Homeಕರ್ನಾಟಕಎಲ್ಲಿಯಾದರೂ ಕಂಡರೆ ‘ಕಿತ್ತೋದ ಸಿ.ಟಿ. ರವಿ’ ಎಂದು ಘೋಷಣೆ ಕೂಗಿ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ...

ಎಲ್ಲಿಯಾದರೂ ಕಂಡರೆ ‘ಕಿತ್ತೋದ ಸಿ.ಟಿ. ರವಿ’ ಎಂದು ಘೋಷಣೆ ಕೂಗಿ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕರೆ

- Advertisement -
- Advertisement -

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿರುದ್ಧ ರಾಜ್ಯದ ವೀರಶೈವ ಲಿಂಗಾಯತ ಸಮುದಾಯದವರು ಗರಂ ಆಗಿದ್ದಾರೆ. ರಾಜ್ಯ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯು ಆಕ್ರೋಶ ವ್ಯಕ್ತಪಡಿಸಿ ಪ್ರಕಟಣೆ ಹೊರಡಿಸಿದ್ದಾರೆ. ಸಿ.ಟಿ. ರವಿ ವಿರುದ್ಧ ಏಕವಚನದಲ್ಲೇ ಎಚ್ಚರಿಕೆ ನೀಡಲಾಗಿದೆ.

”ಚುನಾವಣೆ ಪ್ರಚಾರದಲ್ಲಿ ಸಿ.ಟಿ. ರವಿ ಎಲ್ಲಿಯಾದರೂ ಕಂಡು ಬಂದರೆ ಮುತ್ತಿಗೆ ಹಾಕಬೇಕು. ‘ಕಿತ್ತೋದ ಸಿ.ಟಿ. ರವಿ’ ಎಂದು ಘೋಷಣೆ ಕೂಗಬೇಕು” ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕರೆಕೊಟ್ಟಿದೆ.

ಕೆಲದಿನಗಳಿಂದ ಸಿ.ಟಿ. ರವಿ ಅವರು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗೆ ತಿರುಗೇಟು ನೀಡುತ್ತಿರುವುದು ವೀರಶೈವ ಲಿಂಗಾಯತ ಸಮುದಾಯದ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಇತ್ತೀಚೆಗೆ ವಿಜಯಪುರದಲ್ಲಿ ಮಾತನಾಡಿದ ಸಿ.ಟಿ ರವಿ, ಬಿಜೆಪಿಯಲ್ಲಿ ಟಿಕೆಟ್ ನೀಡುವ ಮಾನದಂಡದ ಬಗ್ಗೆ ಪ್ರಸ್ತಾಪ ಮಾಡಿದ್ದರು. ”ನಮ್ಮ ಪಕ್ಷದಲ್ಲಿ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ವಿಚಾರ ಕುಟುಂಬದಲ್ಲಿ ತೀರ್ಮಾನವಾಗಲ್ಲ. ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧಾರ ಆಗುತ್ತೆ. ಸಮೀಕ್ಷೆಯ ಆಧಾರದ ಮೇಲೆ ಗೆಲ್ಲುವ ಮಾನದಂಡದ ಆಧರಿಸಿ ಟಿಕೆಟ್ ನೀಡುವ ಕುರಿತು ನಿರ್ಧರಿಸಲಾಗುತ್ತದೆ. ಆದರೆ ಕುಟುಂಬದಲ್ಲಿ ಸಮೀಕ್ಷೆ ನಡೆಯುವುದಿಲ್ಲ, ನಮ್ಮ ಪಕ್ಷದಲ್ಲಿ ಕಿಚನ್‌ನಲ್ಲಿ ತೀರ್ಮಾನ ತೆಗೆದುಕೊಳ್ಳಲ್ಲ. ನಾಯಕರ ಮಕ್ಕಳೆಂದ ಕಾರಣಕ್ಕೆ ಅವರಿಗೆ ಟಿಕೆಟ್ ಕೊಡಬೇಕಾ? ಎಂದು ಪ್ರಶ್ನೆ ಮಾಡಿದ್ದರು. ಅಷ್ಟೇ ಅಲ್ಲದೇ ವಿಜಯೇಂದ್ರ ಟಿಕೆಟ್ ನಿರ್ಧಾರವನ್ನು ಸಂಸದೀಯ ಮಂಡಳಿ ತೆಗೆದುಕೊಳ್ಳುತ್ತದೆ ಎಂದು ಹೇಳುವ ಮೂಲಕ ಹಿರಿಯ ನಾಯಕ ಯಡಿಯೂರಪ್ಪ ಅವರ ಆಟ ಇನ್ನೂ ಮುಂದೆ ನಡೆಯುವುದಿಲ್ಲ ಎನ್ನುವ ಸಂದೇಶವನ್ನು ಸಿಟಿ ರವಿ ನೀಡಿದ್ದರು.

ಸಿ.ಟಿ. ರವಿ ಅವರ ಈ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ, ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ”ಸಿ.ಟಿ. ರವಿ ಎಲ್ಲಿಯಾದರೂ ಚುನಾವಣೆ ಪ್ರಚಾರದಲ್ಲಿ ಕಂಡು ಬಂದರೆ ಮುತ್ತಿಗೆ ಹಾಕಬೇಕು. ‘ಕಿತ್ತೋದ ಸಿ.ಟಿ. ರವಿ’ ಎಂದು ಘೋಷಣೆ ಕೂಗಬೇಕು” ಎಂದು ಕರೆಕೊಟ್ಟಿದೆ.

