Homeಅಂಕಣಗಳುಬಾಯ್ಕಟ್‌ ಚೀನಾ ಅಭಿಯಾನ: ಸಂಪೂರ್ಣ ಭಾರತೀಯ ಫೋನು ತಯಾರಿಸೋ ಕಂಪನಿ ಯಾವುದೂ ಗೊತ್ತೆ?

ಬಾಯ್ಕಟ್‌ ಚೀನಾ ಅಭಿಯಾನ: ಸಂಪೂರ್ಣ ಭಾರತೀಯ ಫೋನು ತಯಾರಿಸೋ ಕಂಪನಿ ಯಾವುದೂ ಗೊತ್ತೆ?

- Advertisement -
- Advertisement -

ಈ ಸಮಾಜ ವಿರೋಧಿ ಮಾಧ್ಯಮಗಳಲ್ಲಿ (ಎಂಟಿ-ಸೋಷಿಯಲ್ ಮೀಡಿಯಾಗಳಲ್ಲಿ) ಒಂದು ಸಂದೇಶ ಓಡಾಡಾಕ ಹತ್ತೇತಿ. ಅದೇನೆಂದರ “ಈ ಆಪ್‍ನ ನಿಮ್ಮ ಮೊಬೈಲಿನಾಗ ಹಾಕ್ಕೋರಿ, ಅದರಾಗ ಇರಬಹುದಾದ ಎಲ್ಲಾ ಚೈನಾ ಆಪುಗಳನ್ನೂ ತಗೀರಿ, ದೇಶಪ್ರೇಮದ ರಸದಿಂದ ನಿಮ್ಮ ಫೋನನ್ನ ಸ್ವಚ್ಛ ಮಾಡರಿ” ಅಂತ. ಅದನ್ನ ಸುಮಾರು ಒಂದು ಕೋಟಿ ಜನ ಹಾಕಿಕೊಂಡು ಅದು ತೋರಿಸಿದಂತೆ ಚೈನಾ ಆಪುಗಳನ್ನ ತಗದಾರು.

ಕೆಲವರು ಪೇಟಿ ಎಮ್ಮು, ಬಿಗ್ ಬಾಸ್ಕೆಟಿನಂಥಾ ಆಪು ತಗದು, ಒದ್ಯಾಡಿದಾರು.

ಇದರಾಗ ಜೋಕು ಏನಪಾ ಅಂದರ, ಭಾಳ ಮಂದಿ ಈ ದೇಶಪ್ರೇಮದ ಕೆಲಸಾ ಮಾಡಾಕ ತಮ್ಮ ಚೀನಾ ಫೋನು ಉಪಯೋಗ ಮಾಡಿದಾರು. ಭಾರತದಾಗ ಒಂದು ನೂರು ಫೋನು ಅದಾವು ಅಂದರ ಅದರಾಗ 70 ಫೋನು ಚೀನಾ ಕಂಪನಿವು ಅದಾವು. ಭಾಳ ಜನರಿಗೆ ತಮ್ಮ ಫೋನು ಯಾವ ದೇಶದ್ದೂ ಅಂತ ಗೊತ್ತಿರೋದಿಲ್ಲ. ಖರೇ ಹೇಳಬೇಕಂದರ, ಫ್ರೀಡಂ ಅನ್ನೋ ಕಂಪನಿ ಒಂದು ಬಿಟ್ಟರ ಸಂಪೂರ್ಣ ಭಾರತೀಯ ಫೋನು ತಯಾರಿಸೋ ಕಂಪನಿ ಯಾವುದೂ ಇಲ್ಲ. ಅಂದಂಗ ಮೊನ್ನೆ ನಮ್ಮ ಪಂಥ ಪ್ರಧಾನ ಸೇವಕ ಅವರು ಲೋಕಲ್ ವೋಕಲ್ ಅಂತ ಹೇಳೋ ತನಕಾ ಅಂತೂ ಇರಲಿಲ್ಲ. ಕಳೆದ ಒಂದು ವಾರದಾಗ ಯಾವುದರ ಕಂಪನಿ ಹುಟ್ಟಿಕೊಂಡಿದ್ದರ ನಮಗ ಗೊತ್ತಿಲ್ಲ ಮತ್ತ.

ಯಾಕ ಹಂಗಂತೇನಪಾ ಅಂದರ, ಅದಕ್ಕೊಂದು ಕಾರಣ ಐತಿ.

ಮೂರು ವರ್ಷದ ಹಿಂದ ಅವರು ಫ್ರಾನ್ಸಿಗೆ ಹೋಗಿದ್ದರು. ಆವಾಗ ಅವರ ಸ್ನೇಹಿತರು ಹಾಗೂ ಖಜಾಂಚಿಗಳೂ ಆದ ಆತ್ಮ ನಿರ್ಭರ ಸಹೋದರು ಬರೇ ಹತ್ತು ದಿನದಾಗ ಒಂದು ರಕ್ಷಣಾ ತಂತ್ರಜ್ಞಾನದ ಕಂಪನಿ ಹುಟ್ಟು ಹಾಕಿದರು. ಅದನ್ನ ನೋಡಿ ಇವರು ಯಾವುದೋ ಮ್ಯಾಗಿ ನೂಡಲ್ ಕಂಪನಿ ಯೊಳಗ ಕೆಲಸ ಮಾಡಿರಬೇಕು ಬಾರಲೇ ಅಂತ ಹೇಳಿ ಇವರು ಅವರಿಗೆ ಯುದ್ಧ ವಿಮಾನ ತಯಾರು ಮಾಡೋ ಕೆಲಸ ಕೊಟ್ಟರು. “ಅಯ್ಯೋ ಅದನ್ನ ಯಾಕ ಅವರಿಗೆ ಕೊಟ್ಟರಿ, ನಾವ ಮಾಡತಿದ್ದೆವಲ್ಲ. ಎಪ್ಪತ್ತು ವರ್ಷದಿಂದ ನಾವನ ವಿಮಾನ ತಯಾರು ಮಾಡಾಕ ಹತ್ತೇವಿ. ನಿಮಗೂ ಗೊತ್ತೈತೆಲ್ಲಾ” ಅಂತ ಬೆಂಗಳೂರಿನ ಎಚ್‍ಎಎಲ್ ಅನ್ನೋ ಕಂಪನಿಯವರು ಸಣ್ಣಕ ದನಿ ತಗದಿದ್ದರಂತ. ಅದಕ್ಕ ಇವರು “ಹೋಗ ಹೋಗರಿ, ಎಲ್ಲಾ ನಿಮಗ ಏನು? ಹಳಬರಿಗೆ ಅವಕಾಶ ಸಾಕು, ಹೊಸಬರಿಗೆ ಅವಕಾಶ ಇರಲಿ. ರಾಜಕೀಯದಾಗೂ ಈ ನಿಯಮ ತಂದೇವಿ, ಇನ್ನ ಯುದ್ಧ ವಿಮಾನ ತಯಾರಿಗೆ ಬಿಡತೇವೇನು” ಅಂತ ಅಂದರು. ಈಗ ಆ ಹೊಸಾ ಕಂಪನಿ ಹಳೇ ಕಂಪನಿಯ ವಜ್ಜಾ ತಡಕೊಳ್ಳಲಾರದ ಮುಚ್ಚಾಕ ಬಂದೇತಿ. ಅದು ಬ್ಯಾರೆ ವಿಷಯ.

ಇನ್ನ ನಮ್ಮವರಿಗೆ ಚೀನಾದ ಮ್ಯಾಲೆ ಕೆಂಗಣ್ಣು ಬಿಡೋ ಅಷ್ಟು ಸಿಟ್ಟು ಯಾಕ ಬಂತು? ಅದಕ್ಕ ಒಂದಿಷ್ಟು ಹಿಂದ ಹೋಗಬೇಕಾಗತೇತಿ. ನಿಮಗೆ “ಹೋಕೆ ಮಜಬೂರ ಮುಝೆ ಉಸನೆ ಭುಲಾಯಾ ಹೋಗಾ” (‘ಅನಿವಾರ್ಯವಾಗಿ ಅಕಿ ನನ್ನ ಮರತಿರಬೇಕು’) ಅನ್ನೋ ಹಾಡು ನೆನಪು ಇರಬೇಕು. ಅದು ಒಂದು ಕರೇ – ಬಿಳೇ ಹಳೇ ಹಿಂದಿ ಸಿನಿಮಾದ ಹಾಡು. ಅದರಾಗ ಭಾರತೀಯ ಸೈನಿಕರು ಹೋಗಿ ಚೀನಾದ ಮ್ಯಾಲೆ ಯುದ್ಧ ಮಾಡಿ ಗೆದ್ದು ಬರತಾರ. ಸಿನಿಮಾದಾಗ ಗೆದ್ದರು ಆದರ ಅದನ್ನ ಚೀನಾದವರು ಇನ್ನೂ ಒಪ್ಪಾಕ ತಯಾರು ಇಲ್ಲ. ಭಾರತ- ಚೀನಾ ಗಡಿ ಮೂರು ಸಾವಿರದ ಎಂಟು ನೂರು ಕಿಲೋಮಿಟರ್ ಅಂತ ನಮ್ಮ ವಿದೇಶಾಂಗ ಮಂತ್ರಿ ಅಂದಿದ್ದಕ್ಕ ಚೀನಾದವರು ಎಲ್ಲಾಸುಳ್ಳ. ಅದು ಬರೇ ಎರಡು ಸಾವಿರ ಕಿಲೋಮೀಟರ್ ಅಂತ ಹೇಳಿ ಆಟ ಗೂಟ ಜೈ ಅಂತ ಹೇಳಿ ನಮ್ಮ ಮ್ಯಾಲೆ ಜಗಳಾ ಆಡಾಕ ಬಂದಾರ. ನಮ್ಮ ಹಳ್ಳೀ ಒಳಗ ಒಂದ ಕ್ರಿಕೆಟ್ ಪಿಚ್ಚಿನ್ಯಾಗ ಸಣ್ಣ ಹುಡುಗರು ಆಡಾಕ ಹತ್ತಿದಾಗ ದೊಡ್ಡವರು ಬಂದು ಅವರ ಸ್ಟಂಪು – ಬಾಲು ಕಸಗೊಂಡರ ಹೆಂಗ ಸಣ್ಣ ಹುಡುಗರು, ಯೆಣ್ಣಾ ನೀವು ಹೋಗರಿ ಯಣ್ಣಾ, ನಾವು ಒಂದೀಟ ಆಡತೇವಿ. ನೀವು ಆಮ್ಯಾಕ ಬರೀರೆಂತ ಅಂತ ಹೇಳಿ ಅವರಿಗೆ ಆಗ್ರಹ ಮಾಡತಾರಲ್ಲಾ ಹಂಗ ನಮ್ಮ ಭಾರತೀಯರು ಅದನ್ನ ಕೇಳಿಕೊಂಡರು. ಒಂದಿಬ್ಬರು ಹೊಡದಾಡಿಕೊಂಡರು ಅಂತನೂ ಸುದ್ದಿ ಬಂದವು.

ಇದು ನಿಮಗ ರೊಮ್ಯಾಂಟಿಕ್ ಚಿತ್ರಣ ಅನ್ನಿಸಿದರ ನೀವು ಅದಕ್ಕ ಸಂಬಂಧ ಪಟ್ಟ ವಿಡಿಯೋ ಸುದ್ದಿ ನೋಡರಿ, ಅಲ್ ಜಜೀರಾ ಅವರ ವೆಬ್ ಸೈಟಿನೊಳಗ.

ಇದು ಯಾಕಪಾ ಅಂದರ ಭಾರತದ ಮಾಧ್ಯಮಗಳು ತೋರಿಸಲಾರದ್ದನ್ನ ಹೊರಗಿನವು ತೋರಿಸಿದವು. ಯಾಕಂದರ ನಮ್ಮವರು ಸುದ್ದಿ ವ್ಯಾಪಾರಸ್ಥರಾಗಿ ಬಿಟ್ಟಾರ. ಅವರು ಇನ್ನೂ ಪತ್ರಕರ್ತರಾಗಿ ಉಳದಾರ.

“ಇಲ್ಲಾ. ನಮಗೂ ಅವರಿಗೂ ಜಗಳ ಆಗಿಲ್ಲ. ಬರೇ ಒಂದಿಷ್ಟು ಮಾತು ಆಗಿದಾವು” ಅಂತ ನಮ್ಮ ಕೇಂದ್ರ ಸರಕಾರ ಹೇಳಿಕೊಂಡೇತಿ.

ಹಂಗಾರ ಅಲ್ಲಿ ಆಗಿದ್ದೇನು. ದೇಶಗಳ ನಡುವೆ ಮೂರು ಥರದ ಗೆರಿ ಇರತಾವು. ಅಂತರರಾಷ್ಟ್ರೀಯ ಗಡಿ, ನಿಯಂತ್ರಣ ರೇಖೆ ಮತ್ತು ಖರೆ ಖರೆ ನಿಯಂತ್ರಣ ರೇಖೆ (ಬಾರ್ಡರು, ಎಲ್‍ಓಸಿ, ಎಲ್‍ಏಸಿ) ಚೀನಾ ಹಾಗೂ ಭಾರತದ ನಡುವೆ ಎಲ್ಲರೂ ಒಪ್ಪುವಂಥಾ ಗಡಿ ಇಲ್ಲ. ನಾವು ಒಂದು ಅಂತೇವಿ ಅವರು ಇಲ್ಲ ಅಂತಾರ. ಅವರು ಒಂದು ಅಂತಾರ ನಾವು ಇಲ್ಲಾ ಅಂತೇವಿ.

ಅಂಥಾದರಾಗ ನಮ್ಮ ದೊಡ್ಡಣ್ಣಾರು, ಬಿಳಿಮನಿ ಟ್ರಂಪಣ್ಣನವರ್ ಅವರು “ಇವರು ಇಬ್ಬರೂ ಕಿತ್ಯಾಡಾಕ ಹತ್ಯಾರು. ನಾನು ನೋಡಾ ಹತ್ತೇನಿ. ನನ್ನ ಕಡೆ ಬಂದರ ನಾ ಜಗಳಾ ಬಿಡಸತೇನಿ,” ಅಂತ ಟ್ವಿಟರಿನ್ಯಾಗ ಕಾರಿಕೊಂಡರು. ನೀವು ಬರೋದು ಬ್ಯಾಡ. ನಿಮ್ಮ ಎಲ್ಯಾಗ ಕತ್ತಿ ಸತ್ತು ಬಿದ್ದೇತಿ, ನಮ್ಮ ನೊಣಾ ಯಾಕ ಝಾಡಸಾಕ ಬರತೀರಿ ಅಂತ ಇಬ್ಬರೂ ದೂರಾದರು. ಆ ಬೆಕ್ಕಿನ ಪ್ರೀತಿಯಿಂದ ಕೊಸರಾಡಿಕೊಂಡು ಬಿಡಿಸಿಕೊಂಡರು.

ಕೆಲವರ ಪ್ರಕಾರ ಚೀನಾ ಸೈನಿಕರು ಲಡಾಖಿನ ಹತ್ತಿರ ಭಾರತದ ಗಡಿಯೊಳಗ ಸುಮಾರು ಒಂಬೈನೂರು ಚದುರ ಕಿಲೋಮೀಟರ್ ಕ್ಷೇತ್ರದೊಳಗ ಒಳಗ ಬಂದಾರ. ಚೀನಾದವರು ಅದು ನಮ್ಮದ ಜಾಗ. ಅದರಾಗ ನಾವು ಹೆಂಗ ಬೇಕಾದಂಗ ಅಡ್ಯಾಡತೇವಿ. ನೀವು ಯಾರು ಅಂತ ಹೇಳ್ಯಾರು. ಭಾರತೀಯ ಗಡಿ ರಸ್ತೆ ಸಂಸ್ಥೆಯವರು ಚೀನಾ ಪ್ರದೇಶದೊಳಗ ರಸ್ತೆ ಮಾಡಾಕ ಬಂದಾರು. ಅದು ತಪ್ಪು ಅಂತ ಹೇಳ್ಯಾರು. ಒಂದು ಸಣ್ಣ ಗ್ರಾಮ ಪಂಚಾಯಿತಿ ರಸ್ತೆ ಮಾಡೋದರಾಗ ಕಳಪೆ ಕಾಮಗಾರಿ – ಲಂಚ ಎಲ್ಲಾ ನಡೀತಾವು. ಇನ್ನ ಹಿಮಾಲಯದಾಗ ಏನು ಮಾಡತಾರ ಇವರು ಅಂತ ಯಾರೋ ಅವರಿಗೆ ಮೂಗರ್ಜಿ ಬರದಿರಬೇಕು. ಅದಕ್ಕ ಅವರು ಬ್ಯಾಡ ಹೋಗರಿ ಅಂದಿರಬೇಕು.

ಇವು ಎಲ್ಲಾ ನಡಿಯೋವ. ಇದಕ್ಕ ಯುದ್ಧಕ್ಕ ಹೋಗಲಾರದ ಹಂಗ ಒಂದ ಕಡೆ ಕುತಗೊಂಡು ಮಾತಾಡಿ ಮುಗಿಸಿಕೊಳ್ಳೋ ವಿಚಾರ ಇವು. ಇದರಾಗ ವಿಶೇಷ ಏನು ಅಂದರ ನಮ್ಮನ್ನ ಆಳುವವರ ಪ್ರತಿಕ್ರಿಯೆ.

ಪಂಥ ಪ್ರಧಾನ ಸೇವಕರು ಎಂದಿನಂತೆ ಇದರ ಬಗ್ಗೆ ಮಾತಾಡಿಲ್ಲ. ನೀವು ಯಾವ ನೆಗಟಿವ್ ವಿಷಯ ಮಾತಾಡಬಾರದು. ಸರಕಾರದ ಯಾವ ತಪ್ಪೂ ಒಪ್ಪಿಕೊಳ್ಳಬಾರದು, ಯಾವುದೇ ನಿಖರವಾದ ಆಶ್ವಾಸನೆ ಕೊಡಬಾರದು. ಯಾವಾಗಲೂ ಪಾಸಿಟಿವ್ ಆಗಿ, ಎಲ್ಲರನ್ನೂ ಹುರಿದುಂಬಿಸುವ ಮಾತಾಡಬೇಕು ಅಂತ ಅವರಿಗೆ ಚುನಾವಣ ಪಂಡಿತ ಪ್ರಶಾಂತ ಕಿಶೋರ ಹೇಳಿದ್ದರಂತ. ಅದನ್ನ ಅವರು ಚಾಚೂ ತಪ್ಪದೇ ಪಾಲಿಸತಾರ. ಹೋಗಲಿ, ಭಾರತದಲ್ಲಿ ಮೊದಲಿಗೆ ವಿದೇಶಾಂಗ ಸಚಿವನಾಗಿದ್ದು ನಂತರ ವಿದೇಶ ಮಂತ್ರಿ ಆದ ಏಕೈಕ ವ್ಯಕ್ತಿ ಜಯಶಂಕರ ಅವರೂ ಮಾತಾಡಿಲ್ಲ. ಗೃಹ ಖಾತೆ ಸಚಿವ ಅಮಿತ ಷಾ ಅವರು ಎಂಟು ವರ್ಷದ ಹಿಂದೆ ಚೀನಾ ಸೈನಿಕರು ಭಾರತವನ್ನ ಪಿಕ್ ನಿಕ್ ತಾಣ ಅಂತ ತಿಳಕೊಂಡಾರು. ತಮಗ ಬೇಕಾದಾಗ ಬಂದು, ಮಜಾ ಮಾಡಿ ಹೋಗತಾರು. ನಮ್ಮ ಸರಕಾರ ಸುಮ್ಮನೇ ಕೂಡತೇತಿ ಅಂತ ಹೇಳಿದ್ದರು. ಅದನ್ನು ಯಾರೋ ಪುಣ್ಯಾತ್ಮರು ಟ್ವಿಟರ್ ನ್ಯಾಗಿಂದ ಹೊರಗ ತಗದು ತೋರಸಾಕ ಹತ್ಯಾರು.

ಅವ್ವ ಮಾಡಿದ ಅಡಿಗಿಗೆ ಹೆಸರು ಇಡಬ್ಯಾಡ್ರಿ ಅಂತ ಒಂದು ಶಾಯರಿ ಐತಿ. ‘ನಿಮಗ ಮಾಡಾಕ ಬರತಿದ್ದರ ಅಕೀ ಕೆಲಸ ತಪ್ಪಿಸಿ ನೀವು ಮಾಡರಿ. ಅಕಿ ಮಾಡೋ ಕೆಲಸಾ ಮಾಡೋದು ಕಷ್ಟ. ಅದಕ್ಕ ಹೆಸರು ಇಡೋದು ಸುಲಭ’ ಅಂತ.

ಹಂಗ, ಬ್ಯಾರೆದವರು ಸರಕಾರ ನಡೆಸೋವಾಗ ಟೀಕಾ ಮಾಡೋದು ವಿರೋಧ ಪಕ್ಷದವರಿಗೆ ಸುಲಭ. ಅದನ್ನ ನಂಬಿ ಜನಾ ಅವರಿಗೇ ಅಧಿಕಾರ ಕೊಟ್ಟರ ಸರಕಾರ ನಡೆಸೋದು ಕಷ್ಟ. ಆ ಶಾಯರಿ ಗೊತ್ತಿರಲಾರದವರಿಗೂ ಇದು ಗೊತ್ತಿರಬೇಕು.


ಇದನ್ನು ಓದಿ: ಹೊಸ ಮಾಧ್ಯಮ: ಮೂರನೇ ಬೆಲ್ ಬಾರಿಸಿದೆ, ಇನ್ನೀಗ ಶುರು ಮಾಡಲೇಬೇಕು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...