Homeಕರೋನಾ ತಲ್ಲಣಮೊದಲ ಸಲ ಕೊವ್ಯಾಕ್ಸಿನ್, ಎರಡನೆ ಸಲ ಕೊವಿಶೀಲ್ಡ್ ಲಸಿಕೆ ಪಡೆದರೆ ಅಡ್ಡ ಪರಿಣಾಮ ಆಗುತ್ತವೆಯೇ?

ಮೊದಲ ಸಲ ಕೊವ್ಯಾಕ್ಸಿನ್, ಎರಡನೆ ಸಲ ಕೊವಿಶೀಲ್ಡ್ ಲಸಿಕೆ ಪಡೆದರೆ ಅಡ್ಡ ಪರಿಣಾಮ ಆಗುತ್ತವೆಯೇ?

- Advertisement -
- Advertisement -

ಲಸಿಕೆ ಕೊರತೆಯನ್ನು ಹೇಗೆ ನಿಭಾಯಿಸಬೇಕು ಎಂಬುದನ್ನು ಕಂಡುಹಿಡಿಯಲು ಕಡಿಮೆ ಮತ್ತು ಮಧ್ಯಮ-ಆದಾಯದ ಅನೇಕ ದೇಶಗಳು ಪ್ರಯತ್ನಿಸುತ್ತಿವೆ. ಕೆಲವು ಕಡೆಗಳಲ್ಲಿ ಸಂಶೋಧಕರು ಮತ್ತು ಸಾರ್ವಜನಿಕ ಆರೋಗ್ಯ ಅಧಿಕಾರಿಗಳು ಎರಡು ವಿಭಿನ್ನ ಶಾಟ್‌ಗಳನ್ನು ಮಿಶ್ರಣ ಮಾಡುವಂತಹ ತಂತ್ರಗಳನ್ನು ಪರಿಶೀಲಿಸುತ್ತಿದ್ದಾರೆ. ಭಾರತದ ಮಟ್ಟಿಗೆ ಇದನ್ನು ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಗಳು ಎಂದು ಪರಿಗಣಿಸಬಹುದು.

ಈಗಾಗಲೇ ದೇಶದ ಬಹು ರಾಜ್ಯಗಳಲ್ಲಿ ಕೋವಿಡ್ ಲಸಿಕೆಗಳ ಅಭಾವ ಇದೆ. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ನೀಡುವುದಕ್ಕೆ ಆದ್ಯತೆ ನೀಡಲಾಗುತ್ತಿದೆ. ಮೊದಲ ಡೋಸ್ ಒಂದು ಕಂಪನಿ ಲಸಿಕೆ ಪಡೆದವರು ಎರಡನೇ ಡೋಸ್‌ನಲ್ಲಿ ಇನ್ನೊಂದು ಕಂಪನಿ ಲಸಿಕೆ ಪಡೆದರೆ ಅಡ್ಡ ಪರಿಣಾಮ ಆಗುವ ಸಾಧ್ಯತೆಗಳಿವೆ. ಆದರೆ ಈ ಪರಿಣಾಮಗಳು ಮಾರಣಾಂತಿಕವೇನೂ ಅಲ್ಲ ಎಂದು ಆಕ್ಸ್‌ಫರ್ಡ್ ವಿವಿಯ ಸಂಶೋಧಕರು ಲ್ಯಾನ್ಸೆಟ್‌ನಲ್ಲಿ ವರದಿ ಮಾಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಆದರೆ ಇದರಲ್ಲಿ ಭಾರತದಲ್ಲಿ ವ್ಯಾಪಕವಾಗಿ ಬಳಕೆ ಆಗುವ ಕೊವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಬಗ್ಗೆ ನಿರ್ದಿಷ್ವಾಗಿ ಏನನ್ನೂ ಹೇಳಿಲ್ಲ.

