Homeಅಂಕಣಗಳುಬಾಯ್ಕಟ್‌ ಚೀನಾ ಅಭಿಯಾನ: ಸಂಪೂರ್ಣ ಭಾರತೀಯ ಫೋನು ತಯಾರಿಸೋ ಕಂಪನಿ ಯಾವುದೂ ಗೊತ್ತೆ?

ಬಾಯ್ಕಟ್‌ ಚೀನಾ ಅಭಿಯಾನ: ಸಂಪೂರ್ಣ ಭಾರತೀಯ ಫೋನು ತಯಾರಿಸೋ ಕಂಪನಿ ಯಾವುದೂ ಗೊತ್ತೆ?

- Advertisement -
- Advertisement -

ಈ ಸಮಾಜ ವಿರೋಧಿ ಮಾಧ್ಯಮಗಳಲ್ಲಿ (ಎಂಟಿ-ಸೋಷಿಯಲ್ ಮೀಡಿಯಾಗಳಲ್ಲಿ) ಒಂದು ಸಂದೇಶ ಓಡಾಡಾಕ ಹತ್ತೇತಿ. ಅದೇನೆಂದರ “ಈ ಆಪ್‍ನ ನಿಮ್ಮ ಮೊಬೈಲಿನಾಗ ಹಾಕ್ಕೋರಿ, ಅದರಾಗ ಇರಬಹುದಾದ ಎಲ್ಲಾ ಚೈನಾ ಆಪುಗಳನ್ನೂ ತಗೀರಿ, ದೇಶಪ್ರೇಮದ ರಸದಿಂದ ನಿಮ್ಮ ಫೋನನ್ನ ಸ್ವಚ್ಛ ಮಾಡರಿ” ಅಂತ. ಅದನ್ನ ಸುಮಾರು ಒಂದು ಕೋಟಿ ಜನ ಹಾಕಿಕೊಂಡು ಅದು ತೋರಿಸಿದಂತೆ ಚೈನಾ ಆಪುಗಳನ್ನ ತಗದಾರು.

ಕೆಲವರು ಪೇಟಿ ಎಮ್ಮು, ಬಿಗ್ ಬಾಸ್ಕೆಟಿನಂಥಾ ಆಪು ತಗದು, ಒದ್ಯಾಡಿದಾರು.

ಇದರಾಗ ಜೋಕು ಏನಪಾ ಅಂದರ, ಭಾಳ ಮಂದಿ ಈ ದೇಶಪ್ರೇಮದ ಕೆಲಸಾ ಮಾಡಾಕ ತಮ್ಮ ಚೀನಾ ಫೋನು ಉಪಯೋಗ ಮಾಡಿದಾರು. ಭಾರತದಾಗ ಒಂದು ನೂರು ಫೋನು ಅದಾವು ಅಂದರ ಅದರಾಗ 70 ಫೋನು ಚೀನಾ ಕಂಪನಿವು ಅದಾವು. ಭಾಳ ಜನರಿಗೆ ತಮ್ಮ ಫೋನು ಯಾವ ದೇಶದ್ದೂ ಅಂತ ಗೊತ್ತಿರೋದಿಲ್ಲ. ಖರೇ ಹೇಳಬೇಕಂದರ, ಫ್ರೀಡಂ ಅನ್ನೋ ಕಂಪನಿ ಒಂದು ಬಿಟ್ಟರ ಸಂಪೂರ್ಣ ಭಾರತೀಯ ಫೋನು ತಯಾರಿಸೋ ಕಂಪನಿ ಯಾವುದೂ ಇಲ್ಲ. ಅಂದಂಗ ಮೊನ್ನೆ ನಮ್ಮ ಪಂಥ ಪ್ರಧಾನ ಸೇವಕ ಅವರು ಲೋಕಲ್ ವೋಕಲ್ ಅಂತ ಹೇಳೋ ತನಕಾ ಅಂತೂ ಇರಲಿಲ್ಲ. ಕಳೆದ ಒಂದು ವಾರದಾಗ ಯಾವುದರ ಕಂಪನಿ ಹುಟ್ಟಿಕೊಂಡಿದ್ದರ ನಮಗ ಗೊತ್ತಿಲ್ಲ ಮತ್ತ.

ಯಾಕ ಹಂಗಂತೇನಪಾ ಅಂದರ, ಅದಕ್ಕೊಂದು ಕಾರಣ ಐತಿ.