ಇದನ್ನೂ ಓದಿ: ಬಿಜೆಪಿ ಟಿಕೆಟ್ ಹಂಚಿಕೆ ವಿಚಾರ: ಸಿ.ಟಿ ರವಿ-ವಿಜಯೇಂದ್ರ ನಡುವೆ ವಾಕ್ಸಮರ

ಪ್ರಕಟಣೆಯಲ್ಲಿ ಏನಿದೆ?

”ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ವೀರಶೈವ ಲಿಂಗಾಯತರಿಂದ ನೆನಪಿರಲಿ ಸಿ ಟಿ ರವಿ ‘ವೀರಶೈವ ಲಿಂಗಾಯತರಿಗೆ ಪ್ರಾಮುಖ್ಯ ಕೊಡಬೇಕಿಲ್ಲ” ಎನ್ನುವ ಸಿಟಿ ರವಿ ಅವರ ಪತ್ರಿಕೆ ಹೇಳಿಕೆ ವಿರುದ್ಧವಾಗಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಪ್ರಕಟಣೆ ಹೊರಡಿಸಿದ್ದು, ”ಸಿ.ಟಿ ರವಿ ಚುನಾವಣೆ ಪ್ರಚಾರದಲ್ಲಿ ಕಂಡು ಬಂದರೆ ಮುತ್ತಿಗೆ ಹಾಕುವುದು ಅಷ್ಟೇ ಅಲ್ಲ ‘ಕಿತ್ತೊದ ಸಿ, ಟಿ, ರವಿ’ ಅಂತ ಘೋಷಣೆ ಕೂಗಬೇಕು ಎಂದು ಕರೆ ಕೊಟ್ಟಿದೆ. ಕಳೆದ 50 ವರ್ಷಗಳಿಂದ ಇಂತಹ ಕಿತ್ತೊದ ಸಿ ಟಿ ರವಿ ಅಂತಹವರು ತುಂಬಾ ಜನಗಳನ್ನು ವೀರಶೈವ ಲಿಂಗಾಯತ ಸಮಾಜ ನೋಡಿದೆ. ನಮ್ಮ ಸಮಾಜ ಎಷ್ಟೇ ಒಡೆದರು. ಚುನಾವಣೆಯಲ್ಲಿ ಒಂದಾಗಿ ತಕ್ಕ ಪಾಠ ಕಲಿಸುತ್ತಿರುವುದು ನೆನಪಿಲ್ಲವೆ” ಎಂದು ಕೇಳಿದೆ.

”ವೀರಶೈವ ಲಿಂಗಾಯತ ಸಮಾಜ ತುಂಬಾ ಸೂಕ್ಷ್ಮ ಸಮಾಜ ಯಾರನ್ನು ಕೆಣಕಲು ಹೋಗಲ್ಲ, ಕಾಯಕವೇ ಕೈಲಾಸ ಎಂದು ತಿಳಿದು ತಮ್ಮ ಜೀವನ ನಡೆಸುತ್ತಿದೆ. ನಿನ್ನ ತರಹ ಜೀವನ ಮಾಡಲು ನಮಗೆ ಬರುವುದಿಲ್ಲ, ಒಂದು ಸಲ ಸಿಡಿದರೆ ನಿನ್ನಂತಹ ಸಾವಿರಾರು ವ್ಯಕ್ತಿಗಳನ್ನು ಮೂಗಿಸಿ ಹಾಕುವುದು ನಮಗೆ ಗೊತ್ತು” ಎಂದು ಎಚ್ಚರಿಕೆ ನೀಡಿದೆ.

”ಸಿಟಿ, ರವಿಯವರೆ, ವೀರಶೈವ ಲಿಂಗಾಯತ ಸಮಾಜದ ಬಗ್ಗೆ ಮಾತನಾಡಿಲಿಕ್ಕೆ ನಿನಗೆ ಏನು ನೈತಿಕತೆ ಇದೆ?” ಪ್ರಶ್ನೆ ಮಾಡಿದೆ.

”ಇಂತಹವರನ್ನು ಬಿಜೆಪಿ ಪಕ್ಷ ತಕ್ಷಣವೇ ಉಚ್ಚಾಟನೆ ಮಾಡಬೇಕು. ವೀರಶೈವ ಲಿಂಗಾಯತ ಸಮಾಜಕ್ಕೆ ಕ್ಷಮೆ ಕೇಳಬೇಕು. ಇಲ್ಲದೆ ಹೋದರೆ ಒಂದು ವಾರದಲ್ಲಿ ನಿಮ್ಮ ಮನೆಗೆ ಬಂದು ಹೋರಾಟ ಮಾಡುತ್ತವೆ. ಮಾನಸಿಕ ಅಸ್ವಸ್ತ ಸಿ, ಟಿ, ರವಿಯವರಿಗೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಎಚ್ಚರಿಕೆ ನೀಡುತ್ತಿದ್ದೆವೆ” ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಪಠ್ಯ ನ ಚಿತ್ರವಾಗಿರಬಹುದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...