Homeಚಳವಳಿಕಾಶ್ಮೀರದ ಮಾಧ್ಯಮಗಳನ್ನು ಬಂಧನದಲ್ಲಿಡಲಾಗಿದೆ: ಸುಪ್ರೀಂ ಕೋರ್ಟ್ ನಲ್ಲಿ ಅನುರಾಧಾ ಭಾಸಿನ್ ಪ್ರಶ್ನೆ

ಕಾಶ್ಮೀರದ ಮಾಧ್ಯಮಗಳನ್ನು ಬಂಧನದಲ್ಲಿಡಲಾಗಿದೆ: ಸುಪ್ರೀಂ ಕೋರ್ಟ್ ನಲ್ಲಿ ಅನುರಾಧಾ ಭಾಸಿನ್ ಪ್ರಶ್ನೆ

- Advertisement -
- Advertisement -

ಕಾಶ್ಮೀರ ಟೈಮ್ಸ್ ನ ಕಾರ್ಯನಿರ್ವಾಹಕ ಸಂಪಾದಕರಾದ ಅನುರಾಧಾ ಭಾಸಿನ್ ರವರು ‘ಜಮ್ಮು ಮತ್ತು ಕಾಶ್ಮೀರದ ಎಲ್ಲಾ ಭಾಗಗಳಲ್ಲಿನ ಪತ್ರಕರ್ತರು ಮತ್ತು ಇತರ ಎಲ್ಲ ಮಾಧ್ಯಮ ಸಿಬ್ಬಂದಿಗೆ ತಮ್ಮ ವೃತ್ತಿಯನ್ನು ಮುಕ್ತವಾಗಿ ನಿರ್ವಹಿಸುವ ವಾತವಾರಣ ಕಲ್ಪಿಸಬೇಕೆಂದು’ ಒತ್ತಾಯಿಸಿ ಸುಪ್ರೀಂ ಕೋರ್ಟ್ ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದಾರೆ.

ಅಂತರ್ಜಾಲ ಮತ್ತು ದೂರಸಂಪರ್ಕ ಸೇವೆಗಳ ಸಂಪೂರ್ಣ ಸ್ಥಗಿತಗೊಳಿಸುವ ಮೂಲಕ ವಿಧಿಸಲಾಗುತ್ತಿರುವ ನಿರ್ಬಂಧಗಳು ಮತ್ತು ಫೋಟೋ-ಪತ್ರಕರ್ತರು ಮತ್ತು ವರದಿಗಾರರ ಚಲನವಲನಕ್ಕೆ ತೀವ್ರವಾದ ನಿರ್ಬಂಧಗಳನ್ನು ತಕ್ಷಣ ಸಡಿಲಿಸಬೇಕು ಆ ಮೂಲಕ ಪತ್ರಿಕಾ ಮತ್ತು ಮಾಧ್ಯಮಗಳ ಸ್ವಾತಂತ್ರ್ಯವನ್ನು ಕಾಪಾಡಬೆಕೆಂದು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಆಗಸ್ಟ್ 4 ರಿಂದ ಇಡೀ ರಾಜ್ಯವನ್ನು ಕೇಂದ್ರ ಸರ್ಕಾರ ತನ್ನ ಹತೋಟಿಗೆ ತೆಗೆದುಕೊಂಡ ನಂತರ ಪತ್ರಕರ್ತರು ತಮ್ಮ ವೃತ್ತಿಯನ್ನು ಮುಂದುವರೆಸಲು ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿನ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಮುಕ್ತವಾಗಿ ವರದಿ ಮಾಡುವ ಹಕ್ಕನ್ನು ಚಲಾಯಿಸಲು ಎದುರಾಗಿರುವ ನಿರ್ಬಂಧಗಳನ್ನು ತೆಗೆದುಹಾಕುವಂತೆ ಜಮ್ಮು ಕಾಶ್ಮೀರ ಸರ್ಕಾರಕ್ಕೆ ಕೋರ್ಟ್ ನಿರ್ದೇಶನ ನೀಡಬೇಕೆಂದು ಅರ್ಜಿದಾರರು ಒತ್ತಾಯಿಸಿದ್ದಾರೆ.

ಇಂತಹ ನಿರ್ಬಂಧಗಳು ಭಾರತದ ಸಂವಿಧಾನದ 14 ಮತ್ತು 19 ನೇ ವಿಧಿಯ ಅನ್ವಯ ಪತ್ರಕರ್ತರ ಹಕ್ಕುಗಳನ್ನು ಕಸಿದುಕೊಳ್ಳುತ್ತಿವೆ ಮತ್ತು ಕಾಶ್ಮೀರ ಕಣಿವೆಯ ನಿವಾಸಿಗಳ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವ ಹಕ್ಕನ್ನು ತಡೆಯುತ್ತಿವೆ ಎಂದು ಅರ್ಜಿದಾರರು ದೂರಿದ್ದಾರೆ.

ಆಗಸ್ಟ್ 4 ರಿಂದ, ಮೊಬೈಲ್ ಫೋನ್ ನೆಟ್‌ವರ್ಕ್‌ಗಳು, ಇಂಟರ್ನೆಟ್ ಸೇವೆಗಳು ಮತ್ತು ಲ್ಯಾಂಡ್‌ಲೈನ್ ಫೋನ್ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ. ಕಾಶ್ಮೀರ ಮತ್ತು ಜಮ್ಮುವಿನ ಕೆಲವು ಜಿಲ್ಲೆಗಳನ್ನು ಸಂಪೂರ್ಣವಾಗಿ ಪ್ರತ್ಯೇಕಿಸಿ ಸಂವಹನ ಮತ್ತು ಮಾಹಿತಿಯ ಎಲ್ಲಾ ಮೂಲಗಳನ್ನು ಕಡಿದುಹಾಕುವ ಮೂಲಕ ಬಂಧನದಲ್ಲಿಡಲಾಗಿದೆ ಎಂದು ಅರ್ಜಿದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರ್ಜಿದಾರರು ಅವರ ವಕೀಲರಾದ ವೃಂದಾ ಗ್ರೋವರ್, ಸೌತಿಕ್ ಬ್ಯಾನರ್ಜಿ, ಪ್ರಸನ್ನ ಎಸ್ ಮತ್ತು ರತ್ನ ಅಪ್ನೆಂಡರ್ ರವರು ಪ್ರತಿನಿಧಿಸುತ್ತಿದ್ದಾರೆ. ಅರ್ಜಿಯನ್ನು ಅಡ್ವೊಕೇಟ್ ಸುಮಿಕಾ ಹಜರಿಕಾ ಮೂಲಕ ಸಲ್ಲಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಎಲ್ಲಾ ಸಂವಹನ ಸೇವೆಗಳ ನಿರ್ಭಂದದ ಕಾರಣದಿಂದಾಗಿ ಕಾಶ್ಮೀರ ಟೈಮ್ಸ್ ನ ಕಾಶ್ಮೀರ ಆವೃತ್ತಿಯನ್ನು ಮುದ್ರಿಸಲು ಮತ್ತು ಪ್ರಕಟಿಸಲು ಆಕೆಗೆ ಸಾಧ್ಯವಾಗಲಿಲ್ಲ ಎಂದ ಅವರು ಇದರಲ್ಲಿ ಕಾಶ್ಮೀರದ ಪರಿಸ್ಥಿತಿಯನ್ನು ವರದಿ ಮಾಡುವುದು ಮತ್ತು ಪ್ರಕಟಿಸುವುದು ಸೇರಿದಂತೆ ಎಲ್ಲಾ ಮಾಧ್ಯಮ ಚಟುವಟಿಕೆಗಳ ಮೇಲೆ ದಿಗ್ಬಂಧನವನ್ನು ಹೇರಲಾಗಿದೆ ಎಂದಿದ್ದಾರೆ.

ಕಾಶ್ಮೀರದ ಜನರ ಮೇಲೆ ದೊಡ್ಡ ಪರಿಣಾಮ ಬೀರುವ ನಿರ್ಧಾರಗಳನ್ನು ಕಾಶ್ಮೀರಿಯರಿಗೆ ತಿಳಿಯದಂತೆ ತಡೆಯಲು ಕೇಂದ್ರ ಸರ್ಕಾರ ನಮ್ಮನ್ನು ಕತ್ತಲೆಯಲ್ಲಿಟ್ಟಿದೆ. ಆ ಮೂಲಕ ದೆಹಲಿಯಲ್ಲಿ ಅವರು ಅವರ ಪರವಾದ ವಾತವಾರಣವನ್ನು ಸೃಷ್ಟಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದು ಕಾಶ್ಮೀರದ ನಿವಾಸಿಗಳಲ್ಲಿ ಭಯ, ಆತಂಕವನ್ನು ಉಂಟುಮಾಡಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಈ ರೀತಿಯ ಮಾಹಿತಿ ನಿರ್ಬಂಧವು ಜನರ ಜೀವನ ಮತ್ತು ಅವರ ಭವಿಷ್ಯದ ಮೇಲೆ ನೇರವಾಗಿ ಪರಿಣಾಮ ಬೀರುವ ನಿರ್ಧಾರಗಳ ಬಗ್ಗೆ ತಿಳಿದುಕೊಳ್ಳುವ ಹಕ್ಕಿನ ನೇರ ಮತ್ತು ಗಂಭೀರ ಉಲ್ಲಂಘನೆಯಾಗಿದೆ” ಎಂದು ಅರ್ಜಿದಾರರು ಟೀಕಿಸಿದ್ದಾರೆ.

ಕೃಪೆ: ‘ದಿ ಲೀಫ್ ಲೆಟ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....