Homeಅಂಕಣಗಳುಬಾಯ್ಕಟ್‌ ಚೀನಾ ಅಭಿಯಾನ: ಸಂಪೂರ್ಣ ಭಾರತೀಯ ಫೋನು ತಯಾರಿಸೋ ಕಂಪನಿ ಯಾವುದೂ ಗೊತ್ತೆ?

ಬಾಯ್ಕಟ್‌ ಚೀನಾ ಅಭಿಯಾನ: ಸಂಪೂರ್ಣ ಭಾರತೀಯ ಫೋನು ತಯಾರಿಸೋ ಕಂಪನಿ ಯಾವುದೂ ಗೊತ್ತೆ?

- Advertisement -
- Advertisement -

ಈ ಸಮಾಜ ವಿರೋಧಿ ಮಾಧ್ಯಮಗಳಲ್ಲಿ (ಎಂಟಿ-ಸೋಷಿಯಲ್ ಮೀಡಿಯಾಗಳಲ್ಲಿ) ಒಂದು ಸಂದೇಶ ಓಡಾಡಾಕ ಹತ್ತೇತಿ. ಅದೇನೆಂದರ “ಈ ಆಪ್‍ನ ನಿಮ್ಮ ಮೊಬೈಲಿನಾಗ ಹಾಕ್ಕೋರಿ, ಅದರಾಗ ಇರಬಹುದಾದ ಎಲ್ಲಾ ಚೈನಾ ಆಪುಗಳನ್ನೂ ತಗೀರಿ, ದೇಶಪ್ರೇಮದ ರಸದಿಂದ ನಿಮ್ಮ ಫೋನನ್ನ ಸ್ವಚ್ಛ ಮಾಡರಿ” ಅಂತ. ಅದನ್ನ ಸುಮಾರು ಒಂದು ಕೋಟಿ ಜನ ಹಾಕಿಕೊಂಡು ಅದು ತೋರಿಸಿದಂತೆ ಚೈನಾ ಆಪುಗಳನ್ನ ತಗದಾರು.

ಕೆಲವರು ಪೇಟಿ ಎಮ್ಮು, ಬಿಗ್ ಬಾಸ್ಕೆಟಿನಂಥಾ ಆಪು ತಗದು, ಒದ್ಯಾಡಿದಾರು.

ಇದರಾಗ ಜೋಕು ಏನಪಾ ಅಂದರ, ಭಾಳ ಮಂದಿ ಈ ದೇಶಪ್ರೇಮದ ಕೆಲಸಾ ಮಾಡಾಕ ತಮ್ಮ ಚೀನಾ ಫೋನು ಉಪಯೋಗ ಮಾಡಿದಾರು. ಭಾರತದಾಗ ಒಂದು ನೂರು ಫೋನು ಅದಾವು ಅಂದರ ಅದರಾಗ 70 ಫೋನು ಚೀನಾ ಕಂಪನಿವು ಅದಾವು. ಭಾಳ ಜನರಿಗೆ ತಮ್ಮ ಫೋನು ಯಾವ ದೇಶದ್ದೂ ಅಂತ ಗೊತ್ತಿರೋದಿಲ್ಲ. ಖರೇ ಹೇಳಬೇಕಂದರ, ಫ್ರೀಡಂ ಅನ್ನೋ ಕಂಪನಿ ಒಂದು ಬಿಟ್ಟರ ಸಂಪೂರ್ಣ ಭಾರತೀಯ ಫೋನು ತಯಾರಿಸೋ ಕಂಪನಿ ಯಾವುದೂ ಇಲ್ಲ. ಅಂದಂಗ ಮೊನ್ನೆ ನಮ್ಮ ಪಂಥ ಪ್ರಧಾನ ಸೇವಕ ಅವರು ಲೋಕಲ್ ವೋಕಲ್ ಅಂತ ಹೇಳೋ ತನಕಾ ಅಂತೂ ಇರಲಿಲ್ಲ. ಕಳೆದ ಒಂದು ವಾರದಾಗ ಯಾವುದರ ಕಂಪನಿ ಹುಟ್ಟಿಕೊಂಡಿದ್ದರ ನಮಗ ಗೊತ್ತಿಲ್ಲ ಮತ್ತ.

ಯಾಕ ಹಂಗಂತೇನಪಾ ಅಂದರ, ಅದಕ್ಕೊಂದು ಕಾರಣ ಐತಿ.