ಮೂರು ವರ್ಷದ ಹಿಂದ ಅವರು ಫ್ರಾನ್ಸಿಗೆ ಹೋಗಿದ್ದರು. ಆವಾಗ ಅವರ ಸ್ನೇಹಿತರು ಹಾಗೂ ಖಜಾಂಚಿಗಳೂ ಆದ ಆತ್ಮ ನಿರ್ಭರ ಸಹೋದರು ಬರೇ ಹತ್ತು ದಿನದಾಗ ಒಂದು ರಕ್ಷಣಾ ತಂತ್ರಜ್ಞಾನದ ಕಂಪನಿ ಹುಟ್ಟು ಹಾಕಿದರು. ಅದನ್ನ ನೋಡಿ ಇವರು ಯಾವುದೋ ಮ್ಯಾಗಿ ನೂಡಲ್ ಕಂಪನಿ ಯೊಳಗ ಕೆಲಸ ಮಾಡಿರಬೇಕು ಬಾರಲೇ ಅಂತ ಹೇಳಿ ಇವರು ಅವರಿಗೆ ಯುದ್ಧ ವಿಮಾನ ತಯಾರು ಮಾಡೋ ಕೆಲಸ ಕೊಟ್ಟರು. “ಅಯ್ಯೋ ಅದನ್ನ ಯಾಕ ಅವರಿಗೆ ಕೊಟ್ಟರಿ, ನಾವ ಮಾಡತಿದ್ದೆವಲ್ಲ. ಎಪ್ಪತ್ತು ವರ್ಷದಿಂದ ನಾವನ ವಿಮಾನ ತಯಾರು ಮಾಡಾಕ ಹತ್ತೇವಿ. ನಿಮಗೂ ಗೊತ್ತೈತೆಲ್ಲಾ” ಅಂತ ಬೆಂಗಳೂರಿನ ಎಚ್‍ಎಎಲ್ ಅನ್ನೋ ಕಂಪನಿಯವರು ಸಣ್ಣಕ ದನಿ ತಗದಿದ್ದರಂತ. ಅದಕ್ಕ ಇವರು “ಹೋಗ ಹೋಗರಿ, ಎಲ್ಲಾ ನಿಮಗ ಏನು? ಹಳಬರಿಗೆ ಅವಕಾಶ ಸಾಕು, ಹೊಸಬರಿಗೆ ಅವಕಾಶ ಇರಲಿ. ರಾಜಕೀಯದಾಗೂ ಈ ನಿಯಮ ತಂದೇವಿ, ಇನ್ನ ಯುದ್ಧ ವಿಮಾನ ತಯಾರಿಗೆ ಬಿಡತೇವೇನು” ಅಂತ ಅಂದರು. ಈಗ ಆ ಹೊಸಾ ಕಂಪನಿ ಹಳೇ ಕಂಪನಿಯ ವಜ್ಜಾ ತಡಕೊಳ್ಳಲಾರದ ಮುಚ್ಚಾಕ ಬಂದೇತಿ. ಅದು ಬ್ಯಾರೆ ವಿಷಯ.

