Homeಚಳವಳಿಕಾಶ್ಮೀರದ ಮಾಧ್ಯಮಗಳನ್ನು ಬಂಧನದಲ್ಲಿಡಲಾಗಿದೆ: ಸುಪ್ರೀಂ ಕೋರ್ಟ್ ನಲ್ಲಿ ಅನುರಾಧಾ ಭಾಸಿನ್ ಪ್ರಶ್ನೆ

ಕಾಶ್ಮೀರದ ಮಾಧ್ಯಮಗಳನ್ನು ಬಂಧನದಲ್ಲಿಡಲಾಗಿದೆ: ಸುಪ್ರೀಂ ಕೋರ್ಟ್ ನಲ್ಲಿ ಅನುರಾಧಾ ಭಾಸಿನ್ ಪ್ರಶ್ನೆ

- Advertisement -
- Advertisement -

ಕಾಶ್ಮೀರ ಟೈಮ್ಸ್ ನ ಕಾರ್ಯನಿರ್ವಾಹಕ ಸಂಪಾದಕರಾದ ಅನುರಾಧಾ ಭಾಸಿನ್ ರವರು ‘ಜಮ್ಮು ಮತ್ತು ಕಾಶ್ಮೀರದ ಎಲ್ಲಾ ಭಾಗಗಳಲ್ಲಿನ ಪತ್ರಕರ್ತರು ಮತ್ತು ಇತರ ಎಲ್ಲ ಮಾಧ್ಯಮ ಸಿಬ್ಬಂದಿಗೆ ತಮ್ಮ ವೃತ್ತಿಯನ್ನು ಮುಕ್ತವಾಗಿ ನಿರ್ವಹಿಸುವ ವಾತವಾರಣ ಕಲ್ಪಿಸಬೇಕೆಂದು’ ಒತ್ತಾಯಿಸಿ ಸುಪ್ರೀಂ ಕೋರ್ಟ್ ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದಾರೆ.

ಅಂತರ್ಜಾಲ ಮತ್ತು ದೂರಸಂಪರ್ಕ ಸೇವೆಗಳ ಸಂಪೂರ್ಣ ಸ್ಥಗಿತಗೊಳಿಸುವ ಮೂಲಕ ವಿಧಿಸಲಾಗುತ್ತಿರುವ ನಿರ್ಬಂಧಗಳು ಮತ್ತು ಫೋಟೋ-ಪತ್ರಕರ್ತರು ಮತ್ತು ವರದಿಗಾರರ ಚಲನವಲನಕ್ಕೆ ತೀವ್ರವಾದ ನಿರ್ಬಂಧಗಳನ್ನು ತಕ್ಷಣ ಸಡಿಲಿಸಬೇಕು ಆ ಮೂಲಕ ಪತ್ರಿಕಾ ಮತ್ತು ಮಾಧ್ಯಮಗಳ ಸ್ವಾತಂತ್ರ್ಯವನ್ನು ಕಾಪಾಡಬೆಕೆಂದು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಆಗಸ್ಟ್ 4 ರಿಂದ ಇಡೀ ರಾಜ್ಯವನ್ನು ಕೇಂದ್ರ ಸರ್ಕಾರ ತನ್ನ ಹತೋಟಿಗೆ ತೆಗೆದುಕೊಂಡ ನಂತರ ಪತ್ರಕರ್ತರು ತಮ್ಮ ವೃತ್ತಿಯನ್ನು ಮುಂದುವರೆಸಲು ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿನ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಮುಕ್ತವಾಗಿ ವರದಿ ಮಾಡುವ ಹಕ್ಕನ್ನು ಚಲಾಯಿಸಲು ಎದುರಾಗಿರುವ ನಿರ್ಬಂಧಗಳನ್ನು ತೆಗೆದುಹಾಕುವಂತೆ ಜಮ್ಮು ಕಾಶ್ಮೀರ ಸರ್ಕಾರಕ್ಕೆ ಕೋರ್ಟ್ ನಿರ್ದೇಶನ ನೀಡಬೇಕೆಂದು ಅರ್ಜಿದಾರರು ಒತ್ತಾಯಿಸಿದ್ದಾರೆ.

ಇಂತಹ ನಿರ್ಬಂಧಗಳು ಭಾರತದ ಸಂವಿಧಾನದ 14 ಮತ್ತು 19 ನೇ ವಿಧಿಯ ಅನ್ವಯ ಪತ್ರಕರ್ತರ ಹಕ್ಕುಗಳನ್ನು ಕಸಿದುಕೊಳ್ಳುತ್ತಿವೆ ಮತ್ತು ಕಾಶ್ಮೀರ ಕಣಿವೆಯ ನಿವಾಸಿಗಳ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವ ಹಕ್ಕನ್ನು ತಡೆಯುತ್ತಿವೆ ಎಂದು ಅರ್ಜಿದಾರರು ದೂರಿದ್ದಾರೆ.

