Homeಮುಖಪುಟಕೊರೊನಾ ಕುರಿತ ಆತಂಕ ಸಮೂಹ ಸನ್ನಿಯಾಗಿ ಪರಿವರ್ತನೆಯಾಗದಿರಲಿ: ಎಚ್‌.ಡಿ ಕುಮಾರಸ್ವಾಮಿ

ಕೊರೊನಾ ಕುರಿತ ಆತಂಕ ಸಮೂಹ ಸನ್ನಿಯಾಗಿ ಪರಿವರ್ತನೆಯಾಗದಿರಲಿ: ಎಚ್‌.ಡಿ ಕುಮಾರಸ್ವಾಮಿ

- Advertisement -
- Advertisement -

ಕೊರೋನಾ ಸೋಂಕಿತರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುವುದೇ ಮುಂಜಾಗ್ರತಾ ಕ್ರಮ. ಇದಕ್ಕಾಗಿ ಕೆಲ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಿಭಾಗ ತೆರೆದಿರುವುದಾಗಿ ಸರ್ಕಾರ ಹೇಳುತ್ತಿದೆ. ಆದರೆ ಇತರ ರೋಗಿಗಳ ಜೊತೆ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುವುದು ಸರಿಯೇ? ಇದರ ಬದಲು ಖಾಲಿ ಉಳಿದಿರುವ ಸರ್ಕಾರಿ ಕಟ್ಟಡಗಳನ್ನು ಇದಕ್ಕಾಗಿ ಬಳಸಿಕೊಳ್ಳಬೇಕು ಎಂದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ರಾಜ್ಯದಲ್ಲಿ ಹಲವು ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳು ಖಾಲಿ ಉಳಿದಿವೆ. ಅವುಗಳನ್ನು ಕೊರೋನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುವ Quarantine ಕೇಂದ್ರಗಳಾಗಿ ಪರಿವರ್ತಿಸಬೇಕು. ಜನನಿಬಿಡ ಪ್ರದೇಶಗಳಿಂದ ದೂರದಲ್ಲಿ Quarantine ಕೇಂದ್ರ ತರೆಯಬೇಕು. ಸೋಂಕಿತರ ರಕ್ತ ಮಾದರಿ ಸಂಗ್ರಹಕ್ಕೆ ಅವರಿರುವಲ್ಲಿಯೇ ವ್ಯವಸ್ಥೆಯಾಗಬೇಕು ಎಂದಿದ್ದಾರೆ.

ಕೊರೊನಾ ವೈರಸ್‌ ವಿರುದ್ಧ ಕೈಗೊಂಡ ಕ್ರಮಗಳ ಕುರಿತ ಸುದ್ದಿಯನ್ನು ಜನರಿಗೆ ತಿಳಿಸುವ ವಿಚಾರದಲ್ಲಿ ಸರ್ಕಾರದಲ್ಲಿ ಎರಡು ಧ್ರುವಗಳು ಸೃಷ್ಟಿಯಾದಂತಿವೆ. ಆರೋಗ್ಯ ಸಚಿವರು ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಒಮ್ಮತದಿಂದ ಕಾರ್ಯ ನಿರ್ವಹಿಸಲಿ. ಪರಸ್ಪರರ ನಡುವೆ ಸಹಕಾರವಿರಲಿ. ಇದು ಪ್ರಚಾರ ಪಡೆಯುವ ಪ್ರಹಸನವಾಗಬಾರದು. ಜನರಲ್ಲಿ ಗೊಂದಲ ಮೂಡದಿರಲಿ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸುರಕ್ಷತಾ ಕ್ರಮಗಳನ್ನು ವಿವರಿಸುವ ವಿಚಾರ ಪ್ರಚಾರದ ಸರಕಾಗಬಾರದು. ಹಾಗೆ ಆಗಿದ್ದೇ ಆದರೆ ಜನರಲ್ಲಿ ಆತಂಕ ಸೃಷ್ಟಿಯಾಗುತ್ತದೆ. ಆತಂಕ ಸಮೂಹ ಸನ್ನಿಯಾಗಿ ಪರಿವರ್ತನೆಯಾಗಿ ಜನಜೀವನ ಮೇಲೆ ನೇತ್ಯಾತ್ಮಕ ಪರಿಣಾಮಗಳು ಉಂಟಾಗದಿರಲಿ ಎಂದು ಆಶಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...