ಇನ್ನ ನಮ್ಮವರಿಗೆ ಚೀನಾದ ಮ್ಯಾಲೆ ಕೆಂಗಣ್ಣು ಬಿಡೋ ಅಷ್ಟು ಸಿಟ್ಟು ಯಾಕ ಬಂತು? ಅದಕ್ಕ ಒಂದಿಷ್ಟು ಹಿಂದ ಹೋಗಬೇಕಾಗತೇತಿ. ನಿಮಗೆ “ಹೋಕೆ ಮಜಬೂರ ಮುಝೆ ಉಸನೆ ಭುಲಾಯಾ ಹೋಗಾ” (‘ಅನಿವಾರ್ಯವಾಗಿ ಅಕಿ ನನ್ನ ಮರತಿರಬೇಕು’) ಅನ್ನೋ ಹಾಡು ನೆನಪು ಇರಬೇಕು. ಅದು ಒಂದು ಕರೇ – ಬಿಳೇ ಹಳೇ ಹಿಂದಿ ಸಿನಿಮಾದ ಹಾಡು. ಅದರಾಗ ಭಾರತೀಯ ಸೈನಿಕರು ಹೋಗಿ ಚೀನಾದ ಮ್ಯಾಲೆ ಯುದ್ಧ ಮಾಡಿ ಗೆದ್ದು ಬರತಾರ. ಸಿನಿಮಾದಾಗ ಗೆದ್ದರು ಆದರ ಅದನ್ನ ಚೀನಾದವರು ಇನ್ನೂ ಒಪ್ಪಾಕ ತಯಾರು ಇಲ್ಲ. ಭಾರತ- ಚೀನಾ ಗಡಿ ಮೂರು ಸಾವಿರದ ಎಂಟು ನೂರು ಕಿಲೋಮಿಟರ್ ಅಂತ ನಮ್ಮ ವಿದೇಶಾಂಗ ಮಂತ್ರಿ ಅಂದಿದ್ದಕ್ಕ ಚೀನಾದವರು ಎಲ್ಲಾಸುಳ್ಳ. ಅದು ಬರೇ ಎರಡು ಸಾವಿರ ಕಿಲೋಮೀಟರ್ ಅಂತ ಹೇಳಿ ಆಟ ಗೂಟ ಜೈ ಅಂತ ಹೇಳಿ ನಮ್ಮ ಮ್ಯಾಲೆ ಜಗಳಾ ಆಡಾಕ ಬಂದಾರ. ನಮ್ಮ ಹಳ್ಳೀ ಒಳಗ ಒಂದ ಕ್ರಿಕೆಟ್ ಪಿಚ್ಚಿನ್ಯಾಗ ಸಣ್ಣ ಹುಡುಗರು ಆಡಾಕ ಹತ್ತಿದಾಗ ದೊಡ್ಡವರು ಬಂದು ಅವರ ಸ್ಟಂಪು – ಬಾಲು ಕಸಗೊಂಡರ ಹೆಂಗ ಸಣ್ಣ ಹುಡುಗರು, ಯೆಣ್ಣಾ ನೀವು ಹೋಗರಿ ಯಣ್ಣಾ, ನಾವು ಒಂದೀಟ ಆಡತೇವಿ. ನೀವು ಆಮ್ಯಾಕ ಬರೀರೆಂತ ಅಂತ ಹೇಳಿ ಅವರಿಗೆ ಆಗ್ರಹ ಮಾಡತಾರಲ್ಲಾ ಹಂಗ ನಮ್ಮ ಭಾರತೀಯರು ಅದನ್ನ ಕೇಳಿಕೊಂಡರು. ಒಂದಿಬ್ಬರು ಹೊಡದಾಡಿಕೊಂಡರು ಅಂತನೂ ಸುದ್ದಿ ಬಂದವು.

ಇದು ನಿಮಗ ರೊಮ್ಯಾಂಟಿಕ್ ಚಿತ್ರಣ ಅನ್ನಿಸಿದರ ನೀವು ಅದಕ್ಕ ಸಂಬಂಧ ಪಟ್ಟ ವಿಡಿಯೋ ಸುದ್ದಿ ನೋಡರಿ, ಅಲ್ ಜಜೀರಾ ಅವರ ವೆಬ್ ಸೈಟಿನೊಳಗ.

ಇದು ಯಾಕಪಾ ಅಂದರ ಭಾರತದ ಮಾಧ್ಯಮಗಳು ತೋರಿಸಲಾರದ್ದನ್ನ ಹೊರಗಿನವು ತೋರಿಸಿದವು. ಯಾಕಂದರ ನಮ್ಮವರು ಸುದ್ದಿ ವ್ಯಾಪಾರಸ್ಥರಾಗಿ ಬಿಟ್ಟಾರ. ಅವರು ಇನ್ನೂ ಪತ್ರಕರ್ತರಾಗಿ ಉಳದಾರ.

“ಇಲ್ಲಾ. ನಮಗೂ ಅವರಿಗೂ ಜಗಳ ಆಗಿಲ್ಲ. ಬರೇ ಒಂದಿಷ್ಟು ಮಾತು ಆಗಿದಾವು” ಅಂತ ನಮ್ಮ ಕೇಂದ್ರ ಸರಕಾರ ಹೇಳಿಕೊಂಡೇತಿ.

ಹಂಗಾರ ಅಲ್ಲಿ ಆಗಿದ್ದೇನು. ದೇಶಗಳ ನಡುವೆ ಮೂರು ಥರದ ಗೆರಿ ಇರತಾವು. ಅಂತರರಾಷ್ಟ್ರೀಯ ಗಡಿ, ನಿಯಂತ್ರಣ ರೇಖೆ ಮತ್ತು ಖರೆ ಖರೆ ನಿಯಂತ್ರಣ ರೇಖೆ (ಬಾರ್ಡರು, ಎಲ್‍ಓಸಿ, ಎಲ್‍ಏಸಿ) ಚೀನಾ ಹಾಗೂ ಭಾರತದ ನಡುವೆ ಎಲ್ಲರೂ ಒಪ್ಪುವಂಥಾ ಗಡಿ ಇಲ್ಲ. ನಾವು ಒಂದು ಅಂತೇವಿ ಅವರು ಇಲ್ಲ ಅಂತಾರ. ಅವರು ಒಂದು ಅಂತಾರ ನಾವು ಇಲ್ಲಾ ಅಂತೇವಿ.

