Homeಮುಖಪುಟಕೋವಿಡ್‌ ಸೋಂಕಿತರಿಗೆ ಆಂಟಿಬಡಿ ಕಾಕ್ಟೇಲ್ ಟ್ರೀಟ್‌ಮೆಂಟ್

ಕೋವಿಡ್‌ ಸೋಂಕಿತರಿಗೆ ಆಂಟಿಬಡಿ ಕಾಕ್ಟೇಲ್ ಟ್ರೀಟ್‌ಮೆಂಟ್

- Advertisement -
- Advertisement -

ಕೊರೋನಾ ಸೋಂಕಿಗೆ ಬೇರೆ ಬೇರೆ ಚಿಕಿತ್ಸಾ ವಿಧಾನಗಳನ್ನು ಜಗತ್ತಿನ ಬೇರೆ ಬೇರೆ ರಾಷ್ಟ್ರಗಳಲ್ಲಿನ ವೈದ್ಯರು ಕಂಡುಕೊಂಡಿದ್ದಾರೆ. ಅಂತಹ ಒಂದು ವಿಧಾನಗಳಲ್ಲಿ ಪ್ಲಾಸ್ಮಾ ಕೂಡ ಒಂದು. ಪ್ಲಾಸ್ಮಾ ಚಿಕಿತ್ಸೆ ಸಾಕಷ್ಟು ಯಶಸ್ವಿಯಾಗದ ನಂತರ ಮೇಲೆ ಈಗ ಮತ್ತೆ ಹೊಸ ಹೊಸ ಚಿಕಿತ್ಸಾ ವಿಧಾನಗಳು ಹುಟ್ಟಿಕೊಳ್ಳುತ್ತಿವೆ. ಅದರಲ್ಲಿ ಹೈದ್ರಾಬಾದಿನ ವೈದ್ಯರ ಆಂಟಿಬಡಿ ಕಾಕ್ಟೇಲ್ ಟ್ರೀಟ್‌ಮೆಂಟ್‌ ಕೂಡ ಒಂದು..

ಹೈದ್ರಾಬಾದಿನ ಏಷಿಯನ್‌ ಇನ್ಸ್‌ಟಿಟ್ಯೂಟ್‌ ಆಫ್‌ ಗ್ಯಾಸ್ಟ್ರೋಂಟರಲಜಿಯ ವಿಜ್ಞಾನಿಗಳು ಈ ಚಿಕಿತ್ಸಾ ವಿಧಾನವನ್ನು ಕಂಡು ಹಿಡಿದಿದ್ದಾರೆ. ಈ ಚಿಕಿತ್ಸಾ ವಿಧಾನವು ಭಾರತದ ಡೆಲ್ಟಾ ರೂಪಾತಂರಿ ವೈರಸ್‌ ಸೋಂಕಿಗೆ ಅತ್ಯಂತ ಪರಿಣಾಮಕಾರಿ ಚಿಕಿತ್ಸೆಯಾಗಲಿದೆ ಎನ್ನಲಾಗಿದೆ. ಸುಮಾರು 40 ಜನ ಕೊರೋನಾ ಸೋಂಕಿತರಿಗೆ ಒಂದು ಡೋಸ್‌ ನಷ್ಟು ಆಂಟಿಬಡಿಗಳನ್ನೊಳಗೊಂಡ ಕಾಕ್ಟೇಲ್ ಔಷಧಿಯನ್ನು ನೀಡಿದ್ದಾರೆ. ಈ ಕಾಕ್ಟೇಲ್ ಸಮಿಶ್ರಣಗಳ ಪರಿಣಾಮವಾಗಿ ಸೋಂಕಿತರಲ್ಲಿ ಕೋವಿಡ್‌ ಲಕ್ಷಣಗಳು ವಾಸಿಯಾಗಿವೆ.  ಔಷಧಿಯನ್ನು ನೀಡಿದ 24 ಗಂಟೆಗಳಲ್ಲಿ ಸೋಂಕಿತರಲ್ಲಿನ ಜ್ವರ, ಮತ್ತು ಇತರ ಸಮಸ್ಯೆಗಳು ವಾಸಿಯಾಗಿವೆ ಎಂದು ಇನ್ಸ್ಟಿಟ್ಯೂಟ್‌ ಅಧ್ಯಕ್ಷ ಡಾ. ನಾಗೇಶ್ವರ ರೆಡ್ಡಿ ತಿಳಿಸಿದ್ದಾರೆ.

ಅಮೇರಿಕಾದಲ್ಲಿ ನಡೆದ ಅಧ್ಯಯನಗಳು ಕಾಕ್ಟೇಲ್ ಚಿಕಿತ್ಸಾ ವಿಧಾನವು ಬ್ರಿಟನ್‌ ಮತ್ತು ದಕ್ಷಿಣ ಆಫ್ರಿಕಾ ಮೂಲದ ಕೊರೊನಾ ರೂಪಾಂತರ ತಳಿಯ ಚಿಕಿತ್ಸೆಗೂ ಪರಿಣಾಮ ಬೀರಿವೆ ಎಂಬುದನ್ನು ತೋರಿಸಿವೆ.

ಮೋನೋಕ್ಲೋನಲ್‌ ಆಂಟಿಬಡಿ ಚಿಕಿತ್ಸೆ ಪಡೆದ 40 ಜನ ಸೋಂಕಿತರನ್ನು ನಾವು 1 ವಾರ ಬಿಟ್ಟು ಮತ್ತೆ ಪರೀಕ್ಷೆ ಮಾಡಿದ್ದೇವೆ. ಆರ್‌ಟಿಪಿಸಿಆರ್‌ ವಿಧಾನದಲ್ಲೂ ಪರೀಕ್ಷೆ ಮಾಡಿದ್ದೇವೆ. ಯಾರಲ್ಲೂ ಮತ್ತೆ ಸೋಂಕು ಕಾಣಿಸಿಕೊಂಡಿಲ್ಲ. ಎಲ್ಲರೂ ವಾಸಿಯಾಗಿದ್ದಾರೆ ಎಂದು ಡಾ. ನಾಗೇಶ್ವರ್‌ ರೆಡ್ಡಿ ಹೇಳುತ್ತಾರೆ.

ಇದನ್ನೂ ಓದಿ : ಕೊರೊನಾ ನಿರ್ಬಂಧಗಳನ್ನು ಮತ್ತಷ್ಟು ಸಡಿಲಿಸಿದ ದೆಹಲಿ ಸರ್ಕಾರ

ಮೋನೋಕ್ಲೋನಲ್‌ ವಿಧಾನದಲ್ಲಿ ಕೊರೋನಾ ಚಿಕಿತ್ಸೆ ಪಡೆದಿದ್ದ ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌

ಈ ಹಿಂದೆ ಅಮೇರಿಕಾದ ಅಧ್ಯಕ್ಷರಾಗಿದ್ದ ಡೊನಾಲ್ಡ್‌ ಟ್ರಂಪ್‌ ಕೂಡ ಮೋನೋಕ್ಲೋನಲ್‌ ವಿಧಾನದಲ್ಲಿಯೇ ಚಿಕಿತ್ಸೆ ಪಡೆದಿದ್ದರು. ಆ ನಂತರ ಜಗತ್ತಿನ ಅನೇಕ ದೇಶಗಳಲ್ಲಿ ಈ ಆಂಟಿಬಡಿ ಕಾಕ್ಟೇಲ್ ಚಿಕಿತ್ಸಾ ವಿಧಾನವನ್ನು ಅನುಸರಿಸಲಾಗಿತ್ತು. ಭಾರತದ ಡೆಲ್ಟಾ ವೇರಿಯೆಂಟ್‌ಗೆ ಇದುವರೆಗೆ ಈ ಮಾದರಿಯ ಚಿಕಿತ್ಸಾ ವಿಧಾನವನ್ನು ಅನುಸರಿಸಿರಲಿಲ್ಲ. ಕಾಕ್ಟೇಲ್ ಚಿಕಿತ್ಸಾ ವಿಧಾನದಿಂದ ಮೈಲ್ಡ್‌ ಹಾಗೂ ಸಾಧಾರಣವಾದ ಸೋಂಕಿನ ಲಕ್ಷಣ ಹೊಂದಿರುವ ಕೊರೋನಾ ಸೋಂಕಿತರಿಗೆ  1 ರಿಂದ 2 ದಿನಗಳಲ್ಲಿ  ಕೊರೋನಾ ಸಂಬಂಧಿ ಸಮಸ್ಯೆಯನ್ನು ವಾಸಿ ಮಾಡಬಹುದು ಎಂದು ಸಂಸ್ಥೆಯ ವೈದ್ಯರು ತಿಳಿಸಿದ್ದಾರೆ.

ಆಂಟಿಬಡಿ ಕೊಕ್‌ಟೇಲ್‌ ವಿಧಾನದಲ್ಲಿ ಕ್ಯಾಸಿರಿವಿಮಾಬ್‌ ಮತ್ತು ಇಂಡಿವಿಮ್ಯಾಬ್‌ ಔಷಧಗಳನ್ನು ಸಮ್ಮಿಶ್ರಣ ಮಾಡಿ ಮೋನೋಕ್ಲೋನಲ್‌ ಎಂಟಿಬಡಿ ಥೆರಪಿ  ಚಿಕಿತ್ಸೆಯನ್ನು ನೀಡಲಾಗುತ್ತದೆ. ಈ ಚಿಕಿತ್ಸೆಯ ಔಷಧಿಗಳ ಬೆಲೆ ಸರಿ ಸುಮಾರು 70000 ರೂಪಾಯಿಗಳಷ್ಟಾಗುತ್ತದೆ. ಅಮೇರಿಕಾದಲ್ಲಿ ಆಂಟಿ ಬಡಿ ಚಿಕಿತ್ಸೆಯ  ಖರ್ಚು ಸುಮಾರು 20000 ಡಾಲರ್‌ಗಳಷ್ಟಾಗುತ್ತದೆ. ಚಿಕಿತ್ಸೆ ವೆಚ್ಚ ದುಬಾರಿಯಾಗಿದ್ದರೂ ಜಗತ್ತಿನ ಅನೇಕ ಕಡೆ ಈ ವಿಧಾನಕ್ಕೆ ಬೇಡಿಕೆಗಳು ಹೆಚ್ಚಿವೆ. ಆದರೆ ಇದನ್ನು ಎಲ್ಲರಿಗೂ ಕೊಡಲು ಸಾಧ್ಯವಿಲ್ಲ. ಚಿಕಿತ್ಸಾ ವಿಧಾನವನ್ನು ಅತಿಯಾಗಿ ಬಳಸುವುದರಿಂದ ಇನ್ನಷ್ಟು ಹೆಚ್ಚು ಪ್ರಭಾವಶಾಲಿ ಕೊರೋನಾ ರೂಪಾಂತರಿ ತಳಿಗಳು ಹುಟ್ಟಿಕೊಳ್ಳುವ ಸಾಧ್ಯತೆ ಕೂಡ ಇರುತ್ತದೆ ಎಂದು ಡಾ. ನಾಗೇಶ್ವರ್‌ ರೆಡ್ಡಿ ತಿಳಿಸಿದ್ದಾರೆ. ಆಂಟಿ ಬಡಿ ಕಾಕ್ಟೇಲ್ ವಿಧಾನದಲ್ಲಿ ಚಿಕಿತ್ಸೆ ಪಡೆದ ರೋಗಿಗಳಿಗೆ 3 ತಿಂಗಳ ವರೆಗೆ ಕೊರೋನಾ ವ್ಯಾಕ್ಸೀನ್‌ ಪಡೆಯದಂತೆ ಸೂಚಿಸಲಾಗಿದೆ ಎಂದು ಡಾ ರೆಡ್ಡಿ ಹೇಳುತ್ತಾರೆ.

ಇದನ್ನೂ ಓದಿ : ಕೊರೋನಾಗೆ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥವಾದ ರಾಜ್ಯದ 42 ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...