ಆಗಸ್ಟ್ 4 ರಿಂದ, ಮೊಬೈಲ್ ಫೋನ್ ನೆಟ್‌ವರ್ಕ್‌ಗಳು, ಇಂಟರ್ನೆಟ್ ಸೇವೆಗಳು ಮತ್ತು ಲ್ಯಾಂಡ್‌ಲೈನ್ ಫೋನ್ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ. ಕಾಶ್ಮೀರ ಮತ್ತು ಜಮ್ಮುವಿನ ಕೆಲವು ಜಿಲ್ಲೆಗಳನ್ನು ಸಂಪೂರ್ಣವಾಗಿ ಪ್ರತ್ಯೇಕಿಸಿ ಸಂವಹನ ಮತ್ತು ಮಾಹಿತಿಯ ಎಲ್ಲಾ ಮೂಲಗಳನ್ನು ಕಡಿದುಹಾಕುವ ಮೂಲಕ ಬಂಧನದಲ್ಲಿಡಲಾಗಿದೆ ಎಂದು ಅರ್ಜಿದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರ್ಜಿದಾರರು ಅವರ ವಕೀಲರಾದ ವೃಂದಾ ಗ್ರೋವರ್, ಸೌತಿಕ್ ಬ್ಯಾನರ್ಜಿ, ಪ್ರಸನ್ನ ಎಸ್ ಮತ್ತು ರತ್ನ ಅಪ್ನೆಂಡರ್ ರವರು ಪ್ರತಿನಿಧಿಸುತ್ತಿದ್ದಾರೆ. ಅರ್ಜಿಯನ್ನು ಅಡ್ವೊಕೇಟ್ ಸುಮಿಕಾ ಹಜರಿಕಾ ಮೂಲಕ ಸಲ್ಲಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಎಲ್ಲಾ ಸಂವಹನ ಸೇವೆಗಳ ನಿರ್ಭಂದದ ಕಾರಣದಿಂದಾಗಿ ಕಾಶ್ಮೀರ ಟೈಮ್ಸ್ ನ ಕಾಶ್ಮೀರ ಆವೃತ್ತಿಯನ್ನು ಮುದ್ರಿಸಲು ಮತ್ತು ಪ್ರಕಟಿಸಲು ಆಕೆಗೆ ಸಾಧ್ಯವಾಗಲಿಲ್ಲ ಎಂದ ಅವರು ಇದರಲ್ಲಿ ಕಾಶ್ಮೀರದ ಪರಿಸ್ಥಿತಿಯನ್ನು ವರದಿ ಮಾಡುವುದು ಮತ್ತು ಪ್ರಕಟಿಸುವುದು ಸೇರಿದಂತೆ ಎಲ್ಲಾ ಮಾಧ್ಯಮ ಚಟುವಟಿಕೆಗಳ ಮೇಲೆ ದಿಗ್ಬಂಧನವನ್ನು ಹೇರಲಾಗಿದೆ ಎಂದಿದ್ದಾರೆ.

ಕಾಶ್ಮೀರದ ಜನರ ಮೇಲೆ ದೊಡ್ಡ ಪರಿಣಾಮ ಬೀರುವ ನಿರ್ಧಾರಗಳನ್ನು ಕಾಶ್ಮೀರಿಯರಿಗೆ ತಿಳಿಯದಂತೆ ತಡೆಯಲು ಕೇಂದ್ರ ಸರ್ಕಾರ ನಮ್ಮನ್ನು ಕತ್ತಲೆಯಲ್ಲಿಟ್ಟಿದೆ. ಆ ಮೂಲಕ ದೆಹಲಿಯಲ್ಲಿ ಅವರು ಅವರ ಪರವಾದ ವಾತವಾರಣವನ್ನು ಸೃಷ್ಟಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದು ಕಾಶ್ಮೀರದ ನಿವಾಸಿಗಳಲ್ಲಿ ಭಯ, ಆತಂಕವನ್ನು ಉಂಟುಮಾಡಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಈ ರೀತಿಯ ಮಾಹಿತಿ ನಿರ್ಬಂಧವು ಜನರ ಜೀವನ ಮತ್ತು ಅವರ ಭವಿಷ್ಯದ ಮೇಲೆ ನೇರವಾಗಿ ಪರಿಣಾಮ ಬೀರುವ ನಿರ್ಧಾರಗಳ ಬಗ್ಗೆ ತಿಳಿದುಕೊಳ್ಳುವ ಹಕ್ಕಿನ ನೇರ ಮತ್ತು ಗಂಭೀರ ಉಲ್ಲಂಘನೆಯಾಗಿದೆ” ಎಂದು ಅರ್ಜಿದಾರರು ಟೀಕಿಸಿದ್ದಾರೆ.

ಕೃಪೆ: ‘ದಿ ಲೀಫ್ ಲೆಟ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...