Homeಅಂಕಣಗಳುಬಾಯ್ಕಟ್‌ ಚೀನಾ ಅಭಿಯಾನ: ಸಂಪೂರ್ಣ ಭಾರತೀಯ ಫೋನು ತಯಾರಿಸೋ ಕಂಪನಿ ಯಾವುದೂ ಗೊತ್ತೆ?

ಬಾಯ್ಕಟ್‌ ಚೀನಾ ಅಭಿಯಾನ: ಸಂಪೂರ್ಣ ಭಾರತೀಯ ಫೋನು ತಯಾರಿಸೋ ಕಂಪನಿ ಯಾವುದೂ ಗೊತ್ತೆ?

- Advertisement -
- Advertisement -

ಈ ಸಮಾಜ ವಿರೋಧಿ ಮಾಧ್ಯಮಗಳಲ್ಲಿ (ಎಂಟಿ-ಸೋಷಿಯಲ್ ಮೀಡಿಯಾಗಳಲ್ಲಿ) ಒಂದು ಸಂದೇಶ ಓಡಾಡಾಕ ಹತ್ತೇತಿ. ಅದೇನೆಂದರ “ಈ ಆಪ್‍ನ ನಿಮ್ಮ ಮೊಬೈಲಿನಾಗ ಹಾಕ್ಕೋರಿ, ಅದರಾಗ ಇರಬಹುದಾದ ಎಲ್ಲಾ ಚೈನಾ ಆಪುಗಳನ್ನೂ ತಗೀರಿ, ದೇಶಪ್ರೇಮದ ರಸದಿಂದ ನಿಮ್ಮ ಫೋನನ್ನ ಸ್ವಚ್ಛ ಮಾಡರಿ” ಅಂತ. ಅದನ್ನ ಸುಮಾರು ಒಂದು ಕೋಟಿ ಜನ ಹಾಕಿಕೊಂಡು ಅದು ತೋರಿಸಿದಂತೆ ಚೈನಾ ಆಪುಗಳನ್ನ ತಗದಾರು.

ಕೆಲವರು ಪೇಟಿ ಎಮ್ಮು, ಬಿಗ್ ಬಾಸ್ಕೆಟಿನಂಥಾ ಆಪು ತಗದು, ಒದ್ಯಾಡಿದಾರು.

ಇದರಾಗ ಜೋಕು ಏನಪಾ ಅಂದರ, ಭಾಳ ಮಂದಿ ಈ ದೇಶಪ್ರೇಮದ ಕೆಲಸಾ ಮಾಡಾಕ ತಮ್ಮ ಚೀನಾ ಫೋನು ಉಪಯೋಗ ಮಾಡಿದಾರು. ಭಾರತದಾಗ ಒಂದು ನೂರು ಫೋನು ಅದಾವು ಅಂದರ ಅದರಾಗ 70 ಫೋನು ಚೀನಾ ಕಂಪನಿವು ಅದಾವು. ಭಾಳ ಜನರಿಗೆ ತಮ್ಮ ಫೋನು ಯಾವ ದೇಶದ್ದೂ ಅಂತ ಗೊತ್ತಿರೋದಿಲ್ಲ. ಖರೇ ಹೇಳಬೇಕಂದರ, ಫ್ರೀಡಂ ಅನ್ನೋ ಕಂಪನಿ ಒಂದು ಬಿಟ್ಟರ ಸಂಪೂರ್ಣ ಭಾರತೀಯ ಫೋನು ತಯಾರಿಸೋ ಕಂಪನಿ ಯಾವುದೂ ಇಲ್ಲ. ಅಂದಂಗ ಮೊನ್ನೆ ನಮ್ಮ ಪಂಥ ಪ್ರಧಾನ ಸೇವಕ ಅವರು ಲೋಕಲ್ ವೋಕಲ್ ಅಂತ ಹೇಳೋ ತನಕಾ ಅಂತೂ ಇರಲಿಲ್ಲ. ಕಳೆದ ಒಂದು ವಾರದಾಗ ಯಾವುದರ ಕಂಪನಿ ಹುಟ್ಟಿಕೊಂಡಿದ್ದರ ನಮಗ ಗೊತ್ತಿಲ್ಲ ಮತ್ತ.

ಯಾಕ ಹಂಗಂತೇನಪಾ ಅಂದರ, ಅದಕ್ಕೊಂದು ಕಾರಣ ಐತಿ.

