Homeಮುಖಪುಟಕೋವಿಡ್‌ ಸೋಂಕಿತರಿಗೆ ಆಂಟಿಬಡಿ ಕಾಕ್ಟೇಲ್ ಟ್ರೀಟ್‌ಮೆಂಟ್

ಕೋವಿಡ್‌ ಸೋಂಕಿತರಿಗೆ ಆಂಟಿಬಡಿ ಕಾಕ್ಟೇಲ್ ಟ್ರೀಟ್‌ಮೆಂಟ್

- Advertisement -
- Advertisement -

ಕೊರೋನಾ ಸೋಂಕಿಗೆ ಬೇರೆ ಬೇರೆ ಚಿಕಿತ್ಸಾ ವಿಧಾನಗಳನ್ನು ಜಗತ್ತಿನ ಬೇರೆ ಬೇರೆ ರಾಷ್ಟ್ರಗಳಲ್ಲಿನ ವೈದ್ಯರು ಕಂಡುಕೊಂಡಿದ್ದಾರೆ. ಅಂತಹ ಒಂದು ವಿಧಾನಗಳಲ್ಲಿ ಪ್ಲಾಸ್ಮಾ ಕೂಡ ಒಂದು. ಪ್ಲಾಸ್ಮಾ ಚಿಕಿತ್ಸೆ ಸಾಕಷ್ಟು ಯಶಸ್ವಿಯಾಗದ ನಂತರ ಮೇಲೆ ಈಗ ಮತ್ತೆ ಹೊಸ ಹೊಸ ಚಿಕಿತ್ಸಾ ವಿಧಾನಗಳು ಹುಟ್ಟಿಕೊಳ್ಳುತ್ತಿವೆ. ಅದರಲ್ಲಿ ಹೈದ್ರಾಬಾದಿನ ವೈದ್ಯರ ಆಂಟಿಬಡಿ ಕಾಕ್ಟೇಲ್ ಟ್ರೀಟ್‌ಮೆಂಟ್‌ ಕೂಡ ಒಂದು..

ಹೈದ್ರಾಬಾದಿನ ಏಷಿಯನ್‌ ಇನ್ಸ್‌ಟಿಟ್ಯೂಟ್‌ ಆಫ್‌ ಗ್ಯಾಸ್ಟ್ರೋಂಟರಲಜಿಯ ವಿಜ್ಞಾನಿಗಳು ಈ ಚಿಕಿತ್ಸಾ ವಿಧಾನವನ್ನು ಕಂಡು ಹಿಡಿದಿದ್ದಾರೆ. ಈ ಚಿಕಿತ್ಸಾ ವಿಧಾನವು ಭಾರತದ ಡೆಲ್ಟಾ ರೂಪಾತಂರಿ ವೈರಸ್‌ ಸೋಂಕಿಗೆ ಅತ್ಯಂತ ಪರಿಣಾಮಕಾರಿ ಚಿಕಿತ್ಸೆಯಾಗಲಿದೆ ಎನ್ನಲಾಗಿದೆ. ಸುಮಾರು 40 ಜನ ಕೊರೋನಾ ಸೋಂಕಿತರಿಗೆ ಒಂದು ಡೋಸ್‌ ನಷ್ಟು ಆಂಟಿಬಡಿಗಳನ್ನೊಳಗೊಂಡ ಕಾಕ್ಟೇಲ್ ಔಷಧಿಯನ್ನು ನೀಡಿದ್ದಾರೆ. ಈ ಕಾಕ್ಟೇಲ್ ಸಮಿಶ್ರಣಗಳ ಪರಿಣಾಮವಾಗಿ ಸೋಂಕಿತರಲ್ಲಿ ಕೋವಿಡ್‌ ಲಕ್ಷಣಗಳು ವಾಸಿಯಾಗಿವೆ.  ಔಷಧಿಯನ್ನು ನೀಡಿದ 24 ಗಂಟೆಗಳಲ್ಲಿ ಸೋಂಕಿತರಲ್ಲಿನ ಜ್ವರ, ಮತ್ತು ಇತರ ಸಮಸ್ಯೆಗಳು ವಾಸಿಯಾಗಿವೆ ಎಂದು ಇನ್ಸ್ಟಿಟ್ಯೂಟ್‌ ಅಧ್ಯಕ್ಷ ಡಾ. ನಾಗೇಶ್ವರ ರೆಡ್ಡಿ ತಿಳಿಸಿದ್ದಾರೆ.

