Homeಚಳವಳಿಕಾಶ್ಮೀರದ ಮಾಧ್ಯಮಗಳನ್ನು ಬಂಧನದಲ್ಲಿಡಲಾಗಿದೆ: ಸುಪ್ರೀಂ ಕೋರ್ಟ್ ನಲ್ಲಿ ಅನುರಾಧಾ ಭಾಸಿನ್ ಪ್ರಶ್ನೆ

ಕಾಶ್ಮೀರದ ಮಾಧ್ಯಮಗಳನ್ನು ಬಂಧನದಲ್ಲಿಡಲಾಗಿದೆ: ಸುಪ್ರೀಂ ಕೋರ್ಟ್ ನಲ್ಲಿ ಅನುರಾಧಾ ಭಾಸಿನ್ ಪ್ರಶ್ನೆ

- Advertisement -
- Advertisement -

ಕಾಶ್ಮೀರ ಟೈಮ್ಸ್ ನ ಕಾರ್ಯನಿರ್ವಾಹಕ ಸಂಪಾದಕರಾದ ಅನುರಾಧಾ ಭಾಸಿನ್ ರವರು ‘ಜಮ್ಮು ಮತ್ತು ಕಾಶ್ಮೀರದ ಎಲ್ಲಾ ಭಾಗಗಳಲ್ಲಿನ ಪತ್ರಕರ್ತರು ಮತ್ತು ಇತರ ಎಲ್ಲ ಮಾಧ್ಯಮ ಸಿಬ್ಬಂದಿಗೆ ತಮ್ಮ ವೃತ್ತಿಯನ್ನು ಮುಕ್ತವಾಗಿ ನಿರ್ವಹಿಸುವ ವಾತವಾರಣ ಕಲ್ಪಿಸಬೇಕೆಂದು’ ಒತ್ತಾಯಿಸಿ ಸುಪ್ರೀಂ ಕೋರ್ಟ್ ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದಾರೆ.

ಅಂತರ್ಜಾಲ ಮತ್ತು ದೂರಸಂಪರ್ಕ ಸೇವೆಗಳ ಸಂಪೂರ್ಣ ಸ್ಥಗಿತಗೊಳಿಸುವ ಮೂಲಕ ವಿಧಿಸಲಾಗುತ್ತಿರುವ ನಿರ್ಬಂಧಗಳು ಮತ್ತು ಫೋಟೋ-ಪತ್ರಕರ್ತರು ಮತ್ತು ವರದಿಗಾರರ ಚಲನವಲನಕ್ಕೆ ತೀವ್ರವಾದ ನಿರ್ಬಂಧಗಳನ್ನು ತಕ್ಷಣ ಸಡಿಲಿಸಬೇಕು ಆ ಮೂಲಕ ಪತ್ರಿಕಾ ಮತ್ತು ಮಾಧ್ಯಮಗಳ ಸ್ವಾತಂತ್ರ್ಯವನ್ನು ಕಾಪಾಡಬೆಕೆಂದು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಆಗಸ್ಟ್ 4 ರಿಂದ ಇಡೀ ರಾಜ್ಯವನ್ನು ಕೇಂದ್ರ ಸರ್ಕಾರ ತನ್ನ ಹತೋಟಿಗೆ ತೆಗೆದುಕೊಂಡ ನಂತರ ಪತ್ರಕರ್ತರು ತಮ್ಮ ವೃತ್ತಿಯನ್ನು ಮುಂದುವರೆಸಲು ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿನ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಮುಕ್ತವಾಗಿ ವರದಿ ಮಾಡುವ ಹಕ್ಕನ್ನು ಚಲಾಯಿಸಲು ಎದುರಾಗಿರುವ ನಿರ್ಬಂಧಗಳನ್ನು ತೆಗೆದುಹಾಕುವಂತೆ ಜಮ್ಮು ಕಾಶ್ಮೀರ ಸರ್ಕಾರಕ್ಕೆ ಕೋರ್ಟ್ ನಿರ್ದೇಶನ ನೀಡಬೇಕೆಂದು ಅರ್ಜಿದಾರರು ಒತ್ತಾಯಿಸಿದ್ದಾರೆ.

ಇಂತಹ ನಿರ್ಬಂಧಗಳು ಭಾರತದ ಸಂವಿಧಾನದ 14 ಮತ್ತು 19 ನೇ ವಿಧಿಯ ಅನ್ವಯ ಪತ್ರಕರ್ತರ ಹಕ್ಕುಗಳನ್ನು ಕಸಿದುಕೊಳ್ಳುತ್ತಿವೆ ಮತ್ತು ಕಾಶ್ಮೀರ ಕಣಿವೆಯ ನಿವಾಸಿಗಳ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವ ಹಕ್ಕನ್ನು ತಡೆಯುತ್ತಿವೆ ಎಂದು ಅರ್ಜಿದಾರರು ದೂರಿದ್ದಾರೆ.