ಮೂರು ವರ್ಷದ ಹಿಂದ ಅವರು ಫ್ರಾನ್ಸಿಗೆ ಹೋಗಿದ್ದರು. ಆವಾಗ ಅವರ ಸ್ನೇಹಿತರು ಹಾಗೂ ಖಜಾಂಚಿಗಳೂ ಆದ ಆತ್ಮ ನಿರ್ಭರ ಸಹೋದರು ಬರೇ ಹತ್ತು ದಿನದಾಗ ಒಂದು ರಕ್ಷಣಾ ತಂತ್ರಜ್ಞಾನದ ಕಂಪನಿ ಹುಟ್ಟು ಹಾಕಿದರು. ಅದನ್ನ ನೋಡಿ ಇವರು ಯಾವುದೋ ಮ್ಯಾಗಿ ನೂಡಲ್ ಕಂಪನಿ ಯೊಳಗ ಕೆಲಸ ಮಾಡಿರಬೇಕು ಬಾರಲೇ ಅಂತ ಹೇಳಿ ಇವರು ಅವರಿಗೆ ಯುದ್ಧ ವಿಮಾನ ತಯಾರು ಮಾಡೋ ಕೆಲಸ ಕೊಟ್ಟರು. “ಅಯ್ಯೋ ಅದನ್ನ ಯಾಕ ಅವರಿಗೆ ಕೊಟ್ಟರಿ, ನಾವ ಮಾಡತಿದ್ದೆವಲ್ಲ. ಎಪ್ಪತ್ತು ವರ್ಷದಿಂದ ನಾವನ ವಿಮಾನ ತಯಾರು ಮಾಡಾಕ ಹತ್ತೇವಿ. ನಿಮಗೂ ಗೊತ್ತೈತೆಲ್ಲಾ” ಅಂತ ಬೆಂಗಳೂರಿನ ಎಚ್‍ಎಎಲ್ ಅನ್ನೋ ಕಂಪನಿಯವರು ಸಣ್ಣಕ ದನಿ ತಗದಿದ್ದರಂತ. ಅದಕ್ಕ ಇವರು “ಹೋಗ ಹೋಗರಿ, ಎಲ್ಲಾ ನಿಮಗ ಏನು? ಹಳಬರಿಗೆ ಅವಕಾಶ ಸಾಕು, ಹೊಸಬರಿಗೆ ಅವಕಾಶ ಇರಲಿ. ರಾಜಕೀಯದಾಗೂ ಈ ನಿಯಮ ತಂದೇವಿ, ಇನ್ನ ಯುದ್ಧ ವಿಮಾನ ತಯಾರಿಗೆ ಬಿಡತೇವೇನು” ಅಂತ ಅಂದರು. ಈಗ ಆ ಹೊಸಾ ಕಂಪನಿ ಹಳೇ ಕಂಪನಿಯ ವಜ್ಜಾ ತಡಕೊಳ್ಳಲಾರದ ಮುಚ್ಚಾಕ ಬಂದೇತಿ. ಅದು ಬ್ಯಾರೆ ವಿಷಯ.