ಮೂರು ವರ್ಷದ ಹಿಂದ ಅವರು ಫ್ರಾನ್ಸಿಗೆ ಹೋಗಿದ್ದರು. ಆವಾಗ ಅವರ ಸ್ನೇಹಿತರು ಹಾಗೂ ಖಜಾಂಚಿಗಳೂ ಆದ ಆತ್ಮ ನಿರ್ಭರ ಸಹೋದರು ಬರೇ ಹತ್ತು ದಿನದಾಗ ಒಂದು ರಕ್ಷಣಾ ತಂತ್ರಜ್ಞಾನದ ಕಂಪನಿ ಹುಟ್ಟು ಹಾಕಿದರು. ಅದನ್ನ ನೋಡಿ ಇವರು ಯಾವುದೋ ಮ್ಯಾಗಿ ನೂಡಲ್ ಕಂಪನಿ ಯೊಳಗ ಕೆಲಸ ಮಾಡಿರಬೇಕು ಬಾರಲೇ ಅಂತ ಹೇಳಿ ಇವರು ಅವರಿಗೆ ಯುದ್ಧ ವಿಮಾನ ತಯಾರು ಮಾಡೋ ಕೆಲಸ ಕೊಟ್ಟರು. “ಅಯ್ಯೋ ಅದನ್ನ ಯಾಕ ಅವರಿಗೆ ಕೊಟ್ಟರಿ, ನಾವ ಮಾಡತಿದ್ದೆವಲ್ಲ. ಎಪ್ಪತ್ತು ವರ್ಷದಿಂದ ನಾವನ ವಿಮಾನ ತಯಾರು ಮಾಡಾಕ ಹತ್ತೇವಿ. ನಿಮಗೂ ಗೊತ್ತೈತೆಲ್ಲಾ” ಅಂತ ಬೆಂಗಳೂರಿನ ಎಚ್‍ಎಎಲ್ ಅನ್ನೋ ಕಂಪನಿಯವರು ಸಣ್ಣಕ ದನಿ ತಗದಿದ್ದರಂತ. ಅದಕ್ಕ ಇವರು “ಹೋಗ ಹೋಗರಿ, ಎಲ್ಲಾ ನಿಮಗ ಏನು? ಹಳಬರಿಗೆ ಅವಕಾಶ ಸಾಕು, ಹೊಸಬರಿಗೆ ಅವಕಾಶ ಇರಲಿ. ರಾಜಕೀಯದಾಗೂ ಈ ನಿಯಮ ತಂದೇವಿ, ಇನ್ನ ಯುದ್ಧ ವಿಮಾನ ತಯಾರಿಗೆ ಬಿಡತೇವೇನು” ಅಂತ ಅಂದರು. ಈಗ ಆ ಹೊಸಾ ಕಂಪನಿ ಹಳೇ ಕಂಪನಿಯ ವಜ್ಜಾ ತಡಕೊಳ್ಳಲಾರದ ಮುಚ್ಚಾಕ ಬಂದೇತಿ. ಅದು ಬ್ಯಾರೆ ವಿಷಯ.

