Homeಚಳವಳಿಕಾಶ್ಮೀರದ ಮಾಧ್ಯಮಗಳನ್ನು ಬಂಧನದಲ್ಲಿಡಲಾಗಿದೆ: ಸುಪ್ರೀಂ ಕೋರ್ಟ್ ನಲ್ಲಿ ಅನುರಾಧಾ ಭಾಸಿನ್ ಪ್ರಶ್ನೆ

ಕಾಶ್ಮೀರದ ಮಾಧ್ಯಮಗಳನ್ನು ಬಂಧನದಲ್ಲಿಡಲಾಗಿದೆ: ಸುಪ್ರೀಂ ಕೋರ್ಟ್ ನಲ್ಲಿ ಅನುರಾಧಾ ಭಾಸಿನ್ ಪ್ರಶ್ನೆ

- Advertisement -
- Advertisement -

ಕಾಶ್ಮೀರ ಟೈಮ್ಸ್ ನ ಕಾರ್ಯನಿರ್ವಾಹಕ ಸಂಪಾದಕರಾದ ಅನುರಾಧಾ ಭಾಸಿನ್ ರವರು ‘ಜಮ್ಮು ಮತ್ತು ಕಾಶ್ಮೀರದ ಎಲ್ಲಾ ಭಾಗಗಳಲ್ಲಿನ ಪತ್ರಕರ್ತರು ಮತ್ತು ಇತರ ಎಲ್ಲ ಮಾಧ್ಯಮ ಸಿಬ್ಬಂದಿಗೆ ತಮ್ಮ ವೃತ್ತಿಯನ್ನು ಮುಕ್ತವಾಗಿ ನಿರ್ವಹಿಸುವ ವಾತವಾರಣ ಕಲ್ಪಿಸಬೇಕೆಂದು’ ಒತ್ತಾಯಿಸಿ ಸುಪ್ರೀಂ ಕೋರ್ಟ್ ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದಾರೆ.

ಅಂತರ್ಜಾಲ ಮತ್ತು ದೂರಸಂಪರ್ಕ ಸೇವೆಗಳ ಸಂಪೂರ್ಣ ಸ್ಥಗಿತಗೊಳಿಸುವ ಮೂಲಕ ವಿಧಿಸಲಾಗುತ್ತಿರುವ ನಿರ್ಬಂಧಗಳು ಮತ್ತು ಫೋಟೋ-ಪತ್ರಕರ್ತರು ಮತ್ತು ವರದಿಗಾರರ ಚಲನವಲನಕ್ಕೆ ತೀವ್ರವಾದ ನಿರ್ಬಂಧಗಳನ್ನು ತಕ್ಷಣ ಸಡಿಲಿಸಬೇಕು ಆ ಮೂಲಕ ಪತ್ರಿಕಾ ಮತ್ತು ಮಾಧ್ಯಮಗಳ ಸ್ವಾತಂತ್ರ್ಯವನ್ನು ಕಾಪಾಡಬೆಕೆಂದು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಆಗಸ್ಟ್ 4 ರಿಂದ ಇಡೀ ರಾಜ್ಯವನ್ನು ಕೇಂದ್ರ ಸರ್ಕಾರ ತನ್ನ ಹತೋಟಿಗೆ ತೆಗೆದುಕೊಂಡ ನಂತರ ಪತ್ರಕರ್ತರು ತಮ್ಮ ವೃತ್ತಿಯನ್ನು ಮುಂದುವರೆಸಲು ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿನ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಮುಕ್ತವಾಗಿ ವರದಿ ಮಾಡುವ ಹಕ್ಕನ್ನು ಚಲಾಯಿಸಲು ಎದುರಾಗಿರುವ ನಿರ್ಬಂಧಗಳನ್ನು ತೆಗೆದುಹಾಕುವಂತೆ ಜಮ್ಮು ಕಾಶ್ಮೀರ ಸರ್ಕಾರಕ್ಕೆ ಕೋರ್ಟ್ ನಿರ್ದೇಶನ ನೀಡಬೇಕೆಂದು ಅರ್ಜಿದಾರರು ಒತ್ತಾಯಿಸಿದ್ದಾರೆ.

ಇಂತಹ ನಿರ್ಬಂಧಗಳು ಭಾರತದ ಸಂವಿಧಾನದ 14 ಮತ್ತು 19 ನೇ ವಿಧಿಯ ಅನ್ವಯ ಪತ್ರಕರ್ತರ ಹಕ್ಕುಗಳನ್ನು ಕಸಿದುಕೊಳ್ಳುತ್ತಿವೆ ಮತ್ತು ಕಾಶ್ಮೀರ ಕಣಿವೆಯ ನಿವಾಸಿಗಳ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವ ಹಕ್ಕನ್ನು ತಡೆಯುತ್ತಿವೆ ಎಂದು ಅರ್ಜಿದಾರರು ದೂರಿದ್ದಾರೆ.