ಅಂಥಾದರಾಗ ನಮ್ಮ ದೊಡ್ಡಣ್ಣಾರು, ಬಿಳಿಮನಿ ಟ್ರಂಪಣ್ಣನವರ್ ಅವರು “ಇವರು ಇಬ್ಬರೂ ಕಿತ್ಯಾಡಾಕ ಹತ್ಯಾರು. ನಾನು ನೋಡಾ ಹತ್ತೇನಿ. ನನ್ನ ಕಡೆ ಬಂದರ ನಾ ಜಗಳಾ ಬಿಡಸತೇನಿ,” ಅಂತ ಟ್ವಿಟರಿನ್ಯಾಗ ಕಾರಿಕೊಂಡರು. ನೀವು ಬರೋದು ಬ್ಯಾಡ. ನಿಮ್ಮ ಎಲ್ಯಾಗ ಕತ್ತಿ ಸತ್ತು ಬಿದ್ದೇತಿ, ನಮ್ಮ ನೊಣಾ ಯಾಕ ಝಾಡಸಾಕ ಬರತೀರಿ ಅಂತ ಇಬ್ಬರೂ ದೂರಾದರು. ಆ ಬೆಕ್ಕಿನ ಪ್ರೀತಿಯಿಂದ ಕೊಸರಾಡಿಕೊಂಡು ಬಿಡಿಸಿಕೊಂಡರು.

ಕೆಲವರ ಪ್ರಕಾರ ಚೀನಾ ಸೈನಿಕರು ಲಡಾಖಿನ ಹತ್ತಿರ ಭಾರತದ ಗಡಿಯೊಳಗ ಸುಮಾರು ಒಂಬೈನೂರು ಚದುರ ಕಿಲೋಮೀಟರ್ ಕ್ಷೇತ್ರದೊಳಗ ಒಳಗ ಬಂದಾರ. ಚೀನಾದವರು ಅದು ನಮ್ಮದ ಜಾಗ. ಅದರಾಗ ನಾವು ಹೆಂಗ ಬೇಕಾದಂಗ ಅಡ್ಯಾಡತೇವಿ. ನೀವು ಯಾರು ಅಂತ ಹೇಳ್ಯಾರು. ಭಾರತೀಯ ಗಡಿ ರಸ್ತೆ ಸಂಸ್ಥೆಯವರು ಚೀನಾ ಪ್ರದೇಶದೊಳಗ ರಸ್ತೆ ಮಾಡಾಕ ಬಂದಾರು. ಅದು ತಪ್ಪು ಅಂತ ಹೇಳ್ಯಾರು. ಒಂದು ಸಣ್ಣ ಗ್ರಾಮ ಪಂಚಾಯಿತಿ ರಸ್ತೆ ಮಾಡೋದರಾಗ ಕಳಪೆ ಕಾಮಗಾರಿ – ಲಂಚ ಎಲ್ಲಾ ನಡೀತಾವು. ಇನ್ನ ಹಿಮಾಲಯದಾಗ ಏನು ಮಾಡತಾರ ಇವರು ಅಂತ ಯಾರೋ ಅವರಿಗೆ ಮೂಗರ್ಜಿ ಬರದಿರಬೇಕು. ಅದಕ್ಕ ಅವರು ಬ್ಯಾಡ ಹೋಗರಿ ಅಂದಿರಬೇಕು.

ಇವು ಎಲ್ಲಾ ನಡಿಯೋವ. ಇದಕ್ಕ ಯುದ್ಧಕ್ಕ ಹೋಗಲಾರದ ಹಂಗ ಒಂದ ಕಡೆ ಕುತಗೊಂಡು ಮಾತಾಡಿ ಮುಗಿಸಿಕೊಳ್ಳೋ ವಿಚಾರ ಇವು. ಇದರಾಗ ವಿಶೇಷ ಏನು ಅಂದರ ನಮ್ಮನ್ನ ಆಳುವವರ ಪ್ರತಿಕ್ರಿಯೆ.