ಅಮೇರಿಕಾದಲ್ಲಿ ನಡೆದ ಅಧ್ಯಯನಗಳು ಕಾಕ್ಟೇಲ್ ಚಿಕಿತ್ಸಾ ವಿಧಾನವು ಬ್ರಿಟನ್‌ ಮತ್ತು ದಕ್ಷಿಣ ಆಫ್ರಿಕಾ ಮೂಲದ ಕೊರೊನಾ ರೂಪಾಂತರ ತಳಿಯ ಚಿಕಿತ್ಸೆಗೂ ಪರಿಣಾಮ ಬೀರಿವೆ ಎಂಬುದನ್ನು ತೋರಿಸಿವೆ.

ಮೋನೋಕ್ಲೋನಲ್‌ ಆಂಟಿಬಡಿ ಚಿಕಿತ್ಸೆ ಪಡೆದ 40 ಜನ ಸೋಂಕಿತರನ್ನು ನಾವು 1 ವಾರ ಬಿಟ್ಟು ಮತ್ತೆ ಪರೀಕ್ಷೆ ಮಾಡಿದ್ದೇವೆ. ಆರ್‌ಟಿಪಿಸಿಆರ್‌ ವಿಧಾನದಲ್ಲೂ ಪರೀಕ್ಷೆ ಮಾಡಿದ್ದೇವೆ. ಯಾರಲ್ಲೂ ಮತ್ತೆ ಸೋಂಕು ಕಾಣಿಸಿಕೊಂಡಿಲ್ಲ. ಎಲ್ಲರೂ ವಾಸಿಯಾಗಿದ್ದಾರೆ ಎಂದು ಡಾ. ನಾಗೇಶ್ವರ್‌ ರೆಡ್ಡಿ ಹೇಳುತ್ತಾರೆ.

ಇದನ್ನೂ ಓದಿ : ಕೊರೊನಾ ನಿರ್ಬಂಧಗಳನ್ನು ಮತ್ತಷ್ಟು ಸಡಿಲಿಸಿದ ದೆಹಲಿ ಸರ್ಕಾರ

ಮೋನೋಕ್ಲೋನಲ್‌ ವಿಧಾನದಲ್ಲಿ ಕೊರೋನಾ ಚಿಕಿತ್ಸೆ ಪಡೆದಿದ್ದ ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌

ಈ ಹಿಂದೆ ಅಮೇರಿಕಾದ ಅಧ್ಯಕ್ಷರಾಗಿದ್ದ ಡೊನಾಲ್ಡ್‌ ಟ್ರಂಪ್‌ ಕೂಡ ಮೋನೋಕ್ಲೋನಲ್‌ ವಿಧಾನದಲ್ಲಿಯೇ ಚಿಕಿತ್ಸೆ ಪಡೆದಿದ್ದರು. ಆ ನಂತರ ಜಗತ್ತಿನ ಅನೇಕ ದೇಶಗಳಲ್ಲಿ ಈ ಆಂಟಿಬಡಿ ಕಾಕ್ಟೇಲ್ ಚಿಕಿತ್ಸಾ ವಿಧಾನವನ್ನು ಅನುಸರಿಸಲಾಗಿತ್ತು. ಭಾರತದ ಡೆಲ್ಟಾ ವೇರಿಯೆಂಟ್‌ಗೆ ಇದುವರೆಗೆ ಈ ಮಾದರಿಯ ಚಿಕಿತ್ಸಾ ವಿಧಾನವನ್ನು ಅನುಸರಿಸಿರಲಿಲ್ಲ. ಕಾಕ್ಟೇಲ್ ಚಿಕಿತ್ಸಾ ವಿಧಾನದಿಂದ ಮೈಲ್ಡ್‌ ಹಾಗೂ ಸಾಧಾರಣವಾದ ಸೋಂಕಿನ ಲಕ್ಷಣ ಹೊಂದಿರುವ ಕೊರೋನಾ ಸೋಂಕಿತರಿಗೆ  1 ರಿಂದ 2 ದಿನಗಳಲ್ಲಿ  ಕೊರೋನಾ ಸಂಬಂಧಿ ಸಮಸ್ಯೆಯನ್ನು ವಾಸಿ ಮಾಡಬಹುದು ಎಂದು ಸಂಸ್ಥೆಯ ವೈದ್ಯರು ತಿಳಿಸಿದ್ದಾರೆ.