ಆಗಸ್ಟ್ 4 ರಿಂದ, ಮೊಬೈಲ್ ಫೋನ್ ನೆಟ್‌ವರ್ಕ್‌ಗಳು, ಇಂಟರ್ನೆಟ್ ಸೇವೆಗಳು ಮತ್ತು ಲ್ಯಾಂಡ್‌ಲೈನ್ ಫೋನ್ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ. ಕಾಶ್ಮೀರ ಮತ್ತು ಜಮ್ಮುವಿನ ಕೆಲವು ಜಿಲ್ಲೆಗಳನ್ನು ಸಂಪೂರ್ಣವಾಗಿ ಪ್ರತ್ಯೇಕಿಸಿ ಸಂವಹನ ಮತ್ತು ಮಾಹಿತಿಯ ಎಲ್ಲಾ ಮೂಲಗಳನ್ನು ಕಡಿದುಹಾಕುವ ಮೂಲಕ ಬಂಧನದಲ್ಲಿಡಲಾಗಿದೆ ಎಂದು ಅರ್ಜಿದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರ್ಜಿದಾರರು ಅವರ ವಕೀಲರಾದ ವೃಂದಾ ಗ್ರೋವರ್, ಸೌತಿಕ್ ಬ್ಯಾನರ್ಜಿ, ಪ್ರಸನ್ನ ಎಸ್ ಮತ್ತು ರತ್ನ ಅಪ್ನೆಂಡರ್ ರವರು ಪ್ರತಿನಿಧಿಸುತ್ತಿದ್ದಾರೆ. ಅರ್ಜಿಯನ್ನು ಅಡ್ವೊಕೇಟ್ ಸುಮಿಕಾ ಹಜರಿಕಾ ಮೂಲಕ ಸಲ್ಲಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಎಲ್ಲಾ ಸಂವಹನ ಸೇವೆಗಳ ನಿರ್ಭಂದದ ಕಾರಣದಿಂದಾಗಿ ಕಾಶ್ಮೀರ ಟೈಮ್ಸ್ ನ ಕಾಶ್ಮೀರ ಆವೃತ್ತಿಯನ್ನು ಮುದ್ರಿಸಲು ಮತ್ತು ಪ್ರಕಟಿಸಲು ಆಕೆಗೆ ಸಾಧ್ಯವಾಗಲಿಲ್ಲ ಎಂದ ಅವರು ಇದರಲ್ಲಿ ಕಾಶ್ಮೀರದ ಪರಿಸ್ಥಿತಿಯನ್ನು ವರದಿ ಮಾಡುವುದು ಮತ್ತು ಪ್ರಕಟಿಸುವುದು ಸೇರಿದಂತೆ ಎಲ್ಲಾ ಮಾಧ್ಯಮ ಚಟುವಟಿಕೆಗಳ ಮೇಲೆ ದಿಗ್ಬಂಧನವನ್ನು ಹೇರಲಾಗಿದೆ ಎಂದಿದ್ದಾರೆ.

ಕಾಶ್ಮೀರದ ಜನರ ಮೇಲೆ ದೊಡ್ಡ ಪರಿಣಾಮ ಬೀರುವ ನಿರ್ಧಾರಗಳನ್ನು ಕಾಶ್ಮೀರಿಯರಿಗೆ ತಿಳಿಯದಂತೆ ತಡೆಯಲು ಕೇಂದ್ರ ಸರ್ಕಾರ ನಮ್ಮನ್ನು ಕತ್ತಲೆಯಲ್ಲಿಟ್ಟಿದೆ. ಆ ಮೂಲಕ ದೆಹಲಿಯಲ್ಲಿ ಅವರು ಅವರ ಪರವಾದ ವಾತವಾರಣವನ್ನು ಸೃಷ್ಟಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದು ಕಾಶ್ಮೀರದ ನಿವಾಸಿಗಳಲ್ಲಿ ಭಯ, ಆತಂಕವನ್ನು ಉಂಟುಮಾಡಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಈ ರೀತಿಯ ಮಾಹಿತಿ ನಿರ್ಬಂಧವು ಜನರ ಜೀವನ ಮತ್ತು ಅವರ ಭವಿಷ್ಯದ ಮೇಲೆ ನೇರವಾಗಿ ಪರಿಣಾಮ ಬೀರುವ ನಿರ್ಧಾರಗಳ ಬಗ್ಗೆ ತಿಳಿದುಕೊಳ್ಳುವ ಹಕ್ಕಿನ ನೇರ ಮತ್ತು ಗಂಭೀರ ಉಲ್ಲಂಘನೆಯಾಗಿದೆ” ಎಂದು ಅರ್ಜಿದಾರರು ಟೀಕಿಸಿದ್ದಾರೆ.

ಕೃಪೆ: ‘ದಿ ಲೀಫ್ ಲೆಟ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...