ಪಂಥ ಪ್ರಧಾನ ಸೇವಕರು ಎಂದಿನಂತೆ ಇದರ ಬಗ್ಗೆ ಮಾತಾಡಿಲ್ಲ. ನೀವು ಯಾವ ನೆಗಟಿವ್ ವಿಷಯ ಮಾತಾಡಬಾರದು. ಸರಕಾರದ ಯಾವ ತಪ್ಪೂ ಒಪ್ಪಿಕೊಳ್ಳಬಾರದು, ಯಾವುದೇ ನಿಖರವಾದ ಆಶ್ವಾಸನೆ ಕೊಡಬಾರದು. ಯಾವಾಗಲೂ ಪಾಸಿಟಿವ್ ಆಗಿ, ಎಲ್ಲರನ್ನೂ ಹುರಿದುಂಬಿಸುವ ಮಾತಾಡಬೇಕು ಅಂತ ಅವರಿಗೆ ಚುನಾವಣ ಪಂಡಿತ ಪ್ರಶಾಂತ ಕಿಶೋರ ಹೇಳಿದ್ದರಂತ. ಅದನ್ನ ಅವರು ಚಾಚೂ ತಪ್ಪದೇ ಪಾಲಿಸತಾರ. ಹೋಗಲಿ, ಭಾರತದಲ್ಲಿ ಮೊದಲಿಗೆ ವಿದೇಶಾಂಗ ಸಚಿವನಾಗಿದ್ದು ನಂತರ ವಿದೇಶ ಮಂತ್ರಿ ಆದ ಏಕೈಕ ವ್ಯಕ್ತಿ ಜಯಶಂಕರ ಅವರೂ ಮಾತಾಡಿಲ್ಲ. ಗೃಹ ಖಾತೆ ಸಚಿವ ಅಮಿತ ಷಾ ಅವರು ಎಂಟು ವರ್ಷದ ಹಿಂದೆ ಚೀನಾ ಸೈನಿಕರು ಭಾರತವನ್ನ ಪಿಕ್ ನಿಕ್ ತಾಣ ಅಂತ ತಿಳಕೊಂಡಾರು. ತಮಗ ಬೇಕಾದಾಗ ಬಂದು, ಮಜಾ ಮಾಡಿ ಹೋಗತಾರು. ನಮ್ಮ ಸರಕಾರ ಸುಮ್ಮನೇ ಕೂಡತೇತಿ ಅಂತ ಹೇಳಿದ್ದರು. ಅದನ್ನು ಯಾರೋ ಪುಣ್ಯಾತ್ಮರು ಟ್ವಿಟರ್ ನ್ಯಾಗಿಂದ ಹೊರಗ ತಗದು ತೋರಸಾಕ ಹತ್ಯಾರು.

ಅವ್ವ ಮಾಡಿದ ಅಡಿಗಿಗೆ ಹೆಸರು ಇಡಬ್ಯಾಡ್ರಿ ಅಂತ ಒಂದು ಶಾಯರಿ ಐತಿ. ‘ನಿಮಗ ಮಾಡಾಕ ಬರತಿದ್ದರ ಅಕೀ ಕೆಲಸ ತಪ್ಪಿಸಿ ನೀವು ಮಾಡರಿ. ಅಕಿ ಮಾಡೋ ಕೆಲಸಾ ಮಾಡೋದು ಕಷ್ಟ. ಅದಕ್ಕ ಹೆಸರು ಇಡೋದು ಸುಲಭ’ ಅಂತ.

ಹಂಗ, ಬ್ಯಾರೆದವರು ಸರಕಾರ ನಡೆಸೋವಾಗ ಟೀಕಾ ಮಾಡೋದು ವಿರೋಧ ಪಕ್ಷದವರಿಗೆ ಸುಲಭ. ಅದನ್ನ ನಂಬಿ ಜನಾ ಅವರಿಗೇ ಅಧಿಕಾರ ಕೊಟ್ಟರ ಸರಕಾರ ನಡೆಸೋದು ಕಷ್ಟ. ಆ ಶಾಯರಿ ಗೊತ್ತಿರಲಾರದವರಿಗೂ ಇದು ಗೊತ್ತಿರಬೇಕು.


ಇದನ್ನು ಓದಿ: ಹೊಸ ಮಾಧ್ಯಮ: ಮೂರನೇ ಬೆಲ್ ಬಾರಿಸಿದೆ, ಇನ್ನೀಗ ಶುರು ಮಾಡಲೇಬೇಕು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...