ಆಂಟಿಬಡಿ ಕೊಕ್‌ಟೇಲ್‌ ವಿಧಾನದಲ್ಲಿ ಕ್ಯಾಸಿರಿವಿಮಾಬ್‌ ಮತ್ತು ಇಂಡಿವಿಮ್ಯಾಬ್‌ ಔಷಧಗಳನ್ನು ಸಮ್ಮಿಶ್ರಣ ಮಾಡಿ ಮೋನೋಕ್ಲೋನಲ್‌ ಎಂಟಿಬಡಿ ಥೆರಪಿ  ಚಿಕಿತ್ಸೆಯನ್ನು ನೀಡಲಾಗುತ್ತದೆ. ಈ ಚಿಕಿತ್ಸೆಯ ಔಷಧಿಗಳ ಬೆಲೆ ಸರಿ ಸುಮಾರು 70000 ರೂಪಾಯಿಗಳಷ್ಟಾಗುತ್ತದೆ. ಅಮೇರಿಕಾದಲ್ಲಿ ಆಂಟಿ ಬಡಿ ಚಿಕಿತ್ಸೆಯ  ಖರ್ಚು ಸುಮಾರು 20000 ಡಾಲರ್‌ಗಳಷ್ಟಾಗುತ್ತದೆ. ಚಿಕಿತ್ಸೆ ವೆಚ್ಚ ದುಬಾರಿಯಾಗಿದ್ದರೂ ಜಗತ್ತಿನ ಅನೇಕ ಕಡೆ ಈ ವಿಧಾನಕ್ಕೆ ಬೇಡಿಕೆಗಳು ಹೆಚ್ಚಿವೆ. ಆದರೆ ಇದನ್ನು ಎಲ್ಲರಿಗೂ ಕೊಡಲು ಸಾಧ್ಯವಿಲ್ಲ. ಚಿಕಿತ್ಸಾ ವಿಧಾನವನ್ನು ಅತಿಯಾಗಿ ಬಳಸುವುದರಿಂದ ಇನ್ನಷ್ಟು ಹೆಚ್ಚು ಪ್ರಭಾವಶಾಲಿ ಕೊರೋನಾ ರೂಪಾಂತರಿ ತಳಿಗಳು ಹುಟ್ಟಿಕೊಳ್ಳುವ ಸಾಧ್ಯತೆ ಕೂಡ ಇರುತ್ತದೆ ಎಂದು ಡಾ. ನಾಗೇಶ್ವರ್‌ ರೆಡ್ಡಿ ತಿಳಿಸಿದ್ದಾರೆ. ಆಂಟಿ ಬಡಿ ಕಾಕ್ಟೇಲ್ ವಿಧಾನದಲ್ಲಿ ಚಿಕಿತ್ಸೆ ಪಡೆದ ರೋಗಿಗಳಿಗೆ 3 ತಿಂಗಳ ವರೆಗೆ ಕೊರೋನಾ ವ್ಯಾಕ್ಸೀನ್‌ ಪಡೆಯದಂತೆ ಸೂಚಿಸಲಾಗಿದೆ ಎಂದು ಡಾ ರೆಡ್ಡಿ ಹೇಳುತ್ತಾರೆ.

ಇದನ್ನೂ ಓದಿ : ಕೊರೋನಾಗೆ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥವಾದ ರಾಜ್ಯದ 42 ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....