Homeಕರೋನಾ ತಲ್ಲಣಮೊದಲ ಸಲ ಕೊವ್ಯಾಕ್ಸಿನ್, ಎರಡನೆ ಸಲ ಕೊವಿಶೀಲ್ಡ್ ಲಸಿಕೆ ಪಡೆದರೆ ಅಡ್ಡ ಪರಿಣಾಮ ಆಗುತ್ತವೆಯೇ?

ಮೊದಲ ಸಲ ಕೊವ್ಯಾಕ್ಸಿನ್, ಎರಡನೆ ಸಲ ಕೊವಿಶೀಲ್ಡ್ ಲಸಿಕೆ ಪಡೆದರೆ ಅಡ್ಡ ಪರಿಣಾಮ ಆಗುತ್ತವೆಯೇ?

- Advertisement -
- Advertisement -

ಲಸಿಕೆ ಕೊರತೆಯನ್ನು ಹೇಗೆ ನಿಭಾಯಿಸಬೇಕು ಎಂಬುದನ್ನು ಕಂಡುಹಿಡಿಯಲು ಕಡಿಮೆ ಮತ್ತು ಮಧ್ಯಮ-ಆದಾಯದ ಅನೇಕ ದೇಶಗಳು ಪ್ರಯತ್ನಿಸುತ್ತಿವೆ. ಕೆಲವು ಕಡೆಗಳಲ್ಲಿ ಸಂಶೋಧಕರು ಮತ್ತು ಸಾರ್ವಜನಿಕ ಆರೋಗ್ಯ ಅಧಿಕಾರಿಗಳು ಎರಡು ವಿಭಿನ್ನ ಶಾಟ್‌ಗಳನ್ನು ಮಿಶ್ರಣ ಮಾಡುವಂತಹ ತಂತ್ರಗಳನ್ನು ಪರಿಶೀಲಿಸುತ್ತಿದ್ದಾರೆ. ಭಾರತದ ಮಟ್ಟಿಗೆ ಇದನ್ನು ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಗಳು ಎಂದು ಪರಿಗಣಿಸಬಹುದು.

ಈಗಾಗಲೇ ದೇಶದ ಬಹು ರಾಜ್ಯಗಳಲ್ಲಿ ಕೋವಿಡ್ ಲಸಿಕೆಗಳ ಅಭಾವ ಇದೆ. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ನೀಡುವುದಕ್ಕೆ ಆದ್ಯತೆ ನೀಡಲಾಗುತ್ತಿದೆ. ಮೊದಲ ಡೋಸ್ ಒಂದು ಕಂಪನಿ ಲಸಿಕೆ ಪಡೆದವರು ಎರಡನೇ ಡೋಸ್‌ನಲ್ಲಿ ಇನ್ನೊಂದು ಕಂಪನಿ ಲಸಿಕೆ ಪಡೆದರೆ ಅಡ್ಡ ಪರಿಣಾಮ ಆಗುವ ಸಾಧ್ಯತೆಗಳಿವೆ. ಆದರೆ ಈ ಪರಿಣಾಮಗಳು ಮಾರಣಾಂತಿಕವೇನೂ ಅಲ್ಲ ಎಂದು ಆಕ್ಸ್‌ಫರ್ಡ್ ವಿವಿಯ ಸಂಶೋಧಕರು ಲ್ಯಾನ್ಸೆಟ್‌ನಲ್ಲಿ ವರದಿ ಮಾಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಆದರೆ ಇದರಲ್ಲಿ ಭಾರತದಲ್ಲಿ ವ್ಯಾಪಕವಾಗಿ ಬಳಕೆ ಆಗುವ ಕೊವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಬಗ್ಗೆ ನಿರ್ದಿಷ್ವಾಗಿ ಏನನ್ನೂ ಹೇಳಿಲ್ಲ.