ಎರಡು ಪ್ರಮುಖ ಕೋವಿಡ್ ಲಸಿಕೆಗಳ ಪ್ರಮಾಣವನ್ನು ಬೆರೆಸುವುದು (ಅಂದರೆ ಎರಡು ಭಿನ್ನ ಕಂಪನಿಗಳ ಡೋಸ್‌ಗಳು) ರೋಗಿಗಳಲ್ಲಿ ಆಯಾಸ ಮತ್ತು ತಲೆನೋವಿನಂತಹ ಅಡ್ಡಪರಿಣಾಮಗಳನ್ನು ಉಂಟು ಮಾಡುತ್ತದೆ ಎಂಬ ಅಂಶವನ್ನು ಆ ಆರಂಭಿಕ ಅಧ್ಯಯನಗಳಲ್ಲಿ ಕಂಡುಕೊಳ್ಳಲಾಗಿದೆ. ಆದರೆ, ಈ ಬಗ್ಗೆ ವಿವರವಾದ ಅಧ್ಯಯನ ಇನ್ನೂ ನಡೆಯಲಿದೆ ಎನ್ನಲಾಗಿದೆ.

ಅಸ್ಟ್ರಾಜೆನೆಕಾ ಶಾಟ್‌ನ ಮೊದಲ ಡೋಸ್ ಪಡೆದ ಜನರು ಎರಡನೇ ಸಂದರ್ಭದಲ್ಲಿ ಫಿಜರ್ ಕಂಪನಿಯ ಲಸಿಕೆ ಪಡೆದಾಗ ಅಲ್ಪಾವಧಿಯ ಅಡ್ಡಪರಿಣಾಮಗಳು ಕಂಡು ಬಂದಿವೆ ಎನ್ನಲಾಗಿದೆ. ಅವುಗಳಲ್ಲಿ ಹೆಚ್ಚಿನವು ಸೌಮ್ಯವಾಗಿವೆ ಎಂದು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸಂಶೋಧಕರು ದಿ ಲ್ಯಾನ್ಸೆಟ್ ವೈದ್ಯಕೀಯ ಜರ್ನಲ್‌ನಲ್ಲಿ ವರದಿ ಮಾಡಿದ್ದಾರೆ.

ಇಲ್ಲಿನ ವೈದ್ಯರ ಪ್ರಕಾರ, ಒಂದು ಆಸ್ಪತ್ರೆಗೆ ಒಂದೇ ಕಂಪನಿಯ ಲಸಿಕೆ ಪೂರೈಕೆ ಆಗುತ್ತದೆ. ಹೀಗಾಗಿ ಅದೇ ಆಸ್ಪತ್ರೆಯಲ್ಲಿ ಎರಡನೇ ಲಸಿಕೆ ತೆಗೆದುಕೊಂಡರೆ ಸಮಸ್ಯೆ ಇಲ್ಲ. ಕೆಲವು ಜಿಲ್ಲೆಗಳಲ್ಲಿ ಎರಡೂ ಕಂಪನಿಗಳ ಲಸಿಕೆಗಳು ಪೂರೈಕೆಯಾಗುತ್ತಿದ್ದು, ಎರಡನೇ ಡೋಸ್ ಪಡೆಯುವಾಗ ಬೇರೆ ಆಸ್ಪತ್ರೆಗೆ ಹೋದಾಗ, ಮೊದಲನೆ ಲಸಿಕೆ ಡೋಸ್ ತೆಗೆದುಕೊಂಡ ರಶೀದಿ ತೋರಿಸುವುದು ಒಳ್ಳೆಯದು ಎಂದು ಸರ್ಕಾರಿ ವೈದ್ಯ ಡಾ. ಸಂತೋಷ್ ತಿಳಿಸಿದರು.

ಭಾರತದಲ್ಲಿ ಲಸಿಕಾ ನೀತಿಯೇ ಅಸ್ಪಷ್ಟವಾಗಿದೆ. ಈ ಬಗ್ಗೆ ಸರ್ಕಾರಗಳು ಜನರಿಗೆ ಹೆಚ್ಚಿನ ಮಾಹಿತಿ ಒದಗಿಸಬೇಕಾಗಿದೆ.


ಇದನ್ನೂ ಓದಿ: ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...