Homeಕರ್ನಾಟಕಎಲ್ಲಿಯಾದರೂ ಕಂಡರೆ ‘ಕಿತ್ತೋದ ಸಿ.ಟಿ. ರವಿ’ ಎಂದು ಘೋಷಣೆ ಕೂಗಿ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ...

ಎಲ್ಲಿಯಾದರೂ ಕಂಡರೆ ‘ಕಿತ್ತೋದ ಸಿ.ಟಿ. ರವಿ’ ಎಂದು ಘೋಷಣೆ ಕೂಗಿ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕರೆ

- Advertisement -
- Advertisement -

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿರುದ್ಧ ರಾಜ್ಯದ ವೀರಶೈವ ಲಿಂಗಾಯತ ಸಮುದಾಯದವರು ಗರಂ ಆಗಿದ್ದಾರೆ. ರಾಜ್ಯ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯು ಆಕ್ರೋಶ ವ್ಯಕ್ತಪಡಿಸಿ ಪ್ರಕಟಣೆ ಹೊರಡಿಸಿದ್ದಾರೆ. ಸಿ.ಟಿ. ರವಿ ವಿರುದ್ಧ ಏಕವಚನದಲ್ಲೇ ಎಚ್ಚರಿಕೆ ನೀಡಲಾಗಿದೆ.

”ಚುನಾವಣೆ ಪ್ರಚಾರದಲ್ಲಿ ಸಿ.ಟಿ. ರವಿ ಎಲ್ಲಿಯಾದರೂ ಕಂಡು ಬಂದರೆ ಮುತ್ತಿಗೆ ಹಾಕಬೇಕು. ‘ಕಿತ್ತೋದ ಸಿ.ಟಿ. ರವಿ’ ಎಂದು ಘೋಷಣೆ ಕೂಗಬೇಕು” ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕರೆಕೊಟ್ಟಿದೆ.

ಕೆಲದಿನಗಳಿಂದ ಸಿ.ಟಿ. ರವಿ ಅವರು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗೆ ತಿರುಗೇಟು ನೀಡುತ್ತಿರುವುದು ವೀರಶೈವ ಲಿಂಗಾಯತ ಸಮುದಾಯದ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಇತ್ತೀಚೆಗೆ ವಿಜಯಪುರದಲ್ಲಿ ಮಾತನಾಡಿದ ಸಿ.ಟಿ ರವಿ, ಬಿಜೆಪಿಯಲ್ಲಿ ಟಿಕೆಟ್ ನೀಡುವ ಮಾನದಂಡದ ಬಗ್ಗೆ ಪ್ರಸ್ತಾಪ ಮಾಡಿದ್ದರು. ”ನಮ್ಮ ಪಕ್ಷದಲ್ಲಿ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ವಿಚಾರ ಕುಟುಂಬದಲ್ಲಿ ತೀರ್ಮಾನವಾಗಲ್ಲ. ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧಾರ ಆಗುತ್ತೆ. ಸಮೀಕ್ಷೆಯ ಆಧಾರದ ಮೇಲೆ ಗೆಲ್ಲುವ ಮಾನದಂಡದ ಆಧರಿಸಿ ಟಿಕೆಟ್ ನೀಡುವ ಕುರಿತು ನಿರ್ಧರಿಸಲಾಗುತ್ತದೆ. ಆದರೆ ಕುಟುಂಬದಲ್ಲಿ ಸಮೀಕ್ಷೆ ನಡೆಯುವುದಿಲ್ಲ, ನಮ್ಮ ಪಕ್ಷದಲ್ಲಿ ಕಿಚನ್‌ನಲ್ಲಿ ತೀರ್ಮಾನ ತೆಗೆದುಕೊಳ್ಳಲ್ಲ. ನಾಯಕರ ಮಕ್ಕಳೆಂದ ಕಾರಣಕ್ಕೆ ಅವರಿಗೆ ಟಿಕೆಟ್ ಕೊಡಬೇಕಾ? ಎಂದು ಪ್ರಶ್ನೆ ಮಾಡಿದ್ದರು. ಅಷ್ಟೇ ಅಲ್ಲದೇ ವಿಜಯೇಂದ್ರ ಟಿಕೆಟ್ ನಿರ್ಧಾರವನ್ನು ಸಂಸದೀಯ ಮಂಡಳಿ ತೆಗೆದುಕೊಳ್ಳುತ್ತದೆ ಎಂದು ಹೇಳುವ ಮೂಲಕ ಹಿರಿಯ ನಾಯಕ ಯಡಿಯೂರಪ್ಪ ಅವರ ಆಟ ಇನ್ನೂ ಮುಂದೆ ನಡೆಯುವುದಿಲ್ಲ ಎನ್ನುವ ಸಂದೇಶವನ್ನು ಸಿಟಿ ರವಿ ನೀಡಿದ್ದರು.

ಸಿ.ಟಿ. ರವಿ ಅವರ ಈ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ, ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ”ಸಿ.ಟಿ. ರವಿ ಎಲ್ಲಿಯಾದರೂ ಚುನಾವಣೆ ಪ್ರಚಾರದಲ್ಲಿ ಕಂಡು ಬಂದರೆ ಮುತ್ತಿಗೆ ಹಾಕಬೇಕು. ‘ಕಿತ್ತೋದ ಸಿ.ಟಿ. ರವಿ’ ಎಂದು ಘೋಷಣೆ ಕೂಗಬೇಕು” ಎಂದು ಕರೆಕೊಟ್ಟಿದೆ.