ಆಗಸ್ಟ್ 4 ರಿಂದ, ಮೊಬೈಲ್ ಫೋನ್ ನೆಟ್‌ವರ್ಕ್‌ಗಳು, ಇಂಟರ್ನೆಟ್ ಸೇವೆಗಳು ಮತ್ತು ಲ್ಯಾಂಡ್‌ಲೈನ್ ಫೋನ್ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ. ಕಾಶ್ಮೀರ ಮತ್ತು ಜಮ್ಮುವಿನ ಕೆಲವು ಜಿಲ್ಲೆಗಳನ್ನು ಸಂಪೂರ್ಣವಾಗಿ ಪ್ರತ್ಯೇಕಿಸಿ ಸಂವಹನ ಮತ್ತು ಮಾಹಿತಿಯ ಎಲ್ಲಾ ಮೂಲಗಳನ್ನು ಕಡಿದುಹಾಕುವ ಮೂಲಕ ಬಂಧನದಲ್ಲಿಡಲಾಗಿದೆ ಎಂದು ಅರ್ಜಿದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರ್ಜಿದಾರರು ಅವರ ವಕೀಲರಾದ ವೃಂದಾ ಗ್ರೋವರ್, ಸೌತಿಕ್ ಬ್ಯಾನರ್ಜಿ, ಪ್ರಸನ್ನ ಎಸ್ ಮತ್ತು ರತ್ನ ಅಪ್ನೆಂಡರ್ ರವರು ಪ್ರತಿನಿಧಿಸುತ್ತಿದ್ದಾರೆ. ಅರ್ಜಿಯನ್ನು ಅಡ್ವೊಕೇಟ್ ಸುಮಿಕಾ ಹಜರಿಕಾ ಮೂಲಕ ಸಲ್ಲಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಎಲ್ಲಾ ಸಂವಹನ ಸೇವೆಗಳ ನಿರ್ಭಂದದ ಕಾರಣದಿಂದಾಗಿ ಕಾಶ್ಮೀರ ಟೈಮ್ಸ್ ನ ಕಾಶ್ಮೀರ ಆವೃತ್ತಿಯನ್ನು ಮುದ್ರಿಸಲು ಮತ್ತು ಪ್ರಕಟಿಸಲು ಆಕೆಗೆ ಸಾಧ್ಯವಾಗಲಿಲ್ಲ ಎಂದ ಅವರು ಇದರಲ್ಲಿ ಕಾಶ್ಮೀರದ ಪರಿಸ್ಥಿತಿಯನ್ನು ವರದಿ ಮಾಡುವುದು ಮತ್ತು ಪ್ರಕಟಿಸುವುದು ಸೇರಿದಂತೆ ಎಲ್ಲಾ ಮಾಧ್ಯಮ ಚಟುವಟಿಕೆಗಳ ಮೇಲೆ ದಿಗ್ಬಂಧನವನ್ನು ಹೇರಲಾಗಿದೆ ಎಂದಿದ್ದಾರೆ.

ಕಾಶ್ಮೀರದ ಜನರ ಮೇಲೆ ದೊಡ್ಡ ಪರಿಣಾಮ ಬೀರುವ ನಿರ್ಧಾರಗಳನ್ನು ಕಾಶ್ಮೀರಿಯರಿಗೆ ತಿಳಿಯದಂತೆ ತಡೆಯಲು ಕೇಂದ್ರ ಸರ್ಕಾರ ನಮ್ಮನ್ನು ಕತ್ತಲೆಯಲ್ಲಿಟ್ಟಿದೆ. ಆ ಮೂಲಕ ದೆಹಲಿಯಲ್ಲಿ ಅವರು ಅವರ ಪರವಾದ ವಾತವಾರಣವನ್ನು ಸೃಷ್ಟಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದು ಕಾಶ್ಮೀರದ ನಿವಾಸಿಗಳಲ್ಲಿ ಭಯ, ಆತಂಕವನ್ನು ಉಂಟುಮಾಡಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಈ ರೀತಿಯ ಮಾಹಿತಿ ನಿರ್ಬಂಧವು ಜನರ ಜೀವನ ಮತ್ತು ಅವರ ಭವಿಷ್ಯದ ಮೇಲೆ ನೇರವಾಗಿ ಪರಿಣಾಮ ಬೀರುವ ನಿರ್ಧಾರಗಳ ಬಗ್ಗೆ ತಿಳಿದುಕೊಳ್ಳುವ ಹಕ್ಕಿನ ನೇರ ಮತ್ತು ಗಂಭೀರ ಉಲ್ಲಂಘನೆಯಾಗಿದೆ” ಎಂದು ಅರ್ಜಿದಾರರು ಟೀಕಿಸಿದ್ದಾರೆ.

ಕೃಪೆ: ‘ದಿ ಲೀಫ್ ಲೆಟ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...