Homeಚಳವಳಿಕಾಶ್ಮೀರದ ಮಾಧ್ಯಮಗಳನ್ನು ಬಂಧನದಲ್ಲಿಡಲಾಗಿದೆ: ಸುಪ್ರೀಂ ಕೋರ್ಟ್ ನಲ್ಲಿ ಅನುರಾಧಾ ಭಾಸಿನ್ ಪ್ರಶ್ನೆ

ಕಾಶ್ಮೀರದ ಮಾಧ್ಯಮಗಳನ್ನು ಬಂಧನದಲ್ಲಿಡಲಾಗಿದೆ: ಸುಪ್ರೀಂ ಕೋರ್ಟ್ ನಲ್ಲಿ ಅನುರಾಧಾ ಭಾಸಿನ್ ಪ್ರಶ್ನೆ

- Advertisement -
- Advertisement -

ಕಾಶ್ಮೀರ ಟೈಮ್ಸ್ ನ ಕಾರ್ಯನಿರ್ವಾಹಕ ಸಂಪಾದಕರಾದ ಅನುರಾಧಾ ಭಾಸಿನ್ ರವರು ‘ಜಮ್ಮು ಮತ್ತು ಕಾಶ್ಮೀರದ ಎಲ್ಲಾ ಭಾಗಗಳಲ್ಲಿನ ಪತ್ರಕರ್ತರು ಮತ್ತು ಇತರ ಎಲ್ಲ ಮಾಧ್ಯಮ ಸಿಬ್ಬಂದಿಗೆ ತಮ್ಮ ವೃತ್ತಿಯನ್ನು ಮುಕ್ತವಾಗಿ ನಿರ್ವಹಿಸುವ ವಾತವಾರಣ ಕಲ್ಪಿಸಬೇಕೆಂದು’ ಒತ್ತಾಯಿಸಿ ಸುಪ್ರೀಂ ಕೋರ್ಟ್ ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದಾರೆ.

ಅಂತರ್ಜಾಲ ಮತ್ತು ದೂರಸಂಪರ್ಕ ಸೇವೆಗಳ ಸಂಪೂರ್ಣ ಸ್ಥಗಿತಗೊಳಿಸುವ ಮೂಲಕ ವಿಧಿಸಲಾಗುತ್ತಿರುವ ನಿರ್ಬಂಧಗಳು ಮತ್ತು ಫೋಟೋ-ಪತ್ರಕರ್ತರು ಮತ್ತು ವರದಿಗಾರರ ಚಲನವಲನಕ್ಕೆ ತೀವ್ರವಾದ ನಿರ್ಬಂಧಗಳನ್ನು ತಕ್ಷಣ ಸಡಿಲಿಸಬೇಕು ಆ ಮೂಲಕ ಪತ್ರಿಕಾ ಮತ್ತು ಮಾಧ್ಯಮಗಳ ಸ್ವಾತಂತ್ರ್ಯವನ್ನು ಕಾಪಾಡಬೆಕೆಂದು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಆಗಸ್ಟ್ 4 ರಿಂದ ಇಡೀ ರಾಜ್ಯವನ್ನು ಕೇಂದ್ರ ಸರ್ಕಾರ ತನ್ನ ಹತೋಟಿಗೆ ತೆಗೆದುಕೊಂಡ ನಂತರ ಪತ್ರಕರ್ತರು ತಮ್ಮ ವೃತ್ತಿಯನ್ನು ಮುಂದುವರೆಸಲು ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿನ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಮುಕ್ತವಾಗಿ ವರದಿ ಮಾಡುವ ಹಕ್ಕನ್ನು ಚಲಾಯಿಸಲು ಎದುರಾಗಿರುವ ನಿರ್ಬಂಧಗಳನ್ನು ತೆಗೆದುಹಾಕುವಂತೆ ಜಮ್ಮು ಕಾಶ್ಮೀರ ಸರ್ಕಾರಕ್ಕೆ ಕೋರ್ಟ್ ನಿರ್ದೇಶನ ನೀಡಬೇಕೆಂದು ಅರ್ಜಿದಾರರು ಒತ್ತಾಯಿಸಿದ್ದಾರೆ.

ಇಂತಹ ನಿರ್ಬಂಧಗಳು ಭಾರತದ ಸಂವಿಧಾನದ 14 ಮತ್ತು 19 ನೇ ವಿಧಿಯ ಅನ್ವಯ ಪತ್ರಕರ್ತರ ಹಕ್ಕುಗಳನ್ನು ಕಸಿದುಕೊಳ್ಳುತ್ತಿವೆ ಮತ್ತು ಕಾಶ್ಮೀರ ಕಣಿವೆಯ ನಿವಾಸಿಗಳ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವ ಹಕ್ಕನ್ನು ತಡೆಯುತ್ತಿವೆ ಎಂದು ಅರ್ಜಿದಾರರು ದೂರಿದ್ದಾರೆ.

