Homeಕರೋನಾ ತಲ್ಲಣಮೊದಲ ಸಲ ಕೊವ್ಯಾಕ್ಸಿನ್, ಎರಡನೆ ಸಲ ಕೊವಿಶೀಲ್ಡ್ ಲಸಿಕೆ ಪಡೆದರೆ ಅಡ್ಡ ಪರಿಣಾಮ ಆಗುತ್ತವೆಯೇ?

ಮೊದಲ ಸಲ ಕೊವ್ಯಾಕ್ಸಿನ್, ಎರಡನೆ ಸಲ ಕೊವಿಶೀಲ್ಡ್ ಲಸಿಕೆ ಪಡೆದರೆ ಅಡ್ಡ ಪರಿಣಾಮ ಆಗುತ್ತವೆಯೇ?

- Advertisement -
- Advertisement -

ಲಸಿಕೆ ಕೊರತೆಯನ್ನು ಹೇಗೆ ನಿಭಾಯಿಸಬೇಕು ಎಂಬುದನ್ನು ಕಂಡುಹಿಡಿಯಲು ಕಡಿಮೆ ಮತ್ತು ಮಧ್ಯಮ-ಆದಾಯದ ಅನೇಕ ದೇಶಗಳು ಪ್ರಯತ್ನಿಸುತ್ತಿವೆ. ಕೆಲವು ಕಡೆಗಳಲ್ಲಿ ಸಂಶೋಧಕರು ಮತ್ತು ಸಾರ್ವಜನಿಕ ಆರೋಗ್ಯ ಅಧಿಕಾರಿಗಳು ಎರಡು ವಿಭಿನ್ನ ಶಾಟ್‌ಗಳನ್ನು ಮಿಶ್ರಣ ಮಾಡುವಂತಹ ತಂತ್ರಗಳನ್ನು ಪರಿಶೀಲಿಸುತ್ತಿದ್ದಾರೆ. ಭಾರತದ ಮಟ್ಟಿಗೆ ಇದನ್ನು ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಗಳು ಎಂದು ಪರಿಗಣಿಸಬಹುದು.

ಈಗಾಗಲೇ ದೇಶದ ಬಹು ರಾಜ್ಯಗಳಲ್ಲಿ ಕೋವಿಡ್ ಲಸಿಕೆಗಳ ಅಭಾವ ಇದೆ. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ನೀಡುವುದಕ್ಕೆ ಆದ್ಯತೆ ನೀಡಲಾಗುತ್ತಿದೆ. ಮೊದಲ ಡೋಸ್ ಒಂದು ಕಂಪನಿ ಲಸಿಕೆ ಪಡೆದವರು ಎರಡನೇ ಡೋಸ್‌ನಲ್ಲಿ ಇನ್ನೊಂದು ಕಂಪನಿ ಲಸಿಕೆ ಪಡೆದರೆ ಅಡ್ಡ ಪರಿಣಾಮ ಆಗುವ ಸಾಧ್ಯತೆಗಳಿವೆ. ಆದರೆ ಈ ಪರಿಣಾಮಗಳು ಮಾರಣಾಂತಿಕವೇನೂ ಅಲ್ಲ ಎಂದು ಆಕ್ಸ್‌ಫರ್ಡ್ ವಿವಿಯ ಸಂಶೋಧಕರು ಲ್ಯಾನ್ಸೆಟ್‌ನಲ್ಲಿ ವರದಿ ಮಾಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಆದರೆ ಇದರಲ್ಲಿ ಭಾರತದಲ್ಲಿ ವ್ಯಾಪಕವಾಗಿ ಬಳಕೆ ಆಗುವ ಕೊವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಬಗ್ಗೆ ನಿರ್ದಿಷ್ವಾಗಿ ಏನನ್ನೂ ಹೇಳಿಲ್ಲ.

