Homeಅಂತರಾಷ್ಟ್ರೀಯಶ್ರೀಲಂಕಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಅನುರಾ ಕುಮಾರ ದಿಸ್ಸನಾಯಕೆ

ಶ್ರೀಲಂಕಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಅನುರಾ ಕುಮಾರ ದಿಸ್ಸನಾಯಕೆ

- Advertisement -
- Advertisement -

ಇತ್ತೀಚೆಗಷ್ಟೇ ನಡೆದ ಶ್ರೀಲಂಕಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ನಂತರ ‘ಜನತಾ ವಿಮಿಕ್ತಿ ಪೆರಮುನ (ಜೆವಿಪಿ)ಯ’ ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಶ್ರೀಲಂಕಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣವಚನ ಸ್ವೀಕರಿಸಿದ ನಂತರ ಮಾತನಾಡಿದ ದಿಸಾನಾಯಕೆ, ತಮ್ಮ ಮುಂದಿರುವ ಮಹತ್ವದ ಸವಾಲುಗಳನ್ನು ಒಪ್ಪಿಕೊಂಡರು. ಬಿಕ್ಕಟ್ಟನ್ನು ನಿಭಾಯಿಸಲು ಸಾಮೂಹಿಕ ಪ್ರಯತ್ನಗಳ ಅಗತ್ಯವನ್ನು ಒತ್ತಿ ಹೇಳಿದ ಅವರು, “ಈ ಆಳವಾದ ಬಿಕ್ಕಟ್ಟನ್ನು ಸರ್ಕಾರ, ಏಕ ಪಕ್ಷ ಅಥವಾ ವ್ಯಕ್ತಿ ಮಾತ್ರ ಪರಿಹರಿಸಲು ಸಾಧ್ಯವಾಗುತ್ತದೆ ಎಂದು ನಾವು ನಂಬುವುದಿಲ್ಲ” ಎಂದರು.

“ನಾನು ಮಾಂತ್ರಿಕನಲ್ಲ; ಸಾಮಾನ್ಯ ನಾಗರಿಕ ಎಂದು ನಾನು ಮೊದಲೇ ಹೇಳಿದ್ದೇನೆ. ನನಗೆ ತಿಳಿದಿರುವ ಮತ್ತು ಗೊತ್ತಿಲ್ಲದ ವಿಷಯಗಳಿವೆ. ಈ ದೇಶವನ್ನು ಮೇಲಕ್ಕೆತ್ತಲು ಜ್ಞಾನ ಮತ್ತು ಕೌಶಲ್ಯ ಹೊಂದಿರುವವರನ್ನು ಒಟ್ಟುಗೂಡಿಸುವುದು ನನ್ನ ಗುರಿಯಾಗಿದೆ” ಎಂದು ಅವರು ಹೇಳಿದರು.

“ನಾನು ಇದನ್ನು ಸಾಧಿಸಲು ಬದ್ಧನಾಗಿದ್ದೇನೆ; ರಾಜಕೀಯ ವ್ಯವಸ್ಥೆಯಲ್ಲಿ ಜನರ ಗೌರವ ಮತ್ತು ನಂಬಿಕೆಯನ್ನು ಮರಳಿ ಪಡೆಯಲು ನಾವು ಎಲ್ಲವನ್ನೂ ಮಾಡುತ್ತೇವೆ.. ನಾವು ಪ್ರಜಾಪ್ರಭುತ್ವವನ್ನು ಬಲಪಡಿಸಬೇಕಾಗಿದೆ. ಪ್ರಜಾಪ್ರಭುತ್ವವನ್ನು ಕಾಪಾಡಲು ನನ್ನ ಕೈಲಾದಷ್ಟು ಮಾಡುವುದಾಗಿ ನಾನು ಪ್ರತಿಜ್ಞೆ ಮಾಡುತ್ತೇನೆ” ಎಂದು ಅವರು ಹೇಳಿದರು.

55 ವರ್ಷದ ದಿಸ್ಸನಾಯಕೆ ಅವರು 36 ಅಭ್ಯರ್ಥಿಗಳೊಂದಿಗೆ 4,530,902 ಮತಗಳನ್ನು ಗಳಿಸಿದ ವಿರೋಧ ಪಕ್ಷದ ನಾಯಕ ಸಜಿತ್ ಪ್ರೇಮದಾಸ ಅವರನ್ನು ಸೋಲಿಸಿದರು. ಅವರು ಅಧ್ಯಕ್ಷರಾಗಿ ಆಯ್ಕೆಯಾಗಿರುವುದರಿಂದ, ಪ್ರಧಾನ ಮಂತ್ರಿ ಸ್ಥಾನಕ್ಕೆ ದಿನೇಶ್ ಗುಣವರ್ಧನರ ರಾಜೀನಾಮೆ ನೀಡಬೇಕಾಯಿತು. ಹೊಸ ಪ್ರಧಾನ ಮಂತ್ರಿ ಮತ್ತು ಕ್ಯಾಬಿನೆಟ್ ಅನ್ನು ನೇಮಿಸಲು ದಿಸ್ಸನಾಯಕೆ ಅವರಿಗೆ ಈ ಚುನಾವಣಾ ಫಲಿತಾಂಶ ಅವಕಾಶ ಮಾಡಿಕೊಟ್ಟಿದೆ.