ಆಗಸ್ಟ್ 4 ರಿಂದ, ಮೊಬೈಲ್ ಫೋನ್ ನೆಟ್‌ವರ್ಕ್‌ಗಳು, ಇಂಟರ್ನೆಟ್ ಸೇವೆಗಳು ಮತ್ತು ಲ್ಯಾಂಡ್‌ಲೈನ್ ಫೋನ್ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ. ಕಾಶ್ಮೀರ ಮತ್ತು ಜಮ್ಮುವಿನ ಕೆಲವು ಜಿಲ್ಲೆಗಳನ್ನು ಸಂಪೂರ್ಣವಾಗಿ ಪ್ರತ್ಯೇಕಿಸಿ ಸಂವಹನ ಮತ್ತು ಮಾಹಿತಿಯ ಎಲ್ಲಾ ಮೂಲಗಳನ್ನು ಕಡಿದುಹಾಕುವ ಮೂಲಕ ಬಂಧನದಲ್ಲಿಡಲಾಗಿದೆ ಎಂದು ಅರ್ಜಿದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರ್ಜಿದಾರರು ಅವರ ವಕೀಲರಾದ ವೃಂದಾ ಗ್ರೋವರ್, ಸೌತಿಕ್ ಬ್ಯಾನರ್ಜಿ, ಪ್ರಸನ್ನ ಎಸ್ ಮತ್ತು ರತ್ನ ಅಪ್ನೆಂಡರ್ ರವರು ಪ್ರತಿನಿಧಿಸುತ್ತಿದ್ದಾರೆ. ಅರ್ಜಿಯನ್ನು ಅಡ್ವೊಕೇಟ್ ಸುಮಿಕಾ ಹಜರಿಕಾ ಮೂಲಕ ಸಲ್ಲಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಎಲ್ಲಾ ಸಂವಹನ ಸೇವೆಗಳ ನಿರ್ಭಂದದ ಕಾರಣದಿಂದಾಗಿ ಕಾಶ್ಮೀರ ಟೈಮ್ಸ್ ನ ಕಾಶ್ಮೀರ ಆವೃತ್ತಿಯನ್ನು ಮುದ್ರಿಸಲು ಮತ್ತು ಪ್ರಕಟಿಸಲು ಆಕೆಗೆ ಸಾಧ್ಯವಾಗಲಿಲ್ಲ ಎಂದ ಅವರು ಇದರಲ್ಲಿ ಕಾಶ್ಮೀರದ ಪರಿಸ್ಥಿತಿಯನ್ನು ವರದಿ ಮಾಡುವುದು ಮತ್ತು ಪ್ರಕಟಿಸುವುದು ಸೇರಿದಂತೆ ಎಲ್ಲಾ ಮಾಧ್ಯಮ ಚಟುವಟಿಕೆಗಳ ಮೇಲೆ ದಿಗ್ಬಂಧನವನ್ನು ಹೇರಲಾಗಿದೆ ಎಂದಿದ್ದಾರೆ.

ಕಾಶ್ಮೀರದ ಜನರ ಮೇಲೆ ದೊಡ್ಡ ಪರಿಣಾಮ ಬೀರುವ ನಿರ್ಧಾರಗಳನ್ನು ಕಾಶ್ಮೀರಿಯರಿಗೆ ತಿಳಿಯದಂತೆ ತಡೆಯಲು ಕೇಂದ್ರ ಸರ್ಕಾರ ನಮ್ಮನ್ನು ಕತ್ತಲೆಯಲ್ಲಿಟ್ಟಿದೆ. ಆ ಮೂಲಕ ದೆಹಲಿಯಲ್ಲಿ ಅವರು ಅವರ ಪರವಾದ ವಾತವಾರಣವನ್ನು ಸೃಷ್ಟಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದು ಕಾಶ್ಮೀರದ ನಿವಾಸಿಗಳಲ್ಲಿ ಭಯ, ಆತಂಕವನ್ನು ಉಂಟುಮಾಡಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಈ ರೀತಿಯ ಮಾಹಿತಿ ನಿರ್ಬಂಧವು ಜನರ ಜೀವನ ಮತ್ತು ಅವರ ಭವಿಷ್ಯದ ಮೇಲೆ ನೇರವಾಗಿ ಪರಿಣಾಮ ಬೀರುವ ನಿರ್ಧಾರಗಳ ಬಗ್ಗೆ ತಿಳಿದುಕೊಳ್ಳುವ ಹಕ್ಕಿನ ನೇರ ಮತ್ತು ಗಂಭೀರ ಉಲ್ಲಂಘನೆಯಾಗಿದೆ” ಎಂದು ಅರ್ಜಿದಾರರು ಟೀಕಿಸಿದ್ದಾರೆ.

ಕೃಪೆ: ‘ದಿ ಲೀಫ್ ಲೆಟ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...