Homeಕರೋನಾ ತಲ್ಲಣಮೊದಲ ಸಲ ಕೊವ್ಯಾಕ್ಸಿನ್, ಎರಡನೆ ಸಲ ಕೊವಿಶೀಲ್ಡ್ ಲಸಿಕೆ ಪಡೆದರೆ ಅಡ್ಡ ಪರಿಣಾಮ ಆಗುತ್ತವೆಯೇ?

ಮೊದಲ ಸಲ ಕೊವ್ಯಾಕ್ಸಿನ್, ಎರಡನೆ ಸಲ ಕೊವಿಶೀಲ್ಡ್ ಲಸಿಕೆ ಪಡೆದರೆ ಅಡ್ಡ ಪರಿಣಾಮ ಆಗುತ್ತವೆಯೇ?

- Advertisement -
- Advertisement -

ಲಸಿಕೆ ಕೊರತೆಯನ್ನು ಹೇಗೆ ನಿಭಾಯಿಸಬೇಕು ಎಂಬುದನ್ನು ಕಂಡುಹಿಡಿಯಲು ಕಡಿಮೆ ಮತ್ತು ಮಧ್ಯಮ-ಆದಾಯದ ಅನೇಕ ದೇಶಗಳು ಪ್ರಯತ್ನಿಸುತ್ತಿವೆ. ಕೆಲವು ಕಡೆಗಳಲ್ಲಿ ಸಂಶೋಧಕರು ಮತ್ತು ಸಾರ್ವಜನಿಕ ಆರೋಗ್ಯ ಅಧಿಕಾರಿಗಳು ಎರಡು ವಿಭಿನ್ನ ಶಾಟ್‌ಗಳನ್ನು ಮಿಶ್ರಣ ಮಾಡುವಂತಹ ತಂತ್ರಗಳನ್ನು ಪರಿಶೀಲಿಸುತ್ತಿದ್ದಾರೆ. ಭಾರತದ ಮಟ್ಟಿಗೆ ಇದನ್ನು ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಗಳು ಎಂದು ಪರಿಗಣಿಸಬಹುದು.

ಈಗಾಗಲೇ ದೇಶದ ಬಹು ರಾಜ್ಯಗಳಲ್ಲಿ ಕೋವಿಡ್ ಲಸಿಕೆಗಳ ಅಭಾವ ಇದೆ. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ನೀಡುವುದಕ್ಕೆ ಆದ್ಯತೆ ನೀಡಲಾಗುತ್ತಿದೆ. ಮೊದಲ ಡೋಸ್ ಒಂದು ಕಂಪನಿ ಲಸಿಕೆ ಪಡೆದವರು ಎರಡನೇ ಡೋಸ್‌ನಲ್ಲಿ ಇನ್ನೊಂದು ಕಂಪನಿ ಲಸಿಕೆ ಪಡೆದರೆ ಅಡ್ಡ ಪರಿಣಾಮ ಆಗುವ ಸಾಧ್ಯತೆಗಳಿವೆ. ಆದರೆ ಈ ಪರಿಣಾಮಗಳು ಮಾರಣಾಂತಿಕವೇನೂ ಅಲ್ಲ ಎಂದು ಆಕ್ಸ್‌ಫರ್ಡ್ ವಿವಿಯ ಸಂಶೋಧಕರು ಲ್ಯಾನ್ಸೆಟ್‌ನಲ್ಲಿ ವರದಿ ಮಾಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಆದರೆ ಇದರಲ್ಲಿ ಭಾರತದಲ್ಲಿ ವ್ಯಾಪಕವಾಗಿ ಬಳಕೆ ಆಗುವ ಕೊವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಬಗ್ಗೆ ನಿರ್ದಿಷ್ವಾಗಿ ಏನನ್ನೂ ಹೇಳಿಲ್ಲ.

