Homeಕರೋನಾ ತಲ್ಲಣಮೊದಲ ಸಲ ಕೊವ್ಯಾಕ್ಸಿನ್, ಎರಡನೆ ಸಲ ಕೊವಿಶೀಲ್ಡ್ ಲಸಿಕೆ ಪಡೆದರೆ ಅಡ್ಡ ಪರಿಣಾಮ ಆಗುತ್ತವೆಯೇ?

ಮೊದಲ ಸಲ ಕೊವ್ಯಾಕ್ಸಿನ್, ಎರಡನೆ ಸಲ ಕೊವಿಶೀಲ್ಡ್ ಲಸಿಕೆ ಪಡೆದರೆ ಅಡ್ಡ ಪರಿಣಾಮ ಆಗುತ್ತವೆಯೇ?

- Advertisement -
- Advertisement -

ಲಸಿಕೆ ಕೊರತೆಯನ್ನು ಹೇಗೆ ನಿಭಾಯಿಸಬೇಕು ಎಂಬುದನ್ನು ಕಂಡುಹಿಡಿಯಲು ಕಡಿಮೆ ಮತ್ತು ಮಧ್ಯಮ-ಆದಾಯದ ಅನೇಕ ದೇಶಗಳು ಪ್ರಯತ್ನಿಸುತ್ತಿವೆ. ಕೆಲವು ಕಡೆಗಳಲ್ಲಿ ಸಂಶೋಧಕರು ಮತ್ತು ಸಾರ್ವಜನಿಕ ಆರೋಗ್ಯ ಅಧಿಕಾರಿಗಳು ಎರಡು ವಿಭಿನ್ನ ಶಾಟ್‌ಗಳನ್ನು ಮಿಶ್ರಣ ಮಾಡುವಂತಹ ತಂತ್ರಗಳನ್ನು ಪರಿಶೀಲಿಸುತ್ತಿದ್ದಾರೆ. ಭಾರತದ ಮಟ್ಟಿಗೆ ಇದನ್ನು ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಗಳು ಎಂದು ಪರಿಗಣಿಸಬಹುದು.

ಈಗಾಗಲೇ ದೇಶದ ಬಹು ರಾಜ್ಯಗಳಲ್ಲಿ ಕೋವಿಡ್ ಲಸಿಕೆಗಳ ಅಭಾವ ಇದೆ. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ನೀಡುವುದಕ್ಕೆ ಆದ್ಯತೆ ನೀಡಲಾಗುತ್ತಿದೆ. ಮೊದಲ ಡೋಸ್ ಒಂದು ಕಂಪನಿ ಲಸಿಕೆ ಪಡೆದವರು ಎರಡನೇ ಡೋಸ್‌ನಲ್ಲಿ ಇನ್ನೊಂದು ಕಂಪನಿ ಲಸಿಕೆ ಪಡೆದರೆ ಅಡ್ಡ ಪರಿಣಾಮ ಆಗುವ ಸಾಧ್ಯತೆಗಳಿವೆ. ಆದರೆ ಈ ಪರಿಣಾಮಗಳು ಮಾರಣಾಂತಿಕವೇನೂ ಅಲ್ಲ ಎಂದು ಆಕ್ಸ್‌ಫರ್ಡ್ ವಿವಿಯ ಸಂಶೋಧಕರು ಲ್ಯಾನ್ಸೆಟ್‌ನಲ್ಲಿ ವರದಿ ಮಾಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಆದರೆ ಇದರಲ್ಲಿ ಭಾರತದಲ್ಲಿ ವ್ಯಾಪಕವಾಗಿ ಬಳಕೆ ಆಗುವ ಕೊವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಬಗ್ಗೆ ನಿರ್ದಿಷ್ವಾಗಿ ಏನನ್ನೂ ಹೇಳಿಲ್ಲ.

