ಸೋಂಕಿತರನ್ನು ನಾವು 1 ವಾರ ಬಿಟ್ಟು ಮತ್ತೆ ಪರೀಕ್ಷೆ ಮಾಡಿದ್ದೇವೆ. ಆರ್‌ಟಿಪಿಸಿಆರ್‌ ವಿಧಾನದಲ್ಲೂ ಪರೀಕ್ಷೆ ಮಾಡಿದ್ದೇವೆ. ಯಾರಲ್ಲೂ ಮತ್ತೆ ಸೋಂಕು ಕಾಣಿಸಿಕೊಂಡಿಲ್ಲ. ಎಲ್ಲರೂ ವಾಸಿಯಾಗಿದ್ದಾರೆ ಎಂದು ಡಾ. ನಾಗೇಶ್ವರ್‌ ರೆಡ್ಡಿ ಹೇಳುತ್ತಾರೆ.

ಇದನ್ನೂ ಓದಿ : ಕೊರೊನಾ ನಿರ್ಬಂಧಗಳನ್ನು ಮತ್ತಷ್ಟು ಸಡಿಲಿಸಿದ ದೆಹಲಿ ಸರ್ಕಾರ

ಮೋನೋಕ್ಲೋನಲ್‌ ವಿಧಾನದಲ್ಲಿ ಕೊರೋನಾ ಚಿಕಿತ್ಸೆ ಪಡೆದಿದ್ದ ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌

ಈ ಹಿಂದೆ ಅಮೇರಿಕಾದ ಅಧ್ಯಕ್ಷರಾಗಿದ್ದ ಡೊನಾಲ್ಡ್‌ ಟ್ರಂಪ್‌ ಕೂಡ ಮೋನೋಕ್ಲೋನಲ್‌ ವಿಧಾನದಲ್ಲಿಯೇ ಚಿಕಿತ್ಸೆ ಪಡೆದಿದ್ದರು. ಆ ನಂತರ ಜಗತ್ತಿನ ಅನೇಕ ದೇಶಗಳಲ್ಲಿ ಈ ಆಂಟಿಬಡಿ ಕಾಕ್ಟೇಲ್ ಚಿಕಿತ್ಸಾ ವಿಧಾನವನ್ನು ಅನುಸರಿಸಲಾಗಿತ್ತು. ಭಾರತದ ಡೆಲ್ಟಾ ವೇರಿಯೆಂಟ್‌ಗೆ ಇದುವರೆಗೆ ಈ ಮಾದರಿಯ ಚಿಕಿತ್ಸಾ ವಿಧಾನವನ್ನು ಅನುಸರಿಸಿರಲಿಲ್ಲ. ಕಾಕ್ಟೇಲ್ ಚಿಕಿತ್ಸಾ ವಿಧಾನದಿಂದ ಮೈಲ್ಡ್‌ ಹಾಗೂ ಸಾಧಾರಣವಾದ ಸೋಂಕಿನ ಲಕ್ಷಣ ಹೊಂದಿರುವ ಕೊರೋನಾ ಸೋಂಕಿತರಿಗೆ  1 ರಿಂದ 2 ದಿನಗಳಲ್ಲಿ  ಕೊರೋನಾ ಸಂಬಂಧಿ ಸಮಸ್ಯೆಯನ್ನು ವಾಸಿ ಮಾಡಬಹುದು ಎಂದು ಸಂಸ್ಥೆಯ ವೈದ್ಯರು ತಿಳಿಸಿದ್ದಾರೆ.

ಆಂಟಿಬಡಿ ಕೊಕ್‌ಟೇಲ್‌ ವಿಧಾನದಲ್ಲಿ ಕ್ಯಾಸಿರಿವಿಮಾಬ್‌ ಮತ್ತು ಇಂಡಿವಿಮ್ಯಾಬ್‌ ಔಷಧಗಳನ್ನು ಸಮ್ಮಿಶ್ರಣ ಮಾಡಿ ಮೋನೋಕ್ಲೋನಲ್‌ ಎಂಟಿಬಡಿ ಥೆರಪಿ  ಚಿಕಿತ್ಸೆಯನ್ನು ನೀಡಲಾಗುತ್ತದೆ. ಈ ಚಿಕಿತ್ಸೆಯ ಔಷಧಿಗಳ ಬೆಲೆ ಸರಿ ಸುಮಾರು 70000 ರೂಪಾಯಿಗಳಷ್ಟಾಗುತ್ತದೆ. ಅಮೇರಿಕಾದಲ್ಲಿ ಆಂಟಿ ಬಡಿ ಚಿಕಿತ್ಸೆಯ  ಖರ್ಚು ಸುಮಾರು 20000 ಡಾಲರ್‌ಗಳಷ್ಟಾಗುತ್ತದೆ. ಚಿಕಿತ್ಸೆ ವೆಚ್ಚ ದುಬಾರಿಯಾಗಿದ್ದರೂ ಜಗತ್ತಿನ ಅನೇಕ ಕಡೆ ಈ ವಿಧಾನಕ್ಕೆ ಬೇಡಿಕೆಗಳು ಹೆಚ್ಚಿವೆ. ಆದರೆ ಇದನ್ನು ಎಲ್ಲರಿಗೂ ಕೊಡಲು ಸಾಧ್ಯವಿಲ್ಲ. ಚಿಕಿತ್ಸಾ ವಿಧಾನವನ್ನು ಅತಿಯಾಗಿ ಬಳಸುವುದರಿಂದ ಇನ್ನಷ್ಟು ಹೆಚ್ಚು ಪ್ರಭಾವಶಾಲಿ ಕೊರೋನಾ ರೂಪಾಂತರಿ ತಳಿಗಳು ಹುಟ್ಟಿಕೊಳ್ಳುವ ಸಾಧ್ಯತೆ ಕೂಡ ಇರುತ್ತದೆ ಎಂದು ಡಾ. ನಾಗೇಶ್ವರ್‌ ರೆಡ್ಡಿ ತಿಳಿಸಿದ್ದಾರೆ. ಆಂಟಿ ಬಡಿ ಕಾಕ್ಟೇಲ್ ವಿಧಾನದಲ್ಲಿ ಚಿಕಿತ್ಸೆ ಪಡೆದ ರೋಗಿಗಳಿಗೆ 3 ತಿಂಗಳ ವರೆಗೆ ಕೊರೋನಾ ವ್ಯಾಕ್ಸೀನ್‌ ಪಡೆಯದಂತೆ ಸೂಚಿಸಲಾಗಿದೆ ಎಂದು ಡಾ ರೆಡ್ಡಿ ಹೇಳುತ್ತಾರೆ.

ಇದನ್ನೂ ಓದಿ : ಕೊರೋನಾಗೆ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥವಾದ ರಾಜ್ಯದ 42 ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....