ಎರಡು ಪ್ರಮುಖ ಕೋವಿಡ್ ಲಸಿಕೆಗಳ ಪ್ರಮಾಣವನ್ನು ಬೆರೆಸುವುದು (ಅಂದರೆ ಎರಡು ಭಿನ್ನ ಕಂಪನಿಗಳ ಡೋಸ್‌ಗಳು) ರೋಗಿಗಳಲ್ಲಿ ಆಯಾಸ ಮತ್ತು ತಲೆನೋವಿನಂತಹ ಅಡ್ಡಪರಿಣಾಮಗಳನ್ನು ಉಂಟು ಮಾಡುತ್ತದೆ ಎಂಬ ಅಂಶವನ್ನು ಆ ಆರಂಭಿಕ ಅಧ್ಯಯನಗಳಲ್ಲಿ ಕಂಡುಕೊಳ್ಳಲಾಗಿದೆ. ಆದರೆ, ಈ ಬಗ್ಗೆ ವಿವರವಾದ ಅಧ್ಯಯನ ಇನ್ನೂ ನಡೆಯಲಿದೆ ಎನ್ನಲಾಗಿದೆ.

ಅಸ್ಟ್ರಾಜೆನೆಕಾ ಶಾಟ್‌ನ ಮೊದಲ ಡೋಸ್ ಪಡೆದ ಜನರು ಎರಡನೇ ಸಂದರ್ಭದಲ್ಲಿ ಫಿಜರ್ ಕಂಪನಿಯ ಲಸಿಕೆ ಪಡೆದಾಗ ಅಲ್ಪಾವಧಿಯ ಅಡ್ಡಪರಿಣಾಮಗಳು ಕಂಡು ಬಂದಿವೆ ಎನ್ನಲಾಗಿದೆ. ಅವುಗಳಲ್ಲಿ ಹೆಚ್ಚಿನವು ಸೌಮ್ಯವಾಗಿವೆ ಎಂದು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸಂಶೋಧಕರು ದಿ ಲ್ಯಾನ್ಸೆಟ್ ವೈದ್ಯಕೀಯ ಜರ್ನಲ್‌ನಲ್ಲಿ ವರದಿ ಮಾಡಿದ್ದಾರೆ.

ಇಲ್ಲಿನ ವೈದ್ಯರ ಪ್ರಕಾರ, ಒಂದು ಆಸ್ಪತ್ರೆಗೆ ಒಂದೇ ಕಂಪನಿಯ ಲಸಿಕೆ ಪೂರೈಕೆ ಆಗುತ್ತದೆ. ಹೀಗಾಗಿ ಅದೇ ಆಸ್ಪತ್ರೆಯಲ್ಲಿ ಎರಡನೇ ಲಸಿಕೆ ತೆಗೆದುಕೊಂಡರೆ ಸಮಸ್ಯೆ ಇಲ್ಲ. ಕೆಲವು ಜಿಲ್ಲೆಗಳಲ್ಲಿ ಎರಡೂ ಕಂಪನಿಗಳ ಲಸಿಕೆಗಳು ಪೂರೈಕೆಯಾಗುತ್ತಿದ್ದು, ಎರಡನೇ ಡೋಸ್ ಪಡೆಯುವಾಗ ಬೇರೆ ಆಸ್ಪತ್ರೆಗೆ ಹೋದಾಗ, ಮೊದಲನೆ ಲಸಿಕೆ ಡೋಸ್ ತೆಗೆದುಕೊಂಡ ರಶೀದಿ ತೋರಿಸುವುದು ಒಳ್ಳೆಯದು ಎಂದು ಸರ್ಕಾರಿ ವೈದ್ಯ ಡಾ. ಸಂತೋಷ್ ತಿಳಿಸಿದರು.

ಭಾರತದಲ್ಲಿ ಲಸಿಕಾ ನೀತಿಯೇ ಅಸ್ಪಷ್ಟವಾಗಿದೆ. ಈ ಬಗ್ಗೆ ಸರ್ಕಾರಗಳು ಜನರಿಗೆ ಹೆಚ್ಚಿನ ಮಾಹಿತಿ ಒದಗಿಸಬೇಕಾಗಿದೆ.


ಇದನ್ನೂ ಓದಿ: ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...