ಇನ್ನ ನಮ್ಮವರಿಗೆ ಚೀನಾದ ಮ್ಯಾಲೆ ಕೆಂಗಣ್ಣು ಬಿಡೋ ಅಷ್ಟು ಸಿಟ್ಟು ಯಾಕ ಬಂತು? ಅದಕ್ಕ ಒಂದಿಷ್ಟು ಹಿಂದ ಹೋಗಬೇಕಾಗತೇತಿ. ನಿಮಗೆ “ಹೋಕೆ ಮಜಬೂರ ಮುಝೆ ಉಸನೆ ಭುಲಾಯಾ ಹೋಗಾ” (‘ಅನಿವಾರ್ಯವಾಗಿ ಅಕಿ ನನ್ನ ಮರತಿರಬೇಕು’) ಅನ್ನೋ ಹಾಡು ನೆನಪು ಇರಬೇಕು. ಅದು ಒಂದು ಕರೇ – ಬಿಳೇ ಹಳೇ ಹಿಂದಿ ಸಿನಿಮಾದ ಹಾಡು. ಅದರಾಗ ಭಾರತೀಯ ಸೈನಿಕರು ಹೋಗಿ ಚೀನಾದ ಮ್ಯಾಲೆ ಯುದ್ಧ ಮಾಡಿ ಗೆದ್ದು ಬರತಾರ. ಸಿನಿಮಾದಾಗ ಗೆದ್ದರು ಆದರ ಅದನ್ನ ಚೀನಾದವರು ಇನ್ನೂ ಒಪ್ಪಾಕ ತಯಾರು ಇಲ್ಲ. ಭಾರತ- ಚೀನಾ ಗಡಿ ಮೂರು ಸಾವಿರದ ಎಂಟು ನೂರು ಕಿಲೋಮಿಟರ್ ಅಂತ ನಮ್ಮ ವಿದೇಶಾಂಗ ಮಂತ್ರಿ ಅಂದಿದ್ದಕ್ಕ ಚೀನಾದವರು ಎಲ್ಲಾಸುಳ್ಳ. ಅದು ಬರೇ ಎರಡು ಸಾವಿರ ಕಿಲೋಮೀಟರ್ ಅಂತ ಹೇಳಿ ಆಟ ಗೂಟ ಜೈ ಅಂತ ಹೇಳಿ ನಮ್ಮ ಮ್ಯಾಲೆ ಜಗಳಾ ಆಡಾಕ ಬಂದಾರ. ನಮ್ಮ ಹಳ್ಳೀ ಒಳಗ ಒಂದ ಕ್ರಿಕೆಟ್ ಪಿಚ್ಚಿನ್ಯಾಗ ಸಣ್ಣ ಹುಡುಗರು ಆಡಾಕ ಹತ್ತಿದಾಗ ದೊಡ್ಡವರು ಬಂದು ಅವರ ಸ್ಟಂಪು – ಬಾಲು ಕಸಗೊಂಡರ ಹೆಂಗ ಸಣ್ಣ ಹುಡುಗರು, ಯೆಣ್ಣಾ ನೀವು ಹೋಗರಿ ಯಣ್ಣಾ, ನಾವು ಒಂದೀಟ ಆಡತೇವಿ. ನೀವು ಆಮ್ಯಾಕ ಬರೀರೆಂತ ಅಂತ ಹೇಳಿ ಅವರಿಗೆ ಆಗ್ರಹ ಮಾಡತಾರಲ್ಲಾ ಹಂಗ ನಮ್ಮ ಭಾರತೀಯರು ಅದನ್ನ ಕೇಳಿಕೊಂಡರು. ಒಂದಿಬ್ಬರು ಹೊಡದಾಡಿಕೊಂಡರು ಅಂತನೂ ಸುದ್ದಿ ಬಂದವು.

ಇದು ನಿಮಗ ರೊಮ್ಯಾಂಟಿಕ್ ಚಿತ್ರಣ ಅನ್ನಿಸಿದರ ನೀವು ಅದಕ್ಕ ಸಂಬಂಧ ಪಟ್ಟ ವಿಡಿಯೋ ಸುದ್ದಿ ನೋಡರಿ, ಅಲ್ ಜಜೀರಾ ಅವರ ವೆಬ್ ಸೈಟಿನೊಳಗ.

ಇದು ಯಾಕಪಾ ಅಂದರ ಭಾರತದ ಮಾಧ್ಯಮಗಳು ತೋರಿಸಲಾರದ್ದನ್ನ ಹೊರಗಿನವು ತೋರಿಸಿದವು. ಯಾಕಂದರ ನಮ್ಮವರು ಸುದ್ದಿ ವ್ಯಾಪಾರಸ್ಥರಾಗಿ ಬಿಟ್ಟಾರ. ಅವರು ಇನ್ನೂ ಪತ್ರಕರ್ತರಾಗಿ ಉಳದಾರ.

“ಇಲ್ಲಾ. ನಮಗೂ ಅವರಿಗೂ ಜಗಳ ಆಗಿಲ್ಲ. ಬರೇ ಒಂದಿಷ್ಟು ಮಾತು ಆಗಿದಾವು” ಅಂತ ನಮ್ಮ ಕೇಂದ್ರ ಸರಕಾರ ಹೇಳಿಕೊಂಡೇತಿ.

ಹಂಗಾರ ಅಲ್ಲಿ ಆಗಿದ್ದೇನು. ದೇಶಗಳ ನಡುವೆ ಮೂರು ಥರದ ಗೆರಿ ಇರತಾವು. ಅಂತರರಾಷ್ಟ್ರೀಯ ಗಡಿ, ನಿಯಂತ್ರಣ ರೇಖೆ ಮತ್ತು ಖರೆ ಖರೆ ನಿಯಂತ್ರಣ ರೇಖೆ (ಬಾರ್ಡರು, ಎಲ್‍ಓಸಿ, ಎಲ್‍ಏಸಿ) ಚೀನಾ ಹಾಗೂ ಭಾರತದ ನಡುವೆ ಎಲ್ಲರೂ ಒಪ್ಪುವಂಥಾ ಗಡಿ ಇಲ್ಲ. ನಾವು ಒಂದು ಅಂತೇವಿ ಅವರು ಇಲ್ಲ ಅಂತಾರ. ಅವರು ಒಂದು ಅಂತಾರ ನಾವು ಇಲ್ಲಾ ಅಂತೇವಿ.