ಎರಡು ಪ್ರಮುಖ ಕೋವಿಡ್ ಲಸಿಕೆಗಳ ಪ್ರಮಾಣವನ್ನು ಬೆರೆಸುವುದು (ಅಂದರೆ ಎರಡು ಭಿನ್ನ ಕಂಪನಿಗಳ ಡೋಸ್‌ಗಳು) ರೋಗಿಗಳಲ್ಲಿ ಆಯಾಸ ಮತ್ತು ತಲೆನೋವಿನಂತಹ ಅಡ್ಡಪರಿಣಾಮಗಳನ್ನು ಉಂಟು ಮಾಡುತ್ತದೆ ಎಂಬ ಅಂಶವನ್ನು ಆ ಆರಂಭಿಕ ಅಧ್ಯಯನಗಳಲ್ಲಿ ಕಂಡುಕೊಳ್ಳಲಾಗಿದೆ. ಆದರೆ, ಈ ಬಗ್ಗೆ ವಿವರವಾದ ಅಧ್ಯಯನ ಇನ್ನೂ ನಡೆಯಲಿದೆ ಎನ್ನಲಾಗಿದೆ.

ಅಸ್ಟ್ರಾಜೆನೆಕಾ ಶಾಟ್‌ನ ಮೊದಲ ಡೋಸ್ ಪಡೆದ ಜನರು ಎರಡನೇ ಸಂದರ್ಭದಲ್ಲಿ ಫಿಜರ್ ಕಂಪನಿಯ ಲಸಿಕೆ ಪಡೆದಾಗ ಅಲ್ಪಾವಧಿಯ ಅಡ್ಡಪರಿಣಾಮಗಳು ಕಂಡು ಬಂದಿವೆ ಎನ್ನಲಾಗಿದೆ. ಅವುಗಳಲ್ಲಿ ಹೆಚ್ಚಿನವು ಸೌಮ್ಯವಾಗಿವೆ ಎಂದು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸಂಶೋಧಕರು ದಿ ಲ್ಯಾನ್ಸೆಟ್ ವೈದ್ಯಕೀಯ ಜರ್ನಲ್‌ನಲ್ಲಿ ವರದಿ ಮಾಡಿದ್ದಾರೆ.

ಇಲ್ಲಿನ ವೈದ್ಯರ ಪ್ರಕಾರ, ಒಂದು ಆಸ್ಪತ್ರೆಗೆ ಒಂದೇ ಕಂಪನಿಯ ಲಸಿಕೆ ಪೂರೈಕೆ ಆಗುತ್ತದೆ. ಹೀಗಾಗಿ ಅದೇ ಆಸ್ಪತ್ರೆಯಲ್ಲಿ ಎರಡನೇ ಲಸಿಕೆ ತೆಗೆದುಕೊಂಡರೆ ಸಮಸ್ಯೆ ಇಲ್ಲ. ಕೆಲವು ಜಿಲ್ಲೆಗಳಲ್ಲಿ ಎರಡೂ ಕಂಪನಿಗಳ ಲಸಿಕೆಗಳು ಪೂರೈಕೆಯಾಗುತ್ತಿದ್ದು, ಎರಡನೇ ಡೋಸ್ ಪಡೆಯುವಾಗ ಬೇರೆ ಆಸ್ಪತ್ರೆಗೆ ಹೋದಾಗ, ಮೊದಲನೆ ಲಸಿಕೆ ಡೋಸ್ ತೆಗೆದುಕೊಂಡ ರಶೀದಿ ತೋರಿಸುವುದು ಒಳ್ಳೆಯದು ಎಂದು ಸರ್ಕಾರಿ ವೈದ್ಯ ಡಾ. ಸಂತೋಷ್ ತಿಳಿಸಿದರು.

ಭಾರತದಲ್ಲಿ ಲಸಿಕಾ ನೀತಿಯೇ ಅಸ್ಪಷ್ಟವಾಗಿದೆ. ಈ ಬಗ್ಗೆ ಸರ್ಕಾರಗಳು ಜನರಿಗೆ ಹೆಚ್ಚಿನ ಮಾಹಿತಿ ಒದಗಿಸಬೇಕಾಗಿದೆ.


ಇದನ್ನೂ ಓದಿ: ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...