ಎರಡು ಪ್ರಮುಖ ಕೋವಿಡ್ ಲಸಿಕೆಗಳ ಪ್ರಮಾಣವನ್ನು ಬೆರೆಸುವುದು (ಅಂದರೆ ಎರಡು ಭಿನ್ನ ಕಂಪನಿಗಳ ಡೋಸ್‌ಗಳು) ರೋಗಿಗಳಲ್ಲಿ ಆಯಾಸ ಮತ್ತು ತಲೆನೋವಿನಂತಹ ಅಡ್ಡಪರಿಣಾಮಗಳನ್ನು ಉಂಟು ಮಾಡುತ್ತದೆ ಎಂಬ ಅಂಶವನ್ನು ಆ ಆರಂಭಿಕ ಅಧ್ಯಯನಗಳಲ್ಲಿ ಕಂಡುಕೊಳ್ಳಲಾಗಿದೆ. ಆದರೆ, ಈ ಬಗ್ಗೆ ವಿವರವಾದ ಅಧ್ಯಯನ ಇನ್ನೂ ನಡೆಯಲಿದೆ ಎನ್ನಲಾಗಿದೆ.

ಅಸ್ಟ್ರಾಜೆನೆಕಾ ಶಾಟ್‌ನ ಮೊದಲ ಡೋಸ್ ಪಡೆದ ಜನರು ಎರಡನೇ ಸಂದರ್ಭದಲ್ಲಿ ಫಿಜರ್ ಕಂಪನಿಯ ಲಸಿಕೆ ಪಡೆದಾಗ ಅಲ್ಪಾವಧಿಯ ಅಡ್ಡಪರಿಣಾಮಗಳು ಕಂಡು ಬಂದಿವೆ ಎನ್ನಲಾಗಿದೆ. ಅವುಗಳಲ್ಲಿ ಹೆಚ್ಚಿನವು ಸೌಮ್ಯವಾಗಿವೆ ಎಂದು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸಂಶೋಧಕರು ದಿ ಲ್ಯಾನ್ಸೆಟ್ ವೈದ್ಯಕೀಯ ಜರ್ನಲ್‌ನಲ್ಲಿ ವರದಿ ಮಾಡಿದ್ದಾರೆ.

ಇಲ್ಲಿನ ವೈದ್ಯರ ಪ್ರಕಾರ, ಒಂದು ಆಸ್ಪತ್ರೆಗೆ ಒಂದೇ ಕಂಪನಿಯ ಲಸಿಕೆ ಪೂರೈಕೆ ಆಗುತ್ತದೆ. ಹೀಗಾಗಿ ಅದೇ ಆಸ್ಪತ್ರೆಯಲ್ಲಿ ಎರಡನೇ ಲಸಿಕೆ ತೆಗೆದುಕೊಂಡರೆ ಸಮಸ್ಯೆ ಇಲ್ಲ. ಕೆಲವು ಜಿಲ್ಲೆಗಳಲ್ಲಿ ಎರಡೂ ಕಂಪನಿಗಳ ಲಸಿಕೆಗಳು ಪೂರೈಕೆಯಾಗುತ್ತಿದ್ದು, ಎರಡನೇ ಡೋಸ್ ಪಡೆಯುವಾಗ ಬೇರೆ ಆಸ್ಪತ್ರೆಗೆ ಹೋದಾಗ, ಮೊದಲನೆ ಲಸಿಕೆ ಡೋಸ್ ತೆಗೆದುಕೊಂಡ ರಶೀದಿ ತೋರಿಸುವುದು ಒಳ್ಳೆಯದು ಎಂದು ಸರ್ಕಾರಿ ವೈದ್ಯ ಡಾ. ಸಂತೋಷ್ ತಿಳಿಸಿದರು.

ಭಾರತದಲ್ಲಿ ಲಸಿಕಾ ನೀತಿಯೇ ಅಸ್ಪಷ್ಟವಾಗಿದೆ. ಈ ಬಗ್ಗೆ ಸರ್ಕಾರಗಳು ಜನರಿಗೆ ಹೆಚ್ಚಿನ ಮಾಹಿತಿ ಒದಗಿಸಬೇಕಾಗಿದೆ.


ಇದನ್ನೂ ಓದಿ: ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...