ನ್ಯಾಶನಲ್ ಪೀಪಲ್ಸ್ ಪವರ್ (ಎನ್‌ಪಿಪಿ) ಒಕ್ಕೂಟವನ್ನು ಮುನ್ನಡೆಸುವ ಜೆವಿಪಿಯು ಕ್ರಾಂತಿಕಾರಿ ಹಿನ್ನೆಲೆ ಹೊಂದಿದೆ. 1970 ಮತ್ತು 1980 ರ ದಶಕಗಳ ಸಮಾಜವಾದಿ ಹೋರಾಟದಲ್ಲಿ ಎರಡು ವಿಫಲ ಸಶಸ್ತ್ರ ದಂಗೆಗಳನ್ನು ನಡೆಸಿತು. ಮುಂದಿನ ವರ್ಷಗಳಲ್ಲಿ, ಜೆವಿಪಿ ಪ್ರಜಾಸತ್ತಾತ್ಮಕ ರಾಜಕೀಯಕ್ಕೆ ಪರಿವರ್ತನೆಯಾಯಿತು. ಸಾಂದರ್ಭಿಕವಾಗಿ ವಿವಿಧ ಅಧ್ಯಕ್ಷರನ್ನು ಬೆಂಬಲಿಸುವಾಗ ವಿರೋಧ ಪಕ್ಷದಲ್ಲಿ ಉಳಿಯಿತು.

ಅಧ್ಯಕ್ಷರಾಗಿ, ದಿಸಾನಾಯಕೆ ಅವರು ದೇಶದ ತೀವ್ರ ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸುವ ಕೆಲಸವನ್ನು ಎದುರಿಸುತ್ತಾರೆ. ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌)ನ $3 ಶತಕೋಟಿ ಪರಿಹಾರ ಒಪ್ಪಂದದ ಅಡಿಯಲ್ಲಿ ಅವರ ಹಿಂದಿನ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಪರಿಚಯಿಸಿದ ಕಠಿಣ ಕ್ರಮಗಳನ್ನು ಪರಿಹರಿಸುವುದು ಅವರ ತಕ್ಷಣದ ಸವಾಲುಗಳಲ್ಲಿ ಒಂದಾಗಿದೆ. ವಿಕ್ರಮಸಿಂಘೆ ಅವರು ಒಪ್ಪಂದದಲ್ಲಿ ಯಾವುದೇ ಬದಲಾವಣೆಗಳು ಹೆಚ್ಚು ಅಗತ್ಯವಿರುವ ಹಣಕಾಸಿನ ನೆರವು ವಿಳಂಬವಾಗಬಹುದು ಎಂದು ಎಚ್ಚರಿಸಿದ್ದಾರೆ.

ಅಭಿನಂದಿಸಿದ ಮೋದಿ

ನೂತನವಾಗಿ ಆಯ್ಕೆಯಾದ ಸ್ರೀಲಂಕಾ ರಾಷ್ಟ್ರಪತಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಹಾರೈಸಿದ್ದಾರೆ. “ನಮ್ಮ ಜನರು ಮತ್ತು ಇಡೀ ಪ್ರದೇಶದ ಪ್ರಯೋಜನಕ್ಕಾಗಿ ನಮ್ಮ ಬಹುಮುಖಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ನಿಮ್ಮೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ” ಎಂದು ಮೋದಿ ಹೇಳಿದ್ದಾರೆ.

ಭಾರತದ ನೆರೆಹೊರೆಯ ಮೊದಲ ನೀತಿ ಮತ್ತು ವಿಷನ್ ಸಾಗರ್‌ಗೆ ಶ್ರೀಲಂಕಾ “ವಿಶೇಷ ಸ್ಥಾನ” ವನ್ನು ಹೊಂದಿದೆ ಎಂದು ಪ್ರಧಾನಿ ಹೇಳಿದರು.

ಇದಕ್ಕೆ ಪ್ರತಿಕ್ರಿಯೆಯಾಗಿ ದಿಸ್ಸನಾಯಕೆ, “ನಮ್ಮ ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಬಲಪಡಿಸುವ ನಿಮ್ಮ ಬದ್ಧತೆಯನ್ನು ನಾನು ಹಂಚಿಕೊಳ್ಳುತ್ತೇನೆ. ನಮ್ಮ ಜನರು ಮತ್ತು ಇಡೀ ಪ್ರದೇಶದ ಪ್ರಯೋಜನಕ್ಕಾಗಿ ಸಹಕಾರವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಒಟ್ಟಾಗಿ ನಾವು ಕೆಲಸ ಮಾಡಬಹುದು” ಎಂದು ಹೇಳಿದ್ದಾರೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದಿಸ್ಸನಾಯಕೆ ಅವರಿಗೆ ಅಭಿನಂದನೆ ಸಲ್ಲಿಸಿದರು. “ನಮ್ಮ ದೇಶಗಳು ಪರಸ್ಪರ ಬೆಳವಣಿಗೆ ಮತ್ತು ಪ್ರಗತಿಗೆ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸಲಿ” ಎಂದು ಹೇಳಿದರು.

ಇದನ್ನೂ ಓದಿ; ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...