ಅಂಥಾದರಾಗ ನಮ್ಮ ದೊಡ್ಡಣ್ಣಾರು, ಬಿಳಿಮನಿ ಟ್ರಂಪಣ್ಣನವರ್ ಅವರು “ಇವರು ಇಬ್ಬರೂ ಕಿತ್ಯಾಡಾಕ ಹತ್ಯಾರು. ನಾನು ನೋಡಾ ಹತ್ತೇನಿ. ನನ್ನ ಕಡೆ ಬಂದರ ನಾ ಜಗಳಾ ಬಿಡಸತೇನಿ,” ಅಂತ ಟ್ವಿಟರಿನ್ಯಾಗ ಕಾರಿಕೊಂಡರು. ನೀವು ಬರೋದು ಬ್ಯಾಡ. ನಿಮ್ಮ ಎಲ್ಯಾಗ ಕತ್ತಿ ಸತ್ತು ಬಿದ್ದೇತಿ, ನಮ್ಮ ನೊಣಾ ಯಾಕ ಝಾಡಸಾಕ ಬರತೀರಿ ಅಂತ ಇಬ್ಬರೂ ದೂರಾದರು. ಆ ಬೆಕ್ಕಿನ ಪ್ರೀತಿಯಿಂದ ಕೊಸರಾಡಿಕೊಂಡು ಬಿಡಿಸಿಕೊಂಡರು.

ಕೆಲವರ ಪ್ರಕಾರ ಚೀನಾ ಸೈನಿಕರು ಲಡಾಖಿನ ಹತ್ತಿರ ಭಾರತದ ಗಡಿಯೊಳಗ ಸುಮಾರು ಒಂಬೈನೂರು ಚದುರ ಕಿಲೋಮೀಟರ್ ಕ್ಷೇತ್ರದೊಳಗ ಒಳಗ ಬಂದಾರ. ಚೀನಾದವರು ಅದು ನಮ್ಮದ ಜಾಗ. ಅದರಾಗ ನಾವು ಹೆಂಗ ಬೇಕಾದಂಗ ಅಡ್ಯಾಡತೇವಿ. ನೀವು ಯಾರು ಅಂತ ಹೇಳ್ಯಾರು. ಭಾರತೀಯ ಗಡಿ ರಸ್ತೆ ಸಂಸ್ಥೆಯವರು ಚೀನಾ ಪ್ರದೇಶದೊಳಗ ರಸ್ತೆ ಮಾಡಾಕ ಬಂದಾರು. ಅದು ತಪ್ಪು ಅಂತ ಹೇಳ್ಯಾರು. ಒಂದು ಸಣ್ಣ ಗ್ರಾಮ ಪಂಚಾಯಿತಿ ರಸ್ತೆ ಮಾಡೋದರಾಗ ಕಳಪೆ ಕಾಮಗಾರಿ – ಲಂಚ ಎಲ್ಲಾ ನಡೀತಾವು. ಇನ್ನ ಹಿಮಾಲಯದಾಗ ಏನು ಮಾಡತಾರ ಇವರು ಅಂತ ಯಾರೋ ಅವರಿಗೆ ಮೂಗರ್ಜಿ ಬರದಿರಬೇಕು. ಅದಕ್ಕ ಅವರು ಬ್ಯಾಡ ಹೋಗರಿ ಅಂದಿರಬೇಕು.

ಇವು ಎಲ್ಲಾ ನಡಿಯೋವ. ಇದಕ್ಕ ಯುದ್ಧಕ್ಕ ಹೋಗಲಾರದ ಹಂಗ ಒಂದ ಕಡೆ ಕುತಗೊಂಡು ಮಾತಾಡಿ ಮುಗಿಸಿಕೊಳ್ಳೋ ವಿಚಾರ ಇವು. ಇದರಾಗ ವಿಶೇಷ ಏನು ಅಂದರ ನಮ್ಮನ್ನ ಆಳುವವರ ಪ್ರತಿಕ್ರಿಯೆ.