ಇದನ್ನೂ ಓದಿ: ಬಿಜೆಪಿ ಟಿಕೆಟ್ ಹಂಚಿಕೆ ವಿಚಾರ: ಸಿ.ಟಿ ರವಿ-ವಿಜಯೇಂದ್ರ ನಡುವೆ ವಾಕ್ಸಮರ

ಪ್ರಕಟಣೆಯಲ್ಲಿ ಏನಿದೆ?

”ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ವೀರಶೈವ ಲಿಂಗಾಯತರಿಂದ ನೆನಪಿರಲಿ ಸಿ ಟಿ ರವಿ ‘ವೀರಶೈವ ಲಿಂಗಾಯತರಿಗೆ ಪ್ರಾಮುಖ್ಯ ಕೊಡಬೇಕಿಲ್ಲ” ಎನ್ನುವ ಸಿಟಿ ರವಿ ಅವರ ಪತ್ರಿಕೆ ಹೇಳಿಕೆ ವಿರುದ್ಧವಾಗಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಪ್ರಕಟಣೆ ಹೊರಡಿಸಿದ್ದು, ”ಸಿ.ಟಿ ರವಿ ಚುನಾವಣೆ ಪ್ರಚಾರದಲ್ಲಿ ಕಂಡು ಬಂದರೆ ಮುತ್ತಿಗೆ ಹಾಕುವುದು ಅಷ್ಟೇ ಅಲ್ಲ ‘ಕಿತ್ತೊದ ಸಿ, ಟಿ, ರವಿ’ ಅಂತ ಘೋಷಣೆ ಕೂಗಬೇಕು ಎಂದು ಕರೆ ಕೊಟ್ಟಿದೆ. ಕಳೆದ 50 ವರ್ಷಗಳಿಂದ ಇಂತಹ ಕಿತ್ತೊದ ಸಿ ಟಿ ರವಿ ಅಂತಹವರು ತುಂಬಾ ಜನಗಳನ್ನು ವೀರಶೈವ ಲಿಂಗಾಯತ ಸಮಾಜ ನೋಡಿದೆ. ನಮ್ಮ ಸಮಾಜ ಎಷ್ಟೇ ಒಡೆದರು. ಚುನಾವಣೆಯಲ್ಲಿ ಒಂದಾಗಿ ತಕ್ಕ ಪಾಠ ಕಲಿಸುತ್ತಿರುವುದು ನೆನಪಿಲ್ಲವೆ” ಎಂದು ಕೇಳಿದೆ.

”ವೀರಶೈವ ಲಿಂಗಾಯತ ಸಮಾಜ ತುಂಬಾ ಸೂಕ್ಷ್ಮ ಸಮಾಜ ಯಾರನ್ನು ಕೆಣಕಲು ಹೋಗಲ್ಲ, ಕಾಯಕವೇ ಕೈಲಾಸ ಎಂದು ತಿಳಿದು ತಮ್ಮ ಜೀವನ ನಡೆಸುತ್ತಿದೆ. ನಿನ್ನ ತರಹ ಜೀವನ ಮಾಡಲು ನಮಗೆ ಬರುವುದಿಲ್ಲ, ಒಂದು ಸಲ ಸಿಡಿದರೆ ನಿನ್ನಂತಹ ಸಾವಿರಾರು ವ್ಯಕ್ತಿಗಳನ್ನು ಮೂಗಿಸಿ ಹಾಕುವುದು ನಮಗೆ ಗೊತ್ತು” ಎಂದು ಎಚ್ಚರಿಕೆ ನೀಡಿದೆ.

”ಸಿಟಿ, ರವಿಯವರೆ, ವೀರಶೈವ ಲಿಂಗಾಯತ ಸಮಾಜದ ಬಗ್ಗೆ ಮಾತನಾಡಿಲಿಕ್ಕೆ ನಿನಗೆ ಏನು ನೈತಿಕತೆ ಇದೆ?” ಪ್ರಶ್ನೆ ಮಾಡಿದೆ.

”ಇಂತಹವರನ್ನು ಬಿಜೆಪಿ ಪಕ್ಷ ತಕ್ಷಣವೇ ಉಚ್ಚಾಟನೆ ಮಾಡಬೇಕು. ವೀರಶೈವ ಲಿಂಗಾಯತ ಸಮಾಜಕ್ಕೆ ಕ್ಷಮೆ ಕೇಳಬೇಕು. ಇಲ್ಲದೆ ಹೋದರೆ ಒಂದು ವಾರದಲ್ಲಿ ನಿಮ್ಮ ಮನೆಗೆ ಬಂದು ಹೋರಾಟ ಮಾಡುತ್ತವೆ. ಮಾನಸಿಕ ಅಸ್ವಸ್ತ ಸಿ, ಟಿ, ರವಿಯವರಿಗೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಎಚ್ಚರಿಕೆ ನೀಡುತ್ತಿದ್ದೆವೆ” ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಪಠ್ಯ ನ ಚಿತ್ರವಾಗಿರಬಹುದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...