ಎರಡು ಪ್ರಮುಖ ಕೋವಿಡ್ ಲಸಿಕೆಗಳ ಪ್ರಮಾಣವನ್ನು ಬೆರೆಸುವುದು (ಅಂದರೆ ಎರಡು ಭಿನ್ನ ಕಂಪನಿಗಳ ಡೋಸ್‌ಗಳು) ರೋಗಿಗಳಲ್ಲಿ ಆಯಾಸ ಮತ್ತು ತಲೆನೋವಿನಂತಹ ಅಡ್ಡಪರಿಣಾಮಗಳನ್ನು ಉಂಟು ಮಾಡುತ್ತದೆ ಎಂಬ ಅಂಶವನ್ನು ಆ ಆರಂಭಿಕ ಅಧ್ಯಯನಗಳಲ್ಲಿ ಕಂಡುಕೊಳ್ಳಲಾಗಿದೆ. ಆದರೆ, ಈ ಬಗ್ಗೆ ವಿವರವಾದ ಅಧ್ಯಯನ ಇನ್ನೂ ನಡೆಯಲಿದೆ ಎನ್ನಲಾಗಿದೆ.

ಅಸ್ಟ್ರಾಜೆನೆಕಾ ಶಾಟ್‌ನ ಮೊದಲ ಡೋಸ್ ಪಡೆದ ಜನರು ಎರಡನೇ ಸಂದರ್ಭದಲ್ಲಿ ಫಿಜರ್ ಕಂಪನಿಯ ಲಸಿಕೆ ಪಡೆದಾಗ ಅಲ್ಪಾವಧಿಯ ಅಡ್ಡಪರಿಣಾಮಗಳು ಕಂಡು ಬಂದಿವೆ ಎನ್ನಲಾಗಿದೆ. ಅವುಗಳಲ್ಲಿ ಹೆಚ್ಚಿನವು ಸೌಮ್ಯವಾಗಿವೆ ಎಂದು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸಂಶೋಧಕರು ದಿ ಲ್ಯಾನ್ಸೆಟ್ ವೈದ್ಯಕೀಯ ಜರ್ನಲ್‌ನಲ್ಲಿ ವರದಿ ಮಾಡಿದ್ದಾರೆ.

ಇಲ್ಲಿನ ವೈದ್ಯರ ಪ್ರಕಾರ, ಒಂದು ಆಸ್ಪತ್ರೆಗೆ ಒಂದೇ ಕಂಪನಿಯ ಲಸಿಕೆ ಪೂರೈಕೆ ಆಗುತ್ತದೆ. ಹೀಗಾಗಿ ಅದೇ ಆಸ್ಪತ್ರೆಯಲ್ಲಿ ಎರಡನೇ ಲಸಿಕೆ ತೆಗೆದುಕೊಂಡರೆ ಸಮಸ್ಯೆ ಇಲ್ಲ. ಕೆಲವು ಜಿಲ್ಲೆಗಳಲ್ಲಿ ಎರಡೂ ಕಂಪನಿಗಳ ಲಸಿಕೆಗಳು ಪೂರೈಕೆಯಾಗುತ್ತಿದ್ದು, ಎರಡನೇ ಡೋಸ್ ಪಡೆಯುವಾಗ ಬೇರೆ ಆಸ್ಪತ್ರೆಗೆ ಹೋದಾಗ, ಮೊದಲನೆ ಲಸಿಕೆ ಡೋಸ್ ತೆಗೆದುಕೊಂಡ ರಶೀದಿ ತೋರಿಸುವುದು ಒಳ್ಳೆಯದು ಎಂದು ಸರ್ಕಾರಿ ವೈದ್ಯ ಡಾ. ಸಂತೋಷ್ ತಿಳಿಸಿದರು.

ಭಾರತದಲ್ಲಿ ಲಸಿಕಾ ನೀತಿಯೇ ಅಸ್ಪಷ್ಟವಾಗಿದೆ. ಈ ಬಗ್ಗೆ ಸರ್ಕಾರಗಳು ಜನರಿಗೆ ಹೆಚ್ಚಿನ ಮಾಹಿತಿ ಒದಗಿಸಬೇಕಾಗಿದೆ.


ಇದನ್ನೂ ಓದಿ: ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...