Homeಮುಖಪುಟಕುಸ್ತಿಪಟುಗಳ #MeToo ಪ್ರತಿಭಟನೆಯನ್ನು ಹತ್ತಿಕ್ಕಲು ಅನುರಾಗ್ ಠಾಕೂರ್ ಯತ್ನ; ಸ್ಪೋಟಕ ಮಾಹಿತಿ ಬಿಚ್ಚಿಟ್ಟ ವಿನೇಶ್ ಫೋಗಟ್

ಕುಸ್ತಿಪಟುಗಳ #MeToo ಪ್ರತಿಭಟನೆಯನ್ನು ಹತ್ತಿಕ್ಕಲು ಅನುರಾಗ್ ಠಾಕೂರ್ ಯತ್ನ; ಸ್ಪೋಟಕ ಮಾಹಿತಿ ಬಿಚ್ಚಿಟ್ಟ ವಿನೇಶ್ ಫೋಗಟ್

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಜಂತರ್ ಮಂತರ್‌ನಲ್ಲಿ ಕ್ರೀಡಾಪಟುಗಳು ಹೋರಾಟ ನಡೆಸುತ್ತಿದ್ದಾರೆ. ಈ ಪ್ರತಿಭಟನೆಯಲ್ಲಿ ಮಾತನಾಡಿರುವ ಭಾರತದ ದಿಗ್ಗಜ ಕುಸ್ತಿಪಟು ವಿನೇಶ್ ಫೋಗಟ್ ಅವರು, ”ಬಹಳ ಸಮಯದವರೆಗೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಪ್ರಬಲ ವ್ಯಕ್ತಿಯ ವಿರುದ್ಧ ನಿಲ್ಲುವುದು ಅತ್ಯಂತ ಕಠಿಣ. ಅವರನ್ನು ಕೂಡಲೇ ಬಂಧಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಒಲಿಂಪಿಯನ್ ವಿನೇಶ್ ಫೋಗಟ್, ”ಇಷ್ಟು ದಿನ ಅಧಿಕಾರ ಮತ್ತು ಸ್ಥಾನವನ್ನು ದುರುಪಯೋಗಪಡಿಸಿಕೊಳ್ಳುವ ವ್ಯಕ್ತಿಯ ವಿರುದ್ಧ ನಿಲ್ಲುವುದು ತುಂಬಾ ಕಷ್ಟ” ಎಂದರು.

ಕುಸ್ತಿಪಟುಗಳು ಮೊದಲ ಬಾರಿಗೆ ಜಂತರ್ ಮಂತರ್‌ನಲ್ಲಿ ತಮ್ಮ ಪ್ರತಿಭಟನೆಯನ್ನು ಪ್ರಾರಂಭಿಸುವ ಮೊದಲು ಅಧಿಕಾರಿಯನ್ನು ಭೇಟಿಯಾಗಿದ್ದರು. ಆದರೆ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಿನೇಶ್ ಫೋಗಟ್ ಬಹಿರಂಗಪಡಿಸಿದರು.

ಇದನ್ನೂ ಓದಿ: ಅಷ್ಟು ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಲು ನಾನೇನು ಉದ್ರೇಕಗೊಳ್ಳುವ (ಶಿಲಾಜಿತ್) ಊಟ ಮಾಡ್ತೀನಾ?: ಬಿಜೆಪಿ ಸಂಸದನ ವಿವಾದಾತ್ಮಕ ಹೇಳಿಕೆ

”ನಾವು ಜಂತರ್ ಮಂತರ್‌ನಲ್ಲಿ ಕುಳಿತುಕೊಳ್ಳುವ ಮೂರ್ನಾಲ್ಕು ತಿಂಗಳ ಮೊದಲು, ಅಧಿಕಾರಿಯನ್ನು ಭೇಟಿಯಾಗಿದ್ದೆವು. ಈ ವೇಳೆ ಮಹಿಳಾ ಅಥ್ಲೀಟ್‌ಗಳಿಗೆ ಹೇಗೆ ಲೈಂಗಿಕ ಕಿರುಕುಳ ಮತ್ತು ಮಾನಸಿಕ ಹಿಂಸೆ ನೀಡಲಾಗುತ್ತದೆ ಎಂದು ನಾವು ಅವರಿಗೆ ಎಲ್ಲವನ್ನೂ ಹೇಳಿದ್ದೆವು. ಆದರೆ ಯಾವುದೇ ಕ್ರಮ ತೆಗೆದುಕೊಳ್ಳದಿದ್ದಾಗ ನಂತರ ನಾವು ಧರಣಿ ಕುಳಿತಿದ್ದೇವೆ” ಎಂದು ವಿನೇಶ್ ವಿವರಿಸಿದರು.

”ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಯಾವುದೇ ಕ್ರಮ ಕೈಗೊಳ್ಳದ ಮತ್ತು ಸಮಿತಿಯನ್ನು ರಚಿಸುವ ಮೂಲಕ ವಿಷಯವನ್ನು ಹತ್ತಿಕ್ಕಿದ್ದಾರೆ” ಎಂದು ವಿನೇಶ್ ಫೋಗಟ್ ಟೀಕಿಸಿದರು.

”ನಾವು ಕಳೆದ ಬಾರಿ ಕೇಂದ್ರ ಕ್ರೀಡಾ ಸಚಿವ (ಅನುರಾಗ್ ಠಾಕೂರ್) ಅವರೊಂದಿಗೆ ಮಾತನಾಡಿದ ನಂತರ ನಮ್ಮ ಪ್ರತಿಭಟನೆಯನ್ನು ಕೊನೆಗೊಳಿಸಿದ್ದೇವೆ ಮತ್ತು ಎಲ್ಲಾ ಅಥ್ಲೀಟ್‌ಗಳು ಲೈಂಗಿಕ ಕಿರುಕುಳದ ಬಗ್ಗೆ ಅವರಿಗೆ ತಿಳಿಸಿದ್ದರು. ಅವರು ಸಮಿತಿಯನ್ನು ರಚಿಸುವ ಮೂಲಕ, ಅಲ್ಲಿ ವಿಷಯವನ್ನು ಹತ್ತಿಕ್ಕಲು ಪ್ರಯತ್ನಿಸಿದರೇ ವಿನಃ ಆ ಸಮಯದಲ್ಲಿ ಯಾವುದೇ ಕ್ರಮ ಕೈಗೊಳ್ಳಲಿಲ್ಲ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...