ಪಂಥ ಪ್ರಧಾನ ಸೇವಕರು ಎಂದಿನಂತೆ ಇದರ ಬಗ್ಗೆ ಮಾತಾಡಿಲ್ಲ. ನೀವು ಯಾವ ನೆಗಟಿವ್ ವಿಷಯ ಮಾತಾಡಬಾರದು. ಸರಕಾರದ ಯಾವ ತಪ್ಪೂ ಒಪ್ಪಿಕೊಳ್ಳಬಾರದು, ಯಾವುದೇ ನಿಖರವಾದ ಆಶ್ವಾಸನೆ ಕೊಡಬಾರದು. ಯಾವಾಗಲೂ ಪಾಸಿಟಿವ್ ಆಗಿ, ಎಲ್ಲರನ್ನೂ ಹುರಿದುಂಬಿಸುವ ಮಾತಾಡಬೇಕು ಅಂತ ಅವರಿಗೆ ಚುನಾವಣ ಪಂಡಿತ ಪ್ರಶಾಂತ ಕಿಶೋರ ಹೇಳಿದ್ದರಂತ. ಅದನ್ನ ಅವರು ಚಾಚೂ ತಪ್ಪದೇ ಪಾಲಿಸತಾರ. ಹೋಗಲಿ, ಭಾರತದಲ್ಲಿ ಮೊದಲಿಗೆ ವಿದೇಶಾಂಗ ಸಚಿವನಾಗಿದ್ದು ನಂತರ ವಿದೇಶ ಮಂತ್ರಿ ಆದ ಏಕೈಕ ವ್ಯಕ್ತಿ ಜಯಶಂಕರ ಅವರೂ ಮಾತಾಡಿಲ್ಲ. ಗೃಹ ಖಾತೆ ಸಚಿವ ಅಮಿತ ಷಾ ಅವರು ಎಂಟು ವರ್ಷದ ಹಿಂದೆ ಚೀನಾ ಸೈನಿಕರು ಭಾರತವನ್ನ ಪಿಕ್ ನಿಕ್ ತಾಣ ಅಂತ ತಿಳಕೊಂಡಾರು. ತಮಗ ಬೇಕಾದಾಗ ಬಂದು, ಮಜಾ ಮಾಡಿ ಹೋಗತಾರು. ನಮ್ಮ ಸರಕಾರ ಸುಮ್ಮನೇ ಕೂಡತೇತಿ ಅಂತ ಹೇಳಿದ್ದರು. ಅದನ್ನು ಯಾರೋ ಪುಣ್ಯಾತ್ಮರು ಟ್ವಿಟರ್ ನ್ಯಾಗಿಂದ ಹೊರಗ ತಗದು ತೋರಸಾಕ ಹತ್ಯಾರು.

ಅವ್ವ ಮಾಡಿದ ಅಡಿಗಿಗೆ ಹೆಸರು ಇಡಬ್ಯಾಡ್ರಿ ಅಂತ ಒಂದು ಶಾಯರಿ ಐತಿ. ‘ನಿಮಗ ಮಾಡಾಕ ಬರತಿದ್ದರ ಅಕೀ ಕೆಲಸ ತಪ್ಪಿಸಿ ನೀವು ಮಾಡರಿ. ಅಕಿ ಮಾಡೋ ಕೆಲಸಾ ಮಾಡೋದು ಕಷ್ಟ. ಅದಕ್ಕ ಹೆಸರು ಇಡೋದು ಸುಲಭ’ ಅಂತ.

ಹಂಗ, ಬ್ಯಾರೆದವರು ಸರಕಾರ ನಡೆಸೋವಾಗ ಟೀಕಾ ಮಾಡೋದು ವಿರೋಧ ಪಕ್ಷದವರಿಗೆ ಸುಲಭ. ಅದನ್ನ ನಂಬಿ ಜನಾ ಅವರಿಗೇ ಅಧಿಕಾರ ಕೊಟ್ಟರ ಸರಕಾರ ನಡೆಸೋದು ಕಷ್ಟ. ಆ ಶಾಯರಿ ಗೊತ್ತಿರಲಾರದವರಿಗೂ ಇದು ಗೊತ್ತಿರಬೇಕು.


ಇದನ್ನು ಓದಿ: ಹೊಸ ಮಾಧ್ಯಮ: ಮೂರನೇ ಬೆಲ್ ಬಾರಿಸಿದೆ, ಇನ್ನೀಗ ಶುರು ಮಾಡಲೇಬೇಕು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...