ಇನ್ನ ನಮ್ಮವರಿಗೆ ಚೀನಾದ ಮ್ಯಾಲೆ ಕೆಂಗಣ್ಣು ಬಿಡೋ ಅಷ್ಟು ಸಿಟ್ಟು ಯಾಕ ಬಂತು? ಅದಕ್ಕ ಒಂದಿಷ್ಟು ಹಿಂದ ಹೋಗಬೇಕಾಗತೇತಿ. ನಿಮಗೆ “ಹೋಕೆ ಮಜಬೂರ ಮುಝೆ ಉಸನೆ ಭುಲಾಯಾ ಹೋಗಾ” (‘ಅನಿವಾರ್ಯವಾಗಿ ಅಕಿ ನನ್ನ ಮರತಿರಬೇಕು’) ಅನ್ನೋ ಹಾಡು ನೆನಪು ಇರಬೇಕು. ಅದು ಒಂದು ಕರೇ – ಬಿಳೇ ಹಳೇ ಹಿಂದಿ ಸಿನಿಮಾದ ಹಾಡು. ಅದರಾಗ ಭಾರತೀಯ ಸೈನಿಕರು ಹೋಗಿ ಚೀನಾದ ಮ್ಯಾಲೆ ಯುದ್ಧ ಮಾಡಿ ಗೆದ್ದು ಬರತಾರ. ಸಿನಿಮಾದಾಗ ಗೆದ್ದರು ಆದರ ಅದನ್ನ ಚೀನಾದವರು ಇನ್ನೂ ಒಪ್ಪಾಕ ತಯಾರು ಇಲ್ಲ. ಭಾರತ- ಚೀನಾ ಗಡಿ ಮೂರು ಸಾವಿರದ ಎಂಟು ನೂರು ಕಿಲೋಮಿಟರ್ ಅಂತ ನಮ್ಮ ವಿದೇಶಾಂಗ ಮಂತ್ರಿ ಅಂದಿದ್ದಕ್ಕ ಚೀನಾದವರು ಎಲ್ಲಾಸುಳ್ಳ. ಅದು ಬರೇ ಎರಡು ಸಾವಿರ ಕಿಲೋಮೀಟರ್ ಅಂತ ಹೇಳಿ ಆಟ ಗೂಟ ಜೈ ಅಂತ ಹೇಳಿ ನಮ್ಮ ಮ್ಯಾಲೆ ಜಗಳಾ ಆಡಾಕ ಬಂದಾರ. ನಮ್ಮ ಹಳ್ಳೀ ಒಳಗ ಒಂದ ಕ್ರಿಕೆಟ್ ಪಿಚ್ಚಿನ್ಯಾಗ ಸಣ್ಣ ಹುಡುಗರು ಆಡಾಕ ಹತ್ತಿದಾಗ ದೊಡ್ಡವರು ಬಂದು ಅವರ ಸ್ಟಂಪು – ಬಾಲು ಕಸಗೊಂಡರ ಹೆಂಗ ಸಣ್ಣ ಹುಡುಗರು, ಯೆಣ್ಣಾ ನೀವು ಹೋಗರಿ ಯಣ್ಣಾ, ನಾವು ಒಂದೀಟ ಆಡತೇವಿ. ನೀವು ಆಮ್ಯಾಕ ಬರೀರೆಂತ ಅಂತ ಹೇಳಿ ಅವರಿಗೆ ಆಗ್ರಹ ಮಾಡತಾರಲ್ಲಾ ಹಂಗ ನಮ್ಮ ಭಾರತೀಯರು ಅದನ್ನ ಕೇಳಿಕೊಂಡರು. ಒಂದಿಬ್ಬರು ಹೊಡದಾಡಿಕೊಂಡರು ಅಂತನೂ ಸುದ್ದಿ ಬಂದವು.

ಇದು ನಿಮಗ ರೊಮ್ಯಾಂಟಿಕ್ ಚಿತ್ರಣ ಅನ್ನಿಸಿದರ ನೀವು ಅದಕ್ಕ ಸಂಬಂಧ ಪಟ್ಟ ವಿಡಿಯೋ ಸುದ್ದಿ ನೋಡರಿ, ಅಲ್ ಜಜೀರಾ ಅವರ ವೆಬ್ ಸೈಟಿನೊಳಗ.

ಇದು ಯಾಕಪಾ ಅಂದರ ಭಾರತದ ಮಾಧ್ಯಮಗಳು ತೋರಿಸಲಾರದ್ದನ್ನ ಹೊರಗಿನವು ತೋರಿಸಿದವು. ಯಾಕಂದರ ನಮ್ಮವರು ಸುದ್ದಿ ವ್ಯಾಪಾರಸ್ಥರಾಗಿ ಬಿಟ್ಟಾರ. ಅವರು ಇನ್ನೂ ಪತ್ರಕರ್ತರಾಗಿ ಉಳದಾರ.

“ಇಲ್ಲಾ. ನಮಗೂ ಅವರಿಗೂ ಜಗಳ ಆಗಿಲ್ಲ. ಬರೇ ಒಂದಿಷ್ಟು ಮಾತು ಆಗಿದಾವು” ಅಂತ ನಮ್ಮ ಕೇಂದ್ರ ಸರಕಾರ ಹೇಳಿಕೊಂಡೇತಿ.

ಹಂಗಾರ ಅಲ್ಲಿ ಆಗಿದ್ದೇನು. ದೇಶಗಳ ನಡುವೆ ಮೂರು ಥರದ ಗೆರಿ ಇರತಾವು. ಅಂತರರಾಷ್ಟ್ರೀಯ ಗಡಿ, ನಿಯಂತ್ರಣ ರೇಖೆ ಮತ್ತು ಖರೆ ಖರೆ ನಿಯಂತ್ರಣ ರೇಖೆ (ಬಾರ್ಡರು, ಎಲ್‍ಓಸಿ, ಎಲ್‍ಏಸಿ) ಚೀನಾ ಹಾಗೂ ಭಾರತದ ನಡುವೆ ಎಲ್ಲರೂ ಒಪ್ಪುವಂಥಾ ಗಡಿ ಇಲ್ಲ. ನಾವು ಒಂದು ಅಂತೇವಿ ಅವರು ಇಲ್ಲ ಅಂತಾರ. ಅವರು ಒಂದು ಅಂತಾರ ನಾವು ಇಲ್ಲಾ ಅಂತೇವಿ.

ಅಂಥಾದರಾಗ ನಮ್ಮ ದೊಡ್ಡಣ್ಣಾರು, ಬಿಳಿಮನಿ ಟ್ರಂಪಣ್ಣನವರ್ ಅವರು “ಇವರು ಇಬ್ಬರೂ ಕಿತ್ಯಾಡಾಕ ಹತ್ಯಾರು. ನಾನು ನೋಡಾ ಹತ್ತೇನಿ. ನನ್ನ ಕಡೆ ಬಂದರ ನಾ ಜಗಳಾ ಬಿಡಸತೇನಿ,” ಅಂತ ಟ್ವಿಟರಿನ್ಯಾಗ ಕಾರಿಕೊಂಡರು. ನೀವು ಬರೋದು ಬ್ಯಾಡ. ನಿಮ್ಮ ಎಲ್ಯಾಗ ಕತ್ತಿ ಸತ್ತು ಬಿದ್ದೇತಿ, ನಮ್ಮ ನೊಣಾ ಯಾಕ ಝಾಡಸಾಕ ಬರತೀರಿ ಅಂತ ಇಬ್ಬರೂ ದೂರಾದರು. ಆ ಬೆಕ್ಕಿನ ಪ್ರೀತಿಯಿಂದ ಕೊಸರಾಡಿಕೊಂಡು ಬಿಡಿಸಿಕೊಂಡರು.

ಕೆಲವರ ಪ್ರಕಾರ ಚೀನಾ ಸೈನಿಕರು ಲಡಾಖಿನ ಹತ್ತಿರ ಭಾರತದ ಗಡಿಯೊಳಗ ಸುಮಾರು ಒಂಬೈನೂರು ಚದುರ ಕಿಲೋಮೀಟರ್ ಕ್ಷೇತ್ರದೊಳಗ ಒಳಗ ಬಂದಾರ. ಚೀನಾದವರು ಅದು ನಮ್ಮದ ಜಾಗ. ಅದರಾಗ ನಾವು ಹೆಂಗ ಬೇಕಾದಂಗ ಅಡ್ಯಾಡತೇವಿ. ನೀವು ಯಾರು ಅಂತ ಹೇಳ್ಯಾರು. ಭಾರತೀಯ ಗಡಿ ರಸ್ತೆ ಸಂಸ್ಥೆಯವರು ಚೀನಾ ಪ್ರದೇಶದೊಳಗ ರಸ್ತೆ ಮಾಡಾಕ ಬಂದಾರು. ಅದು ತಪ್ಪು ಅಂತ ಹೇಳ್ಯಾರು. ಒಂದು ಸಣ್ಣ ಗ್ರಾಮ ಪಂಚಾಯಿತಿ ರಸ್ತೆ ಮಾಡೋದರಾಗ ಕಳಪೆ ಕಾಮಗಾರಿ – ಲಂಚ ಎಲ್ಲಾ ನಡೀತಾವು. ಇನ್ನ ಹಿಮಾಲಯದಾಗ ಏನು ಮಾಡತಾರ ಇವರು ಅಂತ ಯಾರೋ ಅವರಿಗೆ ಮೂಗರ್ಜಿ ಬರದಿರಬೇಕು. ಅದಕ್ಕ ಅವರು ಬ್ಯಾಡ ಹೋಗರಿ ಅಂದಿರಬೇಕು.

ಇವು ಎಲ್ಲಾ ನಡಿಯೋವ. ಇದಕ್ಕ ಯುದ್ಧಕ್ಕ ಹೋಗಲಾರದ ಹಂಗ ಒಂದ ಕಡೆ ಕುತಗೊಂಡು ಮಾತಾಡಿ ಮುಗಿಸಿಕೊಳ್ಳೋ ವಿಚಾರ ಇವು. ಇದರಾಗ ವಿಶೇಷ ಏನು ಅಂದರ ನಮ್ಮನ್ನ ಆಳುವವರ ಪ್ರತಿಕ್ರಿಯೆ.

ಪಂಥ ಪ್ರಧಾನ ಸೇವಕರು ಎಂದಿನಂತೆ ಇದರ ಬಗ್ಗೆ ಮಾತಾಡಿಲ್ಲ. ನೀವು ಯಾವ ನೆಗಟಿವ್ ವಿಷಯ ಮಾತಾಡಬಾರದು. ಸರಕಾರದ ಯಾವ ತಪ್ಪೂ ಒಪ್ಪಿಕೊಳ್ಳಬಾರದು, ಯಾವುದೇ ನಿಖರವಾದ ಆಶ್ವಾಸನೆ ಕೊಡಬಾರದು. ಯಾವಾಗಲೂ ಪಾಸಿಟಿವ್ ಆಗಿ, ಎಲ್ಲರನ್ನೂ ಹುರಿದುಂಬಿಸುವ ಮಾತಾಡಬೇಕು ಅಂತ ಅವರಿಗೆ ಚುನಾವಣ ಪಂಡಿತ ಪ್ರಶಾಂತ ಕಿಶೋರ ಹೇಳಿದ್ದರಂತ. ಅದನ್ನ ಅವರು ಚಾಚೂ ತಪ್ಪದೇ ಪಾಲಿಸತಾರ. ಹೋಗಲಿ, ಭಾರತದಲ್ಲಿ ಮೊದಲಿಗೆ ವಿದೇಶಾಂಗ ಸಚಿವನಾಗಿದ್ದು ನಂತರ ವಿದೇಶ ಮಂತ್ರಿ ಆದ ಏಕೈಕ ವ್ಯಕ್ತಿ ಜಯಶಂಕರ ಅವರೂ ಮಾತಾಡಿಲ್ಲ. ಗೃಹ ಖಾತೆ ಸಚಿವ ಅಮಿತ ಷಾ ಅವರು ಎಂಟು ವರ್ಷದ ಹಿಂದೆ ಚೀನಾ ಸೈನಿಕರು ಭಾರತವನ್ನ ಪಿಕ್ ನಿಕ್ ತಾಣ ಅಂತ ತಿಳಕೊಂಡಾರು. ತಮಗ ಬೇಕಾದಾಗ ಬಂದು, ಮಜಾ ಮಾಡಿ ಹೋಗತಾರು. ನಮ್ಮ ಸರಕಾರ ಸುಮ್ಮನೇ ಕೂಡತೇತಿ ಅಂತ ಹೇಳಿದ್ದರು. ಅದನ್ನು ಯಾರೋ ಪುಣ್ಯಾತ್ಮರು ಟ್ವಿಟರ್ ನ್ಯಾಗಿಂದ ಹೊರಗ ತಗದು ತೋರಸಾಕ ಹತ್ಯಾರು.

ಅವ್ವ ಮಾಡಿದ ಅಡಿಗಿಗೆ ಹೆಸರು ಇಡಬ್ಯಾಡ್ರಿ ಅಂತ ಒಂದು ಶಾಯರಿ ಐತಿ. ‘ನಿಮಗ ಮಾಡಾಕ ಬರತಿದ್ದರ ಅಕೀ ಕೆಲಸ ತಪ್ಪಿಸಿ ನೀವು ಮಾಡರಿ. ಅಕಿ ಮಾಡೋ ಕೆಲಸಾ ಮಾಡೋದು ಕಷ್ಟ. ಅದಕ್ಕ ಹೆಸರು ಇಡೋದು ಸುಲಭ’ ಅಂತ.

ಹಂಗ, ಬ್ಯಾರೆದವರು ಸರಕಾರ ನಡೆಸೋವಾಗ ಟೀಕಾ ಮಾಡೋದು ವಿರೋಧ ಪಕ್ಷದವರಿಗೆ ಸುಲಭ. ಅದನ್ನ ನಂಬಿ ಜನಾ ಅವರಿಗೇ ಅಧಿಕಾರ ಕೊಟ್ಟರ ಸರಕಾರ ನಡೆಸೋದು ಕಷ್ಟ. ಆ ಶಾಯರಿ ಗೊತ್ತಿರಲಾರದವರಿಗೂ ಇದು ಗೊತ್ತಿರಬೇಕು.


ಇದನ್ನು ಓದಿ: ಹೊಸ ಮಾಧ್ಯಮ: ಮೂರನೇ ಬೆಲ್ ಬಾರಿಸಿದೆ, ಇನ್ನೀಗ ಶುರು ಮಾಡಲೇಬೇಕು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...