Homeಚಳವಳಿಕಾಶ್ಮೀರದ ಮಾಧ್ಯಮಗಳನ್ನು ಬಂಧನದಲ್ಲಿಡಲಾಗಿದೆ: ಸುಪ್ರೀಂ ಕೋರ್ಟ್ ನಲ್ಲಿ ಅನುರಾಧಾ ಭಾಸಿನ್ ಪ್ರಶ್ನೆ

ಕಾಶ್ಮೀರದ ಮಾಧ್ಯಮಗಳನ್ನು ಬಂಧನದಲ್ಲಿಡಲಾಗಿದೆ: ಸುಪ್ರೀಂ ಕೋರ್ಟ್ ನಲ್ಲಿ ಅನುರಾಧಾ ಭಾಸಿನ್ ಪ್ರಶ್ನೆ

- Advertisement -
- Advertisement -

ಕಾಶ್ಮೀರ ಟೈಮ್ಸ್ ನ ಕಾರ್ಯನಿರ್ವಾಹಕ ಸಂಪಾದಕರಾದ ಅನುರಾಧಾ ಭಾಸಿನ್ ರವರು ‘ಜಮ್ಮು ಮತ್ತು ಕಾಶ್ಮೀರದ ಎಲ್ಲಾ ಭಾಗಗಳಲ್ಲಿನ ಪತ್ರಕರ್ತರು ಮತ್ತು ಇತರ ಎಲ್ಲ ಮಾಧ್ಯಮ ಸಿಬ್ಬಂದಿಗೆ ತಮ್ಮ ವೃತ್ತಿಯನ್ನು ಮುಕ್ತವಾಗಿ ನಿರ್ವಹಿಸುವ ವಾತವಾರಣ ಕಲ್ಪಿಸಬೇಕೆಂದು’ ಒತ್ತಾಯಿಸಿ ಸುಪ್ರೀಂ ಕೋರ್ಟ್ ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದಾರೆ.

ಅಂತರ್ಜಾಲ ಮತ್ತು ದೂರಸಂಪರ್ಕ ಸೇವೆಗಳ ಸಂಪೂರ್ಣ ಸ್ಥಗಿತಗೊಳಿಸುವ ಮೂಲಕ ವಿಧಿಸಲಾಗುತ್ತಿರುವ ನಿರ್ಬಂಧಗಳು ಮತ್ತು ಫೋಟೋ-ಪತ್ರಕರ್ತರು ಮತ್ತು ವರದಿಗಾರರ ಚಲನವಲನಕ್ಕೆ ತೀವ್ರವಾದ ನಿರ್ಬಂಧಗಳನ್ನು ತಕ್ಷಣ ಸಡಿಲಿಸಬೇಕು ಆ ಮೂಲಕ ಪತ್ರಿಕಾ ಮತ್ತು ಮಾಧ್ಯಮಗಳ ಸ್ವಾತಂತ್ರ್ಯವನ್ನು ಕಾಪಾಡಬೆಕೆಂದು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಆಗಸ್ಟ್ 4 ರಿಂದ ಇಡೀ ರಾಜ್ಯವನ್ನು ಕೇಂದ್ರ ಸರ್ಕಾರ ತನ್ನ ಹತೋಟಿಗೆ ತೆಗೆದುಕೊಂಡ ನಂತರ ಪತ್ರಕರ್ತರು ತಮ್ಮ ವೃತ್ತಿಯನ್ನು ಮುಂದುವರೆಸಲು ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿನ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಮುಕ್ತವಾಗಿ ವರದಿ ಮಾಡುವ ಹಕ್ಕನ್ನು ಚಲಾಯಿಸಲು ಎದುರಾಗಿರುವ ನಿರ್ಬಂಧಗಳನ್ನು ತೆಗೆದುಹಾಕುವಂತೆ ಜಮ್ಮು ಕಾಶ್ಮೀರ ಸರ್ಕಾರಕ್ಕೆ ಕೋರ್ಟ್ ನಿರ್ದೇಶನ ನೀಡಬೇಕೆಂದು ಅರ್ಜಿದಾರರು ಒತ್ತಾಯಿಸಿದ್ದಾರೆ.

ಇಂತಹ ನಿರ್ಬಂಧಗಳು ಭಾರತದ ಸಂವಿಧಾನದ 14 ಮತ್ತು 19 ನೇ ವಿಧಿಯ ಅನ್ವಯ ಪತ್ರಕರ್ತರ ಹಕ್ಕುಗಳನ್ನು ಕಸಿದುಕೊಳ್ಳುತ್ತಿವೆ ಮತ್ತು ಕಾಶ್ಮೀರ ಕಣಿವೆಯ ನಿವಾಸಿಗಳ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವ ಹಕ್ಕನ್ನು ತಡೆಯುತ್ತಿವೆ ಎಂದು ಅರ್ಜಿದಾರರು ದೂರಿದ್ದಾರೆ.

ಆಗಸ್ಟ್ 4 ರಿಂದ, ಮೊಬೈಲ್ ಫೋನ್ ನೆಟ್‌ವರ್ಕ್‌ಗಳು, ಇಂಟರ್ನೆಟ್ ಸೇವೆಗಳು ಮತ್ತು ಲ್ಯಾಂಡ್‌ಲೈನ್ ಫೋನ್ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ. ಕಾಶ್ಮೀರ ಮತ್ತು ಜಮ್ಮುವಿನ ಕೆಲವು ಜಿಲ್ಲೆಗಳನ್ನು ಸಂಪೂರ್ಣವಾಗಿ ಪ್ರತ್ಯೇಕಿಸಿ ಸಂವಹನ ಮತ್ತು ಮಾಹಿತಿಯ ಎಲ್ಲಾ ಮೂಲಗಳನ್ನು ಕಡಿದುಹಾಕುವ ಮೂಲಕ ಬಂಧನದಲ್ಲಿಡಲಾಗಿದೆ ಎಂದು ಅರ್ಜಿದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರ್ಜಿದಾರರು ಅವರ ವಕೀಲರಾದ ವೃಂದಾ ಗ್ರೋವರ್, ಸೌತಿಕ್ ಬ್ಯಾನರ್ಜಿ, ಪ್ರಸನ್ನ ಎಸ್ ಮತ್ತು ರತ್ನ ಅಪ್ನೆಂಡರ್ ರವರು ಪ್ರತಿನಿಧಿಸುತ್ತಿದ್ದಾರೆ. ಅರ್ಜಿಯನ್ನು ಅಡ್ವೊಕೇಟ್ ಸುಮಿಕಾ ಹಜರಿಕಾ ಮೂಲಕ ಸಲ್ಲಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಎಲ್ಲಾ ಸಂವಹನ ಸೇವೆಗಳ ನಿರ್ಭಂದದ ಕಾರಣದಿಂದಾಗಿ ಕಾಶ್ಮೀರ ಟೈಮ್ಸ್ ನ ಕಾಶ್ಮೀರ ಆವೃತ್ತಿಯನ್ನು ಮುದ್ರಿಸಲು ಮತ್ತು ಪ್ರಕಟಿಸಲು ಆಕೆಗೆ ಸಾಧ್ಯವಾಗಲಿಲ್ಲ ಎಂದ ಅವರು ಇದರಲ್ಲಿ ಕಾಶ್ಮೀರದ ಪರಿಸ್ಥಿತಿಯನ್ನು ವರದಿ ಮಾಡುವುದು ಮತ್ತು ಪ್ರಕಟಿಸುವುದು ಸೇರಿದಂತೆ ಎಲ್ಲಾ ಮಾಧ್ಯಮ ಚಟುವಟಿಕೆಗಳ ಮೇಲೆ ದಿಗ್ಬಂಧನವನ್ನು ಹೇರಲಾಗಿದೆ ಎಂದಿದ್ದಾರೆ.

ಕಾಶ್ಮೀರದ ಜನರ ಮೇಲೆ ದೊಡ್ಡ ಪರಿಣಾಮ ಬೀರುವ ನಿರ್ಧಾರಗಳನ್ನು ಕಾಶ್ಮೀರಿಯರಿಗೆ ತಿಳಿಯದಂತೆ ತಡೆಯಲು ಕೇಂದ್ರ ಸರ್ಕಾರ ನಮ್ಮನ್ನು ಕತ್ತಲೆಯಲ್ಲಿಟ್ಟಿದೆ. ಆ ಮೂಲಕ ದೆಹಲಿಯಲ್ಲಿ ಅವರು ಅವರ ಪರವಾದ ವಾತವಾರಣವನ್ನು ಸೃಷ್ಟಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದು ಕಾಶ್ಮೀರದ ನಿವಾಸಿಗಳಲ್ಲಿ ಭಯ, ಆತಂಕವನ್ನು ಉಂಟುಮಾಡಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಈ ರೀತಿಯ ಮಾಹಿತಿ ನಿರ್ಬಂಧವು ಜನರ ಜೀವನ ಮತ್ತು ಅವರ ಭವಿಷ್ಯದ ಮೇಲೆ ನೇರವಾಗಿ ಪರಿಣಾಮ ಬೀರುವ ನಿರ್ಧಾರಗಳ ಬಗ್ಗೆ ತಿಳಿದುಕೊಳ್ಳುವ ಹಕ್ಕಿನ ನೇರ ಮತ್ತು ಗಂಭೀರ ಉಲ್ಲಂಘನೆಯಾಗಿದೆ” ಎಂದು ಅರ್ಜಿದಾರರು ಟೀಕಿಸಿದ್ದಾರೆ.

ಕೃಪೆ: ‘ದಿ ಲೀಫ್ ಲೆಟ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...