Homeಮುಖಪುಟಕೋವಿಡ್‌ ಸೋಂಕಿತರಿಗೆ ಆಂಟಿಬಡಿ ಕಾಕ್ಟೇಲ್ ಟ್ರೀಟ್‌ಮೆಂಟ್

ಕೋವಿಡ್‌ ಸೋಂಕಿತರಿಗೆ ಆಂಟಿಬಡಿ ಕಾಕ್ಟೇಲ್ ಟ್ರೀಟ್‌ಮೆಂಟ್

- Advertisement -
- Advertisement -

ಕೊರೋನಾ ಸೋಂಕಿಗೆ ಬೇರೆ ಬೇರೆ ಚಿಕಿತ್ಸಾ ವಿಧಾನಗಳನ್ನು ಜಗತ್ತಿನ ಬೇರೆ ಬೇರೆ ರಾಷ್ಟ್ರಗಳಲ್ಲಿನ ವೈದ್ಯರು ಕಂಡುಕೊಂಡಿದ್ದಾರೆ. ಅಂತಹ ಒಂದು ವಿಧಾನಗಳಲ್ಲಿ ಪ್ಲಾಸ್ಮಾ ಕೂಡ ಒಂದು. ಪ್ಲಾಸ್ಮಾ ಚಿಕಿತ್ಸೆ ಸಾಕಷ್ಟು ಯಶಸ್ವಿಯಾಗದ ನಂತರ ಮೇಲೆ ಈಗ ಮತ್ತೆ ಹೊಸ ಹೊಸ ಚಿಕಿತ್ಸಾ ವಿಧಾನಗಳು ಹುಟ್ಟಿಕೊಳ್ಳುತ್ತಿವೆ. ಅದರಲ್ಲಿ ಹೈದ್ರಾಬಾದಿನ ವೈದ್ಯರ ಆಂಟಿಬಡಿ ಕಾಕ್ಟೇಲ್ ಟ್ರೀಟ್‌ಮೆಂಟ್‌ ಕೂಡ ಒಂದು..

ಹೈದ್ರಾಬಾದಿನ ಏಷಿಯನ್‌ ಇನ್ಸ್‌ಟಿಟ್ಯೂಟ್‌ ಆಫ್‌ ಗ್ಯಾಸ್ಟ್ರೋಂಟರಲಜಿಯ ವಿಜ್ಞಾನಿಗಳು ಈ ಚಿಕಿತ್ಸಾ ವಿಧಾನವನ್ನು ಕಂಡು ಹಿಡಿದಿದ್ದಾರೆ. ಈ ಚಿಕಿತ್ಸಾ ವಿಧಾನವು ಭಾರತದ ಡೆಲ್ಟಾ ರೂಪಾತಂರಿ ವೈರಸ್‌ ಸೋಂಕಿಗೆ ಅತ್ಯಂತ ಪರಿಣಾಮಕಾರಿ ಚಿಕಿತ್ಸೆಯಾಗಲಿದೆ ಎನ್ನಲಾಗಿದೆ. ಸುಮಾರು 40 ಜನ ಕೊರೋನಾ ಸೋಂಕಿತರಿಗೆ ಒಂದು ಡೋಸ್‌ ನಷ್ಟು ಆಂಟಿಬಡಿಗಳನ್ನೊಳಗೊಂಡ ಕಾಕ್ಟೇಲ್ ಔಷಧಿಯನ್ನು ನೀಡಿದ್ದಾರೆ. ಈ ಕಾಕ್ಟೇಲ್ ಸಮಿಶ್ರಣಗಳ ಪರಿಣಾಮವಾಗಿ ಸೋಂಕಿತರಲ್ಲಿ ಕೋವಿಡ್‌ ಲಕ್ಷಣಗಳು ವಾಸಿಯಾಗಿವೆ.  ಔಷಧಿಯನ್ನು ನೀಡಿದ 24 ಗಂಟೆಗಳಲ್ಲಿ ಸೋಂಕಿತರಲ್ಲಿನ ಜ್ವರ, ಮತ್ತು ಇತರ ಸಮಸ್ಯೆಗಳು ವಾಸಿಯಾಗಿವೆ ಎಂದು ಇನ್ಸ್ಟಿಟ್ಯೂಟ್‌ ಅಧ್ಯಕ್ಷ ಡಾ. ನಾಗೇಶ್ವರ ರೆಡ್ಡಿ ತಿಳಿಸಿದ್ದಾರೆ.

ಅಮೇರಿಕಾದಲ್ಲಿ ನಡೆದ ಅಧ್ಯಯನಗಳು ಕಾಕ್ಟೇಲ್ ಚಿಕಿತ್ಸಾ ವಿಧಾನವು ಬ್ರಿಟನ್‌ ಮತ್ತು ದಕ್ಷಿಣ ಆಫ್ರಿಕಾ ಮೂಲದ ಕೊರೊನಾ ರೂಪಾಂತರ ತಳಿಯ ಚಿಕಿತ್ಸೆಗೂ ಪರಿಣಾಮ ಬೀರಿವೆ ಎಂಬುದನ್ನು ತೋರಿಸಿವೆ.

ಮೋನೋಕ್ಲೋನಲ್‌ ಆಂಟಿಬಡಿ ಚಿಕಿತ್ಸೆ ಪಡೆದ 40 ಜನ ಸೋಂಕಿತರನ್ನು ನಾವು 1 ವಾರ ಬಿಟ್ಟು ಮತ್ತೆ ಪರೀಕ್ಷೆ ಮಾಡಿದ್ದೇವೆ. ಆರ್‌ಟಿಪಿಸಿಆರ್‌ ವಿಧಾನದಲ್ಲೂ ಪರೀಕ್ಷೆ ಮಾಡಿದ್ದೇವೆ. ಯಾರಲ್ಲೂ ಮತ್ತೆ ಸೋಂಕು ಕಾಣಿಸಿಕೊಂಡಿಲ್ಲ. ಎಲ್ಲರೂ ವಾಸಿಯಾಗಿದ್ದಾರೆ ಎಂದು ಡಾ. ನಾಗೇಶ್ವರ್‌ ರೆಡ್ಡಿ ಹೇಳುತ್ತಾರೆ.

ಇದನ್ನೂ ಓದಿ : ಕೊರೊನಾ ನಿರ್ಬಂಧಗಳನ್ನು ಮತ್ತಷ್ಟು ಸಡಿಲಿಸಿದ ದೆಹಲಿ ಸರ್ಕಾರ

ಮೋನೋಕ್ಲೋನಲ್‌ ವಿಧಾನದಲ್ಲಿ ಕೊರೋನಾ ಚಿಕಿತ್ಸೆ ಪಡೆದಿದ್ದ ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌

ಈ ಹಿಂದೆ ಅಮೇರಿಕಾದ ಅಧ್ಯಕ್ಷರಾಗಿದ್ದ ಡೊನಾಲ್ಡ್‌ ಟ್ರಂಪ್‌ ಕೂಡ ಮೋನೋಕ್ಲೋನಲ್‌ ವಿಧಾನದಲ್ಲಿಯೇ ಚಿಕಿತ್ಸೆ ಪಡೆದಿದ್ದರು. ಆ ನಂತರ ಜಗತ್ತಿನ ಅನೇಕ ದೇಶಗಳಲ್ಲಿ ಈ ಆಂಟಿಬಡಿ ಕಾಕ್ಟೇಲ್ ಚಿಕಿತ್ಸಾ ವಿಧಾನವನ್ನು ಅನುಸರಿಸಲಾಗಿತ್ತು. ಭಾರತದ ಡೆಲ್ಟಾ ವೇರಿಯೆಂಟ್‌ಗೆ ಇದುವರೆಗೆ ಈ ಮಾದರಿಯ ಚಿಕಿತ್ಸಾ ವಿಧಾನವನ್ನು ಅನುಸರಿಸಿರಲಿಲ್ಲ. ಕಾಕ್ಟೇಲ್ ಚಿಕಿತ್ಸಾ ವಿಧಾನದಿಂದ ಮೈಲ್ಡ್‌ ಹಾಗೂ ಸಾಧಾರಣವಾದ ಸೋಂಕಿನ ಲಕ್ಷಣ ಹೊಂದಿರುವ ಕೊರೋನಾ ಸೋಂಕಿತರಿಗೆ  1 ರಿಂದ 2 ದಿನಗಳಲ್ಲಿ  ಕೊರೋನಾ ಸಂಬಂಧಿ ಸಮಸ್ಯೆಯನ್ನು ವಾಸಿ ಮಾಡಬಹುದು ಎಂದು ಸಂಸ್ಥೆಯ ವೈದ್ಯರು ತಿಳಿಸಿದ್ದಾರೆ.

ಆಂಟಿಬಡಿ ಕೊಕ್‌ಟೇಲ್‌ ವಿಧಾನದಲ್ಲಿ ಕ್ಯಾಸಿರಿವಿಮಾಬ್‌ ಮತ್ತು ಇಂಡಿವಿಮ್ಯಾಬ್‌ ಔಷಧಗಳನ್ನು ಸಮ್ಮಿಶ್ರಣ ಮಾಡಿ ಮೋನೋಕ್ಲೋನಲ್‌ ಎಂಟಿಬಡಿ ಥೆರಪಿ  ಚಿಕಿತ್ಸೆಯನ್ನು ನೀಡಲಾಗುತ್ತದೆ. ಈ ಚಿಕಿತ್ಸೆಯ ಔಷಧಿಗಳ ಬೆಲೆ ಸರಿ ಸುಮಾರು 70000 ರೂಪಾಯಿಗಳಷ್ಟಾಗುತ್ತದೆ. ಅಮೇರಿಕಾದಲ್ಲಿ ಆಂಟಿ ಬಡಿ ಚಿಕಿತ್ಸೆಯ  ಖರ್ಚು ಸುಮಾರು 20000 ಡಾಲರ್‌ಗಳಷ್ಟಾಗುತ್ತದೆ. ಚಿಕಿತ್ಸೆ ವೆಚ್ಚ ದುಬಾರಿಯಾಗಿದ್ದರೂ ಜಗತ್ತಿನ ಅನೇಕ ಕಡೆ ಈ ವಿಧಾನಕ್ಕೆ ಬೇಡಿಕೆಗಳು ಹೆಚ್ಚಿವೆ. ಆದರೆ ಇದನ್ನು ಎಲ್ಲರಿಗೂ ಕೊಡಲು ಸಾಧ್ಯವಿಲ್ಲ. ಚಿಕಿತ್ಸಾ ವಿಧಾನವನ್ನು ಅತಿಯಾಗಿ ಬಳಸುವುದರಿಂದ ಇನ್ನಷ್ಟು ಹೆಚ್ಚು ಪ್ರಭಾವಶಾಲಿ ಕೊರೋನಾ ರೂಪಾಂತರಿ ತಳಿಗಳು ಹುಟ್ಟಿಕೊಳ್ಳುವ ಸಾಧ್ಯತೆ ಕೂಡ ಇರುತ್ತದೆ ಎಂದು ಡಾ. ನಾಗೇಶ್ವರ್‌ ರೆಡ್ಡಿ ತಿಳಿಸಿದ್ದಾರೆ. ಆಂಟಿ ಬಡಿ ಕಾಕ್ಟೇಲ್ ವಿಧಾನದಲ್ಲಿ ಚಿಕಿತ್ಸೆ ಪಡೆದ ರೋಗಿಗಳಿಗೆ 3 ತಿಂಗಳ ವರೆಗೆ ಕೊರೋನಾ ವ್ಯಾಕ್ಸೀನ್‌ ಪಡೆಯದಂತೆ ಸೂಚಿಸಲಾಗಿದೆ ಎಂದು ಡಾ ರೆಡ್ಡಿ ಹೇಳುತ್ತಾರೆ.

ಇದನ್ನೂ ಓದಿ : ಕೊರೋನಾಗೆ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥವಾದ ರಾಜ